Homeಮುಖಪುಟಕಡೆಗೂ ಬಿಡುಗಡೆಗೊಂಡ ಪತ್ರಕರ್ತ ಸಿದ್ದಿಕ್ ಕಪ್ಪನ್: 28 ತಿಂಗಳ ಜೈಲುವಾಸ ಅಂತ್ಯ

ಕಡೆಗೂ ಬಿಡುಗಡೆಗೊಂಡ ಪತ್ರಕರ್ತ ಸಿದ್ದಿಕ್ ಕಪ್ಪನ್: 28 ತಿಂಗಳ ಜೈಲುವಾಸ ಅಂತ್ಯ

- Advertisement -
- Advertisement -

ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣದಲ್ಲಿ 28 ತಿಂಗಳುಗಳಿಂದ ಬಂಧನದಲ್ಲಿದ್ದ ಕೇರಳದ ಪತ್ರಕರ್ತ ಸಿದ್ದಿಕ್ ಕಪ್ಪನ್‌ ಕೊನೆಗೂ ಇಂದು ಲಕ್ನೋ ಜೈಲಿನಿಂದ ಹೊರಬಂದರು.

“28 ತಿಂಗಳ ಸುದೀರ್ಘ ಹೋರಾಟದ ನಂತರ ಬಿಡುಗಡೆಯಾಗಿದ್ದೇನೆ. ಜಾಮೀನು ಸಿಕ್ಕ ನಂತರವೂ ನನ್ನನ್ನು ಜೈಲಿನಲ್ಲಿಟ್ಟಿದ್ದರು. ನಾನು ಜೈಲಿನಲ್ಲಿರುವುದರಿಂದ ಯಾರಿಗೆ ಲಾಭವಾಗಿದೆಯೋ ಗೊತ್ತಿಲ್ಲ. ಈ ಎರಡು ವರ್ಷಗಳು ತುಂಬಾ ಕಠಿಣವಾಗಿದ್ದವು, ಆದರೆ ನಾನು ಎಂದಿಗೂ ಹೆದರಲಿಲ್ಲ. ಮುಂದೆಯೂ ಸರ್ಕಾರದ ಕಠಿಣ ಕಾನೂನುಗಳ ವಿರುದ್ಧ ನನ್ನ ಹೋರಾಟವನ್ನು ಮುಂದುವರಿಸುತ್ತೇನೆ” ಎಂದು ಬಿಡುಗಡೆ ಬಳಿಕ ಕಪ್ಪನ್ ಹೇಳಿದ್ದಾರೆ.

2020 ರ ಸೆಪ್ಟೆಂಬರ್ 14 ರಂದು ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ 19 ವರ್ಷದ ದಲಿತ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ವರದಿ ಮಾಡುವುದಾಕ್ಕಾಗಿ ಕಪ್ಪನ್ ಇತರ ಮೂವರೊಂದಿಗೆ ಕಾರಿನಲ್ಲಿ ಹತ್ರಾಸ್‌ಗೆ ಪ್ರಯಾಣಿಸುತ್ತಿದ್ದಾಗ ಬಂಧನಕ್ಕೊಳಗಾಗಿದ್ದರು. 2020 ರ ಅಕ್ಟೋಬರ್ 5 ರಂದು ಸಿದ್ದೀಕ್ ಕಪ್ಪನ್ ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದರು. ಅಂದಿನಿಂದ ಅವರಿಗೆ ಜಾಮೀನು ನಿರಾಕರಿಸಲಾಗಿತ್ತು.

ಕೇರಳ ಮೂಲದ ಪತ್ರಕರ್ತರಾಗಿರುವ ಸಿದ್ದಿಕ್‌ ಜಾತಿ ಆಧಾರಿತ ಗಲಭೆಯನ್ನು ಪ್ರಾರಂಭಿಸಲು ಮತ್ತು ಕೋಮು ಸೌಹಾರ್ದತೆಯನ್ನು ಸೃಷ್ಟಿಸಲು ಉದ್ದೇಶಿಸಿದ್ದಾರೆ ಎಂದು ಉತ್ತರ ಪ್ರದೇಶದ ಪೊಲೀಸರು ಮೊದಲು ಆರೋಪಿಸಿದ್ದರು. ತರುವಾಯ, ದೇಶದ್ರೋಹದ ಆರೋಪಗಳು ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಯ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಆನಂತರ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಿತ್ತು.

“ಸಿದ್ದಿಕ್ ಕಪ್ಪನ್ ನಿರಪರಾಧಿಯಾಗಿದ್ದು ಅವರು ಸಾಮರಸ್ಯ ಕದಡಲು ಯಾವುದೇ ವೇದಿಕೆಯನ್ನು ಬಳಸಿಲ್ಲ. ಕಪ್ಪನ್‌ ಅವರಿಗೆ ಮರೆಮಾಚಲು ಏನೂ ಇಲ್ಲ. ಅವರು ತಮ್ಮ ಮುಗ್ಧತೆಯನ್ನು ಸಾಬೀತುಪಡಿಸಲು ನಾರ್ಕೋ ವಿಶ್ಲೇಷಣೆ ಅಥವಾ ಬ್ರೈನ್ ಮ್ಯಾಪಿಂಗ್ ಪರೀಕ್ಷೆಗಳಿಗೆ ಒಳಗಾಗಲು ಕೂಡಾ ತಯಾರು” ಎಂದು ನ್ಯಾಯಾಲಯದಲ್ಲಿ ಅವರ ಪರ ವಕೀಲರು ವಾದಿಸಿದ್ದರು.

ಕಪ್ಪನ್ ಮತ್ತು ಇತರರು ಮುಸ್ಲಿಮರು ಎಂಬ ಏಕೈಕ ಕಾರಣಕ್ಕಾಗಿ ಅವರ ಮೇಲೆ ಇಲ್ಲಸಲ್ಲದ ಆರೋಪ ಹೊರಿಸಲಾಗಿದೆ. ಮನಿ ಲಾಂಡರಿಂಗ್ ಪ್ರಕರಣ ದಾಖಲಿಸಲಾಗಿದೆ. ಯಾವುದೇ ಸಾಕ್ಷ್ಯಗಳು ಇಲ್ಲದಿದ್ದರೂ ಸಹ ಅವರನ್ನು ಎರಡು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿಡಲಾಗಿದೆ ಎಂದು ವಕೀಲರು ವಾದಿಸಿದ್ದರು.

ಸೆಪ್ಟಂಬರ್‌ನಲ್ಲಿ ಕಪ್ಪನ ಅವರಿಗೆ ಯುಎಪಿಎ ಪ್ರಕರಣದಲ್ಲಿ ಜಾಮೀನು ನೀಡುವಾಗ, ಪ್ರತಿಯೊಬ್ಬ ವ್ಯಕ್ತಿಗೂ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಯುಯು ಲಲಿತ್‌ರವರ ಹೇಳಿಕೆ ನೀಡಿದ್ದರು.

ಕಪ್ಪನ್ ಬಳಿಯಿಂದ ಏನನ್ನು ವಶಪಡಿಸಿಕೊಂಡಿದ್ದೀರಿ? ಕಾರಿನಲ್ಲಿ ಯಾವುದೇ ಸ್ಫೋಟಕಗಳು ಕಂಡುಬಂದಿಲ್ಲ, ಅವನ ಬಳಿ ಯಾವುದೇ ವಸ್ತುಗಳು ಕಂಡುಬಂದಿಲ್ಲ. ಹಾಗಿದ್ದ ಮೇಲೆ ಸ್ಪೋಟಕಗಳನ್ನು ಎಲ್ಲಿ ಬಳಸಿದರು ಎಂದು ಪ್ರಶ್ನಿಸಿದ ಲಲಿತ್‌ರವರು ಜಾಮೀನು ಮಂಜೂರು ಮಾಡಿದ್ದರು.

ಆನಂತರ ವಿಚಾರಣೆ ಆಲಿಸಿದ ಅಲಹಾಬಾದ್ ಹೈಕೋರ್ಟ್ ಕಪ್ಪನ್ ಮತ್ತು ಇತರ ಇಬ್ಬರೊಂದಿಗೆ ಬಂಧಿಸಲ್ಪಟ್ಟ ಕ್ಯಾಬ್ ಚಾಲಕನಿಗೆ ಇತ್ತೀಚೆಗೆ ಜಾಮೀನು ನೀಡಿತ್ತು.

ಇದನ್ನೂ ಓದಿ; ಒಕ್ಕೂಟ ಬಜೆಟ್ 2023-24: ‘ಕಡಿತ-ಬಡಿತ’ಗಳ ಬಜೆಟ್ – ಟಿ. ಆರ್. ಚಂದ್ರಶೇಖರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...