Homeಮುಖಪುಟಬಿಬಿಸಿ ಸಾಕ್ಷ್ಯಚಿತ್ರ ನಿಷೇಧ: 500ಕ್ಕೂ ಹೆಚ್ಚು ವಿಜ್ಞಾನಿಗಳು, ಶಿಕ್ಷಣತಜ್ಞರಿಂದ ಖಂಡನೆ

ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ: 500ಕ್ಕೂ ಹೆಚ್ಚು ವಿಜ್ಞಾನಿಗಳು, ಶಿಕ್ಷಣತಜ್ಞರಿಂದ ಖಂಡನೆ

- Advertisement -
- Advertisement -

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಿಬಿಸಿ ಸಾಕ್ಷ್ಯಚಿತ್ರವನ್ನು ನಿರ್ಬಂಧಿಸಿದ್ದಕ್ಕಾಗಿ ಕೇಂದ್ರ ಸರ್ಕಾರವನ್ನು ಟೀಕಿಸುವ ಹೇಳಿಕೆಯನ್ನು 500 ಕ್ಕೂ ಹೆಚ್ಚು ಭಾರತೀಯ ವಿಜ್ಞಾನಿಗಳು ಮತ್ತು ಶಿಕ್ಷಣತಜ್ಞರು ಬೆಂಬಲಿಸಿದ್ದಾರೆ. ”ಇದು ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆಯನ್ನು ದುರ್ಬಲಗೊಳಿಸುತ್ತಿದೆ” ಎಂಬ ನೆಪವು ಸಮಂಜಸವಲ್ಲ ಎಂದು ಹೇಳಿದ್ದಾರೆ.

ಭಾರತ: ಮೋದಿ ಪ್ರಶ್ನೆ ಎಂಬ ಶೀರ್ಷಿಕೆಯ ಎರಡು ಭಾಗಗಳ ಸಾಕ್ಷ್ಯಚಿತ್ರವನ್ನು ತೆಗೆದುಹಾಕಿರುವುದು, ಸಮಾಜ ಮತ್ತು ಸರ್ಕಾರದ ಬಗ್ಗೆ ಪ್ರಮುಖ ಮಾಹಿತಿಯನ್ನು ತಿಳಿದುರ್ಕಳ್ಳಲು ಮತ್ತು ಚರ್ಚಿಸಲು ಭಾರತೀಯ ನಾಗರಿಕರಿಗೆ ಸಾಧ್ಯವಾಗುವುದಿಲ್ಲ. ಇದು ನಾಗರಿಕರ ಹಕ್ಕನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ಅವರು ಹೇಳಿದರು.

ವಿಶ್ವವಿದ್ಯಾನಿಲಯ ಆಡಳಿತಗಳು ಸಾಕ್ಷ್ಯಚಿತ್ರದ ಪ್ರದರ್ಶನವನ್ನು ತಡೆಯಲು ತೆಗೆದುಕೊಂಡ ನಿರ್ಧಾರಗಳನ್ನು ಅವರು ಟೀಕಿಸಿದರು. ”ಇದು ಶೈಕ್ಷಣಿಕ ಸ್ವಾತಂತ್ರ್ಯದ ತತ್ವಗಳನ್ನು ಉಲ್ಲಂಘಿಸುತ್ತದೆ. ವಿಶ್ವವಿದ್ಯಾನಿಲಯಗಳು ಸಾಮಾಜಿಕ ಮತ್ತು ರಾಜಕೀಯ ಪ್ರಶ್ನೆಗಳ ಮುಕ್ತ ಚರ್ಚೆಗಳನ್ನು ಪ್ರೋತ್ಸಾಹಿಸಬೇಕು. ಪ್ರಜಾಸತ್ತಾತ್ಮಕ ಸಮಾಜದ ಸರಿಯಾದ ಕಾರ್ಯನಿರ್ವಹಣೆಗೆ ಇಂತಹ ಚರ್ಚೆಗಳು ನಿರ್ಣಾಯಕ. ವಿಶ್ವವಿದ್ಯಾನಿಲಯಗಳು ಸರ್ಕಾರವನ್ನು ಟೀಕಿಸುವ ಕಾರಣದಿಂದ ಕೆಲವು ಅಭಿಪ್ರಾಯಗಳ ಅಭಿವ್ಯಕ್ತಿಯನ್ನು ನಿರ್ಬಂಧಿಸುವುದು ಸ್ವೀಕಾರಾರ್ಹವಲ್ಲ” ಎಂದು ವಿಜ್ಞಾನಿಗಳು ಮತ್ತು ಶಿಕ್ಷಣ ತಜ್ಞರು ಹೇಳಿದ್ದಾರೆ.

ಇದನ್ನೂ ಓದಿ: ಬಿಬಿಸಿ ಸ್ವತಂತ್ರ ಸಂಸ್ಥೆ: ಸಾಕ್ಷ್ಯಚಿತ್ರದ ವಿರುದ್ಧದ ಟೀಕೆಗಳಿಗೆ ರಿಷಿ ಸುನಕ್ ವಕ್ತಾರ ಪ್ರತಿಕ್ರಿಯೆ

ಸಂಪೂರ್ಣ ಹೇಳಿಕೆ ಮತ್ತು ಸಹಿ ಮಾಡಿದವರ ಪಟ್ಟಿಯನ್ನು ಕೆಳಗೆ ನೀಡಲಾಗಿದೆ.

BBC ಸಾಕ್ಷ್ಯಚಿತ್ರ “ಇಂಡಿಯಾ: ಮೋದಿ ಪ್ರಶ್ನೆ” ಸೆನ್ಸಾರ್ಶಿಪ್ ಕುರಿತು ಹೇಳಿಕೆ

ನಾವು ಭಾರತೀಯ ವಿಜ್ಞಾನಿಗಳು ಮತ್ತು ಶಿಕ್ಷಣ ತಜ್ಞರ ಗುಂಪು.

“ಭಾರತ: ಮೋದಿ ಪ್ರಶ್ನೆ” ಎಂಬ ಎರಡು ಭಾಗಗಳ ಬಿಬಿಸಿ ಸಾಕ್ಷ್ಯಚಿತ್ರವನ್ನು ಸೆನ್ಸಾರ್‌ಶಿಪ್‌ನಲ್ಲಿ ತಂದಿರುವುದನ್ನು ಕಂಡು ನಾವು ದಿಗ್ಭ್ರಮೆಗೊಂಡಿದ್ದೇವೆ. ಈ ಸಾಕ್ಷ್ಯಚಿತ್ರ ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆಯನ್ನು ದುರ್ಬಲಗೊಳಿಸುತ್ತಿದೆ ಎಂಬ ನೆಪದಲ್ಲಿ ಭಾರತ ಸರ್ಕಾರವು ಸಾಮಾಜಿಕ ಮಾಧ್ಯಮದಿಂದ ತೆಗೆದುಹಾಕಿದೆ. ಈ ಸಮರ್ಥನೆಯು ಒಪ್ಪವಂತಹದ್ದಲ್ಲ. ಸಾಕ್ಷ್ಯಚಿತ್ರವನ್ನು ತೆಗೆದುಹಾಕಿರುವುದು, ಸಮಾಜ ಮತ್ತು ಸರ್ಕಾರದ ಬಗ್ಗೆ ಪ್ರಮುಖ ಮಾಹಿತಿಯನ್ನು ತಿಳಿದುಕೊಳ್ಳಲು ಮತ್ತು ಚರ್ಚಿಸಲು ಭಾರತೀಯ ನಾಗರಿಕರಿಗೆ ಸಾಧ್ಯವಾಗುವುದಿಲ್ಲ. ಇದು ನಾಗರಿಕರ ಹಕ್ಕನ್ನು ಉಲ್ಲಂಘಿಸಿದಂತಾಗುತ್ತದೆ.

ದೇಶದಾದ್ಯಂತ ವಿಶ್ವವಿದ್ಯಾಲಯದ ಆಡಳಿತಗಳು ಸಾಕ್ಷ್ಯಚಿತ್ರದ ಪ್ರದರ್ಶನವನ್ನು ತಡೆಯಲು ಪ್ರಯತ್ನಿಸಿದವು. ಇದು ಶೈಕ್ಷಣಿಕ ಸ್ವಾತಂತ್ರ್ಯದ ತತ್ವಗಳನ್ನು ಉಲ್ಲಂಘಿಸುತ್ತದೆ. ವಿಶ್ವವಿದ್ಯಾನಿಲಯಗಳು ಸಾಮಾಜಿಕ ಮತ್ತು ರಾಜಕೀಯ ಪ್ರಶ್ನೆಗಳ ಮುಕ್ತ ಚರ್ಚೆಗಳನ್ನು ಪ್ರೋತ್ಸಾಹಿಸಬೇಕು. ಪ್ರಜಾಸತ್ತಾತ್ಮಕ ಸಮಾಜದ ಸರಿಯಾದ ಕಾರ್ಯನಿರ್ವಹಣೆಗೆ ಇಂತಹ ಚರ್ಚೆಗಳು ನಿರ್ಣಾಯಕ. ವಿಶ್ವವಿದ್ಯಾನಿಲಯಗಳು ಸರ್ಕಾರವನ್ನು ಟೀಕಿಸುವ ಕಾರಣದಿಂದ ಕೆಲವು ಅಭಿಪ್ರಾಯಗಳ ಅಭಿವ್ಯಕ್ತಿಯನ್ನು ನಿರ್ಬಂಧಿಸುವುದು ಸ್ವೀಕಾರಾರ್ಹವಲ್ಲ.

BBC ಸಾಕ್ಷ್ಯಚಿತ್ರವು ಯಾವುದೇ ಮೂಲಭೂತವಾಗಿ ಹೊಸ ಅಂಶಗಳನ್ನು ಎತ್ತುವುದಿಲ್ಲ ಎಂಬುದನ್ನು ನಾವು ಗಮನಿಸಿದ್ದೇವೆ. ಈಗಾಗಲೇ, 2002 ರಲ್ಲಿ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಗೋಧ್ರಾ ದುರಂತದಿಂದ ಪ್ರಾರಂಭಿಸಿ ಮತ್ತು ನಂತರದ ಹಿಂಸಾಚಾರದವರೆಗೆ ಮುಂದುವರಿದಿದ್ದನ್ನು ನೋಡಿ, “ಗುಜರಾತಿನ ಜನರ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸುವಲ್ಲಿ ರಾಜ್ಯವು ಸಮಗ್ರವಾಗಿ ವಿಫಲವಾಗಿದೆ ಎಂದು ಖಚಿತವಾದ ತೀರ್ಮಾನಕ್ಕೆ ಬಂದಿತ್ತು. ನಂತರದ ವಾರಗಳಲ್ಲಿ, ಹಲವಾರು ವಿದ್ವಾಂಸರು, ಚಲನಚಿತ್ರ ನಿರ್ಮಾಪಕರು ಮತ್ತು ಮಾನವ ಹಕ್ಕುಗಳ ಕಾರ್ಯಕರ್ತರು ಕಳೆದ ಇಪ್ಪತ್ತು ವರ್ಷಗಳಲ್ಲಿ ಇದೇ ರೀತಿಯ ತೀರ್ಮಾನಕ್ಕೆ ಬಂದಿದ್ದಾರೆ.

ಇದರ ಹೊರತಾಗಿಯೂ, 2002 ರಲ್ಲಿ ಗುಜರಾತ್‌ನಲ್ಲಿ ನಡೆದ ಹಿಂಸಾಚಾರವನ್ನು ಉತ್ತೇಜಿಸಲು ಮತ್ತು ಸಕ್ರಿಯಗೊಳಿಸಲು ಕಾರಣಕರ್ತರಾದವರನ್ನು ಗುರುತಿಸಲಾಗಿಲ್ಲ. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ತಡೆಯಲು ಮಾತ್ರವಲ್ಲದೇ, ಇಂದು ದೇಶವನ್ನು ಛಿದ್ರಗೊಳಿಸುವ ಬೆದರಿಕೆಯೊಡ್ಡುತ್ತಿರುವ ಕೋಮು ಧ್ರುವೀಕರಣವನ್ನು ಹಿಮ್ಮೆಟ್ಟಿಸಲು ಇದರ ಹೊಣೆಗಾರಿಕೆಯು ನಿರ್ಣಾಯಕವಾಗಲಿದೆ. ಆದ್ದರಿಂದ, ಬಿಬಿಸಿ ಸಾಕ್ಷ್ಯಚಿತ್ರದಲ್ಲಿ ಎತ್ತಿರುವ ಪ್ರಶ್ನೆಗಳು ಮುಖ್ಯವಾಗಿವೆ. ಚಲನಚಿತ್ರವನ್ನು ಬ್ಯಾನ್ ಮಾಡುವುದರಿಂದ ಈ ಹಿಂಸಾಚಾರದ ಸಂತ್ರಸ್ತರ ಧ್ವನಿಯನ್ನು ಮತ್ತಷ್ಟು ಮೌನಗೊಳಿಸಿದಂತಾಗಬಹುದು.

ಭಾರತದಲ್ಲಿನ ಸೆನ್ಸಾರ್‌ಶಿಪ್‌ನ ನಮ್ಮ ಟೀಕೆಯನ್ನು BBC ಅಥವಾ ಬ್ರಿಟಿಷ್ ಸ್ಥಾಪನೆಯ ಅನುಮೋದನೆ ಎಂದು ವ್ಯಾಖ್ಯಾನಿಸಬಾರದು ಎಂದು ಹೇಳಬೇಕಾಗಿಲ್ಲ. ಸಾಕ್ಷ್ಯಚಿತ್ರದಲ್ಲಿ ಕಾಣಿಸಿಕೊಳ್ಳುವ ಜಾಕ್ ಸ್ಟ್ರಾ ಅವರು ಟೋನಿ ಬ್ಲೇರ್ ಅವರ ಸಂಪುಟದಲ್ಲಿ ಬ್ರಿಟಿಷ್ ವಿದೇಶಾಂಗ ಕಾರ್ಯದರ್ಶಿಯಾಗಿದ್ದರು ಎಂದು ನಮಗೆ ತಿಳಿದಿದೆ. ಈ ಪಾತ್ರದಲ್ಲಿ, “ಇರಾಕಿನ ಸಾಮೂಹಿಕ ವಿನಾಶದ ಆಯುಧಗಳ” ಬಗ್ಗೆ ಸುಳ್ಳುಸುದ್ದಿಗಳನ್ನು ಹರಡಲು ಅವರು ಜವಾಬ್ದಾರರಾಗಿದ್ದರು, ಇದನ್ನು ಬಿಬಿಸಿ ಯಥಾವತ್ತಾಗಿ ಪುನರಾವರ್ತಿಸಿತು ಮತ್ತು ನೂರಾರು ಸಾವಿರ ಮುಗ್ಧ ಜನರ ಸಾವಿಗೆ ಕಾರಣವಾದ ಇರಾಕ್‌ನ ಆಂಗ್ಲೋ-ಅಮೇರಿಕನ್ ಆಕ್ರಮಣವನ್ನು ಸಮರ್ಥಿಸಲು ಬಳಸಲಾಯಿತು..

ಭಾರತೀಯ ವಿದ್ವಾಂಸರು ಮತ್ತು ಕಾರ್ಯಕರ್ತರು, ಬೃಹತ್ ಮತ್ತು ವಿಶ್ವಾಸಾರ್ಹ ವಿಷಯದೊಂದಿಗೆ ನಿರ್ಮಿಸಿರುವ BBC ಸಾಕ್ಷ್ಯಚಿತ್ರವನ್ನು ಬೆಂಬಲಿಸುತ್ತೇವೆ ಮತ್ತು ವೀಕ್ಷಕರನ್ನು ಪ್ರೋತ್ಸಾಹಿಸುತ್ತೇವೆ. 2002 ರ ಭಯಾನಕ ಘಟನೆಗಳು ಮತ್ತು ಇಂದು ದೇಶದಲ್ಲಿ ಅಲ್ಪಸಂಖ್ಯಾತರು ಎದುರಿಸುತ್ತಿರುವ ಭಯಾನಕ ಪರಿಸ್ಥಿತಿ ಎರಡನ್ನೂ ಇದು ದಾಖಲಿಸುತ್ತದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...