Homeಕರ್ನಾಟಕಫಾಸಿಲ್‌ ಕೊಲೆಗೆ ಮೆಚ್ಚುಗೆ ಸೂಚಿಸಿದ ಬಿಜೆಪಿ ಮುಖಂಡ ಶರಣ್ ಪಂಪ್‌ವೆಲ್: ದ್ವೇಷ ಭಾಷಣಕ್ಕೆ ಖಂಡನೆ

ಫಾಸಿಲ್‌ ಕೊಲೆಗೆ ಮೆಚ್ಚುಗೆ ಸೂಚಿಸಿದ ಬಿಜೆಪಿ ಮುಖಂಡ ಶರಣ್ ಪಂಪ್‌ವೆಲ್: ದ್ವೇಷ ಭಾಷಣಕ್ಕೆ ಖಂಡನೆ

- Advertisement -
- Advertisement -

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹಾಗೂ ಬಿಜೆಪಿ ಮುಖಂಡ ಶರಣ್ ಪಂಪ್‌ವೆಲ್ ಅವರು ಮಂಗಳೂರಿನಲ್ಲಿ ನಡೆದ ಫಾಸಿಲ್‌ ಕೊಲೆಯನ್ನು ಸಮರ್ಥಿಸಿ ಹೇಳಿಕೆ ನೀಡಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಬಳಿಕ ಅಮಾಯಕ ಫಾಸಿಲ್‌ನನ್ನು ಹಿಂದೂ ಸಂಘಟನೆಗಳು ಕೊಂದಿರುವುದಾಗಿ ಒಪ್ಪಿಕೊಂಡಿರುವ ಶರಣ್‌, “ಈ ಕೊಲೆಯಲ್ಲಿ ಪರೋಕ್ಷವಾಗಿ ತನ್ನ ಪಾತ್ರವಿದೆ” ಎಂಬ ಸೂಚನೆಯನ್ನು ನೀಡಿದ್ದಾರೆ.

ತುಮಕೂರು ನಗರದಲ್ಲಿ ಭಜರಂಗದಳದ ಶೌರ್ಯ ಯಾತ್ರೆಯಲ್ಲಿ ಮಾತನಾಡಿದ ಅವರು, “ಪ್ರವೀಣ್ ನೆಟ್ಟಾರು ಹತ್ಯೆಯಲ್ಲಿ ಭಾಗಿಯಾಗಿರುವ ಮುಸ್ಲಿಂ ಜಿಹಾದಿಗಳಿಗೆ ಪ್ರತ್ಯುತ್ತರ ನೀಡಲು, ಸುರತ್ಕಲ್‌ನ ಬಿಸಿ ರಕ್ತದ ಯುವಕರು ಸೇಡು ತೀರಿಸಿಕೊಂಡರು” ಎಂದು ಹೇಳಿಕೆ ನೀಡಿದ್ದಾರೆ.

“ಪ್ರವೀಣ್ ನೆಟ್ಟಾರು ಹತ್ಯೆಯಲ್ಲಿ ಮುಸಲ್ಮಾನ್ ಜಿಹಾದಿಗಳಿದ್ದಾರೆ. ಅವರಿಗೆ ಉತ್ತರವನ್ನು ಕೊಡಬೇಕೆಂಬ ಕಾರಣಕ್ಕಾಗಿ ಸುರತ್ಕಲ್‌ನಲ್ಲಿದ್ದ ಬಿಸಿ ನೆತ್ತರಿನ ಯುವಕರು ಕೊಂದಿದ್ದಾರೆ. ಯಾರು ಇಲ್ಲದ ಸಮಯದಲ್ಲಿ ಅಲ್ಲ. ಮಾರ್ಕೆಟ್‌ನಲ್ಲಿ ಜನ ಇದ್ದಾಗಲೇ, ಅವರ ಎದುರಲ್ಲೇ ನುಗ್ಗಿ ನುಗ್ಗಿ ಅವರಿಗೆ ಹೊಡೆದು ಹತ್ಯೆಗೆ ಪ್ರತಿಕಾರವನ್ನು ತೋರಿಸಿದ್ದು ಹಿಂದೂ ಹುಡುಗರ ತಾಕತ್ತು” ಎಂದು ಪ್ರಚೋದಿಸಿದ್ದಾರೆ. ತುಮಕೂರಿನ ತಿಲಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಕಾರ್ಯಕ್ರಮ ನಡೆದಿದೆ.

“ಶರಣ್ ಪಂಪ್‌ವೆಲ್ ಮಾಡಿದ ಆಪಾದಿತ ಪ್ರಚೋದಕ ಹೇಳಿಕೆಗಳ ಮೇಲೆ ಯಾವುದೇ ದೂರುಗಳು ದಾಖಲಾಗಿಲ್ಲ. ಅವರ ಭಾಷಣದಲ್ಲಿ ನಾವು ಸ್ವಯಂಪ್ರೇರಿತ ಪ್ರಕರಣಗಳನ್ನು ತೆಗೆದುಕೊಳ್ಳುವುದಿಲ್ಲ. ನಗರದಲ್ಲಿ ಕಾನೂನು ಸುವ್ಯವಸ್ಥೆ ಸ್ಥಿರವಾಗಿದೆ” ಎಂದು ತಿಲಕ್ ನಗರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹೇಳಿರುವುದಾಗಿ ವರದಿಯಾಗಿದೆ.

“ನಾನು ಯಾವುದೇ ಸೇಡಿನ ಹತ್ಯೆಗಳನ್ನು ಸಮರ್ಥಿಸಿಕೊಂಡಿಲ್ಲ. ನಾನು ಯುವಕರ ಶಕ್ತಿಯ ಬಗ್ಗೆ ಮಾತ್ರ ಮಾತನಾಡಿದ್ದೇನೆ. ಹಿಂದೂಗಳು ಸಹ ಮುಸ್ಲಿಮರ ದೌರ್ಜನ್ಯದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಬಹುದು. ಸಮಾರಂಭದಲ್ಲಿ ನಾನು ಸತ್ಯವನ್ನಷ್ಟೇ ಮಾತನಾಡಿದ್ದೇನೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ನಾನು ಯಾವುದೇ ವಿವಾದಾತ್ಮಕ ಹೇಳಿಕೆ ನೀಡಿಲ್ಲ ಅಥವಾ ಯಾವುದೇ ನಿರ್ದಿಷ್ಟ ಹತ್ಯೆಗಳನ್ನು ಎತ್ತಿ ತೋರಿಸಿಲ್ಲ” ಎಂದು ಪಂಪ್‌ವೆಲ್‌ ಸಮರ್ಥಿಸಿಕೊಂಡಿದ್ದಾರೆ.

ಶರಣ್ ಪಂಪ್‌ವೆಲ್ ಹೇಳಿಕೆಗೆ ಜನಾಕ್ರೋಶ ವ್ಯಕ್ತವಾಗಿದೆ. “ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯವನ್ನು ಧ್ರುವೀಕರಣಗೊಳಿಸುವ ಪ್ರಯತ್ನ ಇದಾಗಿದೆ. ಇದು ಆರೆಸ್ಸೆಸ್ ಮತ್ತು ಬಿಜೆಪಿಯ ಹಿಡನ್ ಅಜೆಂಡಾ. ಕಾನೂನು ಸುವ್ಯವಸ್ಥೆ ಹದಗೆಡಿಸಲು ಯತ್ನಿಸಿದ ಪಂಪ್‌ವೆಲ್ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು” ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಡಿವೈಎಫ್ಐ ಕರ್ನಾಟಕ ರಾಜ್ಯಾಧ್ಯಕ್ಷರಾದ ಮನೀರ್‌ ಕಾಟಿಪಳ್ಳ ಪ್ರತಿಕ್ರಿಯಿಸಿ, “ಶರಣ್ ಪಂಪ್ ವೆಲ್ ತುಮಕೂರಿನಲ್ಲಿ ಸಂಫಪರಿವಾರದ ವೇದಿಕೆಯಲ್ಲಿ ಮಾಡಿದ ಭಾಷಣ ದುಷ್ಟತನದ ಪರಮಾವಧಿ” ಎಂದಿದ್ದಾರೆ.

“ಇದು ತೀರಾ ಆತಂಕಕಾರಿ ಬೆಳವಣಿಗೆ. ನಾಗರಿಕ ಸಮಾಜದಲ್ಲಿ ಇದು ಭೀತಿಯನ್ನು ಮೂಡಿಸಿದೆ. ಫಾಝಿಲ್ ಕೊಲೆಗೆ ವಿಎಚ್‌ಪಿ, ಬಿಜೆಪಿ ಮುಖಂಡರ ಬೆಂಬಲ ದೊರಕಿರುವ ಅನುಮಾನ ಕೊಲೆ ನಡೆದ ಸಂದರ್ಭದಲ್ಲೇ ವ್ಯಕ್ತವಾಗಿತ್ತು. ಪೊಲೀಸರು ರಾಜಕೀಯ ಒತ್ತಡದಿಂದ ಕೊಲೆಯ ಪಿತೂರಿದಾರರನ್ನು ರಕ್ಷಿಸುತ್ತಿದ್ದಾರೆ ಎಂದು ಫಾಝಿಲ್ ಕುಟುಂಬ ಆರೋಪಿಸಿತ್ತು. ಶರಣ್ ಪಂಪ್ ವೆಲ್ ಭಾಷಣ ಈ ಅನುಮಾನ, ಆರೋಪವನ್ನು ಅನುಮಾನಕ್ಕೆ ಎಡೆಯಿಲ್ಲದಂತೆ ಪುಷ್ಟೀಕರಿಸಿದೆ” ಎಂದು ತಿಳಿಸಿದ್ದಾರೆ.

“ಶರಣ್ ಪಂಪ್ ವೆಲ್ ಇಂದಿನ ಅತಿರೇಕದ ದ್ವೇಷ ಭಾಷಣ, ಕೊಲೆಗಳ ಸಮರ್ಥನೆ, ಬೆದರಿಕೆ ಜನಾಂಗ ಹತ್ಯೆಗೆ ಪ್ರಚೋದನೆ ನೀಡುವಂತಿದೆ‌. ನಿರುದ್ಯೋಗ, ಬಡತನದಿಂದ ಹತಾಶಗೊಂಡಿರುವ ಯುವಕರ ಕೈಗೆ ತಲವಾರು ನೀಡಿ ಗಲಭೆಗಿಳಿಸುವ, ಇಡೀ ಸಮಾಜವನ್ನು ಕ್ರಿಮಿನಲೀಕರಣಗೊಳಿಸುವ, ಚುನಾವಣೆ ಸನಿಹದಲ್ಲಿರುವ ಸಂದರ್ಭ ಮತೀಯ ಧ್ರುವೀಕರಣ ರಾಜಕೀಯ ದುರುದ್ದೇಶಗಳನ್ನು ಹೊಂದಿದೆ. ಹಾಗೂ ಶರಣ್ ಪಂಪ್ ವೆಲ್‌ಗೆ ಬಿಜೆಪಿ ಸರಕಾರದ ಬೆಂಬಲವೂ ದೊರಕಿರುವುದು ಎದ್ದು ಕಾಣುತ್ತಿದೆ” ಎಂದು ಟೀಕಿಸಿದ್ದಾರೆ.

“ಅಮಾಯಕ ಫಾಝಿಲ್ ಕೊಲೆಯ ಸಂದರ್ಭ ರಾಜ್ಯ ಸರಕಾರ ಸಾಂತ್ವನ, ಪರಿಹಾರ ಒದಗಿಸದೆ ಫಾಝಿಲ್ ಕುಟುಂಬದೊಂದಿಗೆ ತಾರತಮ್ಯದಿಂದ ಕೆಟ್ಟದಾಗಿ ನಡೆದುಕೊಂಡಿತ್ತು. ಪ್ರಕರಣದ ತನಿಖೆಯೂ ದುರ್ಬಲ ನೆಲೆಯಲ್ಲಿ ನಡೆದಿತ್ತು. ಈಗ ಫಾಝಿಲ್ ಕೊಲೆಯನ್ನು ಭಜರಂಗ ದಳದ ಕಾರ್ಯಕರ್ತರ ಶೌರ್ಯದ ಸಂಕೇತ ಎಂದು ಭಾಷಣ ಬಿಗಿಯಲು‌ ಅವಕಾಶ ಒದಗಿಸಿ ಆ ಸಂತ್ರಸ್ತ ಕುಟುಂಬವನ್ನು ಮತ್ತಷ್ಟು ನೋವುಣ್ಣುವಂತೆ ಮಾಡಲಾಗುತ್ತಿದೆ. ಮುಸ್ಲಿಂ ಸಮುದಾಯದ ವಿರುದ್ದ ಇನ್ನಷ್ಟು ದ್ವೇಷ ಹರಡುವ ಯತ್ನವೂ ಇದರ ಹಿಂದಿದೆ. ಸರಕಾರಿ ಪ್ರಾಯೋಜಿತ ಇಂತಹ ಯೋಜನಾಬದ್ದ ಜನಾಂಗ ದ್ವೇಷದ ಕೆಲಸಗಳು ಮುಸ್ಲಿಂ ಸಮುದಾಯದೊಳಗಡೆ ನಕಾರಾತ್ಮಕ ಶಕ್ತಿಗಳ ಬೆಳವಣಿಗೆಗೂ ಕುಮ್ಮಕ್ಕು‌ ನೀಡುತ್ತದೆ. ಇದು ನಮ್ಮ ಸಮಾಜವನ್ನು ಅಪಾಯಕಾರಿ ವಿಭಜನೆಯೆಡೆಗೆ ಒಯ್ಯುತ್ತದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಕೊಲೆ, ನರಮೇಧದ ಸಮರ್ಥನೆಯ ಭಾಷಣಕ್ಕಾಗಿ ಶರಣ್ ಪಂಪ್ ವೆಲ್ ರನ್ನು ಕಠಿಣ ಕಾಯ್ದೆಯಡಿ ಬಂಧಿಸಬೇಕು, ಫಾಝಿಲ್ ಕೊಲೆಯಲ್ಲಿ ಶರಣ್ ಪಂಪ್ ವೆಲ್ ಮತ್ತಿತರ ನಾಯಕರ ಪಾತ್ರದ ಕುರಿತು ಮರು ತನಿಖೆ ಮಾಡಬೇಕು ಎಂದು ಡಿವೈಎಫ್ಐ ಆಗ್ರಹಿಸುತ್ತದೆ. ನಾಗರಿಕ ಸಮಾಜ ಒಂದಾಗಿ ಶರಣ್ ಪಂಪ್ ವೆಲ್ ಭಾಷಣವನ್ನು ಖಂಡಿಸಬೇಕು ಹಾಗೂ ಕ್ರಮಕ್ಕಾಗಿ ಒತ್ತಾಯಿಸಬೇಕು” ಎಂದಿದ್ದಾರೆ.

ಫಾಜಿಲ್ ಕೊಲೆ ಪ್ರಕರಣ

ಪ್ರವೀಣ್ ನೆಟ್ಟಾರು ಹತ್ಯೆಯ ಎರಡು ದಿನಗಳ ನಂತರ, ಹಿಂದುತ್ವ ಸಂಘಟನೆಗಳೊಂದಿಗೆ ಸೇರಿರುವ ದುಷ್ಕರ್ಮಿಗಳ ಗುಂಪೊಂದು 2022ರ ಜುಲೈ 28 ರಂದು ಮಂಗಳೂರಿನಲ್ಲಿ 23 ವರ್ಷದ ಮೊಹಮ್ಮದ್ ಫಾಜಿಲ್ ಅವರನ್ನು ಕೊಂದಿತು.

ಒಂದು ವಾರದೊಳಗೆ ಮಂಗಳೂರು ನಗರ ಪೊಲೀಸರು ಪ್ರಕರಣವನ್ನು ಭೇದಿಸಿ ಈ ಸಂಬಂಧ ಆರು ಮಂದಿಯನ್ನು ವಶಕ್ಕೆ ಪಡೆದರು. ಆರೋಪಿಗಳೆಲ್ಲರೂ ಹಿಂದುತ್ವವಾದಿಗಳಾಗಿದ್ದಾರೆ.

ಫಾಜಿಲ್ ಹತ್ಯೆಯಾಗಿ ಆರು ತಿಂಗಳಾದರೂ ಆತನ ಕುಟುಂಬಕ್ಕೆ ಕರ್ನಾಟಕ ಸರ್ಕಾರದಿಂದ ಪರಿಹಾರ ಸಿಕ್ಕಿಲ್ಲ. ಯಾವುದೇ ಕ್ಯಾಬಿನೆಟ್ ಮಂತ್ರಿಗಳು ಸಂತ್ರಸ್ತರ ಕುಟುಂಬ ಸದಸ್ಯರನ್ನು ಭೇಟಿ ಮಾಡಲಿಲ್ಲ ಅಥವಾ ಕುಟುಂಬಕ್ಕೆ ಪರಿಹಾರವನ್ನು ನೀಡಲಿಲ್ಲ ಎಂದು ಪ್ರತಿಪಕ್ಷಗಳು ರಾಜ್ಯ ಸರ್ಕಾರವನ್ನು ಟೀಕಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...