Homeದಲಿತ್ ಫೈಲ್ಸ್ದೇವಾಲಯ ಪ್ರವೇಶಿಸಿದ ದಲಿತ ಯುವಕನಿಗೆ ಡಿಎಂಕೆ ಮುಖಂಡನಿಂದ ಬೆದರಿಕೆ; ವಿಡಿಯೊ ವೈರಲ್‌

ದೇವಾಲಯ ಪ್ರವೇಶಿಸಿದ ದಲಿತ ಯುವಕನಿಗೆ ಡಿಎಂಕೆ ಮುಖಂಡನಿಂದ ಬೆದರಿಕೆ; ವಿಡಿಯೊ ವೈರಲ್‌

- Advertisement -
- Advertisement -

ಹಿಂದೂ ಮತ್ತು ಧಾರ್ಮಿಕ ದತ್ತಿ ಇಲಾಖೆ (ಎಚ್‌ಆರ್ ಮತ್ತು ಸಿಇ) ನಿರ್ವಹಿಸುತ್ತಿರುವ ದೇವಸ್ಥಾನಕ್ಕೆ ಪ್ರವೇಶಿಸಿದ್ದಕ್ಕಾಗಿ ದಲಿತ ಯುವಕನನ್ನು ಡಿಎಂಕೆ ಒಕ್ಕೂಟದ ಕಾರ್ಯದರ್ಶಿಯೊಬ್ಬರು ನಿಂದಿಸಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ.

ಪೊಲೀಸರ ಪ್ರಕಾರ, ತಮಿಳುನಾಡಿನ ತಿರುಮಲೈಗಿರಿ (ಸೇಲಂ ಜಿಲ್ಲೆ)ಯಲ್ಲಿರುವ ಅರುಲ್ಮಿಗು ಪೆರಿಯ ಮಾರಿಯಮ್ಮನ್ ದೇವಸ್ಥಾನದಲ್ಲಿ ಗುರುವಾರ ಈ ಘಟನೆ ನಡೆದಿದೆ.

ಯುವಕರನ್ನು ನಿಂದಿಸುತ್ತಾ ವಿಡಿಯೊದಲ್ಲಿ ಸೆರೆಯಾಗಿರುವ ವ್ಯಕ್ತಿಯನ್ನು ಡಿಎಂಕೆ ಸೇಲಂ ಸೌತ್ ಯೂನಿಯನ್‌ನ ಕಾರ್ಯದರ್ಶಿ ಡಿ.ಮಾಣಿಕಂ ಎಂದು ಗುರುತಿಸಲಾಗಿದೆ.

ಯುವಕ ದೇವಸ್ಥಾನ ಪ್ರವೇಶಿಸಿದ ಬಳಿಕ ಆಯೋಜಿಸಲಾಗಿದ್ದ ಪಂಚಾಯತ್ ಸಭೆಯಲ್ಲಿ ಯುವಕ ಹಾಗೂ ಆತನ ತಂದೆಯ ವಿರುದ್ಧ ಮಾಣಿಕಂ ಅತ್ಯಂತ ನಿಂದನೀಯ ಮತ್ತು ಅವಹೇಳನಕಾರಿ ಪದಗಳನ್ನು ಬಳಸಿರುವುದು ಕಂಡುಬಂದಿದೆ. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ಯುವಕನ ಕುಟುಂಬದ ಯಾವುದೇ ಸದಸ್ಯರು ಗ್ರಾಮದಲ್ಲಿ ಉಳಿಯದಂತೆ ನೋಡಿಕೊಳ್ಳುವುದಾಗಿ ಡಿಎಂಕೆ ಪದಾಧಿಕಾರಿ ಬೆದರಿಕೆ ಹಾಕುತ್ತಿರುವುದು ಕಂಡುಬಂದಿದೆ.

ದೇವಾಲಯದಲ್ಲಿ ಮಹಾಮಸ್ತಕಾಭಿಷೇಕದ ಅಂಗವಾಗಿ ಹಲವಾರು ಕಾರ್ಯಕ್ರಮಗಳು ನಡೆಯುತ್ತಿದ್ದು, ಯುವಕನು ದೇವಾಲಯಕ್ಕೆ ಪ್ರವೇಶಿಸಿ ಗುರುವಾರ ದೇವರ ಆಶೀರ್ವಾದ ಪಡೆಯಲು ಗರ್ಭಗುಡಿಯ ಬಳಿ ತಲುಪಿದ್ದನು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆತ ದೇವಾಲಯಕ್ಕೆ ಪ್ರವೇಶಿಸಿದ ಕೂಡಲೇ, ಹಿಂದೂಗಳ ಒಂದು ವಿಭಾಗವು ಜಗಳಕ್ಕೆ ಇಳಿಯಿತು. ನಂತರ ಘಟನೆಯ ಬಗ್ಗೆ ಸ್ಥಳೀಯ ಪಂಚಾಯತ್ ನಾಯಕನಾದ ಮಾಣಿಕ್ಕಮ್ ಅವರಿಗೆ ಈ ಗುಂಪು ತಿಳಿಸಿತು.

ದಲಿತರು ಆವರಣಕ್ಕೆ ಕಾಲಿಟ್ಟಿದ್ದರಿಂದ ಗ್ರಾಮದ ಹಲವಾರು ಜನರು ದೇವಸ್ಥಾನಕ್ಕೆ ಪ್ರವೇಶಿಸಲು ಇಷ್ಟಪಡುವುದಿಲ್ಲ ಎಂದು ಮಾಣಿಕ್ಕಂ ಹೇಳುವುದನ್ನು ವೀಡಿಯೊದಲ್ಲಿ ಕೇಳಬಹುದು.

ಡಿಎಂಕೆ ಪಕ್ಷದ ಶಿಸ್ತು ಉಲ್ಲಂಘಿಸಿ ಪಕ್ಷಕ್ಕೆ ಅಪಖ್ಯಾತಿ ತಂದಿದ್ದಕ್ಕಾಗಿ ಮಾಣಿಕ್ಕಂ ಅವರನ್ನು ಪಕ್ಷದಿಂದ ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ ಎಂದು ಡಿಎಂಕೆ ಪ್ರಧಾನ ಕಾರ್ಯದರ್ಶಿ ದುರೈ ಮುರುಗನ್ ತಿಳಿಸಿದ್ದಾರೆ.

ಸೋಮವಾರ ಸೇಲಂನಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಕಾರ್ಯಕಾರಿ ಇಮಾಯವರಂಬನ್, ಈ ಘಟನೆಯು ದಲಿತ ಸಮುದಾಯಕ್ಕೆ ತುಂಬಾ ನೋವನ್ನುಂಟು ಮಾಡಿದೆ ಎಂದಿದ್ದಾರೆ.

ಇದೀಗ ಅಮಾನತುಗೊಂಡಿರುವ ಡಿಎಂಕೆ ಕಾರ್ಯಕರ್ತನ ವಿರುದ್ಧ ಪೊಲೀಸರು ಮತ್ತು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ. ಘಟನೆಯ ಬಗ್ಗೆ ಸಂತ್ರಸ್ತರಿಂದ ದೂರು ಸ್ವೀಕರಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...