Homeಮುಖಪುಟಬಿಬಿಸಿ ಸಾಕ್ಷ್ಯಚಿತ್ರಕ್ಕೆ ತಡೆ ವಿವಾದ; ಮೂರು ವಾರಗಳಲ್ಲಿ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

ಬಿಬಿಸಿ ಸಾಕ್ಷ್ಯಚಿತ್ರಕ್ಕೆ ತಡೆ ವಿವಾದ; ಮೂರು ವಾರಗಳಲ್ಲಿ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

- Advertisement -
- Advertisement -

ನರೇಂದ್ರ ಮೋದಿಯವರು 2002ರಲ್ಲಿ ಗುಜರಾತ್‌ ಮುಖ್ಯಮಂತ್ರಿಯಾಗಿದ್ದಾಗ ಮತ್ತು ಪ್ರಧಾನಿಯಾದ ಬಳಿಕ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಆಗಿರುವ ವಿದ್ಯಮಾನಗಳನ್ನು ಮುಖ್ಯವಾಗಿಟ್ಟುಕೊಂಡು ಬಿಬಿಸಿ ನಿರ್ಮಿಸಿರುವ ಸಾಕ್ಷ್ಯಚಿತ್ರಕ್ಕೆ ಭಾರತದಲ್ಲಿ ತಡೆ ನೀಡಿರುವುದನ್ನು ಪ್ರಶ್ನಿಸಿರುವ ಅರ್ಜಿಗಳನ್ನು ಸುಪ್ರೀಂಕೋರ್ಟ್ ವಿಚಾರಣೆಗೆ ಕೈಗೆತ್ತುಕೊಂಡಿದೆ. “ಮೂರು ವಾರಗಳೊಳಗೆ ವರದಿ ಸಲ್ಲಿಸಬೇಕು” ಎಂದು ಕೇಂದ್ರ ಸರ್ಕಾರಕ್ಕೆ ಸೂಚನೆಯನ್ನೂ ನೀಡಿದೆ.

ಸಾಕ್ಷ್ಯಚಿತ್ರವನ್ನು ಸಾಮಾಜಿಕ ಮಾಧ್ಯಮಗಳಿಂದ ತೆರವು ಮಾಡುವಂತೆ ನೀಡಲಾಗಿರುವ ಆದೇಶದ ಮೂಲ ದಾಖಲೆಯನ್ನು ಸುಪ್ರೀಂ ಕೋರ್ಟ್ ಕೇಳಿದೆ.

ಸಾಕ್ಷ್ಯಚಿತ್ರವನ್ನು ಸೆನ್ಸಾರ್ ಮಾಡದಂತೆ ಕೇಂದ್ರ ಸರ್ಕಾರವನ್ನು ತಡೆಯಬೇಕೆಂದು ಹಿರಿಯ ಪತ್ರಕರ್ತ ಎನ್ ರಾಮ್, ಹೋರಾಟಗಾರ-ವಕೀಲರಾದ ಪ್ರಶಾಂತ್ ಭೂಷಣ್ ಮತ್ತು ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಸಲ್ಲಿಸಿರುವ ಅರ್ಜಿಯನ್ನು ಕೋರ್ಟ್ ಪರಿಶೀಲಿಸುತ್ತಿದೆ.

‘ಐಟಿ ನಿಯಮಗಳು 2021’ರ ಅಡಿಯಲ್ಲಿ ತುರ್ತು ಅಧಿಕಾರವನ್ನು ಬಳಸಿಕೊಂಡು ಸಾಮಾಜಿಕ ಮಾಧ್ಯಮಗಳಿಂದ ಸಾಕ್ಷ್ಯಚಿತ್ರದ ಲಿಂಕ್‌ ತೆಗೆದು ಹಾಕಿರುವುದನ್ನು ಅರ್ಜಿಗಳು ಪ್ರಶ್ನಿಸಿವೆ.

“ನಿರ್ಬಂಧದ ಆದೇಶವನ್ನು ಕೇಂದ್ರವು ಔಪಚಾರಿಕವಾಗಿಯೂ ಇಂದಿಗೂ ಪ್ರಕಟಿಸಿಲ್ಲ. ಎರಡು ಭಾಗಗಳನ್ನು ಹೊಂದಿರುವ ಸಾಕ್ಷ್ಯಚಿತ್ರದ ಮೇಲಿನ ನಿಷೇಧವು ‘ದುಷ್ಕೃತ್ಯ, ಅನಿಯಂತ್ರಿತ ಮತ್ತು ಅಸಂವಿಧಾನಿಕ” ಎಂದು ವಕೀಲ ಎಂಎಲ್ ಶರ್ಮಾ ಅವರು ಸಲ್ಲಿಸಿರುವ ಪ್ರತ್ಯೇಕ ಅರ್ಜಿ ಟೀಕಿಸಿದೆ.

ನಿಯಮಗಳ ಪ್ರಕಾರ ಕೇಂದ್ರವು 48 ಗಂಟೆಗಳ ಒಳಗೆ ತುರ್ತು ತಡೆ ಆದೇಶಗಳನ್ನು ಪ್ರಕಟಿಸಬೇಕು ಎಂದು ಅರ್ಜಿದಾರರು ವಾದಿಸಿದ್ದಾರೆ.

ನಿಷೇಧದ ನಂತರ, ಎರಡು ಭಾಗಗಳ BBC ಸರಣಿಯ ಲಿಂಕ್‌ಗಳನ್ನು ಮಹುವಾ ಮೊಯಿತ್ರಾ ಸೇರಿದಂತೆ ವಿವಿಧ ವಿರೋಧ ಪಕ್ಷದ ಅನೇಕ ನಾಯಕರು ಹಂಚಿಕೊಂಡಿದ್ದರು. ವಿದ್ಯಾರ್ಥಿ ಸಂಘಟನೆಗಳು ಮತ್ತು ವಿರೋಧ ಪಕ್ಷಗಳು ಸಾರ್ವಜನಿಕ ಪ್ರದರ್ಶನ ಏರ್ಪಡಿಸಿದ್ದು ವಿವಾದಕ್ಕೆ ಗುರಿಯಾಗಿದೆ.

ಹಲವು ಕ್ಯಾಂಪಸ್‌ಗಳಲ್ಲಿ ವಿದ್ಯಾರ್ಥಿಗಳು ‘ಇಂಡಿಯಾ: ದಿ ಮೋದಿ ಕ್ವಶ್ಚನ್‌’ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ಮುಂದಾದ ಬಳಿಕ ಆಡಳಿತ ವರ್ಗಗಳು ತಡೆ ನೀಡಿವೆ. ಕ್ಯಾಂಪಸ್‌ಗಳಲ್ಲಿ ವಿದ್ಯಾರ್ಥಿ ವಿರೋಧಿ ಕ್ರಮಗಳನ್ನೂ ಆಡಳಿತ ವರ್ಗ ಜರುಗಿಸಿರುವ ವರದಿಗಳಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...