Homeಮುಖಪುಟಅದಾನಿ ಗುಂಪಿನ ವಿರುದ್ಧ ತನಿಖೆಗೆ ಆಗ್ರಹ: ಫೆ. 6ರಂದು ಎಲ್‌ಐಸಿ, ಎಸ್‌ಬಿಐ ಕಚೇರಿಗಳ ಮುಂದೆ ಪ್ರತಿಭಟನೆಗೆ...

ಅದಾನಿ ಗುಂಪಿನ ವಿರುದ್ಧ ತನಿಖೆಗೆ ಆಗ್ರಹ: ಫೆ. 6ರಂದು ಎಲ್‌ಐಸಿ, ಎಸ್‌ಬಿಐ ಕಚೇರಿಗಳ ಮುಂದೆ ಪ್ರತಿಭಟನೆಗೆ ಕಾಂಗ್ರೆಸ್ ಕರೆ

- Advertisement -
- Advertisement -

ಹಿಂಡೆನ್‌ಬರ್ಗ್ ಸಂಶೋಧನಾ ವರದಿಯಲ್ಲಿ ಅದಾನಿ ಗುಂಪಿನ ವಿರುದ್ಧ ಮಾಡಲಾದ ಆರೋಪಗಳ ಬಗ್ಗೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಅಥವಾ ಜಂಟಿ ಸಂಸದೀಯ ಸಮಿತಿ (JPC) ಅವರ ಮೇಲ್ವಿಚಾರಣೆಯಲ್ಲಿ ನಿಷ್ಪಕ್ಷಪಾತ ತನಿಖೆಗೆ ಕಾಂಗ್ರೆಸ್ ಪಕ್ಷ ಒತ್ತಾಯಿಸಿದೆ. ಅಷ್ಟೇ ಅಲ್ಲದೇ ಫೆಬ್ರವರಿ 6 ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲು ಕಾರ್ಯಕರ್ತರಿಗೆ ಕಾಂಗ್ರೆಸ್ ಕರೆ ನೀಡಿದೆ.

ನರೇಂದ್ರ ಮೋದಿ ಸರ್ಕಾರವು, ಅದಾನಿ ಸಮೂಹದಲ್ಲಿ ಹೂಡಿಕೆ ಮಾಡಲು ಈ ಸಾರ್ವಜನಿಕ ಸಂಸ್ಥೆಗಳನ್ನು ಹೇಗೆ ಒತ್ತಾಯಿಸಿದೆ ಎಂಬುದನ್ನು ಎತ್ತಿ ತೋರಿಸಲು ಪ್ರತಿ ಜಿಲ್ಲೆಯಲ್ಲೂ ಪಕ್ಷದ ಕಾರ್ಯಕರ್ತರು ಫೆಬ್ರವರಿ 6 ರಂದು ಜೀವ ವಿಮಾ ನಿಗಮ (ಎಲ್‌ಐಸಿ) ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಕಚೇರಿಗಳ ಹೊರಗೆ ಪ್ರತಿಭಟನೆ ನಡೆಸಲಿದ್ದಾರೆ.

ಈ ಬಗ್ಗೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ”ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ಜಂಟಿ ಸಂಸದೀಯ ಸಮಿತಿ ಅಥವಾ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯ ತನಿಖೆಯಿಂದ ಅದಾನಿ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ತನಿಖೆ ಮಾಡಬೇಕು ಎಂದು ನಾವು ಬಯಸುತ್ತೇವೆ. ಈ ತನಿಖೆಯ ದಿನನಿತ್ಯದ ವರದಿಯೂ ನೀಡಬೇಕು” ಎಂದು ಹೇಳಿದರು.

”ದೇಶದ ಜನರು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಪ್ರಧಾನಿಯವರ ಆಪ್ತ ಸ್ನೇಹಿತರ ಲಾಭಕ್ಕಾಗಿ ಅಪಾಯಕ್ಕೆ ತಳ್ಳಲು ಸಾಧ್ಯವಿಲ್ಲ. ಅದಾನಿ ಸಮೂಹದಲ್ಲಿ ಎಲ್ ಐಸಿ ಒಟ್ಟು ₹36,474.78 ಕೋಟಿ ಹೂಡಿಕೆ ಮಾಡಿದೆ. ಆದರೆ ಭಾರತೀಯ ಬ್ಯಾಂಕ್‌ಗಳು ಒಟ್ಟಾಗಿ ಸುಮಾರು ₹80,000 ಕೋಟಿಗಳಷ್ಟು ಮೊತ್ತವನ್ನು ಹೂಡಿಕೆ ಮಾಡಿವೆ. ಮತ್ತು ಸ್ಟಾಕ್ ಮ್ಯಾನಿಪ್ಯುಲೇಷನ್, ಅಕೌಂಟಿಂಗ್ ವಂಚನೆ ಮತ್ತು ಇತರ ದುರುಪಯೋಗದ ಆರೋಪಗಳಿದ್ದಾಗಲೂ ಅವರು ಅದನ್ನು ಮುಂದುವರಿಸುತ್ತಾರೆ. ಬಹಿರಂಗಪಡಿಸಿದಾಗಿನಿಂದ ಗ್ರೂಪ್ $ 100 ಬಿಲಿಯನ್ ಕಳೆದುಕೊಂಡಿದೆ” ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಹೇಳಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ ಅಗತ್ಯ ಸೂಚನೆಗಳನ್ನು ನೀಡುವಂತೆ ಪ್ರದೇಶ ಕಾಂಗ್ರೆಸ್ ಸಮಿತಿಗಳಿಗೆ ಮನವಿ ಮಾಡಲಾಗಿದ್ದು, ಹಿರಿಯ ನಾಯಕರ ಹೊರತಾಗಿ ಬ್ಲಾಕ್ ಕಾಂಗ್ರೆಸ್ ಸಮಿತಿಗಳು, ಪಂಚಾಯತ್ ಮತ್ತು ಬೂತ್ ಮಟ್ಟದಿಂದ ಕಾರ್ಯಕರ್ತರ ಸಂಚಲನವನ್ನು ಪೂರ್ಣ ಪ್ರಮಾಣದಲ್ಲಿ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು.

ಇದನ್ನೂ ಓದಿ: ಅದಾನಿ ಗ್ರೂಪ್ ವಿರುದ್ಧ ವಂಚನೆ ಆರೋಪ; ತನಿಖೆಗೆ ಆಗ್ರಹಿಸಿದ ವಿರೋಧ ಪಕ್ಷಗಳು

ಪಕ್ಷದ ಪ್ರಧಾನ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ವಕ್ತಾರ ಪವನ್ ಖೇರಾ, ”ನಾವು ಯಾವುದೇ ನಿರ್ದಿಷ್ಟ ಭಾರತೀಯ ಕಾರ್ಪೊರೇಟ್ ಹೌಸ್ ವಿರೋಧಿಗಳಲ್ಲ, ನಾವು ಕ್ರೋನಿ ಕ್ಯಾಪಿಟಲಿಸಂ ವಿರೋಧಿಗಳು. ಆಯ್ದ ಬಿಲಿಯನೇರ್‌ಗಳಿಗೆ ಅನುಕೂಲವಾಗುವಂತೆ ನಿಯಮಗಳನ್ನು ಬದಲಾಯಿಸಿದಾಗ, ನಾವು ಅದನ್ನು ವಿರೋಧಿಸುತ್ತೇವೆ” ಎಂದರು.

”ಪ್ರಧಾನ ಮಾರ್ಗದರ್ಶಕರು ಈ ದೇಶದ ಅತಿದೊಡ್ಡ ಕಾರ್ಪೊರೇಟ್ ವಂಚನೆಯ ಆರೋಪ ಹೊತ್ತಿರುವ ಅದಾನಿ ಗುಂಪಿಗೆ ಎಲ್‌ಐಸಿ ಮತ್ತು ಎಸ್‌ಬಿಐನಲ್ಲಿ ಷೇರುಗಳನ್ನು ಹಸ್ತಾಂತರಿಸಿದರು. ಕೋಟಿಗಟ್ಟಲೆ ಭಾರತೀಯರ ಠೇವಣಿಗಳನ್ನು ಮುಳುಗಿಸುವಲ್ಲಿ ‘ಸಾಹೇಬರು’ ಯಾವುದೇ ಕಲ್ಲನ್ನು ಬಿಟ್ಟಿಲ್ಲ ಎಂದು ಪ್ರಧಾನಿ ಮೋದಿನ್ನು ಗುರಿಯಾಗಿಸಿಕೊಂಡು” ಕೆಹ್ರಾ ಹೇಳಿದರು.

ಈ ವಿಚಾರದಲ್ಲಿ ಸರ್ಕಾರದ ಮೌನವನ್ನು ಪ್ರಶ್ನಿಸಿದ ಪಕ್ಷದ ಹಿರಿಯ ನಾಯಕ ಮತ್ತು ರಾಜ್ಯಸಭಾ ಸದಸ್ಯ ರಣದೀಪ್ ಸುರ್ಜೇವಾಲಾ, ”ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಜೆಟ್ ಭಾಷಣದಲ್ಲಿ ಈ ವಿಷಯ ಏಕೆ ಕಾಣಿಸಿಕೊಂಡಿಲ್ಲ ಎಂದು ಕೇಳಿದರು. “ಹಿಂಡೆನ್‌ಬರ್ಗ್ ಸಂಶೋಧನಾ ವರದಿಯ ಆಪಾದನೆಯಿಂದ ದೊಡ್ಡ ವಂಚನೆ ಬೆಳಕಿಗೆ ಬಂದಿದೆ. ಆದರು ಪ್ರಧಾನಿ ಮಂತ್ರಿ ಅದಾನಿ ಗುಂಪಿನ ವಿರುದ್ಧ ಗಂಭೀರ ವಂಚನೆಗಳ ತನಿಖಾ ಕಚೇರಿ/ಜಾರಿ ನಿರ್ದೇಶನಾಲಯದಿಂದ ಸ್ವತಂತ್ರ ಲೆಕ್ಕಪರಿಶೋಧನೆ ಮತ್ತು ತನಿಖೆಯನ್ನು ಏಕೆ ಘೋಷಿಸಲಿಲ್ಲ?” ಎಂದು ಸುರ್ಜೆವಾಲಾ ಟ್ವಿಟ್ಟರ್‌ನಲ್ಲಿ ಪ್ರಶ್ನಿಸಿದ್ದಾರೆ.

ಮೌಲ್ಯದ ಸವೆತದ ಹೊರತಾಗಿಯೂ #LIC, SBI ಲೈಫ್, SBI ಉದ್ಯೋಗಿಗಳ ಪಿಂಚಣಿ ನಿಧಿಯನ್ನು #AdaniFPO ನಲ್ಲಿ ₹525 ಕೋಟಿ ಹಣ ಹೂಡಿಕೆ ಮಾಡಲು ಮೋದಿ ಸರ್ಕಾರ ಏಕೆ ಅವಕಾಶ ಮಾಡಿಕೊಟ್ಟಿತು? ಜನವರಿ 24 ರಿಂದ ₹1,48,505 CR ನ LIC ಮತ್ತು SBI ನ ಮಾರುಕಟ್ಟೆ ಮೌಲ್ಯದ ಕುಸಿತಕ್ಕೆ ಯಾರು ಹೊಣೆ? ಎಂದು ಕೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...