Homeಕರ್ನಾಟಕಕಸ ಸಂಗ್ರಹಣೆ, ವಿಲೇವಾರಿ ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕು: ಬಿಬಿಎಂಪಿಗೆ ಕಾರ್ಮಿಕರ ಸಂಘಟನೆಯಿಂದ ಒತ್ತಾಯ

ಕಸ ಸಂಗ್ರಹಣೆ, ವಿಲೇವಾರಿ ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕು: ಬಿಬಿಎಂಪಿಗೆ ಕಾರ್ಮಿಕರ ಸಂಘಟನೆಯಿಂದ ಒತ್ತಾಯ

- Advertisement -
- Advertisement -

ಬಿಬಿಎಂಪಿ ಘನತ್ಯಾಜ್ಯ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ವಾಹನ ಚಾಲಕರು (ಅಟೋ, ಟ್ರಾಕ್ಟರ್, ಕಾಂಪ್ಟ್ರಾಕ್ಟರ್ ಮತ್ತು ಲಾರಿ) ಸಹಾಯಕರು, ಲೋಡರ್‍‌ಗಳು ಮತ್ತು ಕ್ಲೀನರ್‍‌ಗಳನ್ನು ನೇರವೇತನ ಪಾವತಿಯಡಿಯಲ್ಲಿ ತಂದು ಖಾಯಂಗೊಳಿಸಬೇಕೆಂದು ಒತ್ತಾಯಿಸಿ ಬಿಬಿಎಂಪಿ ಪೌರಕಾರ್ಮಿಕರ ಸಂಘಟನೆಯು ಬುಧವಾರ ಪತ್ರಿಕಾ ಘೋಷ್ಠಿ ನಡೆಸಿತು.

ಬಿಬಿಎಂಪಿ ಪೌರಕಾರ್ಮಿಕರ ಸಂಘಟನೆಯ ಪತ್ರಿಕಾ ಪ್ರಕಟನೆಯಲ್ಲಿ, ಬಿಬಿಎಂಪಿ ಅಧಿಕಾರಿಗಳಿಂದ ಮತ್ತು ನೆಪಮಾತ್ರ ಗುತ್ತಿಗೆದಾರರಿಂದ ಕಾರ್ಮಿಕರ ಮೇಲೆ ಆಗುತ್ತಿರುವ ಕಿರುಕುಳ, ಅನ್ಯಾಯ ನಿಲ್ಲಬೇಕು ಮತ್ತು ಈ ಕಾರ್ಮಿಕರನ್ನು ನೇರವೇತನ ಪಾವತಿಯಡಿಯಲ್ಲಿ ತಂದು ಖಾಯಂಗೊಳಿಸಬೇಕೆಂದು ಬಿಬಿಎಂಪಿಯನ್ನು ಒತ್ತಾಯಿಸುತ್ತೇವೆ ಎಂದು ಹೇಳಿದ್ದಾರೆ.

ಘನತ್ಯಾಜ್ಯ ನಿರ್ವಹಣೆಯ ಕೆಲಸವನ್ನು ಬಿಬಿಎಂಪಿಯು ಕಾನೂನು ಪ್ರಕಾರ ಕಡ್ಡಾಯವಾಗಿ ಮಾಡಲೇ ಬೇಕಾಗಿರುತ್ತದೆ ಮತ್ತು ಇದು ನಿರಂತರ ಸ್ವರೂಪದ ಕೆಲಸವಾಗಿರುತ್ತದೆ. ಬಿಬಿಎಂಪಿಯ ಘನತ್ಯಾಜ್ಯ ನಿರ್ವಹಣೆಯ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಕಸಗುಡಿಸುವ ಪೌರಕಾರ್ಮಿರಿಗೆ ನೇರವೇತನವನ್ನು ಪಾವತಿ ಮಾಡುತ್ತಿರುತ್ತಿದೆ. ಆದರೆ ಮನೆ ಮನೆಗಳಲ್ಲಿ ಆಟೋ ಮತ್ತು ಇತರೆ ವಾಹನಗಳ ಮೂಲಕ ಕಸ ಸಂಗ್ರಹಿಸುವ ಮತ್ತು ಕಸ ವಿಲೇವಾರಿ ಮಾಡುವ ಪೌರಕಾರ್ಮಿಕರನ್ನು ನಾಮಮಾತ್ರ ಗುತ್ತಿಗೆ ವ್ಯವಸ್ಥೆಯಡಿಯಲ್ಲಿ ನೇಮಕ ಮಾಡಿಕೊಂಡಿರುತ್ತದೆ. ನಿರಂತರ ಸ್ವರೂಪದ ಕೆಲಸವನ್ನು ಗುತ್ತಿಗೆ ನೀಡುವುದು ‘ಗುತ್ತಿಗೆ ಕಾರ್ಮಿಕ (ನಿಯಂತ್ರಣ ಮತ್ತು ನಿಷೇಧ) ಕಾಯ್ದೆಯ ಅನ್ವಯ ಕಾನೂನು ಬಾಹಿರ’ ಕ್ರಮವಾಗಿದೆ.

ಇದನ್ನೂ ಓದಿ: ಬೆಂಗಳೂರು: ಕಾರ್ಮಿಕ ಸಂಘಟನೆ ಸಿಐಟಿಯು 17ನೇ ಅಖಿಲ ಭಾರತ ಸಮ್ಮೇಳನ ಉದ್ಘಾಟನೆ

2022ರ ಜುಲೈ 1 ರಂದು ಬಿಬಿಎಎಂಪಿ ಪೌರಕಾರ್ಮಿಕರ ಸಂಘಟನೆಯು ಎಲ್ಲಾ ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕೆಂದು ರಾಜ್ಯ ಮಟ್ಟದ ಅನಿರ್ಧಿಷ್ಠಾವಧಿ ಧರಣಿ ನಡೆಸಿತ್ತು. ಈ ಸಂದರ್ಭದಲಿ ಮುಖ್ಯಮಂತ್ರಿಗಳು ಎಲ್ಲಾ ಪೌರಕಾರ್ಮಿಕರನ್ನು ಖಾಯಂಗೊಳಿಸುವುದಾಗಿ ಮತ್ತು ಗುತ್ತಿಗೆ ಅಡಿಯಲ್ಲಿ ಕೆಲಸ ನಿರ್ವಹಿಸುವ ಪೌರಕಾರ್ಮಿಕರಾದ ಕಸ ಸಾಗಿಸುವ ಸಂಗ್ರಹಿಸುವ ಮತ್ತು ಸಾಗಿಸುವ ವಾಹನಗಳ ಚಾಲಕರು, ಲೋಡರ್‍‌ಗಳು, ಸಹಾಯಕರು ಮತ್ತು ಕ್ಲೀನರ್‍‌ಗಳನ್ನು ಮೊದಲಿಗೆ ಬಿಬಿಎಂಪಿಯಿಂದ ನೇರವೇತನ ಪಾವತಿಯಡಿಯಲ್ಲಿ ತಂದು, ನಂತರ ಖಾಯಂಗೊಳಿಸುವುದಾಗಿ ಲಿಖಿತ ರೂಪದಲ್ಲಿ ಭರವಸೆ ನೀಡಿದ್ದರು. ಈ ಸಂಬಂಧ ಎಲ್ಲಾ ಪೌರಕಾರ್ಮಿಕರನ್ನು ಖಾಯಂಗೊಳಿಸುವುದಕ್ಕಾಗಿ ಸರ್ಕಾರದ ಅಧಿಕಾರಿಗಳು ಸೇರಿದಂತೆ ಕಾರ್ಮಿಕ ಸಂಘಟನೆಗಳ ಮುಖಂಡರುಗಳನ್ನೊಳಗೊಂಡ ಸಮಿತಿಯನ್ನು ಸಹ ಸರ್ಕಾರ ರಚಿಸಿತ್ತು.

ಈ ಸಮಿತಿಯು 2022 ಅಕ್ಟೋಬರ್ 28ರಂದು ನಡೆಸಿದ ಸಭೆಯಲ್ಲಿ ”ಘನತ್ಯಾಜ್ಯ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ನೆಪಮಾತ್ರ ಗುತ್ತಿಗೆ ಪೌರಕಾರ್ಮಿಕರಾದ ವಾಹನ ಚಾಲಕರು, ಲೋಡರ್‍‌ಗಳನ್ನು ಮತ್ತು ಸಹಾಯಕರನ್ನು ಮೊದಲಿಗೆ ನೇರವೇತನ ಪಾವತಿಯಡಿ ತಂದು ತಕ್ಷಣವೇ ಖಾಯಂಗೊಳಿಸುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ತೀರ್ಮಾನಿಸಿರುತ್ತದೆ” ಎಂದು ಚರ್ಚಿಸಲಾಗಿತ್ತು.

ಆದರೆ, ಬಿಬಿಎಂಪಿಯ ಅಡಿಯಲ್ಲಿ ಬರುವ ‘ಬೆಂಗಳೂರು ಸಾಲಿಡ್ ವೇಸ್ಟ್ ಮ್ಯಾನೇಜ್‍ಮೆಂಟ್ ಲೀ.’ರವರು 2023 ಜನವರಿ 21ರಂದು ಘನ ತ್ಯಾಜ್ಯ ನಿರ್ವಹಣೆ ಮಾಡಲು ಟೆಂಡರ್ ಕರೆಯಿತು. ಈ ರೀತಿ ವಾಹನ ಚಾಲಕರು, ಲೋಡರ್‍‌ಗಳು ಮತ್ತು ಸಹಾಯಕರನ್ನು ಗುತ್ತಿಗೆದಾರರ ಮೂಲಕ ದುಡಿಸಿಕೊಳ್ಳುವುದು ಆಧುನಿಕ ಜೀತ ಮತ್ತು ಗುಲಾಮಿ ಪದ್ಧತಿಯ ಪ್ರತೀಕವಾಗಿದೆ. ಬಿಬಿಎಂಪಿಯ ಈ ಕ್ರಮವನ್ನು ಎಐಸಿಸಿಟಿಯು ತೀವ್ರವಾಗಿ ಖಂಡಿಸುತ್ತದೆ ಮತ್ತು ತಕ್ಷಣದಲ್ಲೇ ಟೆಂಡರ್ ಅಧಿಸೂಚನೆಯನ್ನು ವಾಪಸ್ಸು ಪಡೆದು ಸರ್ಕಾರದ ಲಿಖಿತ ಭರವಸೆಯಂತೆ ಈ ಕಾರ್ಮಿಕರನ್ನು ಕೂಡಲೇ ನೇರವೇತನ ಪಾವತಿಯಡಿ ತಂದು, ಖಾಯಂಗೊಳಿಸಬೇಕೆಂದು ಪತಿಕಾಗೋಷ್ಠಿಯಲ್ಲಿ ಬಿಬಿಎಂಪಿ ಪೌರಕಾರ್ಮಿಕರ ಸಂಘಟನೆಯು ಒತ್ತಾಯಿಸಿದೆ.

ಪೌರಕಾರ್ಮಿಕ ಸಂಘಟನೆಯು ಪ್ರಮುಖ ಹಕ್ಕೋತ್ತಾಯಗಳನ್ನು ಬಿಬಿಎಂಪಿಗೆ ಸಲ್ಲಿಸಿದೆ.

1. ತ್ಯಾಜ್ಯ ನಿರ್ವಹಣೆ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ವಾಹನ ಚಾಲಕರು, ಸಹಾಯಕರು, ಲೋಡರ್‍‌ಗಳು ಮತ್ತು ಕ್ಲೀನರ್‍‌ಗಳನ್ನು ನೇರವೇತನ ಪಾವತಿಯಡಿಯಲ್ಲಿ ತಂದು ಖಾಯಂಗೊಳಿಸಬೇಕು.
2. ಬಿಬಿಎಂಪಿ ಅಡಿಯಲ್ಲಿರುವ ‘ಬೆಂಗಳೂರು ಸಾಲಿಡ್ ವೇಸ್ಟ್ ಮ್ಯಾನೇಜ್‍ಮೆಂಟ್ ಲೀ.’ ರವರು ಕರೆದಿರುವ ಟೆಂಡರ್ ಪ್ರಕ್ರಿಯೆಯನ್ನು ತಕ್ಷಣದಲ್ಲೇ ರದ್ಧುಗೊಳಿಸಬೇಕು.
3. ಖಾಯಂಗೊಳ್ಳುವವರೆಗೆ ಕನಿಷ್ಠ ವೇತನ ಪಾವತಿ ಮಾಡಬೇಕು.
4. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಮತ್ತು ಹೆಚ್ವುವರಿ ಅವಧಿಗೆ ಅಧಿಕವೇತನ ನೀಡಬೇಕು.
5. ಸಕಾಲಕ್ಕೆ ವೇತನ ಪಾವತಿ ಮಾಡಬೇಕು ಮತ್ತು ವೇತನ ಚೀಟಿ ನೀಡಬೇಕು.
6. 3 ರಿಂದ 8 ತಿಂಗಳ ವರಗೆ ಬಾಕಿ ಇರುವ ವೇತನವನ್ನು ತಕ್ಷಣದಲ್ಲೇ ಪಾವತಿಸಬೇಕು.
7. ವಿಶ್ರಾಂತಿ ಕೊಠಡಿ, ಶೌಚಾಲಯ, ಕುಡಿಯುವ ನೀರು ಮತ್ತು ಸಮಪರ್ಕವಾದ ಪೌಷ್ಠಿಕ ಆಹಾರವನ್ನು ಒದಗಿಸಬೇಕು.
8. ಇ.ಎಸ್.ಐ ಮತ್ತು ಪಿ.ಎಫ್ ಸೌಲಭ್ಯವನ್ನು ಕಲ್ಪಿಸಬೇಕು ಮತ್ತು ಸುರಕ್ಷತಾ ಪರಿಕರಗಳನ್ನು ನೀಡಬೇಕು.
9. ಕಸ ಸಂಗ್ರಹಿಸಲು ಮತ್ತು ಸಾಗಿಸಲು ಬಳಸುವ ಆಟೋಗಳ ದುರಸ್ಥಿ ವೆಚ್ಚ ಬಿಬಿಎಂಪಿಯೇ ಭರಿಸಬೇಕು.
10. ಸರ್ಕಾರಿ ಘೋಷಿತ ಎಲ್ಲಾ ರಾಷ್ಟ್ರೀಯ ಮತ್ತು ಹಬ್ಬ ದಿನಗಳು ಒಳಗೊಂಡಂತೆ ರಜೆ ನೀಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...