Homeಕರ್ನಾಟಕಅಂಗನವಾಡಿ ನೌಕರರ ಬೇಡಿಕೆಗಳಿಗೆ ಸರ್ಕಾರ ಸ್ಪಂದನೆ: ಹೋರಾಟ ಅಂತ್ಯ

ಅಂಗನವಾಡಿ ನೌಕರರ ಬೇಡಿಕೆಗಳಿಗೆ ಸರ್ಕಾರ ಸ್ಪಂದನೆ: ಹೋರಾಟ ಅಂತ್ಯ

- Advertisement -
- Advertisement -

ಅನಿರ್ದಿಷ್ಟಾವಧಿ ಹೋರಾಟವನ್ನು ಕೈಗೊಂಡಿದ್ದ ಅಂಗನವಾಡಿ ನೌಕರರ ಬೇಡಿಕೆಗಳಿಗೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಮಳೆ, ಬಿಸಿಲು, ಚಳಿಯೆನ್ನದೆ ಹೋರಾಟಕ್ಕೆ ಕುಳಿತ್ತಿದ್ದ ತಾಯಂದಿಯರು ಕೊಂಚ ನಿರಾಳವಾಗಿದ್ದು, ಹೋರಾಟವನ್ನು ಅಂತ್ಯಗೊಳಿಸಿದ್ದಾರೆ.

ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ, ಸಿಐಟಿಯು ಸಂಘಟನೆಯ ನೇತೃತ್ವದಲ್ಲಿ 2023 ಜನವರಿ 23ರಿಂದ ಅನಿರ್ಧಿಷ್ಟಾವಧಿ ಮುಷ್ಕರವನ್ನು ಬೆಂಗಳೂರಿನ ಫ್ರೀಡಂ ಪಾರ್ಕ ನಲ್ಲಿ ಹಮ್ಮಿಕೊಳ್ಳಲಾಗಿತ್ತು.

ಸುಪ್ರೀಂ ಕೋರ್ಟಿನ ತೀರ್ಪಿನಂತೆ ‌ಗ್ರ್ಯಾಚುಟಿ ನೀಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಬೇಕು, ಅಂಗನವಾಡಿಗಳನ್ನು ಅನ್ನದ ಜೊತೆಗೆ ಅಕ್ಷರದ ಕೇಂದ್ರವಾಗಿಸಲು, ಅಂಗನವಾಡಿ ಕೇಂದ್ರಗಳಲ್ಲಿ ಶಾಲಾಪೂರ್ವ ಶಿಕ್ಷಣಕ್ಕೆ ನಿರ್ದಿಷ್ಟ ಸಮಯ ಮೀಸಲಿರಿಸಲು, ಶಿಕ್ಷಕಿ ಪದನಾಮ ನೀಡಲು, ಅಂಗನವಾಡಿಗೆ ಬರುವ ಮಕ್ಕಳಿಗೆ ಸಮವಸ್ತ್ರ, ಶೂ ನೀಡಲು ಹಾಗೂ ಅಂಗನವಾಡಿಯಲ್ಲಿ ಓದಿರುವ ಬಗ್ಗೆ ದೃಢೀಕರಣ ಪತ್ರ ನೀಡಲು, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಸೇವಾ ನಿಯಮಾವಳಿ ರೂಪಿಸಲು ಒತ್ತಾಯಿಸಲಾಗಿತ್ತು.

ಜೊತೆಗೆ ಮಿನಿ ಅಂಗನವಾಡಿ ಹಾಗೂ ಸಹಾಯಕಿಯರಿಗೆ ಪದೋನ್ನತಿಗೆ ಇರುವ ಆದೇಶ ಮಾರ್ಪಡಿಸಲು, ಅಂಗನವಾಡಿ ಕೇಂದ್ರಗಳನ್ನು ಮೇಲ್ದೆರ್ಜೆಗೇರಿಸಲು, ಅಂಗನವಾಡಿಗೆ ಸ್ವಂತ ಕಟ್ಟಡ ಕಟ್ಟಲು 30 ಲಕ್ಷ ರೂ ಮೀಸಲಿರಿಸಲು ಹಾಗೂ ಮೂಲಸೌಕರ್ಯ ಬಲವರ್ಧನೆಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚುವರಿ ಕೆಲಸದ ಒತ್ತಡ ಕಡಿಮೆ ಮಾಡಲು ಇತ್ಯಾದಿ ಪ್ರಮುಖ ಬೇಡಿಕೆಗಳಿಗೆ ಒತ್ತಾಯಿಸಿ ಈ ಹೋರಾಟ ಕಳೆದ ಹತ್ತು ದಿನಗಳಿಂದ ನಡೆಯುತ್ತಿತ್ತು. ಕೊರೆಯುವ ಚಳಿಯಲ್ಲಿಯೇ ಮಹಿಳೆಯರು ನಡೆಸಿದ ಈ ಐತಿಹಾಸಿಕ ಹೋರಾಟ ನಾಡಿನ ಎಲ್ಲರ ಗಮನ ಸೆಳೆದು ಸರ್ಕಾರ ಸ್ಪಂದಿಸಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಈ ಮಧ್ಯೆ ನಮ್ಮ ಹೋರಾಟಕ್ಕೆ ಸ್ಪಂದಿಸಿ ನಾಲ್ಕೈದು ಬಾರಿ ಸರ್ಕಾರದೊಂದಿಗೆ ಮಾತುಕತೆಗಳು ನಡೆದವು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಾನ್ಯ ಮಂತ್ರಿಗಳು ಹೋರಾಟದ ಸ್ಥಳಕ್ಕೆ ಬಂದು ಸಮಸ್ಯೆ ಆಲಿಸಿದರು. ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ನಿರ್ದೇಶಕರು, ಜಂಟಿ ನಿರ್ದೇಶಕರು, ಉಪನಿರ್ದೇಶಕರು ಹಾಗೂ ಇತರ ಹಿರಿಯ ಅಧಿಕಾರಿಗಳ ಜೊತೆಗೆ ನಿರ್ಧಿಷ್ಟ ವಿಷಯಗಳ ಕುರಿತು ಚರ್ಚೆಗಳು ನಡೆದವು. ಆದರೆ ಬೇಡಿಕೆ ಈಡೇರಿಕೆಗೆ ಸ್ಪಷ್ಟತೆ ಬಾರದೇ ಇರುವುದರಿಂದ ಹೋರಾಟವನ್ನು ಮುಂದುವರಿಸುವುದಾಗಿ ಘೋಷಿಸಲಾಗಿತ್ತು. ಮೂಲಸೌಕರ್ಯಗಳ ಕೊರತೆಯ ಮಧ್ಯೆಯೂ ಹೋರಾಟ ತೀವ್ರತೆ ಪಡೆದಿತ್ತು.

ಸಿಐಟಿಯುನ ಹೋರಾಟಕ್ಕೆ ಮಣಿದ ಇಲಾಖೆಯು ಶಾಲಾಪೂರ್ವ ಶಿಕ್ಷಣಕ್ಕಾಗಿ ಬೆಳಿಗ್ಗೆ 10 ರಿಂದ 1 ಗಂಟೆಯ ವರೆಗೆ ನಿರ್ದಿಷ್ಟ ಸಮಯ ಮೀಸಲಿರಿಸಿದ ಸ್ಪಷ್ಟ ಆದೇಶವನ್ನು ಲಿಖಿತವಾಗಿ ನೀಡಿದೆ. ಮಿನಿ ಅಂಗನವಾಡಿ ಹಾಗೂ ಸಹಾಯಕಿಯರ ಪದೋನ್ನತಿಯ ಕುರಿತು ಲೋಪದೋಷಗಳಿರುವ ಆದೇಶ ವಾಪಸ್ ಪಡೆದು, ಮಾರ್ಪಡಿಸಿದ ತಿದ್ದುಪಡಿ ಆದೇಶವನ್ನು ಲಿಖಿತವಾಗಿ ಪಡೆಯಲಾಗಿದೆ. ಕಟ್ಟಡದ ವೆಚ್ಚ 12 ಲಕ್ಷದಿಂದ 20 ಲಕ್ಷಕ್ಕೆ ಏರಿಕೆಗೆ ಒಪ್ಪಿಗೆ ನೀಡಿದೆ. ಮಕ್ಕಳಿಗೆ ಶೂ, ಸಮವಸ್ತ್ರ ಹಾಗೂ ಮೂಲಸೌಕರ್ಯ ಹೆಚ್ಚಿಸಲು ಒಪ್ಪಿಗೆ ಸೂಚಿಸಿದೆ. ಅಂಗನವಾಡಿಗಳಲ್ಲಿ ಶಾಲಾಪೂರ್ವ ಶಿಕ್ಷಣ ಪಡೆದ ದೃಢೀಕರಣ ಪತ್ರ ನೀಡಲು ಸಮ್ಮತಿ ನೀಡಿದ್ದಾರೆ. ಇಲಾಖೆಯ ಅಧಿಕಾರಿಗಳ ಜೊತೆಗೆ ಮಾತುಕತೆಯ ವೇಳೆಯಲ್ಲಿ ಇನ್ನುಳಿದ ಬೇಡಿಕೆಗಳೊಂದಿಗೆ ರಾಜ್ಯದ ಎಲ್ಲಾ ಕಾರ್ಯಕರ್ತೆ ಮತ್ತು ಸಹಾಯಕಿಯರ ಸಂಪೂರ್ಣ ಆರೋಗ್ಯ ತಪಾಸಣೆ ಇತ್ಯಾದಿ ಬೇಡಿಕೆಗಳಿಗೆ ಸಕಾರಾತ್ಮಕ ಸ್ಪಂದನೆ ದೊರಕಿಸಿಕೊಳ್ಳಲು ಸಾಧ್ಯವಾಗಿದೆ ಎಂದು ಸಂಘಟಕರು ಸಂತಸ ವ್ಯಕ್ತಪಡಿಸಿದ್ದಾರೆ.

ಗ್ರಾಚ್ಯುಟಿಗೆ ಸಂಬಂಧಿಸಿ ಇಂದು 1-2-2023 ಮಾನ್ಯ ಮುಖ್ಯಮಂತ್ರಿಗಳ ಸಲಹೆಯಂತೆ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗಿದೆ. ಸುಪ್ರಿಂ ಕೋರ್ಟಿನ ತೀರ್ಪಿನಂತೆ ಗ್ರಾಚ್ಯುಟಿ ಕಾಯ್ದೆ 1972 ರ ಪ್ರಕಾರ ಉಪಧನ (ಗ್ರಾಚ್ಯುಟಿ) ನೀಡುವ ಕುರಿತು ಮುಖ್ಯಮಂತ್ರಿಗಳ ಅನುಮೋದನೆಯ ಮೇರೆಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ. ಈ ಹಿನ್ನೆಲೆಯಲ್ಲಿ ನಮ್ಮ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘವು ಕಳೆದ ಹತ್ತು ದಿನಗಳಿಂದ ಹಮ್ಮಿಕೊಂಡಿರುವ ಶಾಂತಿಯುತ ಅನಿರ್ದಿಷ್ಟಾವಧಿ ಹೋರಾಟವನ್ನು 1-2-2023 ರಂದು ಹಿಂಪಡೆಯಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಹೋರಾಟದ ಸಂದರ್ಭದಲ್ಲಿ ಸಂಘಟನೆಯ ಬೇಡಿಕೆಗಳ ಈಡೇರಿಕೆಗೆ ಸಹಾಯ ಸಹಕಾರ ನೀಡಿದವರಿಗೆ, ಬೆಂಬಲಿಸಿದವರಿಗೆ, ಮಾರ್ಗದರ್ಶನ ಮಾಡಿದ ನಾಡಿನ ಗಣ್ಯರಿಗೆ ಹಿತೈಷಿಗಳಿಗೆ, ಹೋರಾಟವನ್ನು ಮಾಧ್ಯಮದ ಮೂಲಕ ಪ್ರಸಾರ ಮಾಡಿದವರಿಗೆ, ಸೂಕ್ತ ರಕ್ಷಣೆ ನೀಡಿದ ಆರಕ್ಷಕರಿಗೆ ಸಂಘಟನೆಯ ಪರವಾಗಿ ವಂದನೆ ಸಲ್ಲಿಸಿದ್ದಾರೆ.

ಸಂಘಟಕರಾದ ಎಸ್. ವರಲಕ್ಷ್ಮಿ, ಶಾಂತಾ ಘಂಟೆ, ಎಚ್ ಎಸ್ ಸುನಂದಾ, ಜಿ ಕಮಲಾ, ಯಮುನಾ ಗಾಂವ್ಕರ್, ಜಯಶ್ರೀ ಹಿರೇಕರ್, ಲಲಿತಾ ಹೆಗಡೆ, ವಿದ್ಯಾ ವೈದ್ಯ, ಗೀತಾ ನಾಯ್ಕ ಅವರು ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...