Homeಮುಖಪುಟಬಹುಸಂಖ್ಯಾತ ಭಾರತೀಯರಿಗೆ ಬಗೆದ ದ್ರೋಹ: ಬಜೆಟ್ ಕುರಿತು ಪಿ. ಚಿದಂಬರಂ ಪ್ರತಿಕ್ರಿಯೆ

ಬಹುಸಂಖ್ಯಾತ ಭಾರತೀಯರಿಗೆ ಬಗೆದ ದ್ರೋಹ: ಬಜೆಟ್ ಕುರಿತು ಪಿ. ಚಿದಂಬರಂ ಪ್ರತಿಕ್ರಿಯೆ

- Advertisement -
- Advertisement -

ವಿತ್ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ 2023-24ರ ಕೇಂದ್ರ ಬಜೆಟ್ ಅನ್ನು ಮಂಡಿಸಿದರು. ಇದು “ಜಡ್ಡುಗಟ್ಟಿದ” ಮತ್ತು ಬಹುಸಂಖ್ಯಾತ ಭಾರತೀಯರ ಆಶಯಗಳಿಗೆ ದ್ರೋಹ ಬಗೆಯುವ ಬಜೆಟ್ ಆಗಿದೆ ಎಂದು ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಹೇಳಿದ್ದಾರೆ.

”ಬಜೆಟ್ ಬಗ್ಗೆ ನಮ್ಮ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಟ್ವಿಟ್ ಮಾಡಿದ್ದಾರೆ ನೋಡಿ, ”ಬಜೆಟ್ ಘೋಷಣೆಗಳಲ್ಲಿ ದೊಡ್ಡದಾಗಿದೆ ಮತ್ತು ವಿತರಣೆಯಲ್ಲಿ ಚಿಕ್ಕದಾಗಿದೆ” ಎಂದು ಹೇಳಿದ್ದಾರೆ ಮತ್ತು ಬಿಜೆಪಿ ಸರ್ಕಾರವು ಸಾಮಾನ್ಯ ಜನರ ಜೀವನವನ್ನು ಕಷ್ಟಕರವಾಗಿಸಿದೆ ಎಂದು ಅವರು ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರದ ಅಮೃತ್ ಕಾಲದ ಥೀಮ್‌ನ್ನು ಮಿತ್ರ ಕಾಲ [ಸ್ನೇಹಿತರ ಯುಗ] ಬಜೆಟ್ ಎಂದು ಪಕ್ಷದ ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ ಕರೆದರು, ಅದು ಭಾರತದ ಭವಿಷ್ಯವನ್ನು ನಿರ್ಮಿಸುವ ಮಾರ್ಗಸೂಚಿಯನ್ನು ಹೊಂದಿಲ್ಲ ಎಂದು ಅವರು ಹೇಳಿದ್ದಾರೆ.

ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಚಿದಂಬರಂ, ”ಸರ್ಕಾರವು ಜನರಿಂದ ಎಷ್ಟು ದೂರದಲ್ಲಿದೆ ಮತ್ತು ಜೀವನ, ಜೀವನೋಪಾಯ ಮತ್ತು ಶ್ರೀಮಂತ-ಬಡವರ ನಡುವಿನ ಅಸಮಾನತೆಯ ಬಗ್ಗೆ ಅವರ ಕಾಳಜಿಯನ್ನು ಈ ಬಜೆಟ್ ತೋರಿಸುತ್ತದೆ” ಎಂದು ಹೇಳಿದರು.

ಹೊಸ ತೆರಿಗೆ ಪದ್ಧತಿಯನ್ನು ಆಯ್ಕೆ ಮಾಡುವ ಕಡಿಮೆ ಸಂಖ್ಯೆಯ ಜನರನ್ನು ಹೊರತುಪಡಿಸಿ ಯಾವುದೇ ತೆರಿಗೆಯನ್ನು ಬಜೆಟ್‌ನಲ್ಲಿ ಕಡಿಮೆ ಮಾಡಲಾಗಿಲ್ಲ ಎಂದು ಅವರು ಪ್ರತಿಪಾದಿಸಿದರು. ಹೊಸ ತೆರಿಗೆ ಪದ್ಧತಿಯನ್ನು ಡೀಫಾಲ್ಟ್ ಆಯ್ಕೆಯನ್ನಾಗಿ ಮಾಡುವ ಮೂಲಕ, ಸರ್ಕಾರವು ”ಸಾಮಾನ್ಯ ತೆರಿಗೆ ಪಾವತಿದಾರನಿಗೆ ಹಳೆಯ ತೆರಿಗೆ ಪದ್ಧತಿಯಡಿಯಲ್ಲಿ ಸಿಗಬಹುದಾದ ಅತ್ಯಲ್ಪ ಸಾಮಾಜಿಕ ಭದ್ರತೆಯನ್ನು ದೋಚಲು ಬಯಸುತ್ತದೆ” ಎಂದು ಹೇಳಿದರು.

ಇದನ್ನೂ ಓದಿ: ಇದೊಂದು ಕಾರ್ಪೊರೇಟ್‌ ಪರ ಬಜೆಟ್‌: ಆರ್ಥಿಕ ವಿಶ್ಲೇಷಕರು ಹೇಳುವುದೇನು?

ತೆರಿಗೆ ವಿನಾಯಿತಿಗಳನ್ನು ರದ್ದುಗೊಳಿಸಬೇಕು ಎಂಬುದು ಸರ್ಕಾರದ ಅಂತಿಮ ಗುರಿಯಾಗಿದೆ. ತೆರಿಗೆ ವಿನಾಯಿತಿಗಳು ಇಂದು ಮಧ್ಯಮ ವರ್ಗದವರಿಗೆ ಸ್ವಲ್ಪ ಸಾಮಾಜಿಕ ಭದ್ರತೆಯನ್ನು ನೀಡುತ್ತವೆ. ತೆರಿಗೆ ವಿನಾಯಿತಿಗಳನ್ನು ರದ್ದುಗೊಳಿಸಿದರೆ, ತೆರಿಗೆ ಪಾವತಿದಾರರು ಕೆಲವು ಸಾಮಾಜಿಕ ಭದ್ರತೆಯನ್ನು ಪಡೆಯುವ ಮತ್ತೊಂದು ಕಾರ್ಯವಿಧಾನ ಇರಬೇಕು” ಎಂದು ಶ್ರೀ ಚಿದಂಬರಂ ಹೇಳಿದರು.

”ಈ ಬಜೆಟ್‌ನಿಂದ ಯಾರಿಗೆ ಲಾಭ? ಖಂಡಿತವಾಗಿಯೂ ಬಡವರಿಗಲ್ಲ. ಯುವಕರು ಉದ್ಯೋಗಕ್ಕಾಗಿ ಹತಾಶರಾಗಿದ್ದಾರೆ ಅವರನ್ನೂ ನೋಡುತ್ತಿಲ್ಲ. ಉದ್ಯೋಗ ಕಳೆದುಕೊಂಡವರನ್ನೂ ನೋಡುತ್ತಿಲ್ಲ. ಬಹುಪಾಲು ತೆರಿಗೆದಾರರನ್ನಲ್ಲ, ಗೃಹಿಣಿಯರನ್ನೂ ನೋಡುತ್ತಿಲ್ಲ. ಹೆಚ್ಚುತ್ತಿರುವ ಅಸಮಾನತೆ, ಶತಕೋಟ್ಯಾಧಿಪತಿಗಳ ಆಸ್ತಿಯ ಹೆಚ್ಚಳ ಮತ್ತು ಜನಸಂಖ್ಯೆಯ 1% ಜನರ ಕೈಯಲ್ಲಿ ಸಂಗ್ರಹವಾಗುತ್ತಿರುವ ಸಂಪತ್ತಿನಿಂದ ಆಘಾತಕ್ಕೊಳಗಾಗಿರುವ ಭಾರತೀಯರ ಬಗ್ಗೆ ಇವರಿಗೆ ಚಿಂತೆ ಇಲ್ಲ” ಎಂದು ಮಾಜಿ ಹಣಕಾಸು ಸಚಿವ ಹೇಳಿದರು.

ಪರೋಕ್ಷ ತೆರಿಗೆಗಳನ್ನು ಕಡಿಮೆ ಮಾಡಿಲ್ಲ ಅಥವಾ ಸರಕು ಮತ್ತು ಸೇವಾ ತೆರಿಗೆಯಲ್ಲಿ (ಜಿಎಸ್‌ಟಿ) ಯಾವುದೇ ಕಡಿತ ಮಾಡಿಲ್ಲ. ಪೆಟ್ರೋಲ್, ಡೀಸೆಲ್, ಸಿಮೆಂಟ್, ರಸಗೊಬ್ಬರಗಳ ಬೆಲೆಯಲ್ಲಿ ಯಾವುದೇ ಇಳಿಕೆಯಾಗಿಲ್ಲ ಮತ್ತು ರಾಜ್ಯ ಸರ್ಕಾರಗಳೊಂದಿಗೆ ಹಂಚಿಕೊಳ್ಳದ ಹಲವಾರು ಹೆಚ್ಚುವರಿ ಶುಲ್ಕಗಳು ಮತ್ತು ಸೆಸ್‌ಗಳು ಸಹ ಅಸ್ತಿತ್ವದಲ್ಲಿವೆ ಎಂದು ಹಿರಿಯ ಕಾಂಗ್ರೆಸ್ ನಾಯಕ ತಿಳಿಸಿದರು.

ಆರ್ಥಿಕ ಸಮೀಕ್ಷೆಯು, ಜಗತ್ತು ಎದುರಿಸಲಿರುವ ಎಲ್ಲಾ ಸಮಸ್ಯೆಗಳ ಪಟ್ಟಿ ಮಾಡಿದ್ದರೂ, ಬಜೆಟ್‌ ಮೂಲಕ ಯಾವುದೇ ಪರಿಹಾರವನ್ನು ನೀಡಲಿಲ್ಲ. “ಬಜೆಟ್ ಭಾಷಣವು ಆರ್ಥಿಕ ಸಮಸ್ಯೆಗಳನ್ನು ಸಹ ಗುರುತಿಸಲಿಲ್ಲ, ಈ ಸರ್ಕಾರವು ತನ್ನದೇಯಾದ ಕಾಲ್ಪನಿಕ ಜಗತ್ತಿನಲ್ಲಿ ವಾಸಿಸುತ್ತಿದೆ” ಎಂದು ಅವರು ಹೇಳಿದರು.

ವಿಶ್ವಾದ್ಯಂತ ಅಂಗಿಕರಿಸಲಾದ ಮೂರು ಕಟುವಾದ ಸಂಗತಿಗಳನ್ನು ಗಮನಿಸಬೇಕು, 1) ಜಾಗತಿಕ ವ್ಯಾಪಾರ ಮತ್ತು ಬೆಳವಣಿಗೆಯು 2023 ರಲ್ಲಿ ಗಮನಾರ್ಹವಾಗಿ ನಿಧಾನಗೊಳ್ಳುತ್ತದೆ. 2) ಅನೇಕ ಮುಂದುವರಿದ ರಾಷ್ಟ್ರಗಳು ಆರ್ಥಿಕ ಹಿಂಜರಿತಕ್ಕೆ ಹೋಗುತ್ತವೆ. 3) ಉಕ್ರೇನ್ ಯುದ್ಧ ಮತ್ತು ಇತರ ಬ್ರೂಯಿಂಗ್ ಘರ್ಷಣೆಗಳೊಂದಿಗೆ, ಜಾಗತಿಕ ಭದ್ರತಾ ಪರಿಸ್ಥಿತಿಯು ಹದಗೆಡುತ್ತದೆ ಎಂದು ಮಾಜಿ ಹಣಕಾಸು ಸಚಿವರು ನೆನಪಿಸಿದರು.

”ಈ ಮೂರೂ ಸಂಗತಿಗಳು ಕಾರ್ಯರೂಪಕ್ಕೆ ಬಂದರೆ, ಸರ್ಕಾರ ಏನು ಮಾಡುತ್ತದೆ? ಹಣದುಬ್ಬರ ಮತ್ತು ನಿರುದ್ಯೋಗದಿಂದ ಬಳಲುತ್ತಿರುವ ಜನರ ಮೇಲೆ ಅದು ಯಾವ ರೀತಿಯ ಹೊರೆಗಳನ್ನು ಹಾಕುತ್ತದೆ? ಆರ್ಥಿಕ ಸಮೀಕ್ಷೆಯಲ್ಲಿ ಅಥವಾ ಬಜೆಟ್ ಭಾಷಣದಲ್ಲಿ ಯಾವುದೇ ಉತ್ತರಗಳನ್ನು ನೀಡಲಾಗಿಲ್ಲ” ಎಂದು ಚಿದಂಬರಂ ಹೇಳಿದರು.

ಬಜೆಟ್ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದು, ”ಕಳೆದ ವರ್ಷದ ಬಜೆಟ್ ಕೃಷಿ, ಆರೋಗ್ಯ, ಶಿಕ್ಷಣ, ಎಂಜಿಎನ್‌ಆರ್‌ಇಜಿಎ ಮತ್ತು ಎಸ್‌ಸಿಗಳ ಕಲ್ಯಾಣಕ್ಕೆ ಮೀಸಲಿಡಲು ಮೆಚ್ಚುಗೆಯನ್ನು ಗಳಿಸಿತು. ಆದರೆ ಇಂದು ವಾಸ್ತವ ಸ್ಪಷ್ಟವಾಗಿದೆ. ವಾಸ್ತವಿಕ ವೆಚ್ಚವು ಬಜೆಟ್‌ಗಿಂತ ಗಣನೀಯವಾಗಿ ಕಡಿಮೆಯಾಗಿದೆ. ಓವರ್ ಪ್ರಾಮಿಸ್, ಅಂಡರ್ ಡೆಲಿವರ್- ಇದು ಮೋದಿಯವರ ಒಪಿಯುಡಿ ಕಾರ್ಯತಂತ್ರದ ಮುಖ್ಯಾಂಶವಾಗಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...