Homeಮುಖಪುಟಐಟಿ ರೂಲ್ಸ್‌ ತಿದ್ದುಪಡಿ ಮಸೂದೆಗೆ ಪತ್ರಕರ್ತರ ಸಂಸ್ಥೆಗಳಿಂದ ಖಂಡನೆ

ಐಟಿ ರೂಲ್ಸ್‌ ತಿದ್ದುಪಡಿ ಮಸೂದೆಗೆ ಪತ್ರಕರ್ತರ ಸಂಸ್ಥೆಗಳಿಂದ ಖಂಡನೆ

- Advertisement -
- Advertisement -

ಮಾಹಿತಿ ತಂತ್ರಜ್ಞಾನ ನಿಯಮಗಳು, 2021ಕ್ಕೆ ತಿದ್ದುಪಡಿ ತರಲು ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮವನ್ನು ಮತ್ತು ಬಿಬಿಸಿ ಸಾಕ್ಷ್ಯಚಿತ್ರ ತಡೆಗೆ ಐಟಿ ನಿಯಮಗಳ ಅಡಿಯಲ್ಲಿನ ತುರ್ತು ಅಧಿಕಾರವನ್ನು ದುಪಯೋಗ ಮಾಡಿಕೊಂಡಿರುವುದನ್ನು ಖಂಡಿಸಿ ರಾಷ್ಟ್ರೀಯ ಪತ್ರಕರ್ತರ ಒಕ್ಕೂಟ (ಎನ್‌ಎಜೆ) ಮತ್ತು ದೆಹಲಿ ಪತ್ರಕರ್ತರ ಒಕ್ಕೂಟ (ಡಿಯುಜೆ) ಜಂಟಿ ಹೇಳಿಕೆ ನೀಡಿವೆ.

ಡಿಯುಜೆ ಅಧ್ಯಕ್ಷ ಎಸ್.ಕೆ.ಪಾಂಡೆ ಮತ್ತು ಪ್ರಧಾನ ಕಾರ್ಯದರ್ಶಿ ಸುಜಾತಾ ಮಾಧೋಕ್, ಎನ್‌ಎಜೆ ಪ್ರಧಾನ ಕಾರ್ಯದರ್ಶಿ ಎನ್. ಕೊಂಡಯ್ಯ, ಆಂಧ್ರಪ್ರದೇಶ ಕಾರ್ಯನಿರತ ಪತ್ರಕರ್ತರ ಒಕ್ಕೂಟದ (ಎಪಿಡಬ್ಲ್ಯುಜೆಎಫ್‌) ಪ್ರಧಾನ ಕಾರ್ಯದರ್ಶಿ ಜಿ.ಆಂಜನೇಯುಲು ಅವರು ಸರ್ಕಾರದ ನಿಲುವುಗಳನ್ನು ಖಂಡಿಸಿದ್ದು, “ತುರ್ತು ಪರಿಸ್ಥಿತಿ ಕಾಲದ ಕ್ರಮಗಳನ್ನು ಜರುಗಿಸಲು ಸಾಧ್ಯವಿಲ್ಲ; ಪ್ರೆಸ್‌ ಇನ್ಫಾರ್ಮೆಷನ್ ಬ್ಯೂರೊ (ಪಿಐಬಿ) ಎಂದಿಗೂ ಪೊಲೀಸ್ ಇನ್‌ಫಾರ್ಮೆಷನ್ ಬ್ಯುರೊ ಆಗಿ ಬದಲಾಗಬಾರದು” ಎಂದು ಎಚ್ಚರಿಸಿದ್ದಾರೆ.

ಮಾಹಿತಿ ತಂತ್ರಜ್ಞಾನ ನಿಯಮಗಳಿಗೆ ತಿದ್ದುಪಡಿ ತರಲು ಸರ್ಕಾರ ಹೊರಟಿದೆ. ಸರ್ಕಾರದ ಘಟಕವಾದ ‘ಪಿಐಬಿ’ ಯಾವ ಸುದ್ದಿಯನ್ನು ನಕಲಿ ಎನ್ನುತ್ತದೆಯೋ ಅದನ್ನು ಸಾಮಾಜಿಕ ಮಾಧ್ಯಮಗಳಿಂದ ತೆಗೆದುಹಾಕುವ ಕಾನೂನು ತರಲು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ ಹೊರಟಿದೆ.

“ಮಾಧ್ಯಮಗಳಿಗೆ ಸರ್ಕಾರಿ ಸುದ್ದಿಗಳನ್ನು ಒದಗಿಸುವುದು ಪಿಐಬಿಯ ಕೆಲಸವಾಗಿದೆ. ಆ ಜವಾಬ್ದಾರಿಯಲ್ಲಿಯೇ ಮುಂದುವರಿಯಬೇಕು. ಮಾಧ್ಯಮಗಳ ಮೇಲೆ ನಿಗಾ ಇಡುವುದು, ಸೆನ್ಸಾರ್ ಮಾಡುವುದು ಮತ್ತು ಸರ್ಕಾರಕ್ಕೆ ಅನನುಕೂಲಕರವಾದ ಯಾವುದೇ ಮಾಹಿತಿಯನ್ನು ‘ನಕಲಿ ಸುದ್ದಿ’ ಎಂದು ಗುರುತಿಸುವ ಕೆಲಸವನ್ನು ಪಿಐಪಿ ಮಾಡುವುದಲ್ಲ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಸರ್ಕಾರದ ನಡೆಯನ್ನು ‘ವಿಷಾದನೀಯ’ ಎಂದು ಪತ್ರಕರ್ತ ಸಂಸ್ಥೆಗಳು ಬಣ್ಣಿಸಿವೆ.

“ಮಾಧ್ಯಮ ವ್ಯಕ್ತಿಗಳಿಗೆ ಸರ್ಕಾರದ ಅಧಿಕೃತ ಮಾಹಿತಿಗಳನ್ನು ಸುಲಭವಾಗಿ ದೊರಕಿಸುವುದು ಪಿಐಬಿಯ ಕೆಲಸವಾಗಿದೆ. ಸರ್ಕಾರಿ ವಿಷಯಗಳ ಬಗ್ಗೆ ಮಾನ್ಯತೆ ಪಡೆದ ವಿಶೇಷ ವರದಿಗಾರರು ಕೇಳಿದಾಗ ಪಿಐಬಿ ಕೆಲವು ಸಂದರ್ಭಗಳಲ್ಲಿ ನಿರಾಕರಿಸಿರುವುದು ಆಘಾತಕಾರಿಯಾಗಿದೆ” ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಐಟಿ ನಿಯಮಗಳು, 2021ರ ಕರಡು ತಿದ್ದುಪಡಿಗಳನ್ನು ಹಲವಾರು ವಿರೋಧ ಪಕ್ಷಗಳು ಟೀಕಿಸಿವೆ. “ಇದು ಅತ್ಯಂತ ಅನಿಯಂತ್ರಿತ ಮತ್ತು ಏಕಪಕ್ಷೀಯ” ಎಂದು ಬಣ್ಣಿಸಿವೆ.

ಇದಲ್ಲದೆ, ಐಟಿ ನಿಯಮಗಳಿಗೆ ತರುತ್ತಿರುವ ಇತ್ತೀಚಿನ ತಿದ್ದುಪಡಿಯು ಪಿಐಬಿ ಮಾತ್ರವಲ್ಲದೆ ಎಲ್ಲಾ ಕೇಂದ್ರ ಸರ್ಕಾರದ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಸೆನ್ಸಾರ್‌ಶಿಪ್ ಅಧಿಕಾರವನ್ನು ನೀಡುತ್ತಿದೆ. ಇವುಗಳು ಆಕ್ಷೇಪಿಸಿದ ಸುದ್ದಿಗಳನ್ನು ಸಾಮಾಜಿಕ ಮಾಧ್ಯಮ ಕಂಪನಿಗಳು ತೆಗೆದುಹಾಕಬೇಕಾಗುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. “ಇದು ಸಣ್ಣ, ಸ್ವತಂತ್ರ ಡಿಜಿಟಲ್ ಮಾಧ್ಯಮಗಳನ್ನು ಸೆನ್ಸಾರ್ ಮಾಡುವ ಗುರಿಯನ್ನು ಹೊಂದಿರುವ ಕ್ರಮವೆಂದು ತೋರುತ್ತದೆ” ಎಂದು ಪತ್ರಿಕಾ ಸಂಸ್ಥೆಗಳು ಆಕ್ಷೇಪ ವ್ಯಕ್ತಪಡಿಸಿವೆ.

ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ ಬಿಬಿಸಿ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡಲು ಪ್ರಯತ್ನಿಸುತ್ತಿರುವ ವಿದ್ಯಾರ್ಥಿಗಳು ಮತ್ತು ಅವರ ಒಕ್ಕೂಟಗಳ ಮೇಲೆ ಹೆಚ್ಚುತ್ತಿರುವ ದಾಳಿಯಿಂದ ತೀವ್ರವಾಗಿ ನೊಂದಿರುವುದಾಗಿ ಪತ್ರಕರ್ತರ ಸಂಸ್ಥೆಗಳು ತಿಳಿಸಿವೆ. “ಇದು ಪತ್ರಿಕಾ ಹಕ್ಕುಗಳು ಮತ್ತು ಸ್ವಾತಂತ್ರ್ಯದ ಮೇಲಿನ ನಿರಂತರ ದಾಳಿಯ ಭಾಗವಾಗಿದೆ” ಎಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...