Homeಮುಖಪುಟಯುಪಿ: ಸರ್ಕಾರಿ ಕಾಲೇಜೊಂದರಲ್ಲಿ ಬುರ್ಕಾ ನಿಷೇಧ; ವಿವಾದದ ವಾಸ್ತವವೇನು?

ಯುಪಿ: ಸರ್ಕಾರಿ ಕಾಲೇಜೊಂದರಲ್ಲಿ ಬುರ್ಕಾ ನಿಷೇಧ; ವಿವಾದದ ವಾಸ್ತವವೇನು?

ಪ್ರತಿಭಟನಾಕಾರರು ಕಾಲೇಜು ವಿದ್ಯಾರ್ಥಿಗಳಲ್ಲ. ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದಕ್ಕೆ ವಿರೋಧವಿಲ್ಲ: ಪ್ರಾಂಶುಪಾಲ

- Advertisement -
- Advertisement -

ಬುರ್ಕಾ ಧರಿಸಿದ ವಿದ್ಯಾರ್ಥಿನಿಯರು ಕಾಲೇಜಿಗೆ ಪ್ರವೇಶಿಸದಂತೆ ಉತ್ತರ ಪ್ರದೇಶದ ಮೊರಾದಾಬಾದ್‌ನ ಸರ್ಕಾರಿ ಕಾಲೇಜಿನಲ್ಲಿ ಜಾರಿಗೊಳಿಸಿದ ಸಮವಸ್ತ್ರ ನೀತಿಯು ವಿವಾದಕ್ಕೆ ಗುರಿಯಾಗಿದೆ.

ಸಮಾಜವಾದಿ ಪಕ್ಷದ ಯುವ ಘಟಕವು ಪ್ರತಿಭಟನೆ ನಡೆಸಿದ್ದು, ಬುರ್ಖಾ ಧರಿಸಿದ ವಿದ್ಯಾರ್ಥಿಗಳನ್ನು ಕಾಲೇಜಿನೊಳಗೆ ಬಿಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಮುಸ್ಲಿಂ ವಿದ್ಯಾರ್ಥಿನಿಯರ ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ಕಸಿದುಕೊಳ್ಳಲಾಗಿದೆ ಎಂದು ಟೀಕೆಗಳು ವ್ಯಕ್ತವಾಗಿದ್ದರೆ, ಮತ್ತೊಂದೆಡೆ ಹಿಂದೂ ಕಾಲೇಜಿನ ಅಧಿಕಾರಿಗಳು ಪ್ರತಿಕ್ರಿಯಿಸುತ್ತಾ “ಹೊರಗಿನವರ ಪ್ರವೇಶವನ್ನು ತಡೆಯಲು ಸಮವಸ್ತ್ರ ಕಡ್ಡಾಯಗೊಳಿಸಲಾಗಿದೆ” ಎಂದಿದ್ದಾರೆ.

ಹುಡುಗರಿಗೆ ಬಿಳಿ ಶರ್ಟ್ ಮತ್ತು ಬೂದು ಬಣ್ಣದ ಪ್ಯಾಂಟ್, ಹುಡುಗಿಯರಿಗೆ ಬೂದು ಬಣ್ಣದ ಕುರ್ತಾ ಮತ್ತು ಬಿಳಿ ಪೈಜಾಮವನ್ನು ಸಮವಸ್ತ್ರವಾಗಿ ಅಳವಡಿಸಲಾಗಿದೆ. ಈ ನಿಯಮವು ಯಾವಾಗಲೂ ಜಾರಿಯಲ್ಲಿರುತ್ತದೆ. ಕೆಲವು ಹೊರಗಿನವರು ಅಧ್ಯಾಪಕರೊಬ್ಬರ ಮೇಲೆ ದಾಳಿ ಮಾಡಿದ ನಂತರ, ಕಾಲೇಜು ಅಧಿಕಾರಿಗಳು ಸಮವಸ್ತ್ರ ನಿಯಮವನ್ನು ಜಾರಿಗೊಳಿಸಿದರು. ಕಳೆದ ಅಕ್ಟೋಬರ್ 15ರಂದು ನಿಯಮ ಜಾರಿಯಾದರೂ ಈ ವರ್ಷದ ಜನವರಿ 1 ರಿಂದ ಮಾತ್ರ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ ಎಂದು ಕಾಲೇಜು ಹೇಳಿಕೊಂಡಿದೆ.

ಸಮಾಜವಾದಿ ಪಕ್ಷದ ಯುವ ಘಟಕದ ನೇತೃತ್ವದಲ್ಲಿ ಜನವರಿ ಮೊದಲ ವಾರದಲ್ಲಿ ಕಾಲೇಜು ಗೇಟ್‌ಗಳ ಹೊರಗೆ ಧರಣಿ ಆರಂಭಿಸಿದ ವಿದ್ಯಾರ್ಥಿಗಳು, “ಪ್ರವೇಶದ್ವಾರದಲ್ಲಿ ತಮ್ಮ ಬುರ್ಖಾವನ್ನು ತೆಗೆಯಲು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಸೂಚಿಸಲಾಗುತ್ತಿದೆ.  ಹೀಗಾದಾಗ ತರಗತಿಗಳಿಗೆ ಹಾಜರಾಗಲು ಕಷ್ಟವಾಗುತ್ತದೆ” ಎಂದು ದೂರಿದ್ದಾರೆ. ಆದರೆ ಕಾಲೇಜಿನ ಅಧಿಕಾರಿಗಳು ಈ ಆರೋಪಗಳನ್ನು ನಿರಾಕರಿಸಿದ್ದಾರೆ.

“ಪ್ರವೇಶದ್ವಾರದ ಬಳಿ ಇರುವ ಕೊಠಡಿಯನ್ನು ಯಾವಾಗಲೂ ಈ ಉದ್ದೇಶಕ್ಕಾಗಿ ನಿಗದಿಪಡಿಸಲಾಗಿದೆ” ಎಂದು ಕಾಲೇಜು ಹೇಳಿಕೊಂಡಿದೆ. ಜನವರಿಯಲ್ಲಿ ವಿವಾದ ಉಂಟಾದ ಬಳಿಕ ಈ ಕೊಠಡಿಗೆ ‘ಬದಲಾವಣೆ ಕೊಠಡಿ’ ಎಂದು ಹೆಸರಿಡಲಾಗಿದೆ.

“ನಾನು ಈ ಪ್ರತಿಭಟನೆಯನ್ನು ಬೆಂಬಲಿಸುವುದಿಲ್ಲ. ಬುರ್ಖಾ ಹಾಕಿಕೊಂಡು ಬರುವ ಹುಡುಗಿಯರಿಗೆ ಕಾಲೇಜು ಆಡಳಿತ ಮಂಡಳಿ ಜಾಗ ನೀಡಿದೆ. ಬುರ್ಖಾ ಹಾಕದೆ ಬರಬೇಕೆಂದು ಅವರೇನು ಹೇಳುತ್ತಿಲ್ಲ. ಬುರ್ಖಾ ತೆಗೆದು ಕಾಲೇಜಿನೊಳಗೆ ಬರುಲು ಹೇಳುತ್ತಿದ್ದಾರೆ. ಅವರು ಹಿಜಾಬ್ ಮೇಲೆ ನಿರ್ಬಂಧಗಳನ್ನು ಹಾಕಿಲ್ಲ” ಎಂದು ಮೊದಲ ವರ್ಷದ ಎಂ.ಕಾಂ ವಿದ್ಯಾರ್ಥಿ ಇಕ್ರಾ ಅವರು ‘ನ್ಯೂಸ್‌ಲಾಂಡ್ರಿ’ ಜಾಲತಾಣಕ್ಕೆ ತಿಳಿಸಿದ್ದಾರೆ.

“ಕಾಲೇಜಿಗೆ ಪ್ರವೇಶ ಪಡೆಯುವ ಸಮಯದಲ್ಲೇ ಈ ಸಮವಸ್ತ್ರಕ್ಕೆ ಒಪ್ಪಿಗೆ ನೀಡುವ ನಿಬಂಧನೆಗೆ ಸಹಿ ಹಾಕಲಾಗಿರುತ್ತದೆ. ವಿದ್ಯಾರ್ಥಿನಿಯವರು ಮತ್ತು ಪೋಷಕರಿಗೆ ಸಮಸ್ಯೆಯಾಗಿಲ್ಲ. ಇದು ಹೊರನವರ ಪ್ರಶ್ನೆಯಷ್ಟೇ” ಎಂದು ಮಾಹಿತಿ ನೀಡಿದ್ದಾರೆ.

ಮತ್ತೊಬ್ಬ ವಿದ್ಯಾರ್ಥಿನಿ ಅಟೂಫಾ ಪ್ರತಿಕ್ರಿಯಿಸಿದ್ದು, “ಪ್ರತಿಭಟನಾಕಾರರು ಹೊರಗಿನವರು. ತಮ್ಮ ಗುರುತನ್ನು ಮುಚ್ಚಿಕೊಳ್ಳಲು ಬುರ್ಖಾವನ್ನು ಧರಿಸಿದ್ದಾರೆ” ಎಂದು ಆರೋಪಿಸಿದ್ದಾರೆ. ಆದರೆ ಬುರ್ಖಾ ಧರಿಸಿದ್ದ ಹಲವಾರು ಮುಸ್ಲಿಂ ವಿದ್ಯಾರ್ಥಿನಿಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಅವರು ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ ಎಂದು ‘ನ್ಯೂಸ್‌ಲಾಂಡ್ರಿ’ ತಿಳಿಸಿದೆ.

“ಈಗ ಯಾವುದೇ ವಿವಾದವಿಲ್ಲ” ಎಂದು ಕಾಲೇಜಿನ ಮುಖ್ಯ ಅಧಿಕಾರಿ ಎಪಿ ಸಿಂಗ್ ಹೇಳಿದ್ದಾರೆ. “ವಿದ್ಯಾರ್ಥಿಗಳು ತಮ್ಮ ಬುರ್ಖಾವನ್ನು ಪ್ರವೇಶದ್ವಾರದಲ್ಲಿಯೇ ತೆಗೆಯುವಂತೆ ಹೇಳುವುದರ ಬಗ್ಗೆ ತಪ್ಪು ತಿಳಿವಳಿಕೆ ರವಾನೆಯಾಗಿದೆ. ಈ ಸುದ್ದಿ ಎಲ್ಲೆಡೆ ಪ್ರಸಾರವಾಗಿದೆ. ಇದಕ್ಕಾಗಿ ಬುರ್ಕಾ ತೆಗೆಯುವುದಕ್ಕಾಗಿಯೇ ಕೊಠಡಿಯನ್ನು ನೀಡಿದ್ದೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಸುಮಾರು ಆರು ತಿಂಗಳ ಹಿಂದೆ ಪ್ರೊಫೆಸರ್ ಎ.ಯು.ಖಾನ್ ಅವರ ಮೇಲೆ ಕಾಲೇಜಿನ ಪ್ರವೇಶದ್ವಾರದಲ್ಲಿ ಹೊರಗಿನ ವ್ಯಕ್ತಿಗಳು  ಹಲ್ಲೆ ನಡೆಸಿದ ನಂತರ ಸಮವಸ್ತ್ರವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕಾಲೇಜು ನಿರ್ಧರಿಸಿತು” ಎಂದು ವಿವರಿಸಿದ್ದಾರೆ.

“ನಮಗೆ ಬುರ್ಖಾದಿಂದ ಯಾವುದೇ ಸಮಸ್ಯೆ ಇಲ್ಲ. ವಿದ್ಯಾರ್ಥಿನಿಯರು ಕಾಲೇಜಿಗೆ ಅದನ್ನು ಧರಿಸಿ, ಬಟ್ಟೆ ಬದಲಾಯಿಸುವ ಕೊಠಡಿಯಲ್ಲಿ ತೆಗೆದಿಟ್ಟು ತಮ್ಮ ಡ್ರೆಸ್‌ನಲ್ಲಿ ಪ್ರವೇಶಿಸಿದರೆ ಯಾರಿಗೆ ತೊಂದರೆ? ಜನವರಿ 1 ರಿಂದ ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ಹೊರಗಿನಿಂದ ಬಂದ ಕೆಲವು ಯುವಕರು ಇದರ ವಿರುದ್ಧ ಪ್ರತಿಭಟಿಸಿದ್ದಾರೆ. ಫೋಟೋಗಳನ್ನು ಕ್ಲಿಕ್ ಮಾಡಿ, ಅದನ್ನು ರಾಜಕೀಯಗೊಳಿಸಿದ್ದಾರೆ. ಸಮವಸ್ತ್ರವು ಹುಡುಗಿಯರು ಮತ್ತು ಹುಡುಗರಿಬ್ಬರಿಗೂ ಅನ್ವಯವಾಗುತ್ತದೆ” ಎಂದಿದ್ದಾರೆ.

ಕಾಲೇಜು ಪ್ರಾಂಶುಪಾಲ ಮತ್ತು ಪ್ರಾಧ್ಯಾಪಕ ಸತ್ಯವ್ರತ್ ಸಿಂಗ್ ರಾವತ್ ಅವರು ಪ್ರತಿಕ್ರಿಯಿಸಿ, “ಸಮವಸ್ತ್ರವು ನೀತಿ ಸಂಹಿತೆಯ ಭಾಗವಾಗಿದೆ. ಪ್ರವೇಶದ ಸಮಯದಲ್ಲಿ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಈ ಕುರಿತು ಸಹಿ ಹಾಕಿರುತ್ತಾರೆ. ಕಾಲೇಜಿನಲ್ಲಿ 12,000 ವಿದ್ಯಾರ್ಥಿಗಳಿದ್ದಾರೆ. ಹೆಚ್ಚುತ್ತಿರುವ ಗೂಂಡಾಗಿರಿ ಮತ್ತು ಹೊರಗಿನವರ ಉಪಟಳವನ್ನು ತಡೆಯಲು ಕ್ರಮ ಜರುಗಿಸಲಾಗಿದೆ” ಎಂದು ಹೇಳಿದ್ದಾರೆ.

“ಪ್ರತಿಭಟನಕಾರರು ಕಾಲೇಜು ವಿದ್ಯಾರ್ಥಿಗಳಲ್ಲ. ನಮಗೆ ಯಾರೊಂದಿಗೂ ಸಮಸ್ಯೆ ಇಲ್ಲ, ಅವರು ಸ್ಕಾರ್ಫ್ ಅಥವಾ ಹಿಜಾಬ್‌ ಧರಿಸಬಹುದು. ಆದರೆ ಸಮವಸ್ತ್ರ ಕಡ್ಡಾಯವಾಗಿದೆ. ಬದಲಾಯಿಸುವ ಕೋಣೆಯಲ್ಲಿ ಬುರ್ಖಾವನ್ನು ತೆಗೆಯಬೇಕು. ಅಂತಿಮವಾಗಿ, ಸಮವಸ್ತ್ರವನ್ನು ಧರಿಸಲು ಇಷ್ಟಪಡದವರೊಂದಿಗೆ ತಕರಾರುಗಳಿವೆ” ಎಂದು ಸ್ಪಷ್ಟಪಡಿಸಿದ್ದಾರೆ.

ಕ್ರಮವು ಕಾನೂನುಬದ್ಧವಾಗಿದೆಯೇ?

ಉತ್ತರ ಪ್ರದೇಶದ ಉನ್ನತ ಶಿಕ್ಷಣ ಸಚಿವ ಯೋಗೇಂದ್ರ ಉಪಾಧ್ಯಾಯ, “ಡ್ರೆಸ್ ಕೋಡ್ ಅನ್ನು ಜಾರಿಗೊಳಿಸುವ ಅಧಿಕಾರವು ಪ್ರಾಂಶುಪಾಲರಿಗೆ ಇರುತ್ತದೆ” ಎಂದು ಪ್ರತಿಕ್ರಿಯಿಸಿದ್ದಾರೆ.

ಎಂ.ಕಾಮ್ ವಿದ್ಯಾರ್ಥಿನಿ ಮೆಹಕ್ ಅನ್ಸಾರಿ ಮಾತನಾಡಿ, “ಬಟ್ಟೆ ಬದಲಾಯಿಸುವ ಕೊಠಡಿ ಇದ್ದಾಗ ಬುರ್ಖಾ ತೆಗೆದರೆ ಏನು ತೊಂದರೆ? ರಸ್ತೆಯಲ್ಲಿ ಬುರ್ಖಾ ತೆಗೆಯುವಂತಾಗಿದೆ ಎಂಬುದು ಸುಳ್ಳು” ಎಂದು ಹೇಳಿದ್ದಾರೆ.

ಮತ್ತೋರ್ವ ವಿದ್ಯಾರ್ಥಿ ಮಧು ಮನ್ಶಾ ಮಾತನಾಡಿ, “ಈ ಹಿಂದೆ ಗುರುತಿನ ಚೀಟಿ ತಪಾಸಣೆ ಇಲ್ಲದ ಕಾರಣ ಯಾರಾದರೂ ಕಾಲೇಜಿಗೆ ಪ್ರವೇಶಿಸುತ್ತಿದ್ದರು. ಆದರೆ ಈಗ ಗುರುತಿನ ಚೀಟಿಯನ್ನೂ ಪರಿಶೀಲಿಸಲಾಗಿದೆ. ಈಗ ಗುರುತಿನ ಚೀಟಿ ಮತ್ತು ಸಮವಸ್ತ್ರ ಹೊಂದಿರುವವರು ಮಾತ್ರ ಪ್ರವೇಶಿಸಬಹುದು” ಎಂದಿದ್ದಾರೆ.

ಕಾಲೇಜಿನಲ್ಲಿ ಡಿಫೆನ್ಸ್‌ ಸ್ಟಡೀಸ್ ಕಲಿಸುವ ಪ್ರೊಫೆಸರ್ ಆನಂದ್ ಕುಮಾರ್, “ಮಾಧ್ಯಮದ ಒಂದು ವಿಭಾಗವು ದಾರಿ ತಪ್ಪಿಸುವ ವರದಿ ಮಾಡುತ್ತಿದೆ. ಹಿಜಾಬ್ ಅನ್ನು ನಿಷೇಧಿಸಲಾಗಿದೆ ಎಂದು ಬರೆಯಲಾಗಿದೆ. ಆದರೆ ಅವರಿಗೆ ಹಿಜಾಬ್ ಮತ್ತು ಬುರ್ಖಾ ನಡುವಿನ ವ್ಯತ್ಯಾಸ ತಿಳಿದಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕೊತ್ವಾಲಿ ಎಸ್‌ಎಚ್‌ಒ ವಿಪ್ಲವ್ ಶರ್ಮಾ ಮಾತನಾಡಿ, “ಕಾಲೇಜಿನಲ್ಲಿ ಡ್ರೆಸ್ ಕೋಡ್ ಬಹಳ ಹಿಂದಿನಿಂದಲೂ ಇದೆ. ಅಂತಹದ್ದೇನೂ ಇಲ್ಲದಿರುವಾಗ ಬುರ್ಖಾ ಸಮಸ್ಯೆ ಎಂದು ಮಾಧ್ಯಮಗಳು ತಪ್ಪುದಾರಿಗೆಳೆಯುವ ಸುದ್ದಿಗಳನ್ನು ನೀಡುತ್ತಿವೆ” ಎಂದು ಟೀಕಿಸಿದ್ದಾರೆ.

ವರದಿ ಕೃಪೆ: ನ್ಯೂಸ್‌ ಲಾಂಡ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...