Homeದಲಿತ್ ಫೈಲ್ಸ್ಕೊಪ್ಪಳ: ಹೊಲಕ್ಕೆ ಎಮ್ಮೆ ಹೋದ ಕಾರಣಕ್ಕೆ ಮೂವರು ದಲಿತ ಯುವಕರ ಮೇಲೆ ಮಾರಣಾಂತಿಕ ಹಲ್ಲೆ

ಕೊಪ್ಪಳ: ಹೊಲಕ್ಕೆ ಎಮ್ಮೆ ಹೋದ ಕಾರಣಕ್ಕೆ ಮೂವರು ದಲಿತ ಯುವಕರ ಮೇಲೆ ಮಾರಣಾಂತಿಕ ಹಲ್ಲೆ

- Advertisement -
- Advertisement -

ಜಮೀನಿನ ಒಳಗೆ ಜಾನುವಾರು ಹೋದ ಕಾರಣಕ್ಕೆ ಪರಿಶಿಷ್ಟ ಪಂಗಡ (ವಾಲ್ಮೀಕಿ ಸಮುದಾಯ)ದ ಮೂವರು ಯುವಕರ ಮೇಲೆ, ಕುರುಬ ಸಮುದಾಯದವರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.

ಈ ಸಂಬಂಧ ಜಿಲ್ಲೆಯ ತಾವರೆಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾರತೀಯ ದಂಡ ಸಂಹಿತೆ ಸೆಕ್ಷನ್‌ 143, 147, 148, 323, 324, 307, 504, 506, 149 ಮತ್ತು ‘ಎಸ್‌ಸಿ ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾ‌ಯ್ದೆ’ಯ ಸೆಕ್ಷನ್‌ 3 (1)(r), 3(1)(s), 3(2)(va) ಅಡಿಯಲ್ಲಿ ಜನವರಿ 21ರಂದು ಪ್ರಕರಣ ದಾಖಲಾಗಿದೆ.

‌ಏನಿದು ವಿವಾದ?

ವಾಲ್ಮೀಕಿ ಸಮುದಾಯದ ಆಂಜನೇಯಗೌಡ ಮತ್ತು ಇತರ ಇಬ್ಬರು ಸಹೋದರರು ಹಲ್ಲೆಗೆ ಒಳಗಾಗಿದ್ದಾರೆ. ದಿನಾಂಕ 21-01-2023ರಂದು ಸಂಜೆ 7.30ರ ಸುಮಾರಿಗೆ ತಾವರಗೆರೆ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪೊಲೀಸರು ಮಾಹಿತಿ ಪಡೆದಿದ್ದಾರೆ.

ಕುಷ್ಟಗಿ ತಾಲ್ಲೂಕಿನ ಗರ್ಜನಾಳ ಗ್ರಾಮದ ಮಾನನಗೌಡ ಮತ್ತು ಪರಮಪ್ಪ ಅವರ ಜಮೀನುಗಳು ಅಕ್ಕಪಕ್ಕದಲ್ಲಿ ಇದ್ದು, ಒಂದು ತಿಂಗಳ ಹಿಂದೆ ಆಂಜನೇಯಗೌಡ (ಮಾನನಗೌಡ ಅವರ ಮಗ) ಅವರ ಜಮೀನಿಗೆ ಪರಮಪ್ಪ ಅವರು ಕುರಿ ಮತ್ತು ದನಗಳನ್ನು ಬಿಟ್ಟಿದ್ದರು. ಈ ವಿಚಾರವಾಗಿ ಪ್ರಶ್ನಿಸಿದಾಗ ಊರಿನ ಹಿರಿಯರು ಪರಮಪ್ಪನವರಿಗೆ ಬುದ್ಧಿ ವಾದ ಹೇಳಿದ್ದರು. ಈ ರೀತಿ ಬಿಟ್ಟು ಜಗಳ ಮಾಡಿಕೊಳ್ಳಬಾರದು ಎಂದು ತಿಳಿಸಿದ್ದರು. ಆವಾಗಿನಿಂದ ಪರಮಪ್ಪ ಅವರು ಆಂಜನೇಯಗೌಡನ ಕುಟುಂಬದ ಮೇಲೆ ಸಿಟ್ಟಾಗಿದ್ದರು.

ಜನವರಿ 21ರಂದು ಸಂಜೆ 5.30 ಗಂಟೆ ಸುಮಾರಿಗೆ ಆಂಜನೇಯಗೌಡರ ಜಾನುವಾರು ಪರಮಪ್ಪ ಕಂಬಳಿಯವರ ಜಮೀನಿಗೆ ಆಕಸ್ಮಿಕವಾಗಿ ಹೋಗಿತ್ತು. ಇದನ್ನೇ ನೆಪವಾಗಿಟ್ಟುಕೊಂಡು ಪರಮಪ್ಪ, ಆಂಜನೇಯಗೌಡನ ತಮ್ಮನಾದ ಬಸವನಗೌಡನಿಗೆ ಹೊಡೆದಿದ್ದರು. ಜೊತೆಗೆ ಇವರ ಎಮ್ಮೆಯನ್ನು ತಮ್ಮ ಹೊಲದಲ್ಲಿ ಕಟ್ಟಿ ಹಾಕಿಕೊಂಡಿದ್ದರು. ಸಹೋದರರಾದ ಆಂಜನೇಯಗೌಡ, ದುರುಗನಗೌಡ ಮತ್ತು ಬಸವನಗೌಡ ಮೂವರು ಸೇರಿಕೊಂಡು ಸಂಜೆ 6.30ರ ಸುಮಾರಿಗೆ ಹೊಲದ ಬಳಿ ಬಂದರು. “ಆಕಸ್ಮಿಕವಾಗಿ ನಮ್ಮ ಎಮ್ಮೆ ಬಂದಿದೆ. ಆದರೆ ಬಸವನಗೌಡನಿಗೆ ಹೊಡೆದಿದ್ದೀರಿ. ಅಲ್ಲದೆ ನಮ್ಮ ಎಮ್ಮೆಯನ್ನೂ ಕಟ್ಟಿ ಹಾಕಿಕೊಂಡಿದ್ದೀರಿ. ಕೂಡಿ ಹಾಕಿರುವ ನಮ್ಮ ಎಮ್ಮೆಯನ್ನು ಬಿಟ್ಟುಬಿಡಿ” ಎಂದು ಆಂಜನೇಯಗೌಡ ಕೇಳಿದ್ದರು.

ಆಗ ಜಗಳ ತೆಗೆದಿರುವ ಪರಮಪ್ಪ, “ಈ ಹಿಂದೆ ಗ್ರಾಮದ ಹಿರಿಯರಿಗೆ ತಿಳಿಸಿ ನಮಗೆ ಅವಮಾನ ಮಾಡಿದ್ದೀರಿ” ಎಂದು ತನ್ನವರ ಗುಂಪು ಕಟ್ಟಿಕೊಂಡು ಹಲ್ಲೆ ನಡೆಸಿದ್ದಾರೆ, ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಬಸವನಗೌಡ, ದುರುಗನಗೌಡ, ಆಂಜನೇಯಗೌಡ ಹಲ್ಲೆಗೊಳಗಾಗಿದ್ದಾರೆ. ಕುರುಬ ಸಮುದಾಯದ ಪರಮಪ್ಪ, ಬಾಲಪ್ಪ, ಬೀರಪ್ಪ, ಮಹಲಿಂಗರಾಯ, ಯಮನೂರಪ್ಪ, ಶಿವಗ್ಯಾನಪ್ಪ ಎಂಬವರ ಮೇಲೆ ಪ್ರಕರಣ ದಾಖಲಾಗಿದೆ.

“ಘಟನೆ ನಡೆದು ಹತ್ತು ದಿನಗಳಾದರೂ ಆರೋಪಿಗಳ ಬಂಧನವಾಗಿಲ್ಲ. ಅವರು ಊರಿನಲ್ಲಿ ಆರಾಮವಾಗಿ ಅಡ್ಡಾಡಿಕೊಂಡು ಇದ್ದಾರೆ” ಎಂದು ಸಂತ್ರಸ್ತರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...