Homeಎಕಾನಮಿಒಕ್ಕೂಟ ಬಜೆಟ್ 2023-24: ‘ಕಡಿತ-ಬಡಿತ’ಗಳ ಬಜೆಟ್ - ಟಿ. ಆರ್. ಚಂದ್ರಶೇಖರ

ಒಕ್ಕೂಟ ಬಜೆಟ್ 2023-24: ‘ಕಡಿತ-ಬಡಿತ’ಗಳ ಬಜೆಟ್ – ಟಿ. ಆರ್. ಚಂದ್ರಶೇಖರ

ಗ್ರಾಮೀಣ ಬಡವರ ಪಾಲಿನ ಅಮೃತವಾಗಿರುವ ಮನ್‌ರೇಗಾಕ್ಕೆ 2021-22ರಲ್ಲಿ ಇದ್ದ ಅನುದಾನ ರೂ.98,467 ಕೋಟಿ ಈಗ 2023-24ರಲ್ಲಿ ರೂ. 60,000 ಕೋಟಿಗೆ ತಗ್ಗಿಸಲಾಗಿದೆ.

- Advertisement -
- Advertisement -

ನಮ್ಮ ವಿತ್ತ ಮಂತ್ರಿ ರೂ.45.03 ಲಕ್ಷ ಕೋಟಿಯ 2023-24ನೆಯ ಸಾಲಿನ ಬಜೆಟ್ ಮಂಡಿಸಿದ್ದಾರೆ. ಇದರಲ್ಲಿ ರೈತರಿಗೆ, ಕಾರ್ಮಿಕರಿಗೆ, ಮಹಿಳೆಯರಿಗೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ವೆಚ್ಚಗಳನ್ನು ಕಡಿತ ಮಾಡಲಾಗಿದೆ. ಕಾರ್ಪೋರೇಟ್ ತೆರಿಗೆ ಭಾರ ಕಡಿಮೆಯಾಗುತ್ತಿರುವುದರಿಂದ ಉಳ್ಳವರ ಹಿತಾಸಕ್ತಿಯ ರಕ್ಷಣೆಯಾಗಿದೆ. ಅಪ್ರತ್ಯಕ್ಷ ತೆರಿಗೆ ಜಿಎಸ್‌ಟಿ ಭಾರ ಅಧಿಕವಾಗುತ್ತಿರುವುರಿಂದ ಉಳಿದವರ ಬಾಳು ಗೋಳಾಗುತ್ತಿದೆ.

ರಸಗೊಬ್ಬರ ಮತ್ತು ಆಹಾರ ಸಬ್ಸಿಡಿಯು 2022-23ನೆಯ ಸಾಲಿನಲ್ಲಿ ರೂ.5.12 ಲಕ್ಷ ಕೋಟಿಯಿತ್ತು. ಇದನ್ನು 2023-24ನೆಯ ಸಾಲಿನಲ್ಲಿ ರೂ.3.72 ಲಕ್ಷ ಕೋಟಿಗಿಳಿಸಲಾಗಿದೆ (- ಶೇ.27.34). ಭಾರತೀಯ ಆಹಾರ ಕಾರ್ಪೋರೇಶನ್ನಿಗೆ ನೀಡುತ್ತಿದ್ದ ಸಬ್ಸಿಡಿಯನ್ನು 2022-23ನೆಯ ಸಾಲಿನ ರೂ.2.86 ಲಕ್ಷ ಕೋಟಿಯಿಂದ 23-24ನೆಯ ಸಾಲಿನಲ್ಲಿ ರೂ.1.96 ಲಕ್ಷ ಕೋಟಿಗಿಳಿಸಲಾಗಿದೆ (- ಶೇ.31.47) ಪ್ರಧಾನಮಂತ್ರಿ ಕಿಸಾನ್ ಸಿಂಚನ ನಿಧಿಗೆ 2021-22ರಲ್ಲಿ ರೂ. 66825 ಕೋಟಿ ಅನುದಾನವಿತ್ತು. ಈ ವರ್ಷ ಇದನ್ನು ರೂ.60000 ಕೋಟಿಗೆ ಇಳಿಸಲಾಗಿದೆ.

ತೆರಿಗೆ ಬಾರ ಉಳ್ಳವರಿಗೆ ಕಡಿಮೆಯಾಗುತ್ತಿದ್ದರೆ ಉಳಿದವರಿಗೆ ಅಧಿಕವಾಗುತ್ತಿದೆ

ಕಾರ್ಪೋರೇಟ್ ತೆರಿಗೆಯು 2021-22 ಮತ್ತು 2022-23ರ ನಡುವೆ ಜಿಡಿಪಿಯ ಶೇ. 3.06 ರಷ್ಟಿದ್ದುದು 2023-24ರಲ್ಲಿಯೂ ಸ್ಥಿರವಾಗಿದೆ. ಆದರೆ ಜಿಎಸ್‌ಟಿಯು 2021-22ರಲ್ಲಿ ಜಿಡಿಪಿಯ ಶೇ. 3.00ರಷ್ಟಿದ್ದುದು 2022-23ರಲ್ಲಿ ಜಿಡಿಪಿಯ ಶೇ. 3.12 ರಷ್ಟಾಗಿತ್ತು. ಮತ್ತೆ 2023-24ರಲ್ಲಿ ಇದು ಜಿಡಿಪಿಯ ಶೇ. 3.16ರಷ್ಟಾಗಿದೆ. ಕಾರ್ಪೋರೇಟ್ ತೆರಿಗೆ ರಾಶಿಯ ಬೆಳವಣಿಗೆ 2021-24ರ ನಡುವೆ ಶೇ.29.49 ರಷ್ಟಿದ್ದರೆ ಜಿಎಸ್‌ಟಿಯ ಬೆಳವಣಿಗೆಯು ಇದೇ ಅವಧಿಯಲ್ಲಿ ಶೇ.36.96 ರಷ್ಟಾಗಿದೆ.

ನರೇಗಾಕ್ಕೆ ಅನುದಾನ ಕಡಿತ

ಗ್ರಾಮೀಣ ಬಡವರ ಪಾಲಿನ ಅಮೃತವಾಗಿರುವ ಮನ್‌ರೇಗಾಕ್ಕೆ 2021-22ರಲ್ಲಿ ಅನುದಾನ ರೂ.98467 ಕೋಟಿಯಿದ್ದುದನ್ನು 2022-23ರಲ್ಲಿ ರೂ. 89400 ಕೋಟಿಗೆ ಮತ್ತು 2023-24ರಲ್ಲಿ ರೂ. 60000 ಕೋಟಿಗೆ ತಗ್ಗಿಸಲಾಗಿದೆ.

ಬಜೆಟ್ ಗಾತ್ರ

ಬಜೆಟ್ಟಿನ ಒಟ್ಟು ಗಾತ್ರವು 2021-22ರಲ್ಲಿ ಜಿಡಿಪಿಯ (ರೂ.232.14 ಲಕ್ಷ ಕೋಟಿ) ಶೇ.16.33 ರಷ್ಟಿತ್ತು. ಇದು 2022-23ರಲ್ಲಿ ಜಿಡಿಪಿಯ(ರೂ.273.07 ಲಕ್ಷ ಕೋಟಿ) ಶೇ.15.33 ಕ್ಕಿಳಿದು ಮತ್ತು 2023-24ರಲ್ಲಿ ಜಿಡಿಪಿಯ(ರೂ.301.75 ಲಕ್ಷ ಕೋಟಿ) ಶೇ.14.18ಕ್ಕಿಳಿದಿದೆ.

ಸಾಲದ ಮೇಲಿನ ಬಡ್ಡಿಯಲ್ಲಿ ಹೆಚ್ಚಳ

ಆರ್ಥಿಕತೆಯ ಸಾಲದ ಮೇಲಿನ ವಾರ್ಷಿಕ ಬಡ್ಡಿ ಪಾವತಿಯು ಒಕ್ಕೂಟದ 2021-22ನೆಯ ಸಾಲಿನ ಒಟ್ಟು ತೆರಿಗೆ ರಾಶಿಯಲ್ಲಿ(ರೂ. 21.69 ಲಕ್ಷ ಕೋಟಿ) ಶೇ.37.11 ರಷ್ಟಿದ್ದುದು 2023-24 ರಲ್ಲಿ ತೆರಿಗೆ ರಾಶಿಯ(ರೂ.26.32 ಲಕ್ಷ ಕೋಟಿ)ಯ ಶೇ.40.99ರಷ್ಟಾಗಿದೆ. ಆದ್ದರಿಂದ 2023-24ರ ಬಜೆಟ್ಟು ರೈತರು, ಕಾರ್ಮಿಕರು, ಕೂಲಿಕಾರರು, ಮಹಿಳೆಯರ ಪಾಲಿಗೆ ‘ಕಡಿತ-ಬಡಿತ’ಗಳ ಬಜೆಟ್ಟಾಗಿದೆ.

  • ಟಿ. ಆರ್. ಚಂದ್ರಶೇಖರ

(ಅಭಿವೃದ್ಧಿ ಅರ್ಥಶಾಸ್ತ್ರದ ಪ್ರಾಧ್ಯಾಪಕರಾಗಿ ಹಂಪಿ ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿರುವ ಚಂದ್ರಶೇಖರ್ ಅವರು ಅರ್ಥಶಾಸ್ತ್ರದ ವಿಷಯದಲ್ಲಿ ಹಲವು ಪುಸ್ತಕಗಳನ್ನು ರಚಿಸಿದ್ದಾರೆ. ಇತಿಹಾಸ – ಸಂಸ್ಕೃತಿಗಳ ಬಗ್ಗೆಯೂ ತಮ್ಮ ಚಿಂತನೆಗಳನ್ನು ಪ್ರಸ್ತುತಪಡಿಸುವ ಪ್ರೊ. ಟಿ.ಆರ್.ಸಿ ಅವರು ಇತ್ತೀಚೆಗೆ ‘ಭಾರತದಲ್ಲಿ ಮೀಸಲಾತಿ ಇತಿಹಾಸ ಮತ್ತು ಮಿಲ್ಲರ್ ಸಮಿತಿ ವರದಿ – ಒಂದು ಅಧ್ಯಯನ’ ಎಂಬ ಪುಸ್ತಕವನ್ನು ರಚಿಸಿದ್ದಾರೆ.)

ಇದನ್ನೂ ಓದಿ: ಇದೊಂದು ಕಾರ್ಪೊರೇಟ್‌ ಪರ ಬಜೆಟ್‌: ಆರ್ಥಿಕ ವಿಶ್ಲೇಷಕರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...