Homeಕರ್ನಾಟಕನಿಯಮ ಉಲ್ಲಂಘಿಸಿ ವಿದ್ಯಾನಿಲಯಗಳ ಗ್ರಂಥಾಲಯಗಳಿಗೆ ಪುಸ್ತಕ ಖರೀದಿಗೆ ಟೆಂಡರ್: ಪ್ರಕಾಶಕರ ದೂರು

ನಿಯಮ ಉಲ್ಲಂಘಿಸಿ ವಿದ್ಯಾನಿಲಯಗಳ ಗ್ರಂಥಾಲಯಗಳಿಗೆ ಪುಸ್ತಕ ಖರೀದಿಗೆ ಟೆಂಡರ್: ಪ್ರಕಾಶಕರ ದೂರು

- Advertisement -
- Advertisement -

ರಾಜ್ಯದ ಸಮಾಜ ಕಲ್ಯಾಣ ಇಲಾಖೆಯ ಅಧೀನದ ವಿದ್ಯಾನಿಲಯಗಳ ಗ್ರಂಥಾಲಯಗಳಿಗೆ ಪುಸ್ತಕ ಪೂರೈಕೆ ಮಾಡಲು ಅಲ್ಪಾವಧಿ ಟೆಂಡರ್ ಕರೆಯಲಾಗಿದೆ. ಇದು ನಿಯಮಾವಳಿಗಳಿಗೆ ವಿರುದ್ಧವಾಗಿದೆ ಎಂದು ಪ್ರಕಾಶಕರು ದೂರಿದ್ದಾರೆ.

ಈ ವಿದ್ಯಾನಿಲಯಗಳ ಗ್ರಂಥಾಲಯಗಳಿಗೆ ಪುಸ್ತಕ ಖರೀದಿಸಲು ಇಲಾಖೆಯ ಕಾರ್ಯದರ್ಶಿಯ ಅಧ್ಯಕ್ಷತೆಯಲ್ಲಿ 18 ಸದಸ್ಯರ ರಾಜ್ಯಮಟ್ಟದ ಆಯ್ಕೆ ಸಮಿತಿ ರಚಿಸಲಾಗಿದೆ. ಈ ಸಮಿತಿಯು ಶಿಫಾರಸು ಮಾಡಿದ ಬಳಿಕವಷ್ಟೇ ಪುಸ್ತಕಗಳ ಖರೀದಿಗೆ ಟೆಂಡರ್ ಕರೆಯಬೇಕು ಎಂದು ಪ್ರಕಾಶಕರು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿರುವ ಕರ್ನಾಟಕ ಪ್ರಕಾಶಕರ ಸಂಘದ ಸೃಷ್ಟಿ ನಾಗೇಶ್ ಮಾತನಾಡಿದ್ದು, “ಹಾಸನ ಜಿಲ್ಲೆಯಲ್ಲಿ ಅಲ್ಪಾವಧಿ ಟೆಂಡರ್ ಕರೆಯಲಾಗಿದ್ದು, ಟೆಂಡರ್ ಅರ್ಜಿ ಸಲ್ಲಿಸಲು ಜನವರಿ 2 ಕೊನೆಯ ದಿನವಾಗಿತ್ತು. ಬೇರೆ ಜಿಲ್ಲೆಗಳಲ್ಲೂ ಇದೇ ರೀತಿಯ ಟೆಂಡರ್ ಕರೆಯಲಾಗಿದೆ ಎಂದು ಹೇಳಲಾಗಿದ್ದು, ಆ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಈ ಮೂಲಕ ಯಾವುದೋ ಒಂದೆರಡು ಪ್ರಕಾಶನಗಳಿಗೆ ಅನುಕೂಲ ಮಾಡಿಕೊಡವ ಪ್ರಯತ್ನ ನಡೆದಿದೆ” ಎಂದು ಅವರು ಆರೋಪಿಸಿದರು.

ಇದನ್ನೂ ಓದಿ: ‘ಬಜೆಟ್‌ನಲ್ಲಿ ತೆಲಂಗಾಣಕ್ಕೆ ಕೊಟ್ಟಿದ್ದು ಶೂನ್ಯ’; ಬ್ಯಾನರ್ ಹಾಕಿಸಿದ ತೆಲಂಗಾಣ ಸರ್ಕಾರ

“ಸಮಾಜ ಜಲ್ಯಾಣ ಇಲಾಖೆ ತನ್ನ ಆದೇಶದಲ್ಲಿ, ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗಳ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಗ್ರಂಥಾಲಯಗಳಿಗೆ ಪುಸ್ತಕಗಳನ್ನು ಆಯ್ಕೆ ಸಮಿತಿ ಮೂಲಕವೇ ಖರೀದಿಸಬೇಕು” ಎಂದು ತಿಳಿಸಿದೆ. ಆದರೆ ಇದೀಗ ಆ ಆದೇಶವನ್ನು ಪಾಲಿಸುತ್ತಿಲ್ಲ ಎಂದು ಅವರು ಹೇಳಿದರು.

ಈ ಬಗ್ಗೆ ‘ನಾನುಗೌರಿ.ಕಾಂ’ ಪ್ರತಿನಿಧಿಯೊಂದಿಗೆ ಮಾತನಾಡಿದ ಪ್ರಕಾಶಕರ ಸಂಘದ ಸೃಷ್ಟಿ ನಾಗೇಶ್ ಅವರು, “ಈ ಪುಸ್ತಕ ಖರೀದಿಗೆಂದೇ ಸಮಾಜ ಕಲ್ಯಾಣ ಇಲಾಖೆ ಪ್ರತಿವರ್ಷ 24 ಕೋಟಿ ರೂ. ವೆಚ್ಚ ಮಾಡುತ್ತದೆ. ಪುಸ್ತಕ ಖರೀದಿಗೆ ಬೆಲೆ ನಿಗದಿ ಮಾಡಲು ಒಂದು ಸಮಿತಿ ಇರಬೇಕು ಎಂದು ನಾವು ಮನವಿ ಸಲ್ಲಿಸಿದ್ದೆವು. ಅದರಂತೆ  ರಾಜ್ಯ ಮಟ್ಟದ ಸಮಿತಿ ರಚನೆ ಮಾಡಿ ಕೆಲವು ನಿಯಮಗಳನ್ನು ಮಾಡಲಾಯಿತು. ಆ ನಿಯಮಗಳ ಅಡಿಯಲ್ಲಿ ಈ ಟೆಂಡರ್ ಪ್ರಕ್ರಿಯೆ ಕೂಡ ಬರುತ್ತದೆ” ಎಂದು ಹೇಳಿದರು.

“ನಿಯಮಾವಳಿಗಳ ಬಗ್ಗೆ ಮೇಲ್ಮಟ್ಟದ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ‘. ಆದರೆ ಜಿಲ್ಲಾಮಟ್ಟದ ಅಧಿಕಾರಿಗಳು ನಿಯಮ ಪಾಲಿಸುತ್ತಿಲ್ಲ. ನಿಯಮಾನುಸಾರ ಟೆಂಡರ್ ಕರೆದರೆ ಯಾವ ಪ್ರಕಾಶಕರಿಗೆ ಸಿಗತ್ತದೋ ಸಿಗಲಿ, ಆದರೆ ಅವರ ಮನಸೋ ಇಚ್ಛೆ ಟೆಂಡರ್ ಕರೆಯುವುದರಿಂದ ಅದು ಒಬ್ಬಿಬ್ಬರ ಪಾಲಾಗುತ್ತದೆ. ಅಲ್ಲಿ ಸರ್ಕಾರದ ಹಣ ಪೋಲಾಗಲೂಬಹುದು. ಹಾಗಾಗಿ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗಳ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಗ್ರಂಥಾಲಯಗಳಿಗೆ ಪುಸ್ತಕಗಳನ್ನು ಖರೀದಿಸಲು, ಸಮಿತಿಯು ಶಿಫಾರಸು ಮಾಡಿದ ಬಳಿಕವಷ್ಟೇ ಪುಸ್ತಕಗಳ ಖರೀದಿಗೆ ಟೆಂಡರ್ ಕರೆಯಬೇಕು” ಎಂದು ಅವರು ಒತ್ತಾಯಿಸಿದರು.

ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ ಕೂಡ ಗ್ರಂಥಾಲಯಗಳಿಗೆ ಪುಸ್ತಕ ಖರೀದಿ ಹಾಗೂ ಪುಸ್ತಕ ಬೆಲೆ ನಿಗದಿ ವಿಚಾರವಾಗಿ ಸಿಎಂಗೆ ಪತ್ರ ಬರೆದಿದ್ದು, “ಸಾರ್ವಜನಿಕ ಗ್ರಂಥಾಲಯ ಇಲಾಖೆಗೆ ಏಕವಗಾಕ್ಷಿ ಯೋಜನೆಯ ಪುಸ್ತಕ ಖರೀದಿಗೆ ಹಣ ಬಿಡುಗಡೆ ಮಾಡಬೇಕು ಮತ್ತು ಕನ್ನಡ ಪುಸ್ತಕಗಳ ಪುಟವಾರು ಬೆಲೆ ಪರಿಷ್ಕರಿಸಿ, ತಕ್ಷಣವೇ ಜಾರಿ ಮಾಡಬೇಕು” ಎಂದು ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...