*ನೀರು* (ಪುಟ್ಕತೆ)

- Advertisement -
- Advertisement -

‘ಬೇಕೇ ಬೇಕು ನೀರೂ ಬೇಕು’ ಹೀಗೆ ಸುತ್ತ ಎಂಬತ್ತಾರು ಹಳ್ಳಿ ಜನ ಘೋಷಣೆ ಕೂಗುತ್ತ ಸತ್ಯಾಗ್ರಹಕ್ಕೆ ಕುಳಿತಿದ್ದರು. ಕುಡಿಯೊ ನೀರಿಗಾಗಿ ಎಂಟು ವರ್ಷದಿಂದ ಅರ್ಜಿ ಕೊಟ್ಟು ಸಾಕಾಗಿ ಹೋಗಿತ್ತು. ಇನ್ನೆರಡು ತಿಂಗಳಲ್ಲಿ ಚುನಾವಣೆ. ನೂರನೇ ದಿನದ ಸತ್ಯಾಗ್ರಹಕ್ಕೆ ಮಿನಿಸ್ಟರ್, ಅಧಿಕಾರಿಗಳು ಬಂದರು. ಜನರ ಗದ್ದಲ ಹೆಚ್ಚಾಯಿತು. ಯಾರೋ ‘ಭಾರತ್ ಮಾತಾಕಿ’ ಅಂದರು. ಜನ ‘ಜೈ’ ಅಂದು ನಿಶ್ಯಬ್ಧರಾದರು.

ಮಿನಿಸ್ಟರ್ ಮೈಕ್ ಹಿಡಿದು ‘ಮಹಾಜನಗಳೇ, ನಿಮ್ಮ ನೋವು ನನಗರ್ಥವಾಗತ್ತೆ. ಈ ಮಣ್ಣಿಗೆ ನೀರು ತರದೆ ನಾನು ಸಾಯಲಾರೆ’ ಎಂದು ಸ್ವಲ್ಪ ಹೊತ್ತು ಸುಮ್ಮನಾದರು. ಮಿನಿಸ್ಟರ್ ಹಿಂಬಾಲಕರು, ಅಧಿಕಾರಿಗಳನ್ನು ಬಿಟ್ಟು ಯಾರೂ ಚಪ್ಪಾಳೆ ತಟ್ಟಲಿಲ್ಲ. ‘ಇನ್ನೆರಡೇ ತಿಂಗಳು. ನನಗೆ ಮತ್ತೆ ಅಧಿಕಾರ ಕೊಡಿ. ನಿಮ್ಮ ಋಣ ತೀರಿಸದೇ ಸಾಯೋದಿಲ್ಲ’ ಎಂದರು. ಅಷ್ಟರಲ್ಲಿ ಮದ್ಯೆ ಬಾಯಿ ಹಾಕಿದ ಜನತೆ.

‘ಸಾಯೆಬ್ರೆ ಎಂಟು ವರ್ಷದಿಂದ ಒಂದು ಹನಿ ಮಳೆ ಬಿದ್ದಿಲ್ಲ’

‘ಸಾಯೆಬ್ರೆ ಕುಡಿಯೋ ನೀರಿಗೆ ಏಳು ಮೈಲಿ ನಡಿಬೇಕಾಗ್ಯದ’

‘ಸಾಯೆಬ್ರೆ ಮಕ್ಕಳು ಸಾಲಿ ಬಿಟ್ಟು ನೀರು ಹೊರಾಕತ್ತೇರ’

‘ಸಾಯೆಬ್ರೆ ಎಂಟು ವರ್ಷ ಆತ್ರಿ. ನಿಮ್ಮನ್ನ ಎರಡು ಸಲ ಗೆಲ್ಸಿವಿ ನೆಪ್ಪಿರ್ಲಿ’

ಪೊಲೀಸ್ ಎಲ್ಲರನ್ನು ಗದರಿಸಿ ಕೂರಿಸಿದರು.
ಮಿನಿಸ್ಟರ್ : ಮಹಾಜನಗಳೆ 100 ಕಿಲೋಮೀಟರಿಂದ ನದಿ ನೀರು ತರಬೇಕಂದ್ರೆ ಅಷ್ಟು ಸುಲಭವಲ್ಲ. ಆದ್ರೂ ನಾನು ಪ್ರಾಮಾಣಿಕ ಪ್ರಯತ್ನ ಮಾಡಿ ಫೈಲ್ ಮೂವ್ ಮಾಡ್ಸಿದಿನಿ. ಸರ್ಕಾರ ಹಣ ಬಿಡುಗಡೆ ಮಾಡಿದ ತಕ್ಷಣ ಕಾಮಗಾರಿ ಚಾಲೂ ಮಾಡ್ತಿನಿ’

ಜನತೆ : ಅಲ್ಲಿಮಟ ನಮ್ಕತಿ? ಸಾಯೆಬ್ರೆ ಅಂತರ್ಜಲ ಇಲ್ಲದಂಗಾಗ್ಯದ. ಬೋರ್ ಬಾವಿ ಬರಿದಾಗ್ಯವ. ಕೆರೆ, ಕುಂಟೆ ಬಾಯ್ಬಿಟ್ಕಂಡ್ ನೀರು ನೀರು ಅಂತಾವೆ. ದನಕರುಗಳಿಗಾದ್ರೂ ಕುಡಿಯೋ ನೀರು ವ್ಯವಸ್ಥೆ ಮಾಡ್ರಿ

ಮಿನಿಸ್ಟರ್: ಅದಕ್ಕೆ ಇನ್ನೂರು ಕೋಟಿ ಬೇಕು. ಸರ್ಕಾರ ಸಾಲದಲ್ಲಿದೆ. ಯಾವ್ದುಕ್ಕೂ ಎರಡು ತಿಂಗಳು ಸಮಯ ಕೊಡಿ ದಯಮಾಡಿ

ಜನತೆ ಮಾತಾಡಬೇಕೆಂದುಕೊಂಡರೂ ಪೊಲೀಸ್ ಬಿಡಲಿಲ್ಲ. ಅಧಿಕಾರಿಗಳು ಮಿನಿಸ್ಟರ್ ಕಿವಿಲಿ ಏನೋ ಹೇಳಿದಾಗ
ಮಿನಿಸ್ಟರ್: ಮಹಾಜನಗಳೇ ನಿಮಗೊಂದು ಸಂತಸದ ಸುದ್ಧಿ.

ಮಿನಿಸ್ಟರ್ ಮಾತು ಕೇಳಿ ಅಲ್ಲಿದ್ದ ರೈತರಿಗೆ ಬೆಳೆ ಕಂಡಂಗಾಯ್ತು. ಕೂಲಿ ಜನಗಳಿಗೆ ಕೆಲಸ ಕಂಡಂಗಾಯ್ತು. ಮಹಿಳೆಯರಿಗೆ ಮೋಡ ಕಟ್ಟಿದಂಗಾಯ್ತು. ಮಕ್ಕಳಿಗೆ ಬರಿಮೈಲಿ ಈಜು ಹೊಡೆದಂಗಾಯ್ತು. ಜನರ ಕಿವಿಗಳೆಲ್ಲ ನೆಟ್ಟಗಾದವು.

ಮಿನಿಸ್ಟರ್: ಈ ಸಾಧನೆ ಅಮೆರಿಕಾ, ಚೀನಾ, ರಷ್ಯಾ ಅಷ್ಟೇ ಮಾಡಿದ್ದು. ಈಗ ಆ ಸಾಧನೇನ ನಮ್ಮ ದೇಶ ಮಾಡುತ್ತಿದೆ. ಇವತ್ತು ರಾತ್ರಿ ಚಂದ್ರನ ಮೇಲೆ ಉಪಗ್ರಹ ಕಳಿಸುತ್ತಿದ್ದಾರೆ. ಸಾವಿರ ಕೋಟಿ ಪ್ರಾಜೆಕ್ಟ್ ಈ ಚಂದ್ರಯಾನ. ಎಲ್ಲರೂ ನೋಡಿ ಹಾರೈಸಿ. ದೇಶದ ಕೀರ್ತಿ ಪ್ರಚಾರ ಮಾಡಿ.

ಮಿನಿಸ್ಟರ್ ಮಾತು ಕೇಳಿ ಜನತೆಯಲ್ಲೊಬ್ಬ ‘ಸಾಯೆಬ್ರೆ ಸಾವ್ರ ಕೋಟಿಯಾ’ ಎಂದೊಡನೆ ಅದ್ಯಾರೋ ‘ಭಾರತ್ ಮಾತಾಕಿ’ ಅಂದರು. ಜನ ‘ಜೈ’ ಅಂದರು. ಮಿನಿಸ್ಟರ್ ಕಾರು ಹತ್ತುವವರೆಗೆ ಘೋಷಣೆ ಮೊಳಗುತ್ತಲೇ ಇತ್ತು. ಅಲ್ಲೆ ಸಂದಿಯಲ್ಲಿ ನುಗ್ಗಿ ಸೂಟು ತೊಟ್ಟ ಅಧಿಕಾರಿಯೊಬ್ಬರ ಕೈ ಹಿಡಿದುಕೊಂಡ ಶಾಲೆ ಯೂನಿಪಾರ್ಮ್ ತೊಟ್ಟ ಹುಡುಗಿ ‘ಸಾರ್ ಚಂದ್ರಯಾನ ಯಾಕೆ’ ಎಂದು ಕೇಳಿದಳು. ಅಧಿಕಾರಿ ಹೆಮ್ಮೆಯಿಂದ ಹೇಳಿದ ‘ ಚಂದ್ರನಲ್ಲಿ ನೀರು ಹುಡುಕೋಕೆ ಪುಟ್ಟ’.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...