Homeಮುಖಪುಟಯುಪಿ: ಸರ್ಕಾರಿ ಕಾಲೇಜೊಂದರಲ್ಲಿ ಬುರ್ಕಾ ನಿಷೇಧ; ವಿವಾದದ ವಾಸ್ತವವೇನು?

ಯುಪಿ: ಸರ್ಕಾರಿ ಕಾಲೇಜೊಂದರಲ್ಲಿ ಬುರ್ಕಾ ನಿಷೇಧ; ವಿವಾದದ ವಾಸ್ತವವೇನು?

ಪ್ರತಿಭಟನಾಕಾರರು ಕಾಲೇಜು ವಿದ್ಯಾರ್ಥಿಗಳಲ್ಲ. ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದಕ್ಕೆ ವಿರೋಧವಿಲ್ಲ: ಪ್ರಾಂಶುಪಾಲ

- Advertisement -
- Advertisement -

ಬುರ್ಕಾ ಧರಿಸಿದ ವಿದ್ಯಾರ್ಥಿನಿಯರು ಕಾಲೇಜಿಗೆ ಪ್ರವೇಶಿಸದಂತೆ ಉತ್ತರ ಪ್ರದೇಶದ ಮೊರಾದಾಬಾದ್‌ನ ಸರ್ಕಾರಿ ಕಾಲೇಜಿನಲ್ಲಿ ಜಾರಿಗೊಳಿಸಿದ ಸಮವಸ್ತ್ರ ನೀತಿಯು ವಿವಾದಕ್ಕೆ ಗುರಿಯಾಗಿದೆ.

ಸಮಾಜವಾದಿ ಪಕ್ಷದ ಯುವ ಘಟಕವು ಪ್ರತಿಭಟನೆ ನಡೆಸಿದ್ದು, ಬುರ್ಖಾ ಧರಿಸಿದ ವಿದ್ಯಾರ್ಥಿಗಳನ್ನು ಕಾಲೇಜಿನೊಳಗೆ ಬಿಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಮುಸ್ಲಿಂ ವಿದ್ಯಾರ್ಥಿನಿಯರ ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ಕಸಿದುಕೊಳ್ಳಲಾಗಿದೆ ಎಂದು ಟೀಕೆಗಳು ವ್ಯಕ್ತವಾಗಿದ್ದರೆ, ಮತ್ತೊಂದೆಡೆ ಹಿಂದೂ ಕಾಲೇಜಿನ ಅಧಿಕಾರಿಗಳು ಪ್ರತಿಕ್ರಿಯಿಸುತ್ತಾ “ಹೊರಗಿನವರ ಪ್ರವೇಶವನ್ನು ತಡೆಯಲು ಸಮವಸ್ತ್ರ ಕಡ್ಡಾಯಗೊಳಿಸಲಾಗಿದೆ” ಎಂದಿದ್ದಾರೆ.

ಹುಡುಗರಿಗೆ ಬಿಳಿ ಶರ್ಟ್ ಮತ್ತು ಬೂದು ಬಣ್ಣದ ಪ್ಯಾಂಟ್, ಹುಡುಗಿಯರಿಗೆ ಬೂದು ಬಣ್ಣದ ಕುರ್ತಾ ಮತ್ತು ಬಿಳಿ ಪೈಜಾಮವನ್ನು ಸಮವಸ್ತ್ರವಾಗಿ ಅಳವಡಿಸಲಾಗಿದೆ. ಈ ನಿಯಮವು ಯಾವಾಗಲೂ ಜಾರಿಯಲ್ಲಿರುತ್ತದೆ. ಕೆಲವು ಹೊರಗಿನವರು ಅಧ್ಯಾಪಕರೊಬ್ಬರ ಮೇಲೆ ದಾಳಿ ಮಾಡಿದ ನಂತರ, ಕಾಲೇಜು ಅಧಿಕಾರಿಗಳು ಸಮವಸ್ತ್ರ ನಿಯಮವನ್ನು ಜಾರಿಗೊಳಿಸಿದರು. ಕಳೆದ ಅಕ್ಟೋಬರ್ 15ರಂದು ನಿಯಮ ಜಾರಿಯಾದರೂ ಈ ವರ್ಷದ ಜನವರಿ 1 ರಿಂದ ಮಾತ್ರ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ ಎಂದು ಕಾಲೇಜು ಹೇಳಿಕೊಂಡಿದೆ.

ಸಮಾಜವಾದಿ ಪಕ್ಷದ ಯುವ ಘಟಕದ ನೇತೃತ್ವದಲ್ಲಿ ಜನವರಿ ಮೊದಲ ವಾರದಲ್ಲಿ ಕಾಲೇಜು ಗೇಟ್‌ಗಳ ಹೊರಗೆ ಧರಣಿ ಆರಂಭಿಸಿದ ವಿದ್ಯಾರ್ಥಿಗಳು, “ಪ್ರವೇಶದ್ವಾರದಲ್ಲಿ ತಮ್ಮ ಬುರ್ಖಾವನ್ನು ತೆಗೆಯಲು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಸೂಚಿಸಲಾಗುತ್ತಿದೆ.  ಹೀಗಾದಾಗ ತರಗತಿಗಳಿಗೆ ಹಾಜರಾಗಲು ಕಷ್ಟವಾಗುತ್ತದೆ” ಎಂದು ದೂರಿದ್ದಾರೆ. ಆದರೆ ಕಾಲೇಜಿನ ಅಧಿಕಾರಿಗಳು ಈ ಆರೋಪಗಳನ್ನು ನಿರಾಕರಿಸಿದ್ದಾರೆ.

“ಪ್ರವೇಶದ್ವಾರದ ಬಳಿ ಇರುವ ಕೊಠಡಿಯನ್ನು ಯಾವಾಗಲೂ ಈ ಉದ್ದೇಶಕ್ಕಾಗಿ ನಿಗದಿಪಡಿಸಲಾಗಿದೆ” ಎಂದು ಕಾಲೇಜು ಹೇಳಿಕೊಂಡಿದೆ. ಜನವರಿಯಲ್ಲಿ ವಿವಾದ ಉಂಟಾದ ಬಳಿಕ ಈ ಕೊಠಡಿಗೆ ‘ಬದಲಾವಣೆ ಕೊಠಡಿ’ ಎಂದು ಹೆಸರಿಡಲಾಗಿದೆ.

“ನಾನು ಈ ಪ್ರತಿಭಟನೆಯನ್ನು ಬೆಂಬಲಿಸುವುದಿಲ್ಲ. ಬುರ್ಖಾ ಹಾಕಿಕೊಂಡು ಬರುವ ಹುಡುಗಿಯರಿಗೆ ಕಾಲೇಜು ಆಡಳಿತ ಮಂಡಳಿ ಜಾಗ ನೀಡಿದೆ. ಬುರ್ಖಾ ಹಾಕದೆ ಬರಬೇಕೆಂದು ಅವರೇನು ಹೇಳುತ್ತಿಲ್ಲ. ಬುರ್ಖಾ ತೆಗೆದು ಕಾಲೇಜಿನೊಳಗೆ ಬರುಲು ಹೇಳುತ್ತಿದ್ದಾರೆ. ಅವರು ಹಿಜಾಬ್ ಮೇಲೆ ನಿರ್ಬಂಧಗಳನ್ನು ಹಾಕಿಲ್ಲ” ಎಂದು ಮೊದಲ ವರ್ಷದ ಎಂ.ಕಾಂ ವಿದ್ಯಾರ್ಥಿ ಇಕ್ರಾ ಅವರು ‘ನ್ಯೂಸ್‌ಲಾಂಡ್ರಿ’ ಜಾಲತಾಣಕ್ಕೆ ತಿಳಿಸಿದ್ದಾರೆ.

“ಕಾಲೇಜಿಗೆ ಪ್ರವೇಶ ಪಡೆಯುವ ಸಮಯದಲ್ಲೇ ಈ ಸಮವಸ್ತ್ರಕ್ಕೆ ಒಪ್ಪಿಗೆ ನೀಡುವ ನಿಬಂಧನೆಗೆ ಸಹಿ ಹಾಕಲಾಗಿರುತ್ತದೆ. ವಿದ್ಯಾರ್ಥಿನಿಯವರು ಮತ್ತು ಪೋಷಕರಿಗೆ ಸಮಸ್ಯೆಯಾಗಿಲ್ಲ. ಇದು ಹೊರನವರ ಪ್ರಶ್ನೆಯಷ್ಟೇ” ಎಂದು ಮಾಹಿತಿ ನೀಡಿದ್ದಾರೆ.

ಮತ್ತೊಬ್ಬ ವಿದ್ಯಾರ್ಥಿನಿ ಅಟೂಫಾ ಪ್ರತಿಕ್ರಿಯಿಸಿದ್ದು, “ಪ್ರತಿಭಟನಾಕಾರರು ಹೊರಗಿನವರು. ತಮ್ಮ ಗುರುತನ್ನು ಮುಚ್ಚಿಕೊಳ್ಳಲು ಬುರ್ಖಾವನ್ನು ಧರಿಸಿದ್ದಾರೆ” ಎಂದು ಆರೋಪಿಸಿದ್ದಾರೆ. ಆದರೆ ಬುರ್ಖಾ ಧರಿಸಿದ್ದ ಹಲವಾರು ಮುಸ್ಲಿಂ ವಿದ್ಯಾರ್ಥಿನಿಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಅವರು ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ ಎಂದು ‘ನ್ಯೂಸ್‌ಲಾಂಡ್ರಿ’ ತಿಳಿಸಿದೆ.

“ಈಗ ಯಾವುದೇ ವಿವಾದವಿಲ್ಲ” ಎಂದು ಕಾಲೇಜಿನ ಮುಖ್ಯ ಅಧಿಕಾರಿ ಎಪಿ ಸಿಂಗ್ ಹೇಳಿದ್ದಾರೆ. “ವಿದ್ಯಾರ್ಥಿಗಳು ತಮ್ಮ ಬುರ್ಖಾವನ್ನು ಪ್ರವೇಶದ್ವಾರದಲ್ಲಿಯೇ ತೆಗೆಯುವಂತೆ ಹೇಳುವುದರ ಬಗ್ಗೆ ತಪ್ಪು ತಿಳಿವಳಿಕೆ ರವಾನೆಯಾಗಿದೆ. ಈ ಸುದ್ದಿ ಎಲ್ಲೆಡೆ ಪ್ರಸಾರವಾಗಿದೆ. ಇದಕ್ಕಾಗಿ ಬುರ್ಕಾ ತೆಗೆಯುವುದಕ್ಕಾಗಿಯೇ ಕೊಠಡಿಯನ್ನು ನೀಡಿದ್ದೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಸುಮಾರು ಆರು ತಿಂಗಳ ಹಿಂದೆ ಪ್ರೊಫೆಸರ್ ಎ.ಯು.ಖಾನ್ ಅವರ ಮೇಲೆ ಕಾಲೇಜಿನ ಪ್ರವೇಶದ್ವಾರದಲ್ಲಿ ಹೊರಗಿನ ವ್ಯಕ್ತಿಗಳು  ಹಲ್ಲೆ ನಡೆಸಿದ ನಂತರ ಸಮವಸ್ತ್ರವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕಾಲೇಜು ನಿರ್ಧರಿಸಿತು” ಎಂದು ವಿವರಿಸಿದ್ದಾರೆ.

“ನಮಗೆ ಬುರ್ಖಾದಿಂದ ಯಾವುದೇ ಸಮಸ್ಯೆ ಇಲ್ಲ. ವಿದ್ಯಾರ್ಥಿನಿಯರು ಕಾಲೇಜಿಗೆ ಅದನ್ನು ಧರಿಸಿ, ಬಟ್ಟೆ ಬದಲಾಯಿಸುವ ಕೊಠಡಿಯಲ್ಲಿ ತೆಗೆದಿಟ್ಟು ತಮ್ಮ ಡ್ರೆಸ್‌ನಲ್ಲಿ ಪ್ರವೇಶಿಸಿದರೆ ಯಾರಿಗೆ ತೊಂದರೆ? ಜನವರಿ 1 ರಿಂದ ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ಹೊರಗಿನಿಂದ ಬಂದ ಕೆಲವು ಯುವಕರು ಇದರ ವಿರುದ್ಧ ಪ್ರತಿಭಟಿಸಿದ್ದಾರೆ. ಫೋಟೋಗಳನ್ನು ಕ್ಲಿಕ್ ಮಾಡಿ, ಅದನ್ನು ರಾಜಕೀಯಗೊಳಿಸಿದ್ದಾರೆ. ಸಮವಸ್ತ್ರವು ಹುಡುಗಿಯರು ಮತ್ತು ಹುಡುಗರಿಬ್ಬರಿಗೂ ಅನ್ವಯವಾಗುತ್ತದೆ” ಎಂದಿದ್ದಾರೆ.

ಕಾಲೇಜು ಪ್ರಾಂಶುಪಾಲ ಮತ್ತು ಪ್ರಾಧ್ಯಾಪಕ ಸತ್ಯವ್ರತ್ ಸಿಂಗ್ ರಾವತ್ ಅವರು ಪ್ರತಿಕ್ರಿಯಿಸಿ, “ಸಮವಸ್ತ್ರವು ನೀತಿ ಸಂಹಿತೆಯ ಭಾಗವಾಗಿದೆ. ಪ್ರವೇಶದ ಸಮಯದಲ್ಲಿ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಈ ಕುರಿತು ಸಹಿ ಹಾಕಿರುತ್ತಾರೆ. ಕಾಲೇಜಿನಲ್ಲಿ 12,000 ವಿದ್ಯಾರ್ಥಿಗಳಿದ್ದಾರೆ. ಹೆಚ್ಚುತ್ತಿರುವ ಗೂಂಡಾಗಿರಿ ಮತ್ತು ಹೊರಗಿನವರ ಉಪಟಳವನ್ನು ತಡೆಯಲು ಕ್ರಮ ಜರುಗಿಸಲಾಗಿದೆ” ಎಂದು ಹೇಳಿದ್ದಾರೆ.

“ಪ್ರತಿಭಟನಕಾರರು ಕಾಲೇಜು ವಿದ್ಯಾರ್ಥಿಗಳಲ್ಲ. ನಮಗೆ ಯಾರೊಂದಿಗೂ ಸಮಸ್ಯೆ ಇಲ್ಲ, ಅವರು ಸ್ಕಾರ್ಫ್ ಅಥವಾ ಹಿಜಾಬ್‌ ಧರಿಸಬಹುದು. ಆದರೆ ಸಮವಸ್ತ್ರ ಕಡ್ಡಾಯವಾಗಿದೆ. ಬದಲಾಯಿಸುವ ಕೋಣೆಯಲ್ಲಿ ಬುರ್ಖಾವನ್ನು ತೆಗೆಯಬೇಕು. ಅಂತಿಮವಾಗಿ, ಸಮವಸ್ತ್ರವನ್ನು ಧರಿಸಲು ಇಷ್ಟಪಡದವರೊಂದಿಗೆ ತಕರಾರುಗಳಿವೆ” ಎಂದು ಸ್ಪಷ್ಟಪಡಿಸಿದ್ದಾರೆ.

ಕ್ರಮವು ಕಾನೂನುಬದ್ಧವಾಗಿದೆಯೇ?

ಉತ್ತರ ಪ್ರದೇಶದ ಉನ್ನತ ಶಿಕ್ಷಣ ಸಚಿವ ಯೋಗೇಂದ್ರ ಉಪಾಧ್ಯಾಯ, “ಡ್ರೆಸ್ ಕೋಡ್ ಅನ್ನು ಜಾರಿಗೊಳಿಸುವ ಅಧಿಕಾರವು ಪ್ರಾಂಶುಪಾಲರಿಗೆ ಇರುತ್ತದೆ” ಎಂದು ಪ್ರತಿಕ್ರಿಯಿಸಿದ್ದಾರೆ.

ಎಂ.ಕಾಮ್ ವಿದ್ಯಾರ್ಥಿನಿ ಮೆಹಕ್ ಅನ್ಸಾರಿ ಮಾತನಾಡಿ, “ಬಟ್ಟೆ ಬದಲಾಯಿಸುವ ಕೊಠಡಿ ಇದ್ದಾಗ ಬುರ್ಖಾ ತೆಗೆದರೆ ಏನು ತೊಂದರೆ? ರಸ್ತೆಯಲ್ಲಿ ಬುರ್ಖಾ ತೆಗೆಯುವಂತಾಗಿದೆ ಎಂಬುದು ಸುಳ್ಳು” ಎಂದು ಹೇಳಿದ್ದಾರೆ.

ಮತ್ತೋರ್ವ ವಿದ್ಯಾರ್ಥಿ ಮಧು ಮನ್ಶಾ ಮಾತನಾಡಿ, “ಈ ಹಿಂದೆ ಗುರುತಿನ ಚೀಟಿ ತಪಾಸಣೆ ಇಲ್ಲದ ಕಾರಣ ಯಾರಾದರೂ ಕಾಲೇಜಿಗೆ ಪ್ರವೇಶಿಸುತ್ತಿದ್ದರು. ಆದರೆ ಈಗ ಗುರುತಿನ ಚೀಟಿಯನ್ನೂ ಪರಿಶೀಲಿಸಲಾಗಿದೆ. ಈಗ ಗುರುತಿನ ಚೀಟಿ ಮತ್ತು ಸಮವಸ್ತ್ರ ಹೊಂದಿರುವವರು ಮಾತ್ರ ಪ್ರವೇಶಿಸಬಹುದು” ಎಂದಿದ್ದಾರೆ.

ಕಾಲೇಜಿನಲ್ಲಿ ಡಿಫೆನ್ಸ್‌ ಸ್ಟಡೀಸ್ ಕಲಿಸುವ ಪ್ರೊಫೆಸರ್ ಆನಂದ್ ಕುಮಾರ್, “ಮಾಧ್ಯಮದ ಒಂದು ವಿಭಾಗವು ದಾರಿ ತಪ್ಪಿಸುವ ವರದಿ ಮಾಡುತ್ತಿದೆ. ಹಿಜಾಬ್ ಅನ್ನು ನಿಷೇಧಿಸಲಾಗಿದೆ ಎಂದು ಬರೆಯಲಾಗಿದೆ. ಆದರೆ ಅವರಿಗೆ ಹಿಜಾಬ್ ಮತ್ತು ಬುರ್ಖಾ ನಡುವಿನ ವ್ಯತ್ಯಾಸ ತಿಳಿದಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕೊತ್ವಾಲಿ ಎಸ್‌ಎಚ್‌ಒ ವಿಪ್ಲವ್ ಶರ್ಮಾ ಮಾತನಾಡಿ, “ಕಾಲೇಜಿನಲ್ಲಿ ಡ್ರೆಸ್ ಕೋಡ್ ಬಹಳ ಹಿಂದಿನಿಂದಲೂ ಇದೆ. ಅಂತಹದ್ದೇನೂ ಇಲ್ಲದಿರುವಾಗ ಬುರ್ಖಾ ಸಮಸ್ಯೆ ಎಂದು ಮಾಧ್ಯಮಗಳು ತಪ್ಪುದಾರಿಗೆಳೆಯುವ ಸುದ್ದಿಗಳನ್ನು ನೀಡುತ್ತಿವೆ” ಎಂದು ಟೀಕಿಸಿದ್ದಾರೆ.

ವರದಿ ಕೃಪೆ: ನ್ಯೂಸ್‌ ಲಾಂಡ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...