Homeಮುಖಪುಟಬಹುಸಂಖ್ಯಾತ ಭಾರತೀಯರಿಗೆ ಬಗೆದ ದ್ರೋಹ: ಬಜೆಟ್ ಕುರಿತು ಪಿ. ಚಿದಂಬರಂ ಪ್ರತಿಕ್ರಿಯೆ

ಬಹುಸಂಖ್ಯಾತ ಭಾರತೀಯರಿಗೆ ಬಗೆದ ದ್ರೋಹ: ಬಜೆಟ್ ಕುರಿತು ಪಿ. ಚಿದಂಬರಂ ಪ್ರತಿಕ್ರಿಯೆ

- Advertisement -
- Advertisement -

ವಿತ್ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ 2023-24ರ ಕೇಂದ್ರ ಬಜೆಟ್ ಅನ್ನು ಮಂಡಿಸಿದರು. ಇದು “ಜಡ್ಡುಗಟ್ಟಿದ” ಮತ್ತು ಬಹುಸಂಖ್ಯಾತ ಭಾರತೀಯರ ಆಶಯಗಳಿಗೆ ದ್ರೋಹ ಬಗೆಯುವ ಬಜೆಟ್ ಆಗಿದೆ ಎಂದು ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಹೇಳಿದ್ದಾರೆ.

”ಬಜೆಟ್ ಬಗ್ಗೆ ನಮ್ಮ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಟ್ವಿಟ್ ಮಾಡಿದ್ದಾರೆ ನೋಡಿ, ”ಬಜೆಟ್ ಘೋಷಣೆಗಳಲ್ಲಿ ದೊಡ್ಡದಾಗಿದೆ ಮತ್ತು ವಿತರಣೆಯಲ್ಲಿ ಚಿಕ್ಕದಾಗಿದೆ” ಎಂದು ಹೇಳಿದ್ದಾರೆ ಮತ್ತು ಬಿಜೆಪಿ ಸರ್ಕಾರವು ಸಾಮಾನ್ಯ ಜನರ ಜೀವನವನ್ನು ಕಷ್ಟಕರವಾಗಿಸಿದೆ ಎಂದು ಅವರು ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರದ ಅಮೃತ್ ಕಾಲದ ಥೀಮ್‌ನ್ನು ಮಿತ್ರ ಕಾಲ [ಸ್ನೇಹಿತರ ಯುಗ] ಬಜೆಟ್ ಎಂದು ಪಕ್ಷದ ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ ಕರೆದರು, ಅದು ಭಾರತದ ಭವಿಷ್ಯವನ್ನು ನಿರ್ಮಿಸುವ ಮಾರ್ಗಸೂಚಿಯನ್ನು ಹೊಂದಿಲ್ಲ ಎಂದು ಅವರು ಹೇಳಿದ್ದಾರೆ.

ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಚಿದಂಬರಂ, ”ಸರ್ಕಾರವು ಜನರಿಂದ ಎಷ್ಟು ದೂರದಲ್ಲಿದೆ ಮತ್ತು ಜೀವನ, ಜೀವನೋಪಾಯ ಮತ್ತು ಶ್ರೀಮಂತ-ಬಡವರ ನಡುವಿನ ಅಸಮಾನತೆಯ ಬಗ್ಗೆ ಅವರ ಕಾಳಜಿಯನ್ನು ಈ ಬಜೆಟ್ ತೋರಿಸುತ್ತದೆ” ಎಂದು ಹೇಳಿದರು.

ಹೊಸ ತೆರಿಗೆ ಪದ್ಧತಿಯನ್ನು ಆಯ್ಕೆ ಮಾಡುವ ಕಡಿಮೆ ಸಂಖ್ಯೆಯ ಜನರನ್ನು ಹೊರತುಪಡಿಸಿ ಯಾವುದೇ ತೆರಿಗೆಯನ್ನು ಬಜೆಟ್‌ನಲ್ಲಿ ಕಡಿಮೆ ಮಾಡಲಾಗಿಲ್ಲ ಎಂದು ಅವರು ಪ್ರತಿಪಾದಿಸಿದರು. ಹೊಸ ತೆರಿಗೆ ಪದ್ಧತಿಯನ್ನು ಡೀಫಾಲ್ಟ್ ಆಯ್ಕೆಯನ್ನಾಗಿ ಮಾಡುವ ಮೂಲಕ, ಸರ್ಕಾರವು ”ಸಾಮಾನ್ಯ ತೆರಿಗೆ ಪಾವತಿದಾರನಿಗೆ ಹಳೆಯ ತೆರಿಗೆ ಪದ್ಧತಿಯಡಿಯಲ್ಲಿ ಸಿಗಬಹುದಾದ ಅತ್ಯಲ್ಪ ಸಾಮಾಜಿಕ ಭದ್ರತೆಯನ್ನು ದೋಚಲು ಬಯಸುತ್ತದೆ” ಎಂದು ಹೇಳಿದರು.

ಇದನ್ನೂ ಓದಿ: ಇದೊಂದು ಕಾರ್ಪೊರೇಟ್‌ ಪರ ಬಜೆಟ್‌: ಆರ್ಥಿಕ ವಿಶ್ಲೇಷಕರು ಹೇಳುವುದೇನು?

ತೆರಿಗೆ ವಿನಾಯಿತಿಗಳನ್ನು ರದ್ದುಗೊಳಿಸಬೇಕು ಎಂಬುದು ಸರ್ಕಾರದ ಅಂತಿಮ ಗುರಿಯಾಗಿದೆ. ತೆರಿಗೆ ವಿನಾಯಿತಿಗಳು ಇಂದು ಮಧ್ಯಮ ವರ್ಗದವರಿಗೆ ಸ್ವಲ್ಪ ಸಾಮಾಜಿಕ ಭದ್ರತೆಯನ್ನು ನೀಡುತ್ತವೆ. ತೆರಿಗೆ ವಿನಾಯಿತಿಗಳನ್ನು ರದ್ದುಗೊಳಿಸಿದರೆ, ತೆರಿಗೆ ಪಾವತಿದಾರರು ಕೆಲವು ಸಾಮಾಜಿಕ ಭದ್ರತೆಯನ್ನು ಪಡೆಯುವ ಮತ್ತೊಂದು ಕಾರ್ಯವಿಧಾನ ಇರಬೇಕು” ಎಂದು ಶ್ರೀ ಚಿದಂಬರಂ ಹೇಳಿದರು.

”ಈ ಬಜೆಟ್‌ನಿಂದ ಯಾರಿಗೆ ಲಾಭ? ಖಂಡಿತವಾಗಿಯೂ ಬಡವರಿಗಲ್ಲ. ಯುವಕರು ಉದ್ಯೋಗಕ್ಕಾಗಿ ಹತಾಶರಾಗಿದ್ದಾರೆ ಅವರನ್ನೂ ನೋಡುತ್ತಿಲ್ಲ. ಉದ್ಯೋಗ ಕಳೆದುಕೊಂಡವರನ್ನೂ ನೋಡುತ್ತಿಲ್ಲ. ಬಹುಪಾಲು ತೆರಿಗೆದಾರರನ್ನಲ್ಲ, ಗೃಹಿಣಿಯರನ್ನೂ ನೋಡುತ್ತಿಲ್ಲ. ಹೆಚ್ಚುತ್ತಿರುವ ಅಸಮಾನತೆ, ಶತಕೋಟ್ಯಾಧಿಪತಿಗಳ ಆಸ್ತಿಯ ಹೆಚ್ಚಳ ಮತ್ತು ಜನಸಂಖ್ಯೆಯ 1% ಜನರ ಕೈಯಲ್ಲಿ ಸಂಗ್ರಹವಾಗುತ್ತಿರುವ ಸಂಪತ್ತಿನಿಂದ ಆಘಾತಕ್ಕೊಳಗಾಗಿರುವ ಭಾರತೀಯರ ಬಗ್ಗೆ ಇವರಿಗೆ ಚಿಂತೆ ಇಲ್ಲ” ಎಂದು ಮಾಜಿ ಹಣಕಾಸು ಸಚಿವ ಹೇಳಿದರು.

ಪರೋಕ್ಷ ತೆರಿಗೆಗಳನ್ನು ಕಡಿಮೆ ಮಾಡಿಲ್ಲ ಅಥವಾ ಸರಕು ಮತ್ತು ಸೇವಾ ತೆರಿಗೆಯಲ್ಲಿ (ಜಿಎಸ್‌ಟಿ) ಯಾವುದೇ ಕಡಿತ ಮಾಡಿಲ್ಲ. ಪೆಟ್ರೋಲ್, ಡೀಸೆಲ್, ಸಿಮೆಂಟ್, ರಸಗೊಬ್ಬರಗಳ ಬೆಲೆಯಲ್ಲಿ ಯಾವುದೇ ಇಳಿಕೆಯಾಗಿಲ್ಲ ಮತ್ತು ರಾಜ್ಯ ಸರ್ಕಾರಗಳೊಂದಿಗೆ ಹಂಚಿಕೊಳ್ಳದ ಹಲವಾರು ಹೆಚ್ಚುವರಿ ಶುಲ್ಕಗಳು ಮತ್ತು ಸೆಸ್‌ಗಳು ಸಹ ಅಸ್ತಿತ್ವದಲ್ಲಿವೆ ಎಂದು ಹಿರಿಯ ಕಾಂಗ್ರೆಸ್ ನಾಯಕ ತಿಳಿಸಿದರು.

ಆರ್ಥಿಕ ಸಮೀಕ್ಷೆಯು, ಜಗತ್ತು ಎದುರಿಸಲಿರುವ ಎಲ್ಲಾ ಸಮಸ್ಯೆಗಳ ಪಟ್ಟಿ ಮಾಡಿದ್ದರೂ, ಬಜೆಟ್‌ ಮೂಲಕ ಯಾವುದೇ ಪರಿಹಾರವನ್ನು ನೀಡಲಿಲ್ಲ. “ಬಜೆಟ್ ಭಾಷಣವು ಆರ್ಥಿಕ ಸಮಸ್ಯೆಗಳನ್ನು ಸಹ ಗುರುತಿಸಲಿಲ್ಲ, ಈ ಸರ್ಕಾರವು ತನ್ನದೇಯಾದ ಕಾಲ್ಪನಿಕ ಜಗತ್ತಿನಲ್ಲಿ ವಾಸಿಸುತ್ತಿದೆ” ಎಂದು ಅವರು ಹೇಳಿದರು.

ವಿಶ್ವಾದ್ಯಂತ ಅಂಗಿಕರಿಸಲಾದ ಮೂರು ಕಟುವಾದ ಸಂಗತಿಗಳನ್ನು ಗಮನಿಸಬೇಕು, 1) ಜಾಗತಿಕ ವ್ಯಾಪಾರ ಮತ್ತು ಬೆಳವಣಿಗೆಯು 2023 ರಲ್ಲಿ ಗಮನಾರ್ಹವಾಗಿ ನಿಧಾನಗೊಳ್ಳುತ್ತದೆ. 2) ಅನೇಕ ಮುಂದುವರಿದ ರಾಷ್ಟ್ರಗಳು ಆರ್ಥಿಕ ಹಿಂಜರಿತಕ್ಕೆ ಹೋಗುತ್ತವೆ. 3) ಉಕ್ರೇನ್ ಯುದ್ಧ ಮತ್ತು ಇತರ ಬ್ರೂಯಿಂಗ್ ಘರ್ಷಣೆಗಳೊಂದಿಗೆ, ಜಾಗತಿಕ ಭದ್ರತಾ ಪರಿಸ್ಥಿತಿಯು ಹದಗೆಡುತ್ತದೆ ಎಂದು ಮಾಜಿ ಹಣಕಾಸು ಸಚಿವರು ನೆನಪಿಸಿದರು.

”ಈ ಮೂರೂ ಸಂಗತಿಗಳು ಕಾರ್ಯರೂಪಕ್ಕೆ ಬಂದರೆ, ಸರ್ಕಾರ ಏನು ಮಾಡುತ್ತದೆ? ಹಣದುಬ್ಬರ ಮತ್ತು ನಿರುದ್ಯೋಗದಿಂದ ಬಳಲುತ್ತಿರುವ ಜನರ ಮೇಲೆ ಅದು ಯಾವ ರೀತಿಯ ಹೊರೆಗಳನ್ನು ಹಾಕುತ್ತದೆ? ಆರ್ಥಿಕ ಸಮೀಕ್ಷೆಯಲ್ಲಿ ಅಥವಾ ಬಜೆಟ್ ಭಾಷಣದಲ್ಲಿ ಯಾವುದೇ ಉತ್ತರಗಳನ್ನು ನೀಡಲಾಗಿಲ್ಲ” ಎಂದು ಚಿದಂಬರಂ ಹೇಳಿದರು.

ಬಜೆಟ್ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದು, ”ಕಳೆದ ವರ್ಷದ ಬಜೆಟ್ ಕೃಷಿ, ಆರೋಗ್ಯ, ಶಿಕ್ಷಣ, ಎಂಜಿಎನ್‌ಆರ್‌ಇಜಿಎ ಮತ್ತು ಎಸ್‌ಸಿಗಳ ಕಲ್ಯಾಣಕ್ಕೆ ಮೀಸಲಿಡಲು ಮೆಚ್ಚುಗೆಯನ್ನು ಗಳಿಸಿತು. ಆದರೆ ಇಂದು ವಾಸ್ತವ ಸ್ಪಷ್ಟವಾಗಿದೆ. ವಾಸ್ತವಿಕ ವೆಚ್ಚವು ಬಜೆಟ್‌ಗಿಂತ ಗಣನೀಯವಾಗಿ ಕಡಿಮೆಯಾಗಿದೆ. ಓವರ್ ಪ್ರಾಮಿಸ್, ಅಂಡರ್ ಡೆಲಿವರ್- ಇದು ಮೋದಿಯವರ ಒಪಿಯುಡಿ ಕಾರ್ಯತಂತ್ರದ ಮುಖ್ಯಾಂಶವಾಗಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...