Homeಮುಖಪುಟಮುಸ್ಲಿಮರು, ಕ್ರಿಶ್ಚಿಯನ್ನರಿಗೆ ಮತಾಂತರದ ಗೀಳಿದೆ: ಯೋಗೋದ್ಯಮಿ ರಾಮ್‌ದೇವ್ ಹೇಳಿಕೆ

ಮುಸ್ಲಿಮರು, ಕ್ರಿಶ್ಚಿಯನ್ನರಿಗೆ ಮತಾಂತರದ ಗೀಳಿದೆ: ಯೋಗೋದ್ಯಮಿ ರಾಮ್‌ದೇವ್ ಹೇಳಿಕೆ

- Advertisement -
- Advertisement -

ಯೋಗೋದ್ಯಮಿ ಬಾಬಾ ರಾಮ್‌ದೇವ್ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ, ಈ ಬಾರಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ಬಗ್ಗೆ ಅವರು ಅವಹೇಳನಕಾರಿಯಾಗಿ ಮಾತನಾಡಿರುವ ವಿಡಿಯೊ ವೈರಲ್ ಆಗಿದೆ.

ರಾಜಸ್ಥಾನದ ಬಾರ್ಮರ್‌ನಲ್ಲಿ ನಡೆದ ಸಭೆಯೊಂದರಲ್ಲಿ ರಾಮ್‌ದೇವ್ ಅವರು ಮಾತನಾಡುತ್ತಾ, “ಮುಸ್ಲಿಮ್ ಮತ್ತು ಕ್ರಿಶ್ಚಿಯನ್‌ ಸಮುದಾಯಗಳು ಮತಾಂತರದ ಗೀಳನ್ನು ಹೊಂದಿವೆ” ಎಂದು ಹೇಳಿದ್ದಾರೆ.

ಫೆಬ್ರವರಿ 2ರಂದು ಬಾರ್ಮರ್‌ನಲ್ಲಿ ನಡೆದ ಹಿಂದೂ ಮುಖಂಡರ ಸಭೆಯಲ್ಲಿ ರಾಮ್‌ದೇವ್ ಪಾಲ್ಗೊಂಡಿದ್ದರು. “ಹಿಂದೂ ಹುಡುಗಿಯರನ್ನು ಅಪಹರಿಸುತ್ತಾರೆ, ಭಯೋತ್ಪಾದನೆ ಮಾಡುತ್ತಾರೆ. ಈ ಎಲ್ಲಾ ಪಾಪಗಳನ್ನು ನಮಾಜ್ ತೊಳೆಯುತ್ತದೆ ಎಂದು ಮುಸ್ಲಿಮರು ನಂಬುತ್ತಾರೆ” ಎಂದು ಅವರು ಹೇಳಿಕೆ ನೀಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ ರಾಮದೇವ್‌, “ನಿಮ್ಮ ಧರ್ಮ ಏನು ಹೇಳುತ್ತದೆ ಎಂದು ಮುಸ್ಲಿಂನನ್ನು ಕೇಳಿ- ಐದು ಬಾರಿ ನಮಾಜ್ ಓದಿ ನಂತರ ಮನಸ್ಸಿಗೆ ಬಂದದ್ದನ್ನು ಮಾಡಿ- ಎನ್ನುತ್ತಾರೆ. ನೀವು ಹಿಂದೂ ಹುಡುಗಿಯರನ್ನು ಅಪಹರಿಸುತ್ತೀರಾ, ನಿಮಗೆ ಅನಿಸಿದ ಪಾಪವನ್ನು ಮಾಡಿರಿ. ಇಸ್ಲಾಮಿನ ಅರ್ಥ ಕೇವಲ ನಮಾಜ್ ಎಂದು ಅವರು ಭಾವಿಸುತ್ತಾರೆ” ಎಂದು ತಿಳಿಸಿದ್ದಾರೆ.

ಮುಂದುವರಿದು, “ನಮ್ಮ ಮುಸ್ಲಿಂ ಸಹೋದರರು ಬಹಳಷ್ಟು ಪಾಪಗಳನ್ನು ಮಾಡುತ್ತಾರೆ, ಆದರೆ ಅವರು ಖಂಡಿತವಾಗಿಯೂ ಪ್ರಾರ್ಥನೆ ಮಾಡುತ್ತಾರೆಂಬುದನ್ನು ನೋಡಿದ್ದೇನೆ. ಏಕೆಂದರೆ ಅವರಿಗೆ ಕಲಿಸಿರುವುದು ಅದನ್ನೇ, ಕೇವಲ ಪ್ರಾರ್ಥನೆ ಮಾಡಿ ಎಂಬುದಾಗಿದೆ. ಅವರು ಭಯೋತ್ಪಾದಕರಾಗುತ್ತಾರೆ, ಹೆಚ್ಚಿನವರು ಅಪರಾಧಿಗಳಾಗುತ್ತಾರೆ” ಎಂದು ಆರೋಪಿಸಿದ್ದಾರೆ.

“ಇದನ್ನು ಇಸ್ಲಾಂ ಅಥವಾ ಕುರಾನ್ ಬೋಧಿಸುತ್ತದೆ ಎಂದು ನಾನು ಹೇಳುತ್ತಿಲ್ಲ. ಆದರೆ ಹೀಗೆಯೇ ಅನುಸರಿಸಲಾಗುತ್ತಿದೆ” ಎಂದು ಅವರು ಹೇಳಿರುವುದು ವಿಡಿಯೊದಲ್ಲಿ ದಾಖಲಾಗಿದೆ.

ಕ್ರಿಶ್ಚಿಯನ್ ಧರ್ಮದ ಬಗ್ಗೆ ಮಾತನಾಡುತ್ತಾ, “ಕ್ರಿಶ್ಚಿಯಾನಿಟಿ ಏನು ಹೇಳುತ್ತದೆ? ಚರ್ಚ್‌ಗೆ ಹೋಗಿ, ಮೇಣದಬತ್ತಿಯನ್ನು ಬೆಳಗಿಸಿ, ತದನಂತರ ಕರ್ತನಾದ ಯೇಸುವಿನ ಮುಂದೆ ನಿಂತುಕೊಳ್ಳಿ. ನಿಮ್ಮ ಎಲ್ಲಾ ಪಾಪಗಳು ತೊಳೆಯಲ್ಪಡುತ್ತವೆ. ಕ್ರಿಶ್ಚಿಯನ್ನರು ತಮ್ಮ ಎದೆಯ ಮೇಲೆ ಶಿಲುಬೆಯನ್ನು ಧರಿಸುತ್ತಾರೆ ಮತ್ತು ಧರ್ಮವನ್ನು ಪ್ರಚಾರ ಮಾಡುತ್ತಾರೆ” ಎಂದು ಆರೋಪಿಸಿದ್ದಾರೆ.

“ನಾನು ಯಾರನ್ನೂ ಟೀಕಿಸುವುದಿಲ್ಲ. ಈ ಜನರು ಕೇವಲ ಗೀಳನ್ನು ಹೊಂದಿದ್ದಾರೆ. ಕೆಲವರು ಇಡೀ ಜಗತ್ತನ್ನು ಇಸ್ಲಾಂ ಆಗಿ ಪರಿವರ್ತಿಸಿ ಎಂದು ಹೇಳುತ್ತಾರೆ, ಇನ್ನು ಕೆಲವರು ಇಡೀ ಪ್ರಪಂಚವನ್ನು ಕ್ರಿಶ್ಚಿಯನ್ ಧರ್ಮಕ್ಕೆ ಪರಿವರ್ತಿಸಬೇಕು ಎಂದು ಹೇಳುತ್ತಾರೆ. ಆದರೆ ಮತಾಂತರದ ಮೂಲಕ ನೀವು ಏನು ಮಾಡುತ್ತೀರಿ ಎಂದರೆ, ಯಾವುದೇ ಅಜೆಂಡಾ ಇರುವುದಿಲ್ಲ” ಎಂದು ವಾಗ್ದಾಳಿ ನಡೆಸಿದ್ದಾರೆ.

ಹಿಂದೂ ಧರ್ಮಕ್ಕೆ ಹೋಲಿಸುತ್ತಾ, ಎರಡು ಧರ್ಮಗಳನ್ನು (ಇಸ್ಲಾಂ, ಕ್ರಿಶ್ಚಿಯನ್‌) ಅವಹೇಳನ ಮಾಡಿರುವ ಅವರು, “ಅಹಿಂಸೆ ಮತ್ತು ಪ್ರಾಮಾಣಿಕತೆಯನ್ನು ಕಲಿಸುತ್ತದೆ” ಎಂದು ಹಿಂದೂ ಧರ್ಮವನ್ನು ಹೊಗಳಿದ್ದಾರೆ. ವಿಪರ್ಯಾಸವೆಂದರೆ, ಕೇವಲ ಒಂದು ವಾರದ ಹಿಂದೆ, ಮುಂಬೈನಲ್ಲಿ ಮತ್ತೊಬ್ಬ ಹಿಂದುತ್ವ ಮುಖಂಡ ಮಾತನಾಡುತ್ತಾ, “ಹಿಂದೂಗಳು ಶಸ್ತ್ರಾಸ್ತ್ರಗಳನ್ನು ಎತ್ತಿಕೊಳ್ಳಬೇಕು, ಮುಸ್ಲಿಮರಿಗೆ ಪಾಠ ಕಲಿಸಬೇಕು” ಎಂದು ಪ್ರಚೋದಿಸಿದ್ದರು.

ರಾಜಸ್ಥಾನ ಪೊಲೀಸರು ರಾಮದೇವ್‌ ಹೇಳಿಕೆಗಳ ಬಗ್ಗೆ ಸ್ವಯಂಪ್ರೇರಿತ ವಿಚಾರಣೆಯನ್ನು ಪ್ರಾರಂಭಿಸಿದ್ದಾರೆ ಎಂದು ವರದಿಗಳಾಗಿವೆ.

ರಾಮದೇವ್‌ ಹೇಳಿಕೆಯನ್ನು ಟೀಕಿಸಿರುವ ಎನ್‌ಜಿಒ ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್, “ಈ ಭಾಷಣದ ಮೂಲಕ ರಾಮ್‌ದೇವ್ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯಗಳ ಮೇಲೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಹಿಂದೂ ಧರ್ಮವನ್ನು ಎಲ್ಲಕ್ಕಿಂತ ಉತ್ತಮ ಧರ್ಮವೆಂದು ಬಿಂಬಿಸುವ ಸಲುವಾಗಿ, ರಾಮ್‌ದೇವ್ ಪೂರ್ವಾಗ್ರಹ ಪೀಡಿತರಾಗಿದ್ದಾರೆ” ಎಂದಿದೆ.

ರಾಮದೇವ್ ಸಮಸ್ಯಾತ್ಮಕ ಹೇಳಿಕೆ ನೀಡುತ್ತಿರುವುದು ಇದೇ ಮೊದಲಲ್ಲ. ಕಳೆದ ವರ್ಷ ನವೆಂಬರ್‌ನಲ್ಲಿ, ಈ ಯೋಗೋದ್ಯಮಿಯು ಮಹಿಳೆಯರ ಸೀರೆಯ ಬಗ್ಗೆ ಮಾತನಾಡುತ್ತಾ, “ಏನನ್ನೂ ಧರಿಸದಿದ್ದರೂ ಮಹಿಳೆಯರು ಚೆನ್ನಾಗಿ ಕಾಣುತ್ತಾರೆ” ಎಂದಿದ್ದರು. ಈ ಹೇಳಿಕೆಯ ಬಳಿಕ ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗ (ಎಂಎಸ್‌ಸಿಡಬ್ಲ್ಯು) ಅವರಿಗೆ ನೋಟಿಸ್ ಜಾರಿ ಮಾಡಿತ್ತು. ನಂತರ ಅವರು ಕ್ಷಮೆಯಾಚಿಸಿದ್ದರು.

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವೀಸ್ ಮತ್ತು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪುತ್ರ ಶ್ರೀಕಾಂತ್ ಶಿಂಧೆ ಆ ಕಾರ್ಯಕ್ರಮದಲ್ಲಿ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...