Homeಮುಖಪುಟಮರುಕಳಿಸಿದ ದ್ವೇಷ ಭಾಷಣ: ಹೈಕೋರ್ಟ್ ಆದೇಶ ಉಲ್ಲಂಘಿಸಿ ಮತ್ತೆ ನಾಲಿಗೆ ಹರಿಬಿಟ್ಟ ಶಾಸಕ ರಾಜಾಸಿಂಗ್

ಮರುಕಳಿಸಿದ ದ್ವೇಷ ಭಾಷಣ: ಹೈಕೋರ್ಟ್ ಆದೇಶ ಉಲ್ಲಂಘಿಸಿ ಮತ್ತೆ ನಾಲಿಗೆ ಹರಿಬಿಟ್ಟ ಶಾಸಕ ರಾಜಾಸಿಂಗ್

- Advertisement -
- Advertisement -

ಕಳೆದ ವರ್ಷ ನವೆಂಬರ್‌ನಲ್ಲಿ ಶಾಸಕ ರಾಜಾ ಸಿಂಗ್‌ ಅವರನ್ನು ಬಿಡುಗಡೆ ಮಾಡುವ ಮುನ್ನ ತೆಲಂಗಾಣ ಹೈಕೋರ್ಟ್ ಮೂರು ಕಠಿಣ ಶರತ್ತುಗಳನ್ನು ವಿಧಿಸಿತ್ತು. 100ಕ್ಕೂ ಹೆಚ್ಚು ಕ್ರಿಮಿನಲ್ ಕೇಸ್‌ಗಳನ್ನು ಹೊಂದಿರುವ ರಾಜಾ ಸಿಂಗ್‌ ಅವರನ್ನು, ಹೈದರಾಬಾದ್‌ನಲ್ಲಿ ಕೋಮು ಸೌದಾರ್ದತೆ ಕದಡಿದಕ್ಕಾಗಿ 76 ದಿನ ಜೈಲಿಗೆ ಕಳುಹಿಸಲಾಗಿತ್ತು.

ನ್ಯಾಯಮೂರ್ತಿಗಳಾದ ಎ. ಅಭಿಷೇಕ್ ರೆಡ್ಡಿ ಮತ್ತು ಜುವ್ವಾಡಿ ಶ್ರೀದೇವಿ ಅವರು ನವೆಂಬರ್ 9, 2022ರಂದು ನೀಡಿದ ಆದೇಶದಲ್ಲಿ ಸ್ಪಷ್ಟವಾದ ನಿರ್ಬಂಧಗಳನ್ನು ವಿಧಿಸಿದರು. “ರಾಜಾಸಿಂಗ್‌ ಬಿಡುಗಡೆಯಾದ ನಂತರ ಯಾವುದೇ ಸಂಭ್ರಮಾಚರಣೆ ರ್‍ಯಾಲಿಗಳಲ್ಲಿ/ಸಭೆಗಳಲ್ಲಿ ಭಾಗವಹಿಸಬಾರದು ಅಥವಾ ನಡೆಸಬಾರದು; ಮುದ್ರಣ ಮಾಧ್ಯಮ ಸೇರಿದಂತೆ ಯಾವುದೇ ರೀತಿಯ ಮಾಧ್ಯಮ ಸಂಸ್ಥೆಗಳಿಗೆ ಯಾವುದೇ ಸಂದರ್ಶನಗಳನ್ನು ಭವಿಷ್ಯದಲ್ಲಿ ನೀಡಬಾರದು; ಯಾವುದೇ ಧರ್ಮದ ವಿರುದ್ಧ ಯಾವುದೇ ಪ್ರಚೋದನಕಾರಿ ಭಾಷಣಗಳನ್ನು ಮಾಡಬಾರದು ಅಥವಾ ಫೇಸ್ಬುಕ್, ಟ್ವಿಟರ್, ವಾಟ್ಸ್‌ಅಪ್‌, ಯೂಟ್ಯೂಬ್‌ ಇತ್ಯಾದಿ ಯಾವುದೇ  ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಯಾವುದೇ ಅವಹೇಳನಕಾರಿ ಅಥವಾ ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಮಾಡಬಾರದು” ಎಂದು ಕೋರ್ಟ್ ಸೂಚಿಸಿತ್ತು.

ಕೇವಲ ಮೂರು ತಿಂಗಳೊಳಗೆ ಎಲ್ಲಾ ಮೂರು ಷರತ್ತುಗಳನ್ನು ರಾಜಾ ಉಲ್ಲಂಘಿಸಿದ್ದಾರೆ. ತೀವ್ರಗಾಮಿ ಹಿಂದೂ ಗುಂಪು ಎಂದೇ ಗುರುತಿಸಿಕೊಂಡಿರುವ ‘ಸಕಲ್ ಹಿಂದೂ ಸಮಾಜ’ ಜನವರಿ 29ರಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕಾಗಿ ಮುಂಬೈಗೆ ರಾಜಾ ಬಂದಿದ್ದರು. ಈ ಗುಂಪು ಆಯೋಜಿಸಿದ್ದ ‘ಹಿಂದೂ ಜನಕ್ರೋಶ್ ಮೋರ್ಚಾ’ದಲ್ಲಿ ಪಾಲ್ಗೊಂಡು, “ಮಹಾರಾಷ್ಟ್ರ ರಾಜ್ಯ ಸರ್ಕಾರವು ಮತಾಂತರ ವಿರೋಧಿ ಕಾನೂನನ್ನು ಜಾರಿಗೆ ತರದಿದ್ದರೆ, ಹಿಂದೂಗಳು ಶೀಘ್ರದಲ್ಲೇ ಶಸ್ತ್ರಸಜ್ಜಿತರಾಗುತ್ತಾರೆ” ಎಂದು ವಿಷಕಾರಿದರು.

ದೇಶದ ಅತ್ಯಂತ ವಿವಾದಾತ್ಮಕ ವಿಷಯಗಳಲ್ಲಿ ಒಂದಾದ ಮತಾಂತರ ವಿರೋಧಿ ಕಾನೂನು ಮೇಲ್ನೋಟಕ್ಕೆ ‘ಬಲವಂತದ ಮತಾಂತರ’ವನ್ನು ನಿರ್ಬಂಧಿಸುತ್ತದೆ, ಆದರೆ ಇದು ಧಾರ್ಮಿಕ ಹಕ್ಕಿನ ಮೇಲಿನ ಪ್ರಹಾರವಾಗಿದೆ ಎಂದು ತಜ್ಞರು ಅಭಿಪ್ರಾಯಪಡುತ್ತಾರೆ.

ರಾಜಾ ಕೇವಲ ಹೊಸ ಕಾನೂನಿನ ಬಗ್ಗೆ ಪ್ರಚಾರ ಮಾಡಲಿಲ್ಲ. ಶಸ್ತ್ರಾಸ್ತ್ರಗಳನ್ನು ಎತ್ತಿಕೊಂಡು ಮುಸ್ಲಿಮರ ಮೇಲೆ ದಾಳಿ ಮಾಡುವಂತೆ ಸಭೆಯನ್ನು ಪ್ರಚೋದಿಸಿದರು. ನಿಂದನೀಯ, ಅವಹೇಳನಕಾರಿ ಪದಗಳನ್ನು ಬಳಸಿದರು. ಮುಸ್ಲಿಂ ಸಮುದಾಯದ ವಿರುದ್ಧ ನೇರ ಹಿಂಸಾಚಾರಕ್ಕೆ ಕರೆ ನೀಡಿದರು. ರಾಜಾ ಸಿಂಗ್‌ ಭಾಷಣವು ಕೇವಲ ಉಚ್ಚ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಲಿಲ್ಲ. ಎರಡು ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸಿತು. ಈ ರೀತಿಯ ದುರುದ್ದೇಶವು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಬಿ ಮತ್ತು 295-ಎ ಉಲ್ಲಂಘನೆಯಾಗಿತ್ತು.

ರಾಜಾ ಸಿಂಗ್ ಅವರ ಭಾಷಣದ ನಂತರ, ಮತ್ತೊಬ್ಬ ಹಿಂದುತ್ವ ಮುಖಂಡ ಸಾಕ್ಷಿ ಗಾಯಕ್ವಾಡ್ ಅಷ್ಟೇ ಪ್ರಚೋದನಕಾರಿ ಭಾಷಣ ಮಾಡಿದರು. ಮುಸ್ಲಿಮರ ನರಮೇಧವನ್ನು ಪ್ರಸ್ತಾಪಿಸಿದರು.

‘ಹಿಂದೂ ಜನ ಆಕ್ರೋಶ ಮೋರ್ಚಾ’ ದಾದರ್‌ನ ಶಿವಾಜಿ ಪಾರ್ಕ್‌ನಿಂದ ಪ್ರಾರಂಭವಾಗಿ ಪರೇಲ್‌ನ ಕಾಮ್‌ಗರ್ ಮೈದಾನದವರೆಗೆ (ನಾಲ್ಕು ಕಿಲೋಮೀಟರ್‌ಗಿಂತಲೂ ಹೆಚ್ಚು ದೂರ) ಕ್ರಮಿಸಿತು. ಆರ್‌ಎಸ್‌ಎಸ್‌, ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್‌ನಂತಹ ಬಲಪಂಥೀಯ ಸಂಘಟನೆಗಳ ನಾಯಕರು ಮತ್ತು ಕಾರ್ಯಕರ್ತರು ಈ ರ್‍ಯಾಲಿಯಲ್ಲಿ ಪಾಲ್ಗೊಂಡಿದ್ದರು.

ರಾಜಾ ಸಿಂಗ್ ಮತ್ತು ಇತರರ ಭಾಷಣಗಳು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೆಯಾಗಿವೆ. ಕೋಮು ದ್ವೇಷದ ಹೊರತಾಗಿಯೂ, ಮುಂಬೈ ಪೊಲೀಸರು ಭಾಷಣಕಾರರ ವಿರುದ್ಧ ಯಾವುದೇ ಕ್ರಮವನ್ನು ಕೈಗೊಳ್ಳಲಿಲ್ಲ.

ಇದರ ನಡುವೆ, ಹೈದರಾಬಾದ್ ಪೊಲೀಸರು ರಾಜಾ ಸಿಂಗ್ ಅವರಿಗೆ ನೋಟಿಸ್ ಜಾರಿ ಮಾಡಿದರು. ಜೈಲಿನಿಂದ ಬಿಡುಗಡೆ ಮಾಡುವ ಮುನ್ನ ತೆಲಂಗಾಣ ಹೈಕೋರ್ಟ್‌ ವಿಧಿಸಿದ್ದ ಷರತ್ತುಗಳನ್ನು ಉಲ್ಲೇಖಿಸಿ ಕಳೆದ ನಾಲ್ಕು ದಿನಗಳಲ್ಲಿ ಹೈದರಾಬಾದ್‌ನ ಮಂಗಲ್‌ಹಟ್ ಪೊಲೀಸರು ಎರಡು ನೋಟಿಸ್‌ಗಳನ್ನು ರಾಜಾಸಿಂಗ್ ಅವರಿಗೆ ನೀಡಿದ್ದಾರೆ. ಭಾಷಣ ಮಾಡಿದ ಕೂಡಲೇ ಮೊದಲ ನೋಟೀಸ್ ಕಳುಹಿಸಲಾಗಿದೆ. ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವ ಸೂಚನೆಯನ್ನೂ ರವಾನಿಸಲಾಗಿದೆ.

“ನಿಮ್ಮ ಭಾಷಣದಲ್ಲಿ ನಿರ್ದಿಷ್ಟ ಸಮುದಾಯವನ್ನು ಪ್ರಯೋಚನೆ ಮಾಡಲಾಗಿದೆ. ಲವ್ ಜಿಹಾದ್, ಗೋಹತ್ಯೆ, ಮತಾಂತರ ಮೊದಲಾದ ಕಾನೂನಿನ ಬಗ್ಗೆ ಮಾತನಾಡಿದ್ದೀರಿ” ಎಂದು ಮಂಗಲ್‌ಹಟ್ ಪೊಲೀಸರು ರಾಜಾ ಸಿಂಗ್ ಅವರಿಗೆ ನೀಡಿದ್ದ ನೋಟಿಸ್‌ನಲ್ಲಿ ತಿಳಿಸಿದ್ದಾರೆ. “ನಿರ್ದಿಷ್ಟ ಧರ್ಮವನ್ನು ಕೆರಳಿಸುವ ನಿಮ್ಮ ಭಾಷಣವು ಹೈಕೋರ್ಟ್ ವಿಧಿಸಿರುವ ಷರತ್ತುಗಳ ಉಲ್ಲಂಘನೆಯಾಗಿದೆ” ಎಂದು ಎಚ್ಚರಿಸಲಾಗಿದೆ.

ಮುಂಬೈಗೆ ಭೇಟಿ ನೀಡುವ ಒಂದು ವಾರದ ಮೊದಲು, ಕಳೆದ ವರ್ಷ ಅಜ್ಮೀರ್ ದರ್ಗಾದಲ್ಲಿ ಇಷ್ಟೇ ಪ್ರಚೋದನಕಾರಿ ಭಾಷಣ ಮಾಡಿದ್ದಕ್ಕಾಗಿ ರಾಜಾ ಸಿಂಗ್ ಅವರಿಗೆ ಮತ್ತೊಂದು ನೋಟಿಸ್ ನೀಡಲಾಗಿದೆ. ಉದ್ದೇಶಪೂರ್ವಕವಾಗಿ ಕೋಮು ಭಾವನೆಗಳನ್ನು ಕೆರಳಿಸುವುದು ಮತ್ತು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸದಿದ್ದರೆ ಬಂಧನ ಮಾಡಲಾಗುವುದು ಎಂದು ಪೊಲೀಸರು ಆ ನೋಟಿಸ್‌ನಲ್ಲಿ ಉಲ್ಲೇಖಿಸಿದ್ದಾರೆ. ಆದಾಗ್ಯೂ, ಪೊಲೀಸರು ಹೆಚ್ಚಿನ ನೋಟಿಸ್‌ಗಳನ್ನು ಮಾತ್ರ ನೀಡಿದ್ದಾರೆ, ರಾಜಾರನ್ನು ತಡೆಯುವ ನಿಟ್ಟಿನಲ್ಲಿ ಯಾವುದೇ ಕ್ರಮ ಜರುಗಿಸಿಲ್ಲ.

ರಾಜಾ ಸಿಂಗ್ ತೆಲಂಗಾಣ ಪೊಲೀಸರಿಗೆ ಸವಾಲು ಹಾಕಿದ್ದಾರೆ. ನೋಟಿಸ್ ನೀಡುವ ಪೊಲೀಸರ ನಿರ್ಧಾರವು ರಾಜಕೀಯ ಪ್ರೇರಿತವಾಗಿದೆ, ಮತ್ತೆ ಜೈಲಿಗೆ ಹೋಗುವ ಭಯವಿಲ್ಲ ಎಂದು ಸಿಂಗ್ ಹೇಳಿಕೊಂಡಿದ್ದಾರೆ. ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ವೀಡಿಯೊವನ್ನು ಪೋಸ್ಟ್ ಮಾಡಿದ್ದಕ್ಕಾಗಿ ರಾಜಾ ಸಿಂಗ್‌ ಅವರನ್ನು ಆಗಸ್ಟ್‌ನಲ್ಲಿ ಬಿಜೆಪಿಯಿಂದ ಅಮಾನತು ಮಾಡಲಾಗಿತ್ತು.

ಸಕಲ್ ಹಿಂದೂ ಸಮಾಜವು ಫೆಬ್ರವರಿ 5 ರಂದು ಮುಂಬೈ ನಗರದಲ್ಲಿ ಇದೇ ರೀತಿಯ ಮತ್ತೊಂದು ಸಾರ್ವಜನಿಕ ಕಾರ್ಯಕ್ರಮವನ್ನು ನಿಗದಿಪಡಿಸಿದೆ. ದ್ವೇಷ ಭಾಷಣ ತಡೆಯುವಂತಿದ್ದರೆ ಮಾತ್ರ ಮುಂಬೈನಲ್ಲಿ ಹಿಂದುತ್ವ ಸಂಘಟನೆಗಳು ಆಯೋಜಿಸಿರುವ ಈ ರ್‍ಯಾಲಿಗೆ ಅನುಮತಿ ನೀಡಬಹುದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಮಹಾರಾಷ್ಟ್ರ ಸರ್ಕಾರಕ್ಕೆ ಸೂಚನೆ ನೀಡಿದೆ.

‘ಹಿಂದೂ ಜನಾಕ್ರೋಶ ಸಭೆ’ಯ ವಿಡಿಯೊ ರೆಕಾರ್ಡಿಂಗ್ ಮಾಡಿ ಮತ್ತು ಅದರ ಪ್ರತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಜೆ.ಬಿ.ಪರ್ದಿವಾಲಾ ಅವರಿದ್ದ ಪೀಠವು ಎಚ್ಚರಿಸಿದೆ. “ಕಾನೂನನ್ನು ಧಿಕ್ಕರಿಸಿ ಮತ್ತು ಸಾರ್ವಜನಿಕ ಆದೇಶವನ್ನು ಉಲ್ಲಂಘಿಸುವ ಯಾವುದೇ ದ್ವೇಷದ ಭಾಷಣವನ್ನು ಯಾರೂ ಮಾಡಬಾರದು ಎಂಬ ಷರತ್ತಿಗೆ ಒಳಪಟ್ಟು ಅನುಮತಿ ನೀಡಬಹುದು” ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ತಿಳಿಸಿದೆ.

ಹಿಂದುತ್ವ ಸಂಘಟನೆಗಳ ಒಕ್ಕೂಟ ಸಂಸ್ಥೆಯಾದ ‘ಸಕಲ್ ಹಿಂದೂ ಸಮಾಜ’ದ ಈ ಕಾರ್ಯಕ್ರಮವನ್ನು ನಿಷೇಧಿಸುವಂತೆ ಕೋರಿ ಶಹೀನ್ ಅಬ್ದುಲ್ಲಾ ಎಂಬುವರು ಸಲ್ಲಿಸಿದ ಮನವಿಯನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ. ಜನವರಿ 29ರಂದು ಒಕ್ಕೂಟವು ನಡೆಸಿದ ರ್‍ಯಾಲಿಯಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷದ ಭಾಷಣಗಳನ್ನು ಮಾಡಲಾಗಿದೆ ಎಂದು ಅಬ್ದುಲ್ಲಾ ವಾದಿಸಿದರು.

ಇದನ್ನೂ ಓದಿರಿ: ಬಿಬಿಸಿ ಸಾಕ್ಷ್ಯಚಿತ್ರಕ್ಕೆ ತಡೆ ವಿವಾದ; ಮೂರು ವಾರಗಳಲ್ಲಿ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

ಜನವರಿ 29 ರಂದು ನಡೆದ ರ್‍ಯಾಲಿಯಲ್ಲಿ ಬಿಜೆಪಿಯ ಹಲವು ಮುಖಂಡರು ಪಾಲ್ಗೊಂಡಿದ್ದರು. ಬಿಜೆಪಿಯ ಮುಂಬೈ ಘಟಕದ ಅಧ್ಯಕ್ಷ ಆಶಿಶ್ ಶೆಲಾರ್, ಮಹಾರಾಷ್ಟ್ರ ಸಂಸದರಾದ ಗೋಪಾಲ್ ಶೆಟ್ಟಿ ಮತ್ತು ಮನೋಜ್ ಕೋಟಕ್, ಮಾಜಿ ಸಂಸದ ಕಿರಿತ್ ಸೋಮಯ್ಯ ಸೇರಿದಂತೆ ಹಲವು ಬಿಜೆಪಿ ನಾಯಕರು ಭಾಗವಹಿಸಿದ್ದರು. ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಬಣದ ಹಲವಾರು ನಾಯಕರು ಕೂಡ ಕಾರ್ಯಕ್ರಮದಲ್ಲಿ ಇದ್ದರು.

ಕಾರ್ಯಕ್ರಮದ ಭಾಷಣಕಾರರಲ್ಲಿ ಒಬ್ಬರಾದ ತೆಲಂಗಾಣ ಶಾಸಕ ಟಿ.ರಾಜಾ ಸಿಂಗ್ ಅವರು, “ಮುಸ್ಲಿಮರು ನಡೆಸುವ ಅಂಗಡಿಗಳಿಂದ ವಸ್ತುಗಳನ್ನು ಹಿಂದೂಗಳು ಕೊಳ್ಳಬಾರದು” ಎಂದು ದ್ವೇಷ ಕಾರಿದ್ದರು. ಹಿಂದುತ್ವ ಗುಂಪಿನ ಪಿತೂರಿ ಸಿದ್ಧಾಂತವೆಂದೇ ಬಣ್ಣಿಸಲಾದ ‘ಲವ್ ಜಿಹಾದ್’ ಮತ್ತು ‘ಧಾರ್ಮಿಕ ಮತಾಂತರಗಳ ವಿರುದ್ಧ’ದ ಕಾನೂನುಗಳಿಗೆ ಸಂಬಂಧಿಸಿದಂತೆ ಹಲವರು ಮಾತನಾಡಿದ್ದರು.

ಮಾಹಿತಿ ಕೃಪೆ: ‘ದಿ ವೈರ್‌’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...