Homeಮುಖಪುಟಕಡೆಗೂ ಬಿಡುಗಡೆಗೊಂಡ ಪತ್ರಕರ್ತ ಸಿದ್ದಿಕ್ ಕಪ್ಪನ್: 28 ತಿಂಗಳ ಜೈಲುವಾಸ ಅಂತ್ಯ

ಕಡೆಗೂ ಬಿಡುಗಡೆಗೊಂಡ ಪತ್ರಕರ್ತ ಸಿದ್ದಿಕ್ ಕಪ್ಪನ್: 28 ತಿಂಗಳ ಜೈಲುವಾಸ ಅಂತ್ಯ

- Advertisement -
- Advertisement -

ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣದಲ್ಲಿ 28 ತಿಂಗಳುಗಳಿಂದ ಬಂಧನದಲ್ಲಿದ್ದ ಕೇರಳದ ಪತ್ರಕರ್ತ ಸಿದ್ದಿಕ್ ಕಪ್ಪನ್‌ ಕೊನೆಗೂ ಇಂದು ಲಕ್ನೋ ಜೈಲಿನಿಂದ ಹೊರಬಂದರು.

“28 ತಿಂಗಳ ಸುದೀರ್ಘ ಹೋರಾಟದ ನಂತರ ಬಿಡುಗಡೆಯಾಗಿದ್ದೇನೆ. ಜಾಮೀನು ಸಿಕ್ಕ ನಂತರವೂ ನನ್ನನ್ನು ಜೈಲಿನಲ್ಲಿಟ್ಟಿದ್ದರು. ನಾನು ಜೈಲಿನಲ್ಲಿರುವುದರಿಂದ ಯಾರಿಗೆ ಲಾಭವಾಗಿದೆಯೋ ಗೊತ್ತಿಲ್ಲ. ಈ ಎರಡು ವರ್ಷಗಳು ತುಂಬಾ ಕಠಿಣವಾಗಿದ್ದವು, ಆದರೆ ನಾನು ಎಂದಿಗೂ ಹೆದರಲಿಲ್ಲ. ಮುಂದೆಯೂ ಸರ್ಕಾರದ ಕಠಿಣ ಕಾನೂನುಗಳ ವಿರುದ್ಧ ನನ್ನ ಹೋರಾಟವನ್ನು ಮುಂದುವರಿಸುತ್ತೇನೆ” ಎಂದು ಬಿಡುಗಡೆ ಬಳಿಕ ಕಪ್ಪನ್ ಹೇಳಿದ್ದಾರೆ.

2020 ರ ಸೆಪ್ಟೆಂಬರ್ 14 ರಂದು ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ 19 ವರ್ಷದ ದಲಿತ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ವರದಿ ಮಾಡುವುದಾಕ್ಕಾಗಿ ಕಪ್ಪನ್ ಇತರ ಮೂವರೊಂದಿಗೆ ಕಾರಿನಲ್ಲಿ ಹತ್ರಾಸ್‌ಗೆ ಪ್ರಯಾಣಿಸುತ್ತಿದ್ದಾಗ ಬಂಧನಕ್ಕೊಳಗಾಗಿದ್ದರು. 2020 ರ ಅಕ್ಟೋಬರ್ 5 ರಂದು ಸಿದ್ದೀಕ್ ಕಪ್ಪನ್ ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದರು. ಅಂದಿನಿಂದ ಅವರಿಗೆ ಜಾಮೀನು ನಿರಾಕರಿಸಲಾಗಿತ್ತು.

ಕೇರಳ ಮೂಲದ ಪತ್ರಕರ್ತರಾಗಿರುವ ಸಿದ್ದಿಕ್‌ ಜಾತಿ ಆಧಾರಿತ ಗಲಭೆಯನ್ನು ಪ್ರಾರಂಭಿಸಲು ಮತ್ತು ಕೋಮು ಸೌಹಾರ್ದತೆಯನ್ನು ಸೃಷ್ಟಿಸಲು ಉದ್ದೇಶಿಸಿದ್ದಾರೆ ಎಂದು ಉತ್ತರ ಪ್ರದೇಶದ ಪೊಲೀಸರು ಮೊದಲು ಆರೋಪಿಸಿದ್ದರು. ತರುವಾಯ, ದೇಶದ್ರೋಹದ ಆರೋಪಗಳು ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಯ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಆನಂತರ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಿತ್ತು.

“ಸಿದ್ದಿಕ್ ಕಪ್ಪನ್ ನಿರಪರಾಧಿಯಾಗಿದ್ದು ಅವರು ಸಾಮರಸ್ಯ ಕದಡಲು ಯಾವುದೇ ವೇದಿಕೆಯನ್ನು ಬಳಸಿಲ್ಲ. ಕಪ್ಪನ್‌ ಅವರಿಗೆ ಮರೆಮಾಚಲು ಏನೂ ಇಲ್ಲ. ಅವರು ತಮ್ಮ ಮುಗ್ಧತೆಯನ್ನು ಸಾಬೀತುಪಡಿಸಲು ನಾರ್ಕೋ ವಿಶ್ಲೇಷಣೆ ಅಥವಾ ಬ್ರೈನ್ ಮ್ಯಾಪಿಂಗ್ ಪರೀಕ್ಷೆಗಳಿಗೆ ಒಳಗಾಗಲು ಕೂಡಾ ತಯಾರು” ಎಂದು ನ್ಯಾಯಾಲಯದಲ್ಲಿ ಅವರ ಪರ ವಕೀಲರು ವಾದಿಸಿದ್ದರು.

ಕಪ್ಪನ್ ಮತ್ತು ಇತರರು ಮುಸ್ಲಿಮರು ಎಂಬ ಏಕೈಕ ಕಾರಣಕ್ಕಾಗಿ ಅವರ ಮೇಲೆ ಇಲ್ಲಸಲ್ಲದ ಆರೋಪ ಹೊರಿಸಲಾಗಿದೆ. ಮನಿ ಲಾಂಡರಿಂಗ್ ಪ್ರಕರಣ ದಾಖಲಿಸಲಾಗಿದೆ. ಯಾವುದೇ ಸಾಕ್ಷ್ಯಗಳು ಇಲ್ಲದಿದ್ದರೂ ಸಹ ಅವರನ್ನು ಎರಡು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿಡಲಾಗಿದೆ ಎಂದು ವಕೀಲರು ವಾದಿಸಿದ್ದರು.

ಸೆಪ್ಟಂಬರ್‌ನಲ್ಲಿ ಕಪ್ಪನ ಅವರಿಗೆ ಯುಎಪಿಎ ಪ್ರಕರಣದಲ್ಲಿ ಜಾಮೀನು ನೀಡುವಾಗ, ಪ್ರತಿಯೊಬ್ಬ ವ್ಯಕ್ತಿಗೂ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಯುಯು ಲಲಿತ್‌ರವರ ಹೇಳಿಕೆ ನೀಡಿದ್ದರು.

ಕಪ್ಪನ್ ಬಳಿಯಿಂದ ಏನನ್ನು ವಶಪಡಿಸಿಕೊಂಡಿದ್ದೀರಿ? ಕಾರಿನಲ್ಲಿ ಯಾವುದೇ ಸ್ಫೋಟಕಗಳು ಕಂಡುಬಂದಿಲ್ಲ, ಅವನ ಬಳಿ ಯಾವುದೇ ವಸ್ತುಗಳು ಕಂಡುಬಂದಿಲ್ಲ. ಹಾಗಿದ್ದ ಮೇಲೆ ಸ್ಪೋಟಕಗಳನ್ನು ಎಲ್ಲಿ ಬಳಸಿದರು ಎಂದು ಪ್ರಶ್ನಿಸಿದ ಲಲಿತ್‌ರವರು ಜಾಮೀನು ಮಂಜೂರು ಮಾಡಿದ್ದರು.

ಆನಂತರ ವಿಚಾರಣೆ ಆಲಿಸಿದ ಅಲಹಾಬಾದ್ ಹೈಕೋರ್ಟ್ ಕಪ್ಪನ್ ಮತ್ತು ಇತರ ಇಬ್ಬರೊಂದಿಗೆ ಬಂಧಿಸಲ್ಪಟ್ಟ ಕ್ಯಾಬ್ ಚಾಲಕನಿಗೆ ಇತ್ತೀಚೆಗೆ ಜಾಮೀನು ನೀಡಿತ್ತು.

ಇದನ್ನೂ ಓದಿ; ಒಕ್ಕೂಟ ಬಜೆಟ್ 2023-24: ‘ಕಡಿತ-ಬಡಿತ’ಗಳ ಬಜೆಟ್ – ಟಿ. ಆರ್. ಚಂದ್ರಶೇಖರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...