Homeಕರ್ನಾಟಕಚುನಾವಣಾ ರಾಜಕಾರಣದಿಂದ ನಿವೃತ್ತಿ ಘೋಷಿಸಿದ ಎಚ್ ವಿಶ್ವನಾಥ್!

ಚುನಾವಣಾ ರಾಜಕಾರಣದಿಂದ ನಿವೃತ್ತಿ ಘೋಷಿಸಿದ ಎಚ್ ವಿಶ್ವನಾಥ್!

- Advertisement -
- Advertisement -

ಬಿಜೆಪಿ ತೊರೆದು ಮತ್ತೆ ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎನ್ನುವ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲೇ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಅವರು ಚುನಾವಣಾ ರಾಜಕಾರಣದಿಂದ ನಿವೃತ್ತಿಯಾಗುತ್ತೇನೆ ಎಂದು ಹೇಳಿದ್ದಾರೆ.

ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು,”ನಾನು ಆರ್ಥಿಕವಾಗಿ ಸ್ಥಿತಿವಂತನಲ್ಲ, ಹೀಗಾಗಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಈಗ ಚುನಾವಣೆಗೆ ಸ್ಪರ್ಧಿಸಬೇಕೆಂದರೆ ಹಣ ಎಷ್ಟಿದೆ ಎಂದು ಕೇಳುತ್ತಾರೆ. ರಾಜಕೀಯ ಪಕ್ಷಗಳಿಗಿಂತ ಅದರ ನಾಯಕರು ಪ್ರಬಲರಾಗಿದ್ದಾರೆ” ಎಂದು ವಿಶ್ವನಾಥ್ ಹೇಳಿದರು.

”ಈ ಬೆಳವಣಿಗಳನ್ನು ಗಮನಿಸಿದರೆ, ಇನ್ನು ಮುಂದೆ ರಿಯಲ್ ಎಸ್ಟೇಟ್ ಉದ್ಯಮಿಗಳ ಚುನಾವಣೆ ನಡೆಯುತ್ತದೆ. ಅವರು ಟಿಕೆಟ್‌ಗಾಗಿ 10 ಕೋಟಿ ರೂ. ನೀಡಲು ಸಹ ಸಿದ್ಧರಿದ್ದಾರೆ. ಇಂದು ದುಡ್ಡು ಮತ್ತು ಜಾತಿಯ ರಾಜಕಾರಣವೇ ವಿಜೃಂಭಿಸುತ್ತಿದೆ. ಇವರ ನಡುವೆ ಸಿದ್ಧಾಂತ, ಮೌಲ್ಯ ರಾಜಕಾರಣ ನಡೆಯುವುದಿಲ್ಲ, ಈ ಕಾರಣದಿಂದಾಗಿ ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ಸೇವಾ ರಾಜಕಾರಣದಲ್ಲಿ ಸಕ್ರಿಯವಾಗಿರುತ್ತೇನೆ” ಎಂದ ತಿಳಿಸಿದರು.

ಜೆಡಿಎಸ್ ತೊರೆದು, ಬಿಜೆಪಿ ಸೇರಿದ್ದ ಅವರು ಇದೀಗ ಬಿಜೆಪಿ ವಿರುದ್ಧವೇ ವಾಗ್ದಾಳಿ ನಡೆಸಿದ್ದು, ”ಏನೋ ಒಂದು ದೊಡ್ಡ ಬದಲಾವಣೆಯಾಗಬಹುದು ಎನ್ನುವ ಕಾರಣಕ್ಕೆ ಬಿಜೆಪಿ ಸೇರಿದ್ದೆನು. ಆದರೆ ಅಲ್ಲಿಗೆ ಹೋದಾಗಲೇ ಅವರ ಬಣ್ಣ ಬಯಲಾಗಿದ್ದು. ಇವರಂತಹ ಎಡವಟ್ಟು ಗಿರಾಕಿಗಳು ಯಾರೂ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

”ಬಿಜೆಪಿಯವರು ಎಲ್ಲದರಲ್ಲೂ ರಾಜಕೀಯ ಮಾಡುತ್ತಾರೆ. ಶಾಲೆಗಳಲ್ಲಿನ ಪರೀಕ್ಷಾ ವ್ಯವಸ್ಥೆ, ಅಲ್ಲಿನ ಸೌಕರ್ಯ ಅಭಿವೃದ್ಧ ವಿಚಾರ ಬಗ್ಗೆ ಗಮನ ಹರಿಸುವ ಬದಲು, ಕೇಸರಿ ಬಣ್ಣ ಬಳಿದು ರಾಜಕಾರಣ ಮಾಡಲು ಹೊರಟಿದ್ದಾರೆ. ಎಲ್ಲ ಹುದ್ದೆಗಳ ಭರ್ತಿಗೆ ದುಡ್ಡು ಕೇಳುತ್ತಿದ್ದಾರೆ. ಇದೇ ಇವರ ಆಡಳಿತ. ಇದನ್ನು ಸರ್ಕಾರ ಎನ್ನಲಾಗುತ್ತದೆಯೇ?” ಎಂದು ಕಿಡಿಕಾರಿದರು.

ಇದನ್ನೂ ಓದಿ: ಬಿಜೆಪಿ ಸರ್ಕಾರದ ವಿರುದ್ಧ ಬೆಂಗಳೂರಿನ 300 ಕಡೆಗಳಲ್ಲಿ ಪ್ರತಿಭಟನೆ ನಡೆಸಲಿರುವ ಕಾಂಗ್ರೆಸ್

”ಚುನಾವಣೆ ಪ್ರಜಾಪ್ರಭುತ್ವದ ಆತ್ಮವಿದ್ದಂತೆ, ಆದರೆ ಈಗ ಎಲ್ಲ ಬದಲಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುವಂತೆ ಎಲ್ಲ ಪಕ್ಷದ ಮುಖಂಡರು ಮ್ಯಾಜಿಕ್ ನಂಬರ್ ಹೇಳಿಕೊಂಡು ಸರ್ಕಾರ ರಚನೆ ಮಾಡುತ್ತಿದ್ದಾರೆ. ಇದನ್ನು ಸಾಧ್ಯವಾಗಿಸುವವರು ಮತದಾರರು. ಆದರೆ ದುರಂತದ ವಿಚಾರ ಎಂದರೆ, ಬಿಜೆಪಿಗೆ ಯಾರು ಮತ ನೀಡುವುದಿಲ್ಲವೋ, ಅವರ ಹೆಸರನ್ನು ಮತದಾರರ ಪಟ್ಟಿಯಿಂದಲೇ ಕೈಬಿಡುವ ಕೆಲಸ ನಡೆಯುತ್ತಿದೆ. ಇಂತಹ ಅಯೋಗ್ಯ ರಾಜಕೀಯವನ್ನು ನನ್ನ ಜೀವನದಲ್ಲಿ ಕಂಡಿಲ್ಲ. ಮತದಾರರ ಹಕ್ಕನ್ನೇ ಕಸಿಯುವ ಕೆಲಸ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ. ಇದು ಜನತಂತ್ರ ವ್ಯವಸ್ಥೆಗೆ ಮಾಡಿದ ದೊಡ್ಡ ಅಪಮಾನ” ಎಂದು ಬಿಜೆಪಿ ವಿರುದ್ಧ ವಿಶ್ವನಾಥ್ ಆಕ್ರೋಶ ವ್ಯಕ್ಯಪಡಿಸಿದರು.

ಈ ವೇಳೆ ಹಾಲಿ, ಮಾಜಿ ಮುಖ್ಯಮಂತ್ರಿಗಳ ವಾಕ್ಸಮರದ ಬಗ್ಗೆ ಮಾತನಾಡಿದ ಅವರು, ”ಜವಾಬ್ದಾರಿಯುತ ಜಾಗದಲ್ಲಿರುವವರು ತಾವಾಡುವ ಮಾತಿನ ಮೇಲೆ ಸದಾ ಎಚ್ಚರಿಕೆ ವಹಿಸಬೇಕು. ಆದರೆ ನಮ್ಮ ಹಾಲಿ ಮತ್ತು ಮಾಜಿ ಮುಖ್ಯಮಂತ್ರಿಗಳಿಬ್ಬರೂ ಇದರ ಪರಿಜ್ಞಾನವಿಲ್ಲದೆ ನಡೆದುಕೊಳ್ಳುತ್ತಿದ್ದಾರೆ” ಎಂದು ವಿಶ್ವನಾಥ್ ಬೇಸರ ವ್ಯಕ್ತಪಡಿಸಿದರು.

”ಧಮ್ ಇದ್ದರೆ, ತಾಕತ್ತಿದ್ದರೆ ಎನ್ನುವ ಮಾತುಗಳನ್ನು ಬಳಿಸಿ ರಾಜಕಾರಣಿಗಳು ನೈತಿಕ ಮೌಲ್ಯಗಳನ್ನು ಕಳೆದುಕೊಳ್ಳುವಂತೆ ಇವರುಗಳು ಮಾಡಿದ್ದಾರೆ. ಹೀಗಿದ್ದಾಗ ಮತದಾರರ ಬಳಿ ಯಾವ ಮುಖ ಇಟ್ಟುಕೊಂಡು ಹೋಗುತ್ತಾರೆ? ಇವರ ಮಾತನಾಡುವ ಈ ಮಾತುಗಳು, ಯುವಕರಿಗೆ, ಮತದಾರರಿಗೆ, ರಾಜಕಾರಣ, ಆಡಳಿತಕ್ಕೆ ಆದರ್ಶವೇ? ಇವರುಗಳ ನಡೆ ನೋಡಿದರೆ ಗಲ್ಲಿಯ ಪುಡಿ ರೌಡಿಗಳಂತೆ ಮಾತನಾಡುತ್ತಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕ” ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಗುರಿಯಾಗಿಸಿಕೊಂಡು ವಿಶ್ವನಾಥ್ ಕಿಡಿಕಾರಿದರು.

ಆಡಳಿತ ಪಕ್ಷದ ವಿರುದ್ಧ ವಿಪಕ್ಷದವರು ಭ್ರಷ್ಟಾಚಾರದ ವಿಚಾರವಾಗಿ ಗುರುತರ ಆರೋಪ ಮಾಡಿದಾಗ, ಆ ಬಗ್ಗೆ ಸರ್ಕಾರ ಗೌರವಯುತವಾಗಿ ನಡೆದುಕೊಳ್ಳಬೇಕು. ಹಿಂದಿನಿಂದಲೂ ಈ ವ್ಯವಸ್ಥೆ ಹಾಗೆಯೇ ನಡೆದುಕೊಂಡು ಬಂದಿದೆ. ಆದರೆ, ಬಿಜೆಪಿ 40 ಪರ್ಸೆಂಟ್ ಆರೋಪ ಕುರಿತು ತೆಗೆದುಕೊಂಡ ನಿಲುವನ್ನು ನಾನು ಖಂಡಿಸುತ್ತೇನೆ. ನೀವು ಮಾಡಿದ್ದೀರಿ, ನಾವು ಮಾಡುತ್ತಿದ್ದೇವೆ ಎಂದು ಆಡಳಿತ ಪಕ್ಷದವರು ಪರೋಕ್ಷವಾಗಿ ಹೇಳುವಂತಿದೆ ಎಂದು ಸರ್ಕಾರವನ್ನು ತಿವಿದಿದ್ದಾರೆ.

ವೈಯುಕ್ತಿಕ ಚಾರಿತ್ರ್ಯವಧೆ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಡುವಿನ ವಿಚಾರಕ್ಕೆ ಪ್ರತಿಕ್ರಿಯಿಸಿದ ವಿಶ್ವನಾಥ್, ”ಯಾರನ್ನು ಯಾರು ಮುಗಿಸಲು ಸಾಧ್ಯವಿಲ್ಲ, ಡಿ ಕೆ ಶಿವಕುಮಾರ್ ಅವರನ್ನು ಮುಗಿಸುವವರೆಗೂ ನಾನು ರಾಜಕೀಯದಿಂದ ನಿವೃತ್ತಿಯಾಗಲಾರೆ ಎಂದು ಅವರು ಹೇಳಿರುವುದು ಸರಿಯಲ್ಲ. ಇದು ಅವರ ಕುಟುಂಬಕ್ಕೆ ಶೋಭೆ ತರುವ ವಿಚಾರವಲ್ಲ. ಸಿ ಡಿ ಬಿಡುಗಡೆ ಮೂಲಕ ಯಾರನ್ನು ಯಾರೂ ಮುಗಿಸಲು ಸಾಧ್ಯವಿಲ್ಲ. ರಾಜಕಾರಣಿಗಳ ಭವಿಷ್ಯ ನಿರ್ಧರಿಸುವವರು ಮತದಾರರು. ಅವರೇ ಎಳಿಸಬೇಕು, ಅವರೇ ಬೀಳಿಸಬೇಕೇ ಹೊರತು ರಾಜಕಾರಣಿಗಳೇನೂ ಮಾಡಲಾರರು” ಎಂದು ವಿಶ್ವನಾಥ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...