Homeಮುಖಪುಟಬಹುಸಂಖ್ಯಾತ ಭಾರತೀಯರಿಗೆ ಬಗೆದ ದ್ರೋಹ: ಬಜೆಟ್ ಕುರಿತು ಪಿ. ಚಿದಂಬರಂ ಪ್ರತಿಕ್ರಿಯೆ

ಬಹುಸಂಖ್ಯಾತ ಭಾರತೀಯರಿಗೆ ಬಗೆದ ದ್ರೋಹ: ಬಜೆಟ್ ಕುರಿತು ಪಿ. ಚಿದಂಬರಂ ಪ್ರತಿಕ್ರಿಯೆ

- Advertisement -
- Advertisement -

ವಿತ್ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ 2023-24ರ ಕೇಂದ್ರ ಬಜೆಟ್ ಅನ್ನು ಮಂಡಿಸಿದರು. ಇದು “ಜಡ್ಡುಗಟ್ಟಿದ” ಮತ್ತು ಬಹುಸಂಖ್ಯಾತ ಭಾರತೀಯರ ಆಶಯಗಳಿಗೆ ದ್ರೋಹ ಬಗೆಯುವ ಬಜೆಟ್ ಆಗಿದೆ ಎಂದು ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಹೇಳಿದ್ದಾರೆ.

”ಬಜೆಟ್ ಬಗ್ಗೆ ನಮ್ಮ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಟ್ವಿಟ್ ಮಾಡಿದ್ದಾರೆ ನೋಡಿ, ”ಬಜೆಟ್ ಘೋಷಣೆಗಳಲ್ಲಿ ದೊಡ್ಡದಾಗಿದೆ ಮತ್ತು ವಿತರಣೆಯಲ್ಲಿ ಚಿಕ್ಕದಾಗಿದೆ” ಎಂದು ಹೇಳಿದ್ದಾರೆ ಮತ್ತು ಬಿಜೆಪಿ ಸರ್ಕಾರವು ಸಾಮಾನ್ಯ ಜನರ ಜೀವನವನ್ನು ಕಷ್ಟಕರವಾಗಿಸಿದೆ ಎಂದು ಅವರು ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರದ ಅಮೃತ್ ಕಾಲದ ಥೀಮ್‌ನ್ನು ಮಿತ್ರ ಕಾಲ [ಸ್ನೇಹಿತರ ಯುಗ] ಬಜೆಟ್ ಎಂದು ಪಕ್ಷದ ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ ಕರೆದರು, ಅದು ಭಾರತದ ಭವಿಷ್ಯವನ್ನು ನಿರ್ಮಿಸುವ ಮಾರ್ಗಸೂಚಿಯನ್ನು ಹೊಂದಿಲ್ಲ ಎಂದು ಅವರು ಹೇಳಿದ್ದಾರೆ.

ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಚಿದಂಬರಂ, ”ಸರ್ಕಾರವು ಜನರಿಂದ ಎಷ್ಟು ದೂರದಲ್ಲಿದೆ ಮತ್ತು ಜೀವನ, ಜೀವನೋಪಾಯ ಮತ್ತು ಶ್ರೀಮಂತ-ಬಡವರ ನಡುವಿನ ಅಸಮಾನತೆಯ ಬಗ್ಗೆ ಅವರ ಕಾಳಜಿಯನ್ನು ಈ ಬಜೆಟ್ ತೋರಿಸುತ್ತದೆ” ಎಂದು ಹೇಳಿದರು.

ಹೊಸ ತೆರಿಗೆ ಪದ್ಧತಿಯನ್ನು ಆಯ್ಕೆ ಮಾಡುವ ಕಡಿಮೆ ಸಂಖ್ಯೆಯ ಜನರನ್ನು ಹೊರತುಪಡಿಸಿ ಯಾವುದೇ ತೆರಿಗೆಯನ್ನು ಬಜೆಟ್‌ನಲ್ಲಿ ಕಡಿಮೆ ಮಾಡಲಾಗಿಲ್ಲ ಎಂದು ಅವರು ಪ್ರತಿಪಾದಿಸಿದರು. ಹೊಸ ತೆರಿಗೆ ಪದ್ಧತಿಯನ್ನು ಡೀಫಾಲ್ಟ್ ಆಯ್ಕೆಯನ್ನಾಗಿ ಮಾಡುವ ಮೂಲಕ, ಸರ್ಕಾರವು ”ಸಾಮಾನ್ಯ ತೆರಿಗೆ ಪಾವತಿದಾರನಿಗೆ ಹಳೆಯ ತೆರಿಗೆ ಪದ್ಧತಿಯಡಿಯಲ್ಲಿ ಸಿಗಬಹುದಾದ ಅತ್ಯಲ್ಪ ಸಾಮಾಜಿಕ ಭದ್ರತೆಯನ್ನು ದೋಚಲು ಬಯಸುತ್ತದೆ” ಎಂದು ಹೇಳಿದರು.

ಇದನ್ನೂ ಓದಿ: ಇದೊಂದು ಕಾರ್ಪೊರೇಟ್‌ ಪರ ಬಜೆಟ್‌: ಆರ್ಥಿಕ ವಿಶ್ಲೇಷಕರು ಹೇಳುವುದೇನು?

ತೆರಿಗೆ ವಿನಾಯಿತಿಗಳನ್ನು ರದ್ದುಗೊಳಿಸಬೇಕು ಎಂಬುದು ಸರ್ಕಾರದ ಅಂತಿಮ ಗುರಿಯಾಗಿದೆ. ತೆರಿಗೆ ವಿನಾಯಿತಿಗಳು ಇಂದು ಮಧ್ಯಮ ವರ್ಗದವರಿಗೆ ಸ್ವಲ್ಪ ಸಾಮಾಜಿಕ ಭದ್ರತೆಯನ್ನು ನೀಡುತ್ತವೆ. ತೆರಿಗೆ ವಿನಾಯಿತಿಗಳನ್ನು ರದ್ದುಗೊಳಿಸಿದರೆ, ತೆರಿಗೆ ಪಾವತಿದಾರರು ಕೆಲವು ಸಾಮಾಜಿಕ ಭದ್ರತೆಯನ್ನು ಪಡೆಯುವ ಮತ್ತೊಂದು ಕಾರ್ಯವಿಧಾನ ಇರಬೇಕು” ಎಂದು ಶ್ರೀ ಚಿದಂಬರಂ ಹೇಳಿದರು.

”ಈ ಬಜೆಟ್‌ನಿಂದ ಯಾರಿಗೆ ಲಾಭ? ಖಂಡಿತವಾಗಿಯೂ ಬಡವರಿಗಲ್ಲ. ಯುವಕರು ಉದ್ಯೋಗಕ್ಕಾಗಿ ಹತಾಶರಾಗಿದ್ದಾರೆ ಅವರನ್ನೂ ನೋಡುತ್ತಿಲ್ಲ. ಉದ್ಯೋಗ ಕಳೆದುಕೊಂಡವರನ್ನೂ ನೋಡುತ್ತಿಲ್ಲ. ಬಹುಪಾಲು ತೆರಿಗೆದಾರರನ್ನಲ್ಲ, ಗೃಹಿಣಿಯರನ್ನೂ ನೋಡುತ್ತಿಲ್ಲ. ಹೆಚ್ಚುತ್ತಿರುವ ಅಸಮಾನತೆ, ಶತಕೋಟ್ಯಾಧಿಪತಿಗಳ ಆಸ್ತಿಯ ಹೆಚ್ಚಳ ಮತ್ತು ಜನಸಂಖ್ಯೆಯ 1% ಜನರ ಕೈಯಲ್ಲಿ ಸಂಗ್ರಹವಾಗುತ್ತಿರುವ ಸಂಪತ್ತಿನಿಂದ ಆಘಾತಕ್ಕೊಳಗಾಗಿರುವ ಭಾರತೀಯರ ಬಗ್ಗೆ ಇವರಿಗೆ ಚಿಂತೆ ಇಲ್ಲ” ಎಂದು ಮಾಜಿ ಹಣಕಾಸು ಸಚಿವ ಹೇಳಿದರು.

ಪರೋಕ್ಷ ತೆರಿಗೆಗಳನ್ನು ಕಡಿಮೆ ಮಾಡಿಲ್ಲ ಅಥವಾ ಸರಕು ಮತ್ತು ಸೇವಾ ತೆರಿಗೆಯಲ್ಲಿ (ಜಿಎಸ್‌ಟಿ) ಯಾವುದೇ ಕಡಿತ ಮಾಡಿಲ್ಲ. ಪೆಟ್ರೋಲ್, ಡೀಸೆಲ್, ಸಿಮೆಂಟ್, ರಸಗೊಬ್ಬರಗಳ ಬೆಲೆಯಲ್ಲಿ ಯಾವುದೇ ಇಳಿಕೆಯಾಗಿಲ್ಲ ಮತ್ತು ರಾಜ್ಯ ಸರ್ಕಾರಗಳೊಂದಿಗೆ ಹಂಚಿಕೊಳ್ಳದ ಹಲವಾರು ಹೆಚ್ಚುವರಿ ಶುಲ್ಕಗಳು ಮತ್ತು ಸೆಸ್‌ಗಳು ಸಹ ಅಸ್ತಿತ್ವದಲ್ಲಿವೆ ಎಂದು ಹಿರಿಯ ಕಾಂಗ್ರೆಸ್ ನಾಯಕ ತಿಳಿಸಿದರು.

ಆರ್ಥಿಕ ಸಮೀಕ್ಷೆಯು, ಜಗತ್ತು ಎದುರಿಸಲಿರುವ ಎಲ್ಲಾ ಸಮಸ್ಯೆಗಳ ಪಟ್ಟಿ ಮಾಡಿದ್ದರೂ, ಬಜೆಟ್‌ ಮೂಲಕ ಯಾವುದೇ ಪರಿಹಾರವನ್ನು ನೀಡಲಿಲ್ಲ. “ಬಜೆಟ್ ಭಾಷಣವು ಆರ್ಥಿಕ ಸಮಸ್ಯೆಗಳನ್ನು ಸಹ ಗುರುತಿಸಲಿಲ್ಲ, ಈ ಸರ್ಕಾರವು ತನ್ನದೇಯಾದ ಕಾಲ್ಪನಿಕ ಜಗತ್ತಿನಲ್ಲಿ ವಾಸಿಸುತ್ತಿದೆ” ಎಂದು ಅವರು ಹೇಳಿದರು.

ವಿಶ್ವಾದ್ಯಂತ ಅಂಗಿಕರಿಸಲಾದ ಮೂರು ಕಟುವಾದ ಸಂಗತಿಗಳನ್ನು ಗಮನಿಸಬೇಕು, 1) ಜಾಗತಿಕ ವ್ಯಾಪಾರ ಮತ್ತು ಬೆಳವಣಿಗೆಯು 2023 ರಲ್ಲಿ ಗಮನಾರ್ಹವಾಗಿ ನಿಧಾನಗೊಳ್ಳುತ್ತದೆ. 2) ಅನೇಕ ಮುಂದುವರಿದ ರಾಷ್ಟ್ರಗಳು ಆರ್ಥಿಕ ಹಿಂಜರಿತಕ್ಕೆ ಹೋಗುತ್ತವೆ. 3) ಉಕ್ರೇನ್ ಯುದ್ಧ ಮತ್ತು ಇತರ ಬ್ರೂಯಿಂಗ್ ಘರ್ಷಣೆಗಳೊಂದಿಗೆ, ಜಾಗತಿಕ ಭದ್ರತಾ ಪರಿಸ್ಥಿತಿಯು ಹದಗೆಡುತ್ತದೆ ಎಂದು ಮಾಜಿ ಹಣಕಾಸು ಸಚಿವರು ನೆನಪಿಸಿದರು.

”ಈ ಮೂರೂ ಸಂಗತಿಗಳು ಕಾರ್ಯರೂಪಕ್ಕೆ ಬಂದರೆ, ಸರ್ಕಾರ ಏನು ಮಾಡುತ್ತದೆ? ಹಣದುಬ್ಬರ ಮತ್ತು ನಿರುದ್ಯೋಗದಿಂದ ಬಳಲುತ್ತಿರುವ ಜನರ ಮೇಲೆ ಅದು ಯಾವ ರೀತಿಯ ಹೊರೆಗಳನ್ನು ಹಾಕುತ್ತದೆ? ಆರ್ಥಿಕ ಸಮೀಕ್ಷೆಯಲ್ಲಿ ಅಥವಾ ಬಜೆಟ್ ಭಾಷಣದಲ್ಲಿ ಯಾವುದೇ ಉತ್ತರಗಳನ್ನು ನೀಡಲಾಗಿಲ್ಲ” ಎಂದು ಚಿದಂಬರಂ ಹೇಳಿದರು.

ಬಜೆಟ್ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದು, ”ಕಳೆದ ವರ್ಷದ ಬಜೆಟ್ ಕೃಷಿ, ಆರೋಗ್ಯ, ಶಿಕ್ಷಣ, ಎಂಜಿಎನ್‌ಆರ್‌ಇಜಿಎ ಮತ್ತು ಎಸ್‌ಸಿಗಳ ಕಲ್ಯಾಣಕ್ಕೆ ಮೀಸಲಿಡಲು ಮೆಚ್ಚುಗೆಯನ್ನು ಗಳಿಸಿತು. ಆದರೆ ಇಂದು ವಾಸ್ತವ ಸ್ಪಷ್ಟವಾಗಿದೆ. ವಾಸ್ತವಿಕ ವೆಚ್ಚವು ಬಜೆಟ್‌ಗಿಂತ ಗಣನೀಯವಾಗಿ ಕಡಿಮೆಯಾಗಿದೆ. ಓವರ್ ಪ್ರಾಮಿಸ್, ಅಂಡರ್ ಡೆಲಿವರ್- ಇದು ಮೋದಿಯವರ ಒಪಿಯುಡಿ ಕಾರ್ಯತಂತ್ರದ ಮುಖ್ಯಾಂಶವಾಗಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...