Homeಎಕಾನಮಿಒಕ್ಕೂಟ ಬಜೆಟ್ 2023-24: ‘ಕಡಿತ-ಬಡಿತ’ಗಳ ಬಜೆಟ್ - ಟಿ. ಆರ್. ಚಂದ್ರಶೇಖರ

ಒಕ್ಕೂಟ ಬಜೆಟ್ 2023-24: ‘ಕಡಿತ-ಬಡಿತ’ಗಳ ಬಜೆಟ್ – ಟಿ. ಆರ್. ಚಂದ್ರಶೇಖರ

ಗ್ರಾಮೀಣ ಬಡವರ ಪಾಲಿನ ಅಮೃತವಾಗಿರುವ ಮನ್‌ರೇಗಾಕ್ಕೆ 2021-22ರಲ್ಲಿ ಇದ್ದ ಅನುದಾನ ರೂ.98,467 ಕೋಟಿ ಈಗ 2023-24ರಲ್ಲಿ ರೂ. 60,000 ಕೋಟಿಗೆ ತಗ್ಗಿಸಲಾಗಿದೆ.

- Advertisement -
- Advertisement -

ನಮ್ಮ ವಿತ್ತ ಮಂತ್ರಿ ರೂ.45.03 ಲಕ್ಷ ಕೋಟಿಯ 2023-24ನೆಯ ಸಾಲಿನ ಬಜೆಟ್ ಮಂಡಿಸಿದ್ದಾರೆ. ಇದರಲ್ಲಿ ರೈತರಿಗೆ, ಕಾರ್ಮಿಕರಿಗೆ, ಮಹಿಳೆಯರಿಗೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ವೆಚ್ಚಗಳನ್ನು ಕಡಿತ ಮಾಡಲಾಗಿದೆ. ಕಾರ್ಪೋರೇಟ್ ತೆರಿಗೆ ಭಾರ ಕಡಿಮೆಯಾಗುತ್ತಿರುವುದರಿಂದ ಉಳ್ಳವರ ಹಿತಾಸಕ್ತಿಯ ರಕ್ಷಣೆಯಾಗಿದೆ. ಅಪ್ರತ್ಯಕ್ಷ ತೆರಿಗೆ ಜಿಎಸ್‌ಟಿ ಭಾರ ಅಧಿಕವಾಗುತ್ತಿರುವುರಿಂದ ಉಳಿದವರ ಬಾಳು ಗೋಳಾಗುತ್ತಿದೆ.

ರಸಗೊಬ್ಬರ ಮತ್ತು ಆಹಾರ ಸಬ್ಸಿಡಿಯು 2022-23ನೆಯ ಸಾಲಿನಲ್ಲಿ ರೂ.5.12 ಲಕ್ಷ ಕೋಟಿಯಿತ್ತು. ಇದನ್ನು 2023-24ನೆಯ ಸಾಲಿನಲ್ಲಿ ರೂ.3.72 ಲಕ್ಷ ಕೋಟಿಗಿಳಿಸಲಾಗಿದೆ (- ಶೇ.27.34). ಭಾರತೀಯ ಆಹಾರ ಕಾರ್ಪೋರೇಶನ್ನಿಗೆ ನೀಡುತ್ತಿದ್ದ ಸಬ್ಸಿಡಿಯನ್ನು 2022-23ನೆಯ ಸಾಲಿನ ರೂ.2.86 ಲಕ್ಷ ಕೋಟಿಯಿಂದ 23-24ನೆಯ ಸಾಲಿನಲ್ಲಿ ರೂ.1.96 ಲಕ್ಷ ಕೋಟಿಗಿಳಿಸಲಾಗಿದೆ (- ಶೇ.31.47) ಪ್ರಧಾನಮಂತ್ರಿ ಕಿಸಾನ್ ಸಿಂಚನ ನಿಧಿಗೆ 2021-22ರಲ್ಲಿ ರೂ. 66825 ಕೋಟಿ ಅನುದಾನವಿತ್ತು. ಈ ವರ್ಷ ಇದನ್ನು ರೂ.60000 ಕೋಟಿಗೆ ಇಳಿಸಲಾಗಿದೆ.

ತೆರಿಗೆ ಬಾರ ಉಳ್ಳವರಿಗೆ ಕಡಿಮೆಯಾಗುತ್ತಿದ್ದರೆ ಉಳಿದವರಿಗೆ ಅಧಿಕವಾಗುತ್ತಿದೆ

ಕಾರ್ಪೋರೇಟ್ ತೆರಿಗೆಯು 2021-22 ಮತ್ತು 2022-23ರ ನಡುವೆ ಜಿಡಿಪಿಯ ಶೇ. 3.06 ರಷ್ಟಿದ್ದುದು 2023-24ರಲ್ಲಿಯೂ ಸ್ಥಿರವಾಗಿದೆ. ಆದರೆ ಜಿಎಸ್‌ಟಿಯು 2021-22ರಲ್ಲಿ ಜಿಡಿಪಿಯ ಶೇ. 3.00ರಷ್ಟಿದ್ದುದು 2022-23ರಲ್ಲಿ ಜಿಡಿಪಿಯ ಶೇ. 3.12 ರಷ್ಟಾಗಿತ್ತು. ಮತ್ತೆ 2023-24ರಲ್ಲಿ ಇದು ಜಿಡಿಪಿಯ ಶೇ. 3.16ರಷ್ಟಾಗಿದೆ. ಕಾರ್ಪೋರೇಟ್ ತೆರಿಗೆ ರಾಶಿಯ ಬೆಳವಣಿಗೆ 2021-24ರ ನಡುವೆ ಶೇ.29.49 ರಷ್ಟಿದ್ದರೆ ಜಿಎಸ್‌ಟಿಯ ಬೆಳವಣಿಗೆಯು ಇದೇ ಅವಧಿಯಲ್ಲಿ ಶೇ.36.96 ರಷ್ಟಾಗಿದೆ.

ನರೇಗಾಕ್ಕೆ ಅನುದಾನ ಕಡಿತ

ಗ್ರಾಮೀಣ ಬಡವರ ಪಾಲಿನ ಅಮೃತವಾಗಿರುವ ಮನ್‌ರೇಗಾಕ್ಕೆ 2021-22ರಲ್ಲಿ ಅನುದಾನ ರೂ.98467 ಕೋಟಿಯಿದ್ದುದನ್ನು 2022-23ರಲ್ಲಿ ರೂ. 89400 ಕೋಟಿಗೆ ಮತ್ತು 2023-24ರಲ್ಲಿ ರೂ. 60000 ಕೋಟಿಗೆ ತಗ್ಗಿಸಲಾಗಿದೆ.

ಬಜೆಟ್ ಗಾತ್ರ

ಬಜೆಟ್ಟಿನ ಒಟ್ಟು ಗಾತ್ರವು 2021-22ರಲ್ಲಿ ಜಿಡಿಪಿಯ (ರೂ.232.14 ಲಕ್ಷ ಕೋಟಿ) ಶೇ.16.33 ರಷ್ಟಿತ್ತು. ಇದು 2022-23ರಲ್ಲಿ ಜಿಡಿಪಿಯ(ರೂ.273.07 ಲಕ್ಷ ಕೋಟಿ) ಶೇ.15.33 ಕ್ಕಿಳಿದು ಮತ್ತು 2023-24ರಲ್ಲಿ ಜಿಡಿಪಿಯ(ರೂ.301.75 ಲಕ್ಷ ಕೋಟಿ) ಶೇ.14.18ಕ್ಕಿಳಿದಿದೆ.

ಸಾಲದ ಮೇಲಿನ ಬಡ್ಡಿಯಲ್ಲಿ ಹೆಚ್ಚಳ

ಆರ್ಥಿಕತೆಯ ಸಾಲದ ಮೇಲಿನ ವಾರ್ಷಿಕ ಬಡ್ಡಿ ಪಾವತಿಯು ಒಕ್ಕೂಟದ 2021-22ನೆಯ ಸಾಲಿನ ಒಟ್ಟು ತೆರಿಗೆ ರಾಶಿಯಲ್ಲಿ(ರೂ. 21.69 ಲಕ್ಷ ಕೋಟಿ) ಶೇ.37.11 ರಷ್ಟಿದ್ದುದು 2023-24 ರಲ್ಲಿ ತೆರಿಗೆ ರಾಶಿಯ(ರೂ.26.32 ಲಕ್ಷ ಕೋಟಿ)ಯ ಶೇ.40.99ರಷ್ಟಾಗಿದೆ. ಆದ್ದರಿಂದ 2023-24ರ ಬಜೆಟ್ಟು ರೈತರು, ಕಾರ್ಮಿಕರು, ಕೂಲಿಕಾರರು, ಮಹಿಳೆಯರ ಪಾಲಿಗೆ ‘ಕಡಿತ-ಬಡಿತ’ಗಳ ಬಜೆಟ್ಟಾಗಿದೆ.

  • ಟಿ. ಆರ್. ಚಂದ್ರಶೇಖರ

(ಅಭಿವೃದ್ಧಿ ಅರ್ಥಶಾಸ್ತ್ರದ ಪ್ರಾಧ್ಯಾಪಕರಾಗಿ ಹಂಪಿ ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿರುವ ಚಂದ್ರಶೇಖರ್ ಅವರು ಅರ್ಥಶಾಸ್ತ್ರದ ವಿಷಯದಲ್ಲಿ ಹಲವು ಪುಸ್ತಕಗಳನ್ನು ರಚಿಸಿದ್ದಾರೆ. ಇತಿಹಾಸ – ಸಂಸ್ಕೃತಿಗಳ ಬಗ್ಗೆಯೂ ತಮ್ಮ ಚಿಂತನೆಗಳನ್ನು ಪ್ರಸ್ತುತಪಡಿಸುವ ಪ್ರೊ. ಟಿ.ಆರ್.ಸಿ ಅವರು ಇತ್ತೀಚೆಗೆ ‘ಭಾರತದಲ್ಲಿ ಮೀಸಲಾತಿ ಇತಿಹಾಸ ಮತ್ತು ಮಿಲ್ಲರ್ ಸಮಿತಿ ವರದಿ – ಒಂದು ಅಧ್ಯಯನ’ ಎಂಬ ಪುಸ್ತಕವನ್ನು ರಚಿಸಿದ್ದಾರೆ.)

ಇದನ್ನೂ ಓದಿ: ಇದೊಂದು ಕಾರ್ಪೊರೇಟ್‌ ಪರ ಬಜೆಟ್‌: ಆರ್ಥಿಕ ವಿಶ್ಲೇಷಕರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...