Homeಚಳವಳಿಯಜಾಕಿ ಸಂಸ್ಥೆಯಿಂದ ವಜಾಗೊಳಿಸಿದ ಕಾರ್ಮಿಕರನ್ನು ಪುನರ್ ನೇಮಕಕ್ಕೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳಿಂದ ರ್ಯಾಲಿ

ಯಜಾಕಿ ಸಂಸ್ಥೆಯಿಂದ ವಜಾಗೊಳಿಸಿದ ಕಾರ್ಮಿಕರನ್ನು ಪುನರ್ ನೇಮಕಕ್ಕೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳಿಂದ ರ್ಯಾಲಿ

- Advertisement -
- Advertisement -

ಯಜಾಕಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ನೂರಾರು ಉದ್ಯೋಗಿಗಳನ್ನು ಕಾನೂನುಬಾಹಿರವಾಗಿ ವಜಾಗೊಳಿಸಿದೆ. ಡಿಸೆಂಬರ್ 26, 2022 ರಿಂದ ಇಲ್ಲಿಯವರೆಗೂ ಸಂಸ್ಥೆಯ ಗೇಟಿನ ಬಳಿಯೇ ಪ್ರತಿಭಟನೆ ನಡೆಸುತ್ತಿದ್ದಾರೆ. ಸಂಸ್ಥೆಯಿಂದಾಗಲಿ, ಅಥವಾ ಸರ್ಕಾರದಿಂದಾಗಲಿ ಈವರೆಗೂ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಹಾಗಾಗಿ ಇಂದು ಕಾರ್ಮಿಕರ ಸಂಘಟನೆಗಳು ರ್ಯಾಲಿ ನಡೆಸಲು ಮುಂದಾಗಿವೆ.

ಅರಿಷಿನಕುಂಟೆ ಬೈಪಾಸ್‌ನಿಂದ ಯಜಾಕಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿವರೆಗೆ ಈ ರ್ಯಾಲಿ ನಡೆಯುತ್ತಿದೆ. ಕೆಲಸದಿಂದ ಕೈಬಿಟ್ಟಿರುವ ನೌಕರರನ್ನು ಈ ಕೂಡಲೇ ಪುನರ್ ನೇಮಕ ಮಾಡಿಕೊಳ್ಳಬೇಕೆಂದು ಒತ್ತಾಯಿಸುತ್ತಿರುವ ಕಾರ್ಮಿಕರು, ರ್ಯಾಲಿ ನಡೆಸುವ ಮೂಲಕ ಕಾರ್ಮಿಕರು ತಮ್ಮ ಸಮಸ್ಯೆಯನ್ನು ಸಂಸ್ಥೆ ಮತ್ತು ಸರ್ಕಾರದ ಮುಂದಿಡಲು ನಿರ್ಧರಿಸಿದ್ದಾರೆ.

ಡಿಸೆಂಬರ್ ನಲ್ಲಿ ಸುಮಾರು 150 ಕಾರ್ಮಿಕರನ್ನು ವಜಾಮಾಡಲಾಗಿತ್ತು. ನಿರಂತರವಾಗಿ ಹೋರಾಟ ನಡೆಸುತ್ತಿರುವದರಿಂದ ಅವರನ್ನು ಮತ್ತೆ ಫ್ಯಾಕ್ಟರಿಯ ಆಡಳಿತವು ಕೆಲಸಕ್ಕೆ ಪುನರ್ ನೇಮಿಸಿಕೊಳ್ಳುವುದಾಗಿ ಈ ಹಿಂದಿನ ಸಭೆಯಲ್ಲಿ ತಿಳಿಸಿತ್ತು. ಆದರೆ, ಇಲ್ಲಿಯವರೆಗೆ 30 ಕಾರ್ಮಿಕರನ್ನು ಮಾತ್ರವೇ ಪುನರ್ ನೇಮಿಸಿಕೊಂಡಿದೆ.

120 ಕಾರ್ಮಿಕರನ್ನು ಪುನರ್ ನೇಮಕ ಮಾಡಿಕೊಂಡಿಲ್ಲ ಹಾಗಾಗಿ ಮುಷ್ಕರವನ್ನು ಮುಂದುವರೆಸಿದ್ದಾರೆ. ಈ ಸಂಸ್ಥೆಯ ಆಡಳಿತ ಮಂಡಳಿಯು ಬೇಕಂತಲೇ ಈ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತಿದೆ ಎಂದು ಆರೋಪಿಸಲಾಗಿದೆ. ಕಳೆದ ಒಂದೂವರೆ ತಿಂಗಳಿನಿಂದ ವೇತನ ಪಡೆಯದ ಕಾರ್ಮಿಕರು ಕಷ್ಟದಲ್ಲಿ ಸಿಲುಕಿದ್ದಾರೆ. ಈ ಕಾರ್ಮಿಕರೆಲ್ಲ ಉತ್ತರ ಕರ್ನಾಟಕ ಭಾಗದಿಂದ ಬಂದಿರುವವರಿರಾಗಿದ್ದು, ಕೆಲಸ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಎಐಸಿಸಿಟಿಯು ಮುಖಂಡರಾದ ವಿಜಯ್ ಅವರು ಮಾತನಾಡಿ,  “ಕೆಲಸದಿಂದ ವಜಾಗೊಳಿಸಿರುವ ಕಾರ್ಮಿಕರನ್ನು ಈ ಕೂಡಲೇ ಪುನರ್ ನೇಮಕ ಮಾಡಿಕೊಳ್ಳಬೇಕೆಂದು ಒತ್ತಾಯಿಸಿ, ರ್ಯಾಲಿ ನಡೆಸುತ್ತಿದ್ದೇವೆ. ಈಗಾಗಲೇ ಕಾರ್ಮಿಕ ಸಚಿವರಿಗೆ ಮನವಿ ಮಾಡಿದ್ದರೂ ಕೂಡ ಯಾವುದೇ ಪ್ರಯೋಜನ ಆಗಿಲ್ಲ. ಸುಮಾರು 2 ತಿಂಗಳಿನಿಂದ ಈ ಹೋರಾಟ ನಡೆಯುತ್ತಿದೆ. ಈ ವರೆಗೂ ಈ ಕಂಪನಿಯ ಆಡಳಿತ ಮಂಡಳಿಯೂ ಸರಿಯಾಗಿ ಸ್ಪಂದಿಸಿಲ್ಲ” ಎಂದು ಹೇಳಿದರು.

“ಉತ್ತರ ಕರ್ನಾಟಕದ ನಾನಾಭಾಗದಿಂದ ಬಂದಿರುವ ಕಾರ್ಮಿಕರು, ಈ ಕೆಲಸವನ್ನೇ ನಂಬಿಕೊಂಡು ಬಹಳ ವರ್ಷಗಳಿಂದ ಇಲ್ಲಿಯೇ ಇದ್ದಾರೆ. ಇದೀಗ ಕಾರಣವೇ ಇಲ್ಲದೆ ಕೆಲಸದಿಂದ ತಗೆದುಹಾಕಿದ್ದರಿಂದ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಕಾರ್ಮಿಕರೊಂದಿಗೆ ಇದೀಗ ಸರ್ಕಾರ ನಿಲ್ಲಬೇಕಿದ್ದು, ಸಂಸ್ಥೆಯು ಶೀಘ್ರವೇ ಅವರನ್ನು ಪುನರ್ ನೇಮಕ ಮಾಡಿಕೊಳ್ಳಬೇಕು” ಎಂದು ವಿಜಯ್ ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...