Homeಕರ್ನಾಟಕಉದ್ದೇಶಪೂರ್ವಕ ಜಾತಿನಿಂದನೆ ಮಾತ್ರ ಅಪರಾಧವಾ?; ಅಟ್ರಾಸಿಟಿ ಕಾನೂನು ನಿಷ್ಕ್ರಿಯೆ ಮಾಡಲಾಗುತ್ತಿದೆಯೇ?

ಉದ್ದೇಶಪೂರ್ವಕ ಜಾತಿನಿಂದನೆ ಮಾತ್ರ ಅಪರಾಧವಾ?; ಅಟ್ರಾಸಿಟಿ ಕಾನೂನು ನಿಷ್ಕ್ರಿಯೆ ಮಾಡಲಾಗುತ್ತಿದೆಯೇ?

- Advertisement -
- Advertisement -

“ಕೇವಲ ಜಾತಿ ಹಿಡಿದು ಬೈದಾಕ್ಷಣ ಅದನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿಯ ಅಪರಾಧ ಎಂದು ಪರಿಗಣಿಸಲು ಆಗದು. ಉದ್ದೇಶಪೂರ್ವಕ ಮತ್ತು ಅಪಮಾನ ಮಾಡುವುದಕ್ಕಾಗಿಯೇ ಜಾತಿ ನಿಂದನೆ ಮಾಡಿದರಷ್ಟೇ ಅಪರಾಧ” ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಈ ‘ಉದ್ದೇಶಪೂರ್ವಕ’ ಎನ್ನುವ ಪದವನ್ನು ಬಳಸುವ ಮೂಲಕ ನ್ಯಾಯಾಧೀಶರು ಇಡೀ ಅಟ್ರಾಸಿಟಿ ಕಾಯ್ದೆಯನ್ನೇ ನಿಷ್ಟ್ರಿಯೆ ಮಾಡಲು ಹೊರಟಿದ್ದಾರಾ ಎನ್ನುವ ಅನುಮಾನಗಳು ಮೂಡುತ್ತಿವೆ. ದೇಶದಲ್ಲಿ ದಿನಬೆಳಗಾದರೆ ಒಂದಿಲ್ಲೊಂದು ದಲಿತರ ಮೇಲಿನ ದೌರ್ಜನ್ಯಗಳ ಬಗ್ಗೆ ಸುದ್ದಿಗಳನ್ನು ಕೇಳುತ್ತಿದ್ದೆವೆ. ಇದೀಗ ಇಂತಹ ಪದ ಪ್ರಯೋಗದಿಂದ ದೌರ್ಜನ್ಯ ತಡೆಯಲು ಹೇಗೆ ಸಾಧ್ಯ ಎನ್ನುವ ಪ್ರಶ್ನೆ ಮೂಡುತ್ತದೆ.

ದೇಶದಲ್ಲಿ ಸಂವಿಧಾನ ಜಾರಿಯಾಗಿ ಏಳು ದಶಕಗಳೇ ಕಳೆದಿವೆ. ಜಾತಿಯ ತಾರತಮ್ಯ ಇನ್ನೂ ಕಡಿಮೆಯಾಗಿಲ್ಲ. ದೇವರ ಕೋಲು ಮುಟ್ಟಿದ ಎನ್ನುವ ಕಾರಣಕ್ಕೆ ಅಪ್ರಾಪ್ತ ಬಾಲಕನೊರ್ವನಿಗೆ ಸಾರ್ವಜನಿಕವಾಗಿ ಥಳಿಸಿ 60 ಸಾವಿರ ದಂಡ ಕಟ್ಟದಿದ್ದರೆ ಗ್ರಾಮದಿಂದ ಬಹಿಷ್ಕಾರ ಹಾಕುತ್ತೇವೆ ಎನ್ನುವ ಘಟನೆ ಇತ್ತೀಚೆಗೆ ರಾಜ್ಯದಲ್ಲೇ ನಡೆಯಿತು. ಪರೀಕ್ಷೆ ಬರೆದು ತನ್ನ ಗ್ರಾಮಕ್ಕೆ ಹೋಗುವುದಕ್ಕೆ ಬಸ್ಸು ಸಿಗಲಿಲ್ಲ ಎನ್ನುವ ಕಾರಣಕ್ಕೆ ಅಲ್ಲಿಯೇ ಇದ್ದ ಒಂದು ದೇವಸ್ಥಾನದ ಒಳಗೆ ಒಬ್ಬ ದಲಿತ ಯುವಕ ಮಲಗಿಕೊಂಡಿದ್ದ ಎನ್ನುವ ಕಾರಣಕ್ಕೆ ಆತನನ್ನು ಬೆತ್ತಲೆ ಮಾಡಿ ಥಳಿಸಿ ಮೆರವಣಿಗೆ ಮಾಡಿದಂತಹ ಘಟನೆ ಚಾಮರಾಜನಗರದ ಬಳಿ ನಡೆಯಿತು. ಈ ರೀತಿಯ ಘಟನೆಗಳು ಬೆಳಕಿಗೆ ಬರುವುದು ಬೆರಳೆಣಿಕೆಯಷ್ಟು ಮಾತ್ರ, ಬೆಳಕಿಗೆ ಬಾರದೆಯೇ ಮುಚ್ಚಿಹೋಗುವುದು ಸಾವಿರಾರು ಸಂಖ್ಯೆಯಲ್ಲಿವೆ.

ಜಾತಿ ಹಿಡಿದು ಬೈಯ್ದರೆ ಸಾಲದು ಉದ್ದೇಶಪೂರ್ವಕ ಮತ್ತು ಅಪಮಾನ ಮಾಡುವುದಕ್ಕಾಗಿಯೇ ಜಾತಿ ನಿಂದನೆ ಮಾಡಿದರಷ್ಟೇ ಅದನ್ನು ಅಟ್ರಾಸಿಟಿ ಪ್ರಕರಣ ಎಂದು ಕರೆಯುವುದಾದರೆ ಜಾತಿಯ ಹೆಸರಿನಲ್ಲಿ ದೂರ ಇಡುವ, ದೇವಸ್ಥಾನಕ್ಕೆ ನಿಷೇಧ ಹೇರುವ ಅಸಹ್ಯ ಪದ್ದತಿಯ ಬಗ್ಗೆ ನ್ಯಾಯಾಧೀಶರ ಅಭಿಪ್ರಾಯ ಏನಾಗಿರುತ್ತದೆ?

ಇದನ್ನೂ ಓದಿ: ಕೋಲಾರದ ದಲಿತ ಯುವಕನ ಮೇಲಿನ ದೌರ್ಜನ್ಯ: ನಿರ್ದಾಕ್ಷಿಣ್ಯ ಕ್ರಮಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶ

ಪ್ರಬಲನೊಬ್ಬ ದುರ್ಬಲನ ಮೇಲೆ ದೌರ್ಜನ್ಯ ನಡೆಸುತ್ತಿದ್ದಾನೆ ಎಂದಾಗ ಆತನ ಮನಸ್ಸಿನಲ್ಲಿ ತಾನು ಸವರ್ಣೀಯ, ಈತ ದಲಿತ ಎನ್ನುವ ಮನಸ್ಥಿತಿಯಲ್ಲಿಯೇ ದೌರ್ಜನ್ಯ ಮಾಡಿರುತ್ತಾನೆ. ಅಲ್ಲಿ ತಾನು ಸವರ್ಣೀಯ ನೀನು ದಲಿತ ಎಂದು ಹೇಳಬೇಕಿಲ್ಲ, ಅದು ಆತ ಅದೇ ಮನಸ್ಥಿಯಲ್ಲಿ ದೌರ್ಜನ್ಯ ನಡೆಸಿರುತ್ತಾನೆ. ಇದು ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿಯ ಅಪರಾಧ ಆಗುವುದಿಲ್ಲವೇ? ಇಲ್ಲಿ ಜಾತಿಯ ಹೆಸರಿಸಿ ದೌರ್ಜನ್ಯ ನಡೆಸಿದರೆ ಮಾತ್ರವೇ ಆ ಕಾಯ್ದೆಯಡಿಯ ಅಪರಾಧ ಆಗುತ್ತದೆಯೇ? ಎನ್ನುವ ಪ್ರಶ್ನೆಗಳು ಮೂಡುತ್ತಿವೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಲೇಖಕ ರುದ್ರು ಪುನೀತ್ .ಆರ್.ಸಿ ಅವರು, “ಉದ್ದೇಶಪೂರ್ವಕವಾಗಿ ಜಾತಿನಿಂದನೆ ಮಾಡಿದ್ದಾರೆ, ಅಸ್ಪೃಶ್ಯತೆ ಆಚರಣೆ ಮಾಡಿದ್ದಾರೆ ಎನ್ನುವುದನ್ನು ಮಾನ್ಯ ನ್ಯಾಯಾಲಯ ಯಾವ ಮಾನದಂಡದಮೇಲೆ ನಿರ್ಧಾರ ಮಾಡುತ್ತೆ ಅನ್ನೋದನ್ನ ತಿಳಿಸಬೇಕಿತ್ತು” ಎಂದರು.

“ಮೀಸಲಾತಿ ಅಂದ್ರೆ ಸಾಕು ಅದು ಕೇವಲ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮಾತ್ರ ದೊರೆಯುತ್ತಿದೆ, ಅವರಿಗೆ ಸರ್ಕಾರಿ ನೌಕರಿ ಆರಾಮಾಗಿ ಸಿಗುತ್ತದೆ ಎನ್ನುವ ಕೆಟ್ಟ ಅಭಿಪ್ರಾಯವೊಂದು ಸವರ್ಣೀಯರ ತಲೆಯಲ್ಲಿ ಕೂತಿದೆ. ಆದರೆ EWS ಮೂಲಕ ಸವರ್ಣೀಯರಿಗೆ ಮೀಸಲಾತಿ ನೀಡಲಾಯಿತು, PTCL ಕಾಯ್ದೆ ತಿದ್ದುಪಡಿ ಮಾಡಲಾಯಿತು, ಲೇಬರ್ ಕೋಡ್ ಕಾಯ್ದೆಗಳನ್ನು ತಿದ್ದುಪಡಿ ಮಾಡಲಾಯಿತು, SC/ST ಗಳಿಗೆ ಪೋಸ್ಟ್ ಮೆಟ್ರಿಕ್ ಸ್ಕಾಲರ್‌ಶಿಪ್ ಕಡಿತಗೊಳಿಸಲಾಯಿತು, SCP/TSP ಹಣವನ್ನು ದುರ್ಬಳಕೆ ಮಾಡಲು ಸೆಕ್ಷನ್ 7D ಜಾರಿಗೊಳಿಸಲಾಯಿತು, 51 ಸಾವಿರ ಸರ್ಕಾರಿ ಶಾಲೆಗಳನ್ನು ಮುಚ್ಚಲಾಯಿತು (ಸರ್ಕಾರಿ ಶಾಲೆಯಲ್ಲಿ 90% SC/ST ವಿದ್ಯಾರ್ಥಿಗಳೆ ಇರುವುದು), 1 ರಿಂದ 8 ನೇ ತರಗತಿಯವರೆಗೆ SC/ST ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ನಿಲ್ಲಿಸಲಾಯಿತು, SC/STಗಳಿಗೆ IIT, IIM, AIIMS,NIT,JNU, DUಗಳಲ್ಲಿ ಶುಲ್ಕವನ್ನು ಹತ್ತುಪಟ್ಟು ಹೆಚ್ಚಿಸಲಾಯಿತು, NEET ಜಾರಿಗೊಳಿಸಿ SC/ST ಮಕ್ಕಳು ಡಾಕ್ಟರ್ ಆಗದಂತೆ ತಡೆಯಲಾಯಿತು, ಸರ್ಕಾರಿ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಿ ಮೀಸಲಾತಿ ಇಲ್ಲದಂತೆ ಮಾಡಲಾಯಿತು, ಈಗ ಅಟ್ರಾಸಿಟಿ ಮೇಲೆ ಕಣ್ಣು ಬಿದ್ದಿದೆ. ಇವೆಲ್ಲವೂ ಪರಿಶಿಷ್ಟರನ್ನ ಸಂವಿಧಾನ ಬರುವ ಮುನ್ನ ಇದ್ದಂತಹ ವ್ಯವಸ್ಥೆಗೆ ಹಿಂದೂಡುವ ಕುತಂತ್ರವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ದುರುದ್ದೇಶದಿಂದ ಅಟ್ರಾಸಿಟಿ ಕಾಯ್ದೆಯನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತದೆ ಎಂದು ಹೇಳುವವರು ಇದ್ದಾರೆ. ಅದು ತುಂಬಾ ಬಾಲಿಷವಾದಂತಹ ಮಾತು, ಹಾಗೊಂದು ವೇಳೆ ದುರುಪಯೋಗವಾದರೂ ಅದರ ಸಂಖ್ಯೆ ಬಹಳ ಕಡಿಮೆ. prevention of atrocities act ಅಡಿಯಲ್ಲಿ 2020ರ ಅಂಕಿಅಂಶಗಳನ್ನು ತೆಗೆದುಕೊಂಡರೆ ಕರ್ನಾಟಕದಲ್ಲಿ SC (1263) ST (269) ಕೇಸುಗಳು ಒಟ್ಟು 1,532 ಕೇಸ್‌ಗಳು ದಾಖಲಾಗಿದ್ದವು. ಅವುಗಳಲ್ಲಿ ಶಿಕ್ಷೆ ಆಗಿರುವುದು ಕೇವಲ 18 (SC 17, ST 1) ಜನರಿಗೆ ಮಾತ್ರ. ಈಗ ‘ಉದ್ದೇಶಪೂರ್ವಕ ಜಾತಿನಿಂದನೆ’ ಎನ್ನುವ ಹೊಸ ನಿಯಮವೊಂದು ಜಾರಿಯಾದರೆ ಒಬ್ಬನೇ ಒಬ್ಬ ಅಪರಾಧಿಗೂ ಶಿಕ್ಷೆ ಆಗುವುದಿಲ್ಲ” ಎಂದು ಅವರು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...