Homeಮುಖಪುಟಅದಾನಿ ಗುಂಪಿನ ವಿರುದ್ಧ ತನಿಖೆಗೆ ಆಗ್ರಹ: ಫೆ. 6ರಂದು ಎಲ್‌ಐಸಿ, ಎಸ್‌ಬಿಐ ಕಚೇರಿಗಳ ಮುಂದೆ ಪ್ರತಿಭಟನೆಗೆ...

ಅದಾನಿ ಗುಂಪಿನ ವಿರುದ್ಧ ತನಿಖೆಗೆ ಆಗ್ರಹ: ಫೆ. 6ರಂದು ಎಲ್‌ಐಸಿ, ಎಸ್‌ಬಿಐ ಕಚೇರಿಗಳ ಮುಂದೆ ಪ್ರತಿಭಟನೆಗೆ ಕಾಂಗ್ರೆಸ್ ಕರೆ

- Advertisement -
- Advertisement -

ಹಿಂಡೆನ್‌ಬರ್ಗ್ ಸಂಶೋಧನಾ ವರದಿಯಲ್ಲಿ ಅದಾನಿ ಗುಂಪಿನ ವಿರುದ್ಧ ಮಾಡಲಾದ ಆರೋಪಗಳ ಬಗ್ಗೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಅಥವಾ ಜಂಟಿ ಸಂಸದೀಯ ಸಮಿತಿ (JPC) ಅವರ ಮೇಲ್ವಿಚಾರಣೆಯಲ್ಲಿ ನಿಷ್ಪಕ್ಷಪಾತ ತನಿಖೆಗೆ ಕಾಂಗ್ರೆಸ್ ಪಕ್ಷ ಒತ್ತಾಯಿಸಿದೆ. ಅಷ್ಟೇ ಅಲ್ಲದೇ ಫೆಬ್ರವರಿ 6 ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲು ಕಾರ್ಯಕರ್ತರಿಗೆ ಕಾಂಗ್ರೆಸ್ ಕರೆ ನೀಡಿದೆ.

ನರೇಂದ್ರ ಮೋದಿ ಸರ್ಕಾರವು, ಅದಾನಿ ಸಮೂಹದಲ್ಲಿ ಹೂಡಿಕೆ ಮಾಡಲು ಈ ಸಾರ್ವಜನಿಕ ಸಂಸ್ಥೆಗಳನ್ನು ಹೇಗೆ ಒತ್ತಾಯಿಸಿದೆ ಎಂಬುದನ್ನು ಎತ್ತಿ ತೋರಿಸಲು ಪ್ರತಿ ಜಿಲ್ಲೆಯಲ್ಲೂ ಪಕ್ಷದ ಕಾರ್ಯಕರ್ತರು ಫೆಬ್ರವರಿ 6 ರಂದು ಜೀವ ವಿಮಾ ನಿಗಮ (ಎಲ್‌ಐಸಿ) ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಕಚೇರಿಗಳ ಹೊರಗೆ ಪ್ರತಿಭಟನೆ ನಡೆಸಲಿದ್ದಾರೆ.

ಈ ಬಗ್ಗೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ”ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ಜಂಟಿ ಸಂಸದೀಯ ಸಮಿತಿ ಅಥವಾ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯ ತನಿಖೆಯಿಂದ ಅದಾನಿ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ತನಿಖೆ ಮಾಡಬೇಕು ಎಂದು ನಾವು ಬಯಸುತ್ತೇವೆ. ಈ ತನಿಖೆಯ ದಿನನಿತ್ಯದ ವರದಿಯೂ ನೀಡಬೇಕು” ಎಂದು ಹೇಳಿದರು.

”ದೇಶದ ಜನರು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಪ್ರಧಾನಿಯವರ ಆಪ್ತ ಸ್ನೇಹಿತರ ಲಾಭಕ್ಕಾಗಿ ಅಪಾಯಕ್ಕೆ ತಳ್ಳಲು ಸಾಧ್ಯವಿಲ್ಲ. ಅದಾನಿ ಸಮೂಹದಲ್ಲಿ ಎಲ್ ಐಸಿ ಒಟ್ಟು ₹36,474.78 ಕೋಟಿ ಹೂಡಿಕೆ ಮಾಡಿದೆ. ಆದರೆ ಭಾರತೀಯ ಬ್ಯಾಂಕ್‌ಗಳು ಒಟ್ಟಾಗಿ ಸುಮಾರು ₹80,000 ಕೋಟಿಗಳಷ್ಟು ಮೊತ್ತವನ್ನು ಹೂಡಿಕೆ ಮಾಡಿವೆ. ಮತ್ತು ಸ್ಟಾಕ್ ಮ್ಯಾನಿಪ್ಯುಲೇಷನ್, ಅಕೌಂಟಿಂಗ್ ವಂಚನೆ ಮತ್ತು ಇತರ ದುರುಪಯೋಗದ ಆರೋಪಗಳಿದ್ದಾಗಲೂ ಅವರು ಅದನ್ನು ಮುಂದುವರಿಸುತ್ತಾರೆ. ಬಹಿರಂಗಪಡಿಸಿದಾಗಿನಿಂದ ಗ್ರೂಪ್ $ 100 ಬಿಲಿಯನ್ ಕಳೆದುಕೊಂಡಿದೆ” ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಹೇಳಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ ಅಗತ್ಯ ಸೂಚನೆಗಳನ್ನು ನೀಡುವಂತೆ ಪ್ರದೇಶ ಕಾಂಗ್ರೆಸ್ ಸಮಿತಿಗಳಿಗೆ ಮನವಿ ಮಾಡಲಾಗಿದ್ದು, ಹಿರಿಯ ನಾಯಕರ ಹೊರತಾಗಿ ಬ್ಲಾಕ್ ಕಾಂಗ್ರೆಸ್ ಸಮಿತಿಗಳು, ಪಂಚಾಯತ್ ಮತ್ತು ಬೂತ್ ಮಟ್ಟದಿಂದ ಕಾರ್ಯಕರ್ತರ ಸಂಚಲನವನ್ನು ಪೂರ್ಣ ಪ್ರಮಾಣದಲ್ಲಿ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು.

ಇದನ್ನೂ ಓದಿ: ಅದಾನಿ ಗ್ರೂಪ್ ವಿರುದ್ಧ ವಂಚನೆ ಆರೋಪ; ತನಿಖೆಗೆ ಆಗ್ರಹಿಸಿದ ವಿರೋಧ ಪಕ್ಷಗಳು

ಪಕ್ಷದ ಪ್ರಧಾನ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ವಕ್ತಾರ ಪವನ್ ಖೇರಾ, ”ನಾವು ಯಾವುದೇ ನಿರ್ದಿಷ್ಟ ಭಾರತೀಯ ಕಾರ್ಪೊರೇಟ್ ಹೌಸ್ ವಿರೋಧಿಗಳಲ್ಲ, ನಾವು ಕ್ರೋನಿ ಕ್ಯಾಪಿಟಲಿಸಂ ವಿರೋಧಿಗಳು. ಆಯ್ದ ಬಿಲಿಯನೇರ್‌ಗಳಿಗೆ ಅನುಕೂಲವಾಗುವಂತೆ ನಿಯಮಗಳನ್ನು ಬದಲಾಯಿಸಿದಾಗ, ನಾವು ಅದನ್ನು ವಿರೋಧಿಸುತ್ತೇವೆ” ಎಂದರು.

”ಪ್ರಧಾನ ಮಾರ್ಗದರ್ಶಕರು ಈ ದೇಶದ ಅತಿದೊಡ್ಡ ಕಾರ್ಪೊರೇಟ್ ವಂಚನೆಯ ಆರೋಪ ಹೊತ್ತಿರುವ ಅದಾನಿ ಗುಂಪಿಗೆ ಎಲ್‌ಐಸಿ ಮತ್ತು ಎಸ್‌ಬಿಐನಲ್ಲಿ ಷೇರುಗಳನ್ನು ಹಸ್ತಾಂತರಿಸಿದರು. ಕೋಟಿಗಟ್ಟಲೆ ಭಾರತೀಯರ ಠೇವಣಿಗಳನ್ನು ಮುಳುಗಿಸುವಲ್ಲಿ ‘ಸಾಹೇಬರು’ ಯಾವುದೇ ಕಲ್ಲನ್ನು ಬಿಟ್ಟಿಲ್ಲ ಎಂದು ಪ್ರಧಾನಿ ಮೋದಿನ್ನು ಗುರಿಯಾಗಿಸಿಕೊಂಡು” ಕೆಹ್ರಾ ಹೇಳಿದರು.

ಈ ವಿಚಾರದಲ್ಲಿ ಸರ್ಕಾರದ ಮೌನವನ್ನು ಪ್ರಶ್ನಿಸಿದ ಪಕ್ಷದ ಹಿರಿಯ ನಾಯಕ ಮತ್ತು ರಾಜ್ಯಸಭಾ ಸದಸ್ಯ ರಣದೀಪ್ ಸುರ್ಜೇವಾಲಾ, ”ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಜೆಟ್ ಭಾಷಣದಲ್ಲಿ ಈ ವಿಷಯ ಏಕೆ ಕಾಣಿಸಿಕೊಂಡಿಲ್ಲ ಎಂದು ಕೇಳಿದರು. “ಹಿಂಡೆನ್‌ಬರ್ಗ್ ಸಂಶೋಧನಾ ವರದಿಯ ಆಪಾದನೆಯಿಂದ ದೊಡ್ಡ ವಂಚನೆ ಬೆಳಕಿಗೆ ಬಂದಿದೆ. ಆದರು ಪ್ರಧಾನಿ ಮಂತ್ರಿ ಅದಾನಿ ಗುಂಪಿನ ವಿರುದ್ಧ ಗಂಭೀರ ವಂಚನೆಗಳ ತನಿಖಾ ಕಚೇರಿ/ಜಾರಿ ನಿರ್ದೇಶನಾಲಯದಿಂದ ಸ್ವತಂತ್ರ ಲೆಕ್ಕಪರಿಶೋಧನೆ ಮತ್ತು ತನಿಖೆಯನ್ನು ಏಕೆ ಘೋಷಿಸಲಿಲ್ಲ?” ಎಂದು ಸುರ್ಜೆವಾಲಾ ಟ್ವಿಟ್ಟರ್‌ನಲ್ಲಿ ಪ್ರಶ್ನಿಸಿದ್ದಾರೆ.

ಮೌಲ್ಯದ ಸವೆತದ ಹೊರತಾಗಿಯೂ #LIC, SBI ಲೈಫ್, SBI ಉದ್ಯೋಗಿಗಳ ಪಿಂಚಣಿ ನಿಧಿಯನ್ನು #AdaniFPO ನಲ್ಲಿ ₹525 ಕೋಟಿ ಹಣ ಹೂಡಿಕೆ ಮಾಡಲು ಮೋದಿ ಸರ್ಕಾರ ಏಕೆ ಅವಕಾಶ ಮಾಡಿಕೊಟ್ಟಿತು? ಜನವರಿ 24 ರಿಂದ ₹1,48,505 CR ನ LIC ಮತ್ತು SBI ನ ಮಾರುಕಟ್ಟೆ ಮೌಲ್ಯದ ಕುಸಿತಕ್ಕೆ ಯಾರು ಹೊಣೆ? ಎಂದು ಕೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...