Homeಮುಖಪುಟಜಾಮೀನು ಸಿಕ್ಕಿ ವಾರಗಳಾದರೂ ಬಿಡುಗಡೆಯಾಗದ ಪತ್ರಕರ್ತ ಸಿದ್ದೀಕ್ ಕಪ್ಪನ್!

ಜಾಮೀನು ಸಿಕ್ಕಿ ವಾರಗಳಾದರೂ ಬಿಡುಗಡೆಯಾಗದ ಪತ್ರಕರ್ತ ಸಿದ್ದೀಕ್ ಕಪ್ಪನ್!

- Advertisement -
- Advertisement -

ಜಾರಿ ನಿರ್ದೇಶನಾಲಯ (ಇಡಿ) ಆರಂಭಿಸಿದ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ಪತ್ರಕರ್ತ ಸಿದ್ದಿಕ್ ಕಪ್ಪನ್‌ಗೆ ಜಾಮೀನು ನೀಡಿತ್ತು. ಆದರೆ, ಕೋರ್ಟ್‌ ಅವರಿಗೆ ಜಾಮೀನು ನೀಡಿ ವಾರಗಳು ಕಳೆದರೂ ಅವರು ಇನ್ನೂ ಜೈಲಿನಲ್ಲೇ ಇದ್ದಾರೆ. 2022ರ ಡಿಸೆಂಬರ್‌ 23ರಂದು ಜಾಮೀನು ಆದೇಶವನ್ನು ಅಂಗೀಕರಿಸಲಾಗಿದ್ದರೂ, ಅವರ ಜಾಮೀನು ಶ್ಯೂರಿಟಿಯನ್ನು ಇನ್ನೂ ಪರಿಶೀಲಿಸಲಾಗಿಲ್ಲ.

ಕೇರಳ ಮೂಲದ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರ ವಿರುದ್ಧ ಯುಎಪಿಎ (ಕಾನೂನುಬಾಹಿರ ಚಟುವಟಿಕೆಗಳು (ತಡೆ) ಕಾಯ್ದೆ ಅಡಿಯಲ್ಲಿ ಕೂಡಾ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಅವರಿಗೆ 2022ರ ಸೆಪ್ಟೆಂಬರ್‌ನಲ್ಲಿ ಜಾಮೀನು ನೀಡಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನ್ಯಾಯಾಲಯದ ಮುಂದೆ ಪಿಎಂಎಲ್‌ಎ ಪ್ರಕರಣದಲ್ಲಿ ಜಾಮೀನು ಶ್ಯೂರಿಟಿಗಳನ್ನು ಈಗಾಗಲೇ ಸಲ್ಲಿಸಿದ್ದೇವೆ ಎಂದು ಕಪ್ಪನ್‌ ಅವರನ್ನು ಪ್ರತಿನಿಧಿಸುವ ವಕೀಲರಲ್ಲಿ ಒಬ್ಬರಾದ ವಕೀಲ ಮೊಹಮ್ಮದ್ ಡ್ಯಾನಿಶ್ ಕೆ.ಎಸ್. ಹೇಳಿದ್ದಾರೆ.

“ನಾವು ಶ್ಯೂರಿಟಿಯ ಪರಿಶೀಲನೆಗಾಗಿ ಕಾಯುತ್ತಿದ್ದೇವೆ. ಅವುಗಳನ್ನು ಸ್ಥಳೀಯ ಅಧಿಕಾರಿಗಳು ಪರಿಶೀಲಿಸಬೇಕಾಗಿದ್ದು, ಇದು ಸಾಮಾನ್ಯವಾಗಿ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಜಾಮೀನು ಷರತ್ತುಗಳನ್ನು ನಿಗದಿಪಡಿಸುವ ವೇಳೆ, ಯುಎಪಿಎ ಪ್ರಕರಣದ ಜಾಮೀನು ಶ್ಯೂರಿಟಿಗಳನ್ನು ಪರಿಶೀಲಿಸುವಲ್ಲಿ ಮೂರು ತಿಂಗಳಿಗೂ ಹೆಚ್ಚಿನ ವಿಳಂಬವಾಗಿದೆ ಎಂದು ನಾವು ನ್ಯಾಯಾಲಯಕ್ಕೆ ನೆನಪಿಸಿದ್ದೇವೆ” ಎಂದು ಡ್ಯಾನಿಶ್‌ ಅವರು ಹೇಳಿದ್ದಾರೆ.

ಯುಎಪಿಎ ಪ್ರಕರಣದಲ್ಲಿ ಜಾಮೀನು ಪಡೆದಾಗ ಸಿದ್ದಿಕ್ ಕಪ್ಪನ್ ಅವರಿಗೆ ತಲಾ 1 ಲಕ್ಷ ರೂ.ಗಳ ಎರಡು ಶ್ಯೂರಿಟಿ ಮತ್ತು ಅಷ್ಟೆ ಮೊತ್ತದ ವೈಯಕ್ತಿಕ ಬಾಂಡ್ ನೀಡುವಂತೆ ಕೇಳಲಾಗಿತ್ತು. ಪ್ರಸ್ತುತ ಪ್ರಕರಣವು ಸಹ ಇದೇ ರೀತಿಯಲ್ಲಿ ಇದ್ದು, ಕಪ್ಪನ್ ಅವರು ತಲಾ 1 ಲಕ್ಷ ರೂಪಾಯಿಗಳ ಎರಡು ಸ್ಥಳೀಯ ಶ್ಯೂರಿಟಿಗಳು ಮತ್ತು ವೈಯಕ್ತಿಕ ಬಾಂಡ್ ಅನ್ನು ಒದಗಿಸಬೇಕಾಗಿದೆ.

“ಪಿಎಂಎಲ್‌ಎ ಪ್ರಕರಣದಲ್ಲಿ ನಾವು ನ್ಯಾಯಾಲಯದ ಮುಂದೆ ಜಾಮೀನು ಷರತ್ತುಗಳನ್ನು ನಿಗದಿಪಡಿಸಿದಾಗ, ಇತರ ಪ್ರಕರಣದಲ್ಲಿನ ವಿಳಂಬವನ್ನು ಪರಿಗಣಿಸಿ ಪರಿಶೀಲನೆಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು ಎಂದು ನ್ಯಾಯಾಲಯವು ನಮಗೆ ಭರವಸೆ ನೀಡಿತು. ಆದರೆ ಶ್ಯೂರಿಟಿಗಳ ಪರಿಶೀಲನೆಯನ್ನು ಪೂರ್ಣಗೊಳಿಸಲು ಯಾವುದೇ ನಿರ್ದಿಷ್ಟ ದಿನಾಂಕವನ್ನು ನಿಗದಿಪಡಿಸಲಾಗಿಲ್ಲ”

“ಯಾಕೆಂದರೆ ಹಲವು ಅಧಿಕಾರಿಗಳು ಈ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದಾರೆ ಮತ್ತು ಅದು ನ್ಯಾಯಾಲಯದ ನಿಯಂತ್ರಣದಲ್ಲಿಲ್ಲ. ಪರಿಶೀಲನೆ ಇಂದು (ಜನವರಿ 30ರ ಸೋಮವಾರ) ಅಥವಾ ನಾಳೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ನಂತರ ಜಾಮೀನು ಬಾಂಡ್ ಮತ್ತು ಬಿಡುಗಡೆ ಆದೇಶವನ್ನು ನೀಡಲಾಗುತ್ತದೆ. ಕಪ್ಪನ್ ಈ ವಾರ ಜೈಲಿನಿಂದ ಹೊರಬರಬಹುದು” ಎಂದು ಕಪ್ಪನ್ ಅವರ ವಕೀಲ ಡ್ಯಾನಿಶ್ ಹೇಳಿದ್ದಾರೆ.

ದಲಿತ ಯುವತಿಯ ಮೇಲೆ ಅತ್ಯಾಚಾರ ನಡೆಸಿ, ಹತ್ಯೆ ಮಾಡಿದ್ದ ಪ್ರಕರಣವನ್ನು ಸುದ್ದಿ ಮಾಡಲು ಉತ್ತರ ಪ್ರದೇಶದ ಹತ್ರಾಸ್‌ಗೆ ತೆರಳುತ್ತಿದ್ದಾಗ ಸಿದ್ದಿಕ್ ಕಪ್ಪನ್ ಮತ್ತು ಇತರ ನಾಲ್ವರನ್ನು 2020ರ ಅಕ್ಟೋಬರ್‌ನಲ್ಲಿ ಬಂಧಿಸಲಾಗಿತ್ತು. ಈ ವೇಳೆ ಅವರ ವಿರುದ್ಧ, ‘ಕೋಮು ಗಲಭೆಗಳ ಕುರಿತು ವರದಿ ಮಾಡಿದ್ದಾರೆ’ ಮತ್ತು ಬಲಪಂಥೀಯ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ನೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಆರೋಪಿಸಲಾಗಿತ್ತು.

ಪ್ರಕರಣದ ತನಿಖೆ ನಡೆಸುತ್ತಿರುವ ಉತ್ತರ ಪ್ರದೇಶ ವಿಶೇಷ ಕಾರ್ಯಪಡೆಯು ಅವರ ವಿರುದ್ಧ ಪ್ರಕರಣದಲ್ಲಿ 5,000 ಪುಟಗಳ ಚಾರ್ಜ್‌ಶೀಟ್ ಅನ್ನು ಸಲ್ಲಿಸಿದ್ದು, “ಅವರು ಮುಸ್ಲಿಮರ ಬಗ್ಗೆ ಮಾತ್ರ ವರದಿ ಮಾಡಿದ್ದಾರೆ” ಎಂದು ಹೇಳಿದ್ದರು. ಜೊತೆಗೆ ಸೆಕ್ಷನ್ 124A (ದೇಶದ್ರೋಹ), 153A (ಹಗೆತನವನ್ನು ಉತ್ತೇಜಿಸುವುದು), 295A (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ), UAPA, PMLA, ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಯ ಜೊತೆಗೆ ಭಾರತೀಯ ದಂಡ ಸಂಹಿತೆಯ (IPC) ಅಡಿಯಲ್ಲಿ ಪೊಲೀಸರು ಆರೋಪ ಹೊರಿಸಿದ್ದಾರೆ.

ಅವರ ಬಂಧನ ನಡೆದ ವೇಳೆ ಅವರ ಜೊತೆಗೆ ಪ್ರಯಾಣಿಸಿದ ಕಾರಿನ ಚಾಲಕ ಮೊಹಮ್ಮದ್ ಆಲಂ ಅವರು ಅಲಹಾಬಾದ್ ಹೈಕೋರ್ಟ್‌ನಿಂದ ಆಗಸ್ಟ್‌ನಲ್ಲಿ ಜಾಮೀನು ಪಡೆದಿದ್ದಾರೆ. ಅವರ ವಶದಿಂದ ಯಾವುದೇ ದೋಷಾರೋಪಣೆಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿಲ್ಲವಾದರೂ, ಅವರು ಇನ್ನೂ ಜೈಲಿನಲ್ಲಿದ್ದಾನೆ.

ಇದನ್ನೂ ಓದಿ: ಹಿಂಡನ್‌ಬರ್ಗ್‌ ವರದಿ: ಭಾರತದ ಮೇಲಿನ ದಾಳಿ ಎಂದ ಅದಾನಿ; ರಾಷ್ಟ್ರೀಯತೆ ಹೆಸರಿನಲ್ಲಿ ವಂಚನೆ ಮರೆಯಾಗಿಸಬೇಡಿ ಎಂದ ಸಂಶೋಧನಾ ಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...