Homeಮುಖಪುಟಯುಪಿ: ಸರ್ಕಾರಿ ಕಾಲೇಜೊಂದರಲ್ಲಿ ಬುರ್ಕಾ ನಿಷೇಧ; ವಿವಾದದ ವಾಸ್ತವವೇನು?

ಯುಪಿ: ಸರ್ಕಾರಿ ಕಾಲೇಜೊಂದರಲ್ಲಿ ಬುರ್ಕಾ ನಿಷೇಧ; ವಿವಾದದ ವಾಸ್ತವವೇನು?

ಪ್ರತಿಭಟನಾಕಾರರು ಕಾಲೇಜು ವಿದ್ಯಾರ್ಥಿಗಳಲ್ಲ. ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದಕ್ಕೆ ವಿರೋಧವಿಲ್ಲ: ಪ್ರಾಂಶುಪಾಲ

- Advertisement -
- Advertisement -

ಬುರ್ಕಾ ಧರಿಸಿದ ವಿದ್ಯಾರ್ಥಿನಿಯರು ಕಾಲೇಜಿಗೆ ಪ್ರವೇಶಿಸದಂತೆ ಉತ್ತರ ಪ್ರದೇಶದ ಮೊರಾದಾಬಾದ್‌ನ ಸರ್ಕಾರಿ ಕಾಲೇಜಿನಲ್ಲಿ ಜಾರಿಗೊಳಿಸಿದ ಸಮವಸ್ತ್ರ ನೀತಿಯು ವಿವಾದಕ್ಕೆ ಗುರಿಯಾಗಿದೆ.

ಸಮಾಜವಾದಿ ಪಕ್ಷದ ಯುವ ಘಟಕವು ಪ್ರತಿಭಟನೆ ನಡೆಸಿದ್ದು, ಬುರ್ಖಾ ಧರಿಸಿದ ವಿದ್ಯಾರ್ಥಿಗಳನ್ನು ಕಾಲೇಜಿನೊಳಗೆ ಬಿಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಮುಸ್ಲಿಂ ವಿದ್ಯಾರ್ಥಿನಿಯರ ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ಕಸಿದುಕೊಳ್ಳಲಾಗಿದೆ ಎಂದು ಟೀಕೆಗಳು ವ್ಯಕ್ತವಾಗಿದ್ದರೆ, ಮತ್ತೊಂದೆಡೆ ಹಿಂದೂ ಕಾಲೇಜಿನ ಅಧಿಕಾರಿಗಳು ಪ್ರತಿಕ್ರಿಯಿಸುತ್ತಾ “ಹೊರಗಿನವರ ಪ್ರವೇಶವನ್ನು ತಡೆಯಲು ಸಮವಸ್ತ್ರ ಕಡ್ಡಾಯಗೊಳಿಸಲಾಗಿದೆ” ಎಂದಿದ್ದಾರೆ.

ಹುಡುಗರಿಗೆ ಬಿಳಿ ಶರ್ಟ್ ಮತ್ತು ಬೂದು ಬಣ್ಣದ ಪ್ಯಾಂಟ್, ಹುಡುಗಿಯರಿಗೆ ಬೂದು ಬಣ್ಣದ ಕುರ್ತಾ ಮತ್ತು ಬಿಳಿ ಪೈಜಾಮವನ್ನು ಸಮವಸ್ತ್ರವಾಗಿ ಅಳವಡಿಸಲಾಗಿದೆ. ಈ ನಿಯಮವು ಯಾವಾಗಲೂ ಜಾರಿಯಲ್ಲಿರುತ್ತದೆ. ಕೆಲವು ಹೊರಗಿನವರು ಅಧ್ಯಾಪಕರೊಬ್ಬರ ಮೇಲೆ ದಾಳಿ ಮಾಡಿದ ನಂತರ, ಕಾಲೇಜು ಅಧಿಕಾರಿಗಳು ಸಮವಸ್ತ್ರ ನಿಯಮವನ್ನು ಜಾರಿಗೊಳಿಸಿದರು. ಕಳೆದ ಅಕ್ಟೋಬರ್ 15ರಂದು ನಿಯಮ ಜಾರಿಯಾದರೂ ಈ ವರ್ಷದ ಜನವರಿ 1 ರಿಂದ ಮಾತ್ರ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ ಎಂದು ಕಾಲೇಜು ಹೇಳಿಕೊಂಡಿದೆ.

ಸಮಾಜವಾದಿ ಪಕ್ಷದ ಯುವ ಘಟಕದ ನೇತೃತ್ವದಲ್ಲಿ ಜನವರಿ ಮೊದಲ ವಾರದಲ್ಲಿ ಕಾಲೇಜು ಗೇಟ್‌ಗಳ ಹೊರಗೆ ಧರಣಿ ಆರಂಭಿಸಿದ ವಿದ್ಯಾರ್ಥಿಗಳು, “ಪ್ರವೇಶದ್ವಾರದಲ್ಲಿ ತಮ್ಮ ಬುರ್ಖಾವನ್ನು ತೆಗೆಯಲು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಸೂಚಿಸಲಾಗುತ್ತಿದೆ.  ಹೀಗಾದಾಗ ತರಗತಿಗಳಿಗೆ ಹಾಜರಾಗಲು ಕಷ್ಟವಾಗುತ್ತದೆ” ಎಂದು ದೂರಿದ್ದಾರೆ. ಆದರೆ ಕಾಲೇಜಿನ ಅಧಿಕಾರಿಗಳು ಈ ಆರೋಪಗಳನ್ನು ನಿರಾಕರಿಸಿದ್ದಾರೆ.

“ಪ್ರವೇಶದ್ವಾರದ ಬಳಿ ಇರುವ ಕೊಠಡಿಯನ್ನು ಯಾವಾಗಲೂ ಈ ಉದ್ದೇಶಕ್ಕಾಗಿ ನಿಗದಿಪಡಿಸಲಾಗಿದೆ” ಎಂದು ಕಾಲೇಜು ಹೇಳಿಕೊಂಡಿದೆ. ಜನವರಿಯಲ್ಲಿ ವಿವಾದ ಉಂಟಾದ ಬಳಿಕ ಈ ಕೊಠಡಿಗೆ ‘ಬದಲಾವಣೆ ಕೊಠಡಿ’ ಎಂದು ಹೆಸರಿಡಲಾಗಿದೆ.

“ನಾನು ಈ ಪ್ರತಿಭಟನೆಯನ್ನು ಬೆಂಬಲಿಸುವುದಿಲ್ಲ. ಬುರ್ಖಾ ಹಾಕಿಕೊಂಡು ಬರುವ ಹುಡುಗಿಯರಿಗೆ ಕಾಲೇಜು ಆಡಳಿತ ಮಂಡಳಿ ಜಾಗ ನೀಡಿದೆ. ಬುರ್ಖಾ ಹಾಕದೆ ಬರಬೇಕೆಂದು ಅವರೇನು ಹೇಳುತ್ತಿಲ್ಲ. ಬುರ್ಖಾ ತೆಗೆದು ಕಾಲೇಜಿನೊಳಗೆ ಬರುಲು ಹೇಳುತ್ತಿದ್ದಾರೆ. ಅವರು ಹಿಜಾಬ್ ಮೇಲೆ ನಿರ್ಬಂಧಗಳನ್ನು ಹಾಕಿಲ್ಲ” ಎಂದು ಮೊದಲ ವರ್ಷದ ಎಂ.ಕಾಂ ವಿದ್ಯಾರ್ಥಿ ಇಕ್ರಾ ಅವರು ‘ನ್ಯೂಸ್‌ಲಾಂಡ್ರಿ’ ಜಾಲತಾಣಕ್ಕೆ ತಿಳಿಸಿದ್ದಾರೆ.

“ಕಾಲೇಜಿಗೆ ಪ್ರವೇಶ ಪಡೆಯುವ ಸಮಯದಲ್ಲೇ ಈ ಸಮವಸ್ತ್ರಕ್ಕೆ ಒಪ್ಪಿಗೆ ನೀಡುವ ನಿಬಂಧನೆಗೆ ಸಹಿ ಹಾಕಲಾಗಿರುತ್ತದೆ. ವಿದ್ಯಾರ್ಥಿನಿಯವರು ಮತ್ತು ಪೋಷಕರಿಗೆ ಸಮಸ್ಯೆಯಾಗಿಲ್ಲ. ಇದು ಹೊರನವರ ಪ್ರಶ್ನೆಯಷ್ಟೇ” ಎಂದು ಮಾಹಿತಿ ನೀಡಿದ್ದಾರೆ.

ಮತ್ತೊಬ್ಬ ವಿದ್ಯಾರ್ಥಿನಿ ಅಟೂಫಾ ಪ್ರತಿಕ್ರಿಯಿಸಿದ್ದು, “ಪ್ರತಿಭಟನಾಕಾರರು ಹೊರಗಿನವರು. ತಮ್ಮ ಗುರುತನ್ನು ಮುಚ್ಚಿಕೊಳ್ಳಲು ಬುರ್ಖಾವನ್ನು ಧರಿಸಿದ್ದಾರೆ” ಎಂದು ಆರೋಪಿಸಿದ್ದಾರೆ. ಆದರೆ ಬುರ್ಖಾ ಧರಿಸಿದ್ದ ಹಲವಾರು ಮುಸ್ಲಿಂ ವಿದ್ಯಾರ್ಥಿನಿಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಅವರು ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ ಎಂದು ‘ನ್ಯೂಸ್‌ಲಾಂಡ್ರಿ’ ತಿಳಿಸಿದೆ.

“ಈಗ ಯಾವುದೇ ವಿವಾದವಿಲ್ಲ” ಎಂದು ಕಾಲೇಜಿನ ಮುಖ್ಯ ಅಧಿಕಾರಿ ಎಪಿ ಸಿಂಗ್ ಹೇಳಿದ್ದಾರೆ. “ವಿದ್ಯಾರ್ಥಿಗಳು ತಮ್ಮ ಬುರ್ಖಾವನ್ನು ಪ್ರವೇಶದ್ವಾರದಲ್ಲಿಯೇ ತೆಗೆಯುವಂತೆ ಹೇಳುವುದರ ಬಗ್ಗೆ ತಪ್ಪು ತಿಳಿವಳಿಕೆ ರವಾನೆಯಾಗಿದೆ. ಈ ಸುದ್ದಿ ಎಲ್ಲೆಡೆ ಪ್ರಸಾರವಾಗಿದೆ. ಇದಕ್ಕಾಗಿ ಬುರ್ಕಾ ತೆಗೆಯುವುದಕ್ಕಾಗಿಯೇ ಕೊಠಡಿಯನ್ನು ನೀಡಿದ್ದೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಸುಮಾರು ಆರು ತಿಂಗಳ ಹಿಂದೆ ಪ್ರೊಫೆಸರ್ ಎ.ಯು.ಖಾನ್ ಅವರ ಮೇಲೆ ಕಾಲೇಜಿನ ಪ್ರವೇಶದ್ವಾರದಲ್ಲಿ ಹೊರಗಿನ ವ್ಯಕ್ತಿಗಳು  ಹಲ್ಲೆ ನಡೆಸಿದ ನಂತರ ಸಮವಸ್ತ್ರವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕಾಲೇಜು ನಿರ್ಧರಿಸಿತು” ಎಂದು ವಿವರಿಸಿದ್ದಾರೆ.

“ನಮಗೆ ಬುರ್ಖಾದಿಂದ ಯಾವುದೇ ಸಮಸ್ಯೆ ಇಲ್ಲ. ವಿದ್ಯಾರ್ಥಿನಿಯರು ಕಾಲೇಜಿಗೆ ಅದನ್ನು ಧರಿಸಿ, ಬಟ್ಟೆ ಬದಲಾಯಿಸುವ ಕೊಠಡಿಯಲ್ಲಿ ತೆಗೆದಿಟ್ಟು ತಮ್ಮ ಡ್ರೆಸ್‌ನಲ್ಲಿ ಪ್ರವೇಶಿಸಿದರೆ ಯಾರಿಗೆ ತೊಂದರೆ? ಜನವರಿ 1 ರಿಂದ ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ಹೊರಗಿನಿಂದ ಬಂದ ಕೆಲವು ಯುವಕರು ಇದರ ವಿರುದ್ಧ ಪ್ರತಿಭಟಿಸಿದ್ದಾರೆ. ಫೋಟೋಗಳನ್ನು ಕ್ಲಿಕ್ ಮಾಡಿ, ಅದನ್ನು ರಾಜಕೀಯಗೊಳಿಸಿದ್ದಾರೆ. ಸಮವಸ್ತ್ರವು ಹುಡುಗಿಯರು ಮತ್ತು ಹುಡುಗರಿಬ್ಬರಿಗೂ ಅನ್ವಯವಾಗುತ್ತದೆ” ಎಂದಿದ್ದಾರೆ.

ಕಾಲೇಜು ಪ್ರಾಂಶುಪಾಲ ಮತ್ತು ಪ್ರಾಧ್ಯಾಪಕ ಸತ್ಯವ್ರತ್ ಸಿಂಗ್ ರಾವತ್ ಅವರು ಪ್ರತಿಕ್ರಿಯಿಸಿ, “ಸಮವಸ್ತ್ರವು ನೀತಿ ಸಂಹಿತೆಯ ಭಾಗವಾಗಿದೆ. ಪ್ರವೇಶದ ಸಮಯದಲ್ಲಿ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಈ ಕುರಿತು ಸಹಿ ಹಾಕಿರುತ್ತಾರೆ. ಕಾಲೇಜಿನಲ್ಲಿ 12,000 ವಿದ್ಯಾರ್ಥಿಗಳಿದ್ದಾರೆ. ಹೆಚ್ಚುತ್ತಿರುವ ಗೂಂಡಾಗಿರಿ ಮತ್ತು ಹೊರಗಿನವರ ಉಪಟಳವನ್ನು ತಡೆಯಲು ಕ್ರಮ ಜರುಗಿಸಲಾಗಿದೆ” ಎಂದು ಹೇಳಿದ್ದಾರೆ.

“ಪ್ರತಿಭಟನಕಾರರು ಕಾಲೇಜು ವಿದ್ಯಾರ್ಥಿಗಳಲ್ಲ. ನಮಗೆ ಯಾರೊಂದಿಗೂ ಸಮಸ್ಯೆ ಇಲ್ಲ, ಅವರು ಸ್ಕಾರ್ಫ್ ಅಥವಾ ಹಿಜಾಬ್‌ ಧರಿಸಬಹುದು. ಆದರೆ ಸಮವಸ್ತ್ರ ಕಡ್ಡಾಯವಾಗಿದೆ. ಬದಲಾಯಿಸುವ ಕೋಣೆಯಲ್ಲಿ ಬುರ್ಖಾವನ್ನು ತೆಗೆಯಬೇಕು. ಅಂತಿಮವಾಗಿ, ಸಮವಸ್ತ್ರವನ್ನು ಧರಿಸಲು ಇಷ್ಟಪಡದವರೊಂದಿಗೆ ತಕರಾರುಗಳಿವೆ” ಎಂದು ಸ್ಪಷ್ಟಪಡಿಸಿದ್ದಾರೆ.

ಕ್ರಮವು ಕಾನೂನುಬದ್ಧವಾಗಿದೆಯೇ?

ಉತ್ತರ ಪ್ರದೇಶದ ಉನ್ನತ ಶಿಕ್ಷಣ ಸಚಿವ ಯೋಗೇಂದ್ರ ಉಪಾಧ್ಯಾಯ, “ಡ್ರೆಸ್ ಕೋಡ್ ಅನ್ನು ಜಾರಿಗೊಳಿಸುವ ಅಧಿಕಾರವು ಪ್ರಾಂಶುಪಾಲರಿಗೆ ಇರುತ್ತದೆ” ಎಂದು ಪ್ರತಿಕ್ರಿಯಿಸಿದ್ದಾರೆ.

ಎಂ.ಕಾಮ್ ವಿದ್ಯಾರ್ಥಿನಿ ಮೆಹಕ್ ಅನ್ಸಾರಿ ಮಾತನಾಡಿ, “ಬಟ್ಟೆ ಬದಲಾಯಿಸುವ ಕೊಠಡಿ ಇದ್ದಾಗ ಬುರ್ಖಾ ತೆಗೆದರೆ ಏನು ತೊಂದರೆ? ರಸ್ತೆಯಲ್ಲಿ ಬುರ್ಖಾ ತೆಗೆಯುವಂತಾಗಿದೆ ಎಂಬುದು ಸುಳ್ಳು” ಎಂದು ಹೇಳಿದ್ದಾರೆ.

ಮತ್ತೋರ್ವ ವಿದ್ಯಾರ್ಥಿ ಮಧು ಮನ್ಶಾ ಮಾತನಾಡಿ, “ಈ ಹಿಂದೆ ಗುರುತಿನ ಚೀಟಿ ತಪಾಸಣೆ ಇಲ್ಲದ ಕಾರಣ ಯಾರಾದರೂ ಕಾಲೇಜಿಗೆ ಪ್ರವೇಶಿಸುತ್ತಿದ್ದರು. ಆದರೆ ಈಗ ಗುರುತಿನ ಚೀಟಿಯನ್ನೂ ಪರಿಶೀಲಿಸಲಾಗಿದೆ. ಈಗ ಗುರುತಿನ ಚೀಟಿ ಮತ್ತು ಸಮವಸ್ತ್ರ ಹೊಂದಿರುವವರು ಮಾತ್ರ ಪ್ರವೇಶಿಸಬಹುದು” ಎಂದಿದ್ದಾರೆ.

ಕಾಲೇಜಿನಲ್ಲಿ ಡಿಫೆನ್ಸ್‌ ಸ್ಟಡೀಸ್ ಕಲಿಸುವ ಪ್ರೊಫೆಸರ್ ಆನಂದ್ ಕುಮಾರ್, “ಮಾಧ್ಯಮದ ಒಂದು ವಿಭಾಗವು ದಾರಿ ತಪ್ಪಿಸುವ ವರದಿ ಮಾಡುತ್ತಿದೆ. ಹಿಜಾಬ್ ಅನ್ನು ನಿಷೇಧಿಸಲಾಗಿದೆ ಎಂದು ಬರೆಯಲಾಗಿದೆ. ಆದರೆ ಅವರಿಗೆ ಹಿಜಾಬ್ ಮತ್ತು ಬುರ್ಖಾ ನಡುವಿನ ವ್ಯತ್ಯಾಸ ತಿಳಿದಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕೊತ್ವಾಲಿ ಎಸ್‌ಎಚ್‌ಒ ವಿಪ್ಲವ್ ಶರ್ಮಾ ಮಾತನಾಡಿ, “ಕಾಲೇಜಿನಲ್ಲಿ ಡ್ರೆಸ್ ಕೋಡ್ ಬಹಳ ಹಿಂದಿನಿಂದಲೂ ಇದೆ. ಅಂತಹದ್ದೇನೂ ಇಲ್ಲದಿರುವಾಗ ಬುರ್ಖಾ ಸಮಸ್ಯೆ ಎಂದು ಮಾಧ್ಯಮಗಳು ತಪ್ಪುದಾರಿಗೆಳೆಯುವ ಸುದ್ದಿಗಳನ್ನು ನೀಡುತ್ತಿವೆ” ಎಂದು ಟೀಕಿಸಿದ್ದಾರೆ.

ವರದಿ ಕೃಪೆ: ನ್ಯೂಸ್‌ ಲಾಂಡ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...