Homeಮುಖಪುಟಬುಡಕಟ್ಟು ಮಹಿಳೆಗೆ ಸಂಬಂಧಿಕರು ಥಳಿಸಿದ ಹಳೆಯ ವೀಡಿಯೊ, ಕೋಮು ಸಂಘರ್ಷದ ಸಂದೇಶದೊಂದಿಗೆ ವೈರಲ್

ಬುಡಕಟ್ಟು ಮಹಿಳೆಗೆ ಸಂಬಂಧಿಕರು ಥಳಿಸಿದ ಹಳೆಯ ವೀಡಿಯೊ, ಕೋಮು ಸಂಘರ್ಷದ ಸಂದೇಶದೊಂದಿಗೆ ವೈರಲ್

- Advertisement -
- Advertisement -

ಎರಡು ವರ್ಷಗಳ ಹಿಂದೆ ಯುವಕರ ಗುಂಪೊಂದು ಯುವತಿಯೊಬ್ಬಳನ್ನು ಥಳಿಸಿದ ಘಟನೆ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದಿತ್ತು. ಆ ಘಟನೆಯ ವೀಡಿಯೊವನ್ನು ಇದೀಗ ‘ಹಿಂದುತ್ವವಾದಿ ಉಗ್ರರು ದಲಿತ ಹುಡುಗಿಯನ್ನು ಥಳಿಸುತ್ತಿರುವುದನ್ನು ತೋರಿಸುತ್ತದೆ’ ಎಂಬ ಸುಳ್ಳು ಸಂದೇಶದೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಈ ಬಗ್ಗೆ ಫ್ಯಾಕ್ಟ್ ಚೆಕ್ ಮಾಡಿರುವ ಬೂಮ್ ವೆಬ್ಸೈಟ್, ”ಇದು 2021 ರ ಜೂನ್‌ನಲ್ಲಿ ಇಬ್ಬರು ಬುಡಕಟ್ಟು ಮಹಿಳೆಯರನ್ನು ತಮ್ಮ ಸಂಬಂಧಿಕರೊಂದಿಗೆ ಫೋನ್‌ನಲ್ಲಿ ಮಾತನಾಡಿದ್ದಕ್ಕಾಗಿ ಅವರ ಸಂಬಂಧಿಕರೇ ಥಳಿಸಿದ ಘಟನೆ ವೈರಲ್ ವೀಡಿಯೊದಲ್ಲಿದೆ” ಎಂದು ಹೇಳಿದೆ.

ವೈರಲ್ ಆಗಿರುವ ವೀಡಿಯೋದಲ್ಲಿ, ಯುವಕರ ಗುಂಪೊಂದು ತಮ್ಮ ಕೈಯಲ್ಲಿ ಕೋಲುಗಳನ್ನು ಹಿಡಿದುಕೊಂಡು ಮಹಿಳೆಯನ್ನು ಹಿಂಬಾಲಿಸಿಕೊಂಡು ಹೋಗಿ ಹೊಡೆಯುತ್ತಿರುವುದನ್ನು ನೋಡಬಹುದು ಮತ್ತು ಆಕೆ ಸುತ್ತಲೂ ನಿಂತಿದ್ದ ಪ್ರೇಕ್ಷಕರಿಂದ ಸಹಾಯಕ್ಕಾಗಿ ಆ ಮಹಿಳೆ ಅಳುತ್ತಿದ್ದಾಳೆ.

ಇದನ್ನೂ ಓದಿ: ಬೇಜವಾಬ್ದಾರಿ ಕೋಮುವಾದಿ ಶಕ್ತಿಗಳು ಧಮ್ಕಿ ಹಾಕಿದ ಕೂಡಲೇ ಸರ್ಕಾರ ಬೆದರುವುದೆಂದರೆ ಏನರ್ಥ?: ಜಸ್ಟಿಸ್ ನಾಗಮೋಹನ್ ದಾಸ್

ಈ ವಿಡಿಯೋ ಹಂಚಿಕೊಂಡಿರುವವರು, “ಹಿಂದೂ ಉಗ್ರಗಾಮಿಗಳ ಗುಂಪು ಮತ್ತು ಹಿಂದುತ್ವ ಉಗ್ರಗಾಮಿ ಸಂಘಟನೆಯ ಸದಸ್ಯರು ದಲಿತ ಬಾಲಕಿಯನ್ನು ಕ್ರೂರವಾಗಿ ಮತ್ತು ನಿರ್ದಯವಾಗಿ ಥಳಿಸಿದ್ದಾರೆ. ಉಗ್ರಗಾಮಿ ಹಿಂದೂ ವಿಭಾಗವು ಮಾನವ ಹಕ್ಕುಗಳ ಸಂಪೂರ್ಣ ಉಲ್ಲಂಘನೆಯ ಎಲ್ಲಾ ವಿಧಾನಗಳನ್ನು, ವಿಶೇಷವಾಗಿ ಮುಸ್ಲಿಮರು ಮತ್ತು ದಲಿತರ ವಿರುದ್ಧ ಈಗಲೂ ಮಾಡುತ್ತಿರುವ ವಿಶ್ವದ ಏಕೈಕ ದೇಶ ಭಾರತವಾಗಿದೆ” ಎಂದು ವೀಡಿಯೊದ ಶೀರ್ಷಿಕೆ ಬರೆಯಲಾಗಿದೆ. ಈ ವೀಡಿಯೊವನ್ನು ಟ್ವಿಟರ್‌ನಲ್ಲಿ  ಸುಮಾರು 79.3 ಸಾವಿರ ವೀಕ್ಷಣೆ ಪಡೆದಿದೆ.

ಅದೇ ವೀಡಿಯೊವನ್ನು @jatt0935 ಟ್ವಿಟ್ಟರ್ ಖಾತೆಯಿಂದ ಹಂಚಿಕೊಂಡಿದ್ದು, ”ನದಿಯಲ್ಲಿ ಸ್ನಾನ ಮಾಡಿದ್ದಕ್ಕಾಗಿ ದಲಿತ ಮಹಿಳೆಯನ್ನು ಥಳಿಸಲಾಗಿದೆ” ಎಂಬ ಮತ್ತೊಂದು ತಪ್ಪು ಹೇಳಿಕೆಯೊಂದಿಗೆ ಅದೇ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ. “ಎಚ್ಚರಿಕೆ…. ನದಿಯಲ್ಲಿ ಸ್ನಾನ ಮಾಡಿ ನೀರನ್ನು ಕಲುಷಿತಗೊಳಿಸಿದ್ದಕ್ಕಾಗಿ ಈ ದಲಿತ ಬಾಲಕಿಯನ್ನು ನಿರ್ದಯವಾಗಿ ಥಳಿಸಲಾಗುತ್ತಿದೆ. 75 ವರ್ಷಗಳ ಸ್ವತಂತ್ರ ಭಾರತ, ಅಲ್ಲಿ ಮಹಿಳೆಯರಿಗಿಂತ ನೀರಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ” ಎಂದು ಟ್ವೀಟ್ ಮಾಡಿದೆ.

ಸತ್ಯ-ಪರಿಶೀಲನೆ
ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ಇಬ್ಬರು ಸಹೋದರಿಯರನ್ನು ಅವರ ಸಂಬಂಧಿಕರು ಫೋನ್‌ನಲ್ಲಿ ಮಾತನಾಡಿದ್ದಕ್ಕಾಗಿ ಥಳಿಸಿದ ಜೂನ್ 2021ರ ಘಟನೆಯ ವವೀಡಿಯೊ ಇದೀಗ ಬೇರೆ ಆಯಾಮದಲ್ಲಿ ವೈರಲ್ ಆಗಿದೆ ಎಂದು BOOM ಕಂಡುಹಿಡಿದಿದೆ.

ಬುಡಕಟ್ಟು ಮಹಿಳೆಗೆ ಅವರ ಕುಟುಂಬ ಸದಸ್ಯರು ಸಾರ್ವಜನಿಕವಾಗಿ ಚಿತ್ರಹಿಂಸೆ ನೀಡಿದ್ದಾರೆ. ಏಕೆಂದರೆ ಅವರು ತಮ್ಮ ತಾಯಿಯ ಸೋದರಸಂಬಂಧಿಗಳೊಂದಿಗೆ ಕುಟುಂಬವನ್ನು ಕೆರಳಿಸುವಂತೆ ಸ್ಪಷ್ಟವಾಗಿ ಮಾತನಾಡುತ್ತಿದ್ದರು ಎಂದು ಜುಲೈ 4, 2021 ರಂದು ಎನ್‌ಡಿಟಿವಿ ವರದಿ ಮಾಡಿದೆ. ಈ ಘಟನೆಯು ಪಿಪಲ್ವಾ ಗ್ರಾಮದಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ. ಮಧ್ಯಪ್ರದೇಶದ ಧಾರ್ ಜಿಲ್ಲೆಯ ತಾಂಡಾದಲ್ಲಿ ನಡೆದಿರುವ ಈ ಘಟನೆಯನ್ನು ಅಲ್ಲಿ ಅನೇಕರು ಕಣ್ಣಾರೆ ನೋಡಿದ್ದಾರೆ ಮತ್ತೆ ಕೆಲವರು ವೀಡಿಯೊಗಳನ್ನು ಸಹ ರೆಕಾರ್ಡ್ ಮಾಡಿದ್ದಾರೆ.

ಈ ಘಟನೆ ಬಗ್ಗೆ  ಜುಲೈ 5, 2021 ರಂದು ಟೈಮ್ಸ್ ಆಫ್ ಇಂಡಿಯಾ ಕೂಡ ವರದಿ ಮಾಡಿದ್ದು, ”ಆರಂಭದಲ್ಲಿ ಕುಟುಂಬಸ್ಥರ ವಿರುದ್ಧ ದೂರು ನೀಡಲು ಬಾಲಕಿಯರು ಹಿಂದೇಟು ಹಾಕಿದ್ದರು ಆದರೆ ನಾವು ಪ್ರಕರಣ ದಾಖಲಿಸಿಕೊಂಡಿದ್ದೇವೆ. ನಂತರ ಪೊಲೀಸ್ ಠಾಣೆಯಲ್ಲಿ ಹೇಳಿಕೆ ನೀಡಿದ್ದು, ಅದರ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣದಲ್ಲಿ ಏಳು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ” ಎಂದು ತಾಂಡಾ ಪೊಲೀಸ್ ಠಾಣೆಯ ಇನ್‌ಚಾರ್ಜ್ ವಿಜಯ್ ವಾಸ್ಕಲೆ ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...