Homeಕರ್ನಾಟಕಕವಿ, ವಿಮರ್ಶಕ ಕೆ.ವಿ. ತಿರುಮಲೇಶ್ ಇನ್ನಿಲ್ಲ

ಕವಿ, ವಿಮರ್ಶಕ ಕೆ.ವಿ. ತಿರುಮಲೇಶ್ ಇನ್ನಿಲ್ಲ

- Advertisement -
- Advertisement -

ಕನ್ನಡದ ಖ್ಯಾತ ಕತೆಗಾರ, ಕವಿ ವಿಮರ್ಶಕ ಕೆ.ವಿ. ತಿರುಮಲೇಶ್ (82) ಸೋಮವಾರ ಬೆಳಿಗ್ಗೆ ಹೈದರಾಬಾದ್‌ನ ತಮ್ಮ ಮಗಳ ನಿವಾಸದಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

ಕೇರಳದ ಕಾಸರಗೋಡು ಜಿಲ್ಲೆಯ ಕಾರಡ್ಕ ಗ್ರಾಮದಲ್ಲಿ 1940ರ ಸೆಪ್ಟೆಂಬರ್ 12ರಂದು ಜನಿಸಿದ ತಿರುಮಲೇಶ್ ಇವರು ಕನ್ನಡ ಭಾಷೆಯ ಬಹು ಮುಖ್ಯ ಕವಿ, ಕತೆಗಾರ, ಭಾಷಾ ವಿಜ್ಞಾನಿ, ವಿದ್ವಾಂಸ ಹಾಗೂ ವಿಮರ್ಶಕರಾಗಿ ಗುರುತಿಸಿಕೊಂಡಿದ್ದರು.

ಕೆ.ವಿ. ತಿರುಮಲೇಶ್ ಕನ್ನಡದ ನವ್ಯಸಾಹಿತ್ಯದ ಸಂದರ್ಭದಲ್ಲಿ ಬರೆಯಲು ತೊಡಗಿದವರು. ಸುಮಾರು ಐದು ದಶಕಗಳ ಕಾಲ ಕವಿತೆ, ಕತೆ, ವಿಮರ್ಶೆ ಅನುವಾದ ಕ್ಷೇತ್ರಗಳಲ್ಲಿ ಕೆಲಸ ಮಾಡಿಕೊಂಡು ಬಂದಿದ್ದಾರೆ. ‘ಮುಖವಾಡಗಳು’ ಹಾಗೂ ‘ವಠಾರ’ ಇವರ ಎರಡು ಜನಪ್ರಿಯ ಕೃತಿಗಳು. ಇವರ 20 ಪ್ರಕಟಿತ ಕೃತಿಗಳಲ್ಲಿ ಅವಧ, ವಠಾರ, ಮುಖವಾಡಗಳು, ಪಾಪಿಯೂ ಎಂಬುವು ಮುಖ್ಯ ಕವನ ಸಂಕಲನಗಳು. ಆರೋಪ, ಮುಸುಗು ಇವರ ಕೆಲ ಕಾದಂಬರಿಗಳು. ಬೇಂದ್ರೆಯವರ ಕಾವ್ಯಶೈಲಿ, ನಮ್ಮ ಕನ್ನಡ, ಅಸ್ತಿತ್ವವಾದ ಇವು ಇವರ ಮುಖ್ಯ ವಿಮರ್ಶಾ ಕೃತಿಗಳು.ಮಾಲ್ಟ ಲೌರಿಡ್ಜ್ ಬ್ರಿಗ್ಗನ ಟಿಪ್ಪಣಿ ಪುಸ್ತಕ ಇವರ ಅನುವಾದಿತ ಕೃತಿ.ತಿರುಮಲೇಶರು ಪ್ರಸ್ತುತ ಅಮೇರಿಕದ ಅಯೋವ ವಿಶ್ವವಿದ್ಯಾನಿಲಯದಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿದ್ದರು.

ಕರ್ನಾಟಕ ಸಾಹಿತ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ನಿರಂಜನ ಪ್ರಶಸ್ತಿಯೂ ಸೇರಿದಂತೆ ಅನೇಕ ಪ್ರತಿಷ್ಠಿತ ಪ್ರಶಸ್ತಿಗಳು ಇವರಿಗೆ ಸಂದಿವೆ. ಹೈದರಾಬಾದಿನ ಸಿ.ಐ.ಇ.ಎಫ್.ಎಲ್. (ಈಗ ಇ.ಎಫ್.ಎಲ್.ಯು.) ವಿಶ್ವವಿದ್ಯಾಲಯದಲ್ಲಿ ಭಾಷಾ ವಿಜ್ಞಾನದ ಪ್ರೊಫಸರರಾಗಿ ಸೇವೆಯನ್ನು ಸಲ್ಲಿಸಿ ನಿವೃತ್ತರಾಗಿದ್ದಾರೆ. ಕನ್ನಡದ ವಾಕ್ಯರಚನೆಯ ಕುರಿತು ಮತ್ತು ಕರ್ಮಣೀ ಪ್ರಯೋಗದ ನಿಯೋಗಗಳ ಕುರಿತು ಕ್ರಮಬದ್ಧವಾದ, ಸೂಕ್ಷ್ಮ ಒಳನೋಟಗಳನ್ನೊಳಗೊಂಡ ಭಾಷಾವೈಜ್ಞಾನಿಕ ಅಧ್ಯಯನ ಅವರ ಪಿ.ಎಚ್ ಡಿ. ಪ್ರಬಂಧ. ಬೇಂದ್ರೆಯವರ ಶೈಲಿಯ ಬಗ್ಗೆಯೂ ಮತ್ತಿತರ ಭಾಷಾಸಂಬಂಧಿ ವಿಷಯಗಳನ್ನು ಕುರಿತೂ ಹಲವಾರು ಲೇಖನಗಳನ್ನೂ, ಒಂದು ಲೇಖನ ಸಂಗ್ರಹವನ್ನೂ ಪ್ರಕಟಿಸಿದ್ದಾರೆ. ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿ ಅತ್ಯುತ್ತಮವಾದುದ್ದನ್ನೇ ಬರೆದರು. ಕನ್ನಡ ಭಾಷೆ ಮತ್ತು ವ್ಯಾಕರಣದ ಮೇಲೆ ಬಹಳ ಆಳವಾದ ಹಿಡಿತವನ್ನು ಹೊಂದಿದ್ದರು.

ಕೆ.ವಿ.ತಿರುಮಲೇಶ್ ಅವರ ಕುರಿತು ಸಾಹಿತಿ, ಪ್ರಾಧ್ಯಾಪಕ ಪುರುಷೋತ್ತಮ ಬಿಳಿಮಲೆಯವರು ಫೇಸ್‌ಬುಕ್‌ನಲ್ಲಿ ಬರೆದಿರುವ ಸಾಲುಗಳು– ಭಾಷೆಯ ಕುರಿತಾಗಿ ಅತ್ಯಂತ ಸೂಕ್ಷ್ಮವಾಗಿ ಮತ್ತು ನವಿರಾಗಿ ಯೋಚಿಸಿ ಬರೆಯುತ್ತಿದ್ದ ಕೆಲವೇ ಕೆಲವರಲ್ಲಿ ಕೆ.ವಿ.ತಿರುಮಲೇಶ್ ಕೂಡಾ ಒಬ್ಬರು. ಅವರು ಕವಿ, ಕತೆಗಾರ, ಅನುವಾದಕ, ಭಾಷಾ ವಿಜ್ಞಾನಿ, ಮತ್ತು ವಿಮರ್ಶಕ. ಅವರು ಕಾಸರಗೋಡಿನಲ್ಲಿದ್ದಾಗ ನಮಗೆಲ್ಲ ಬಹಳ ಹತ್ತಿರದವರಾಗಿದ್ದರು.

ತಿರುಮಲೇಶ್‌ ಹುಟ್ಟಿದ ಸ್ಥಳ ಕಾರಡ್ಕ ( ಸಪ್ಟಂಬರ 12, 1940) . ಇದೇ ಊರಿನಲ್ಲಿ ಹುಟ್ಟಿದ ಇನ್ನೊಬ್ಬ ಕವಿ ವೇಣುಗೋಪಾಲ ಕಾಸರಗೋಡು ಬಹಳ ಬೇಗ ತೀರಿಕೊಂಡರು. ಕಾರಡ್ಕದ ಕಾರಣಿಕ ಪುರುಷರು ಎಂದು ನಾನು ಅವರಿಗೆ ಹೇಳುತ್ತಿದ್ದೆ. ನವ್ಯಸಾಹಿತ್ಯ ಕಾಲದಲ್ಲಿ ಕಾಸರಗೋಡು ಬಹಳ ಕಾರಣಗಳಿಂದ ಸುದ್ದಿಯಲ್ಲಿತ್ತು. ತಿರುಮಲೇಶ್‌, ವೇಣುಗೋಪಾಲ ಕಾಸರಗೋಡು, ಎಂ. ಗಂಗಾಧರ ಭಟ್, ಯು ಮಹೇಶ್ವರಿ, ಲಲಿತಾ ಎಸ್‌ ಎನ್‌ ಭಟ್‌, ಮೊದಲಾದವರು ನವ್ಯ ಕಾಲಘಟ್ಟದ ದೊಡ್ಡ ಹೆಸರುಗಳು. ಇವರೆಲ್ಲ ಒಟ್ಟು ಸೇರಿ ಒಮ್ಮೆ ʼ ಕಯ್ಯಾರರು ಇನ್ನು ಬರೆಯಬೇಕಾಗಿಲ್ಲʼ ಎಂದು ಘೋಷಿಸಿ ದೊಡ್ಡ ಗುಲ್ಲೆಬ್ಬಿಸಿದ್ದರು.
ಮುಂದೆ ತಿರುಮಲೇಶ್‌ ಹೈದರಾಬಾದಿನ ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಇಂಗ್ಲೀಷ್ ಅಂಡ್ ಫಾರಿನ್ ಲಾಂಗ್ವೇಜಸ್ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿ ಸೇರಿ ಅಲ್ಲಿಯೇ ನಿವೃತ್ತರಾದರು. ಹೊರನಾಡ ಕನ್ನಡಿಗರಾದ ನಾವು ಆ ಕಾರಣಕ್ಕೇನೇ ಹಲವು ವಿಷಯಗಳ ಬಗ್ಗೆ ಹರಟುತ್ತಿದ್ದೆವು.
ಕಳೆದ ಸುಮಾರು 50 ವರ್ಷಗಳಿಂದ ತಿರುಮಲೇಶ್‌ ಬರೆಯುತ್ತಲೇ ಇದ್ದರು. ‘ಮುಖವಾಡಗಳು’ ಹಾಗೂ ‘ವಠಾರ’ ಕವನ ಸಂಕಲನಗಳ ಮೂಲಕ ಅವರು ನವ್ಯ ಕಾಲಘಟ್ಟದಲ್ಲಿ ಜನಪ್ರಿಯರಾದರು. ಅಕ್ಷಯ ಕಾವ್ಯ, ಮಹಾಪ್ರಸ್ಥಾನ, ಅವಧ, ಪಾಪಿಯೂ , ಆರೋಪ, ಮುಸುಗು, ಕಳ್ಳಿಗಿಡದ ಹೂವು, ಸಮ್ಮುಖ, ಕಾವ್ಯಕಾರಣ ಇವರ ಇತರ ಮುಖ್ಯ ಕೃತಿಗಳು. ಕಲಿಗುಲ ಮತ್ತು ಟೈಬೀರಿಯಸ್‌ ಅವರಿಗೆ ಹೆಸರು ತಂದುಕೊಟ್ಟ ನಾಟಕಗಳು. ಡಾನ್ ಕ್ವಿಕ್ಸಾಟನ ಸಾಹಸಗಳು ಮತ್ತು ಗಂಟೆ ಗೋಪುರ ಅವರ ಒಳ್ಳೆಯ ಅನುವಾದಗಳು.
ಬೇಂದ್ರೆಯವರ ಕಾವ್ಯಶೈಲಿ, ನಮ್ಮ ಕನ್ನಡ, ಮತ್ತು ಅಸ್ತಿತ್ವವಾದ ಇವರ ಮುಖ್ಯ ವಿಮರ್ಶಾ ಕೃತಿಗಳು.
ದೊಡ್ಡ ಲೇಖಕನೊಬ್ಬ ತೀರಿಕೊಂಡಾಗ ಸಹಜವಾಗಿ ಒಂದು ಬಗೆಯ ನಿರ್ವಾತ ಉಂಟಾಗುತ್ತದೆ. ಅದನ್ನು ಯಾರಾದರೂ ತುಂಬಿಸುವವರೆಗೆ ನಾವೆಲ್ಲ ಕಾಯಬೇಕಾಗುತ್ತದೆ ಎಂದು ಬರೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...