Homeಮುಖಪುಟಮುಸ್ಲಿಮರು, ಕ್ರಿಶ್ಚಿಯನ್ನರಿಗೆ ಮತಾಂತರದ ಗೀಳಿದೆ: ಯೋಗೋದ್ಯಮಿ ರಾಮ್‌ದೇವ್ ಹೇಳಿಕೆ

ಮುಸ್ಲಿಮರು, ಕ್ರಿಶ್ಚಿಯನ್ನರಿಗೆ ಮತಾಂತರದ ಗೀಳಿದೆ: ಯೋಗೋದ್ಯಮಿ ರಾಮ್‌ದೇವ್ ಹೇಳಿಕೆ

- Advertisement -
- Advertisement -

ಯೋಗೋದ್ಯಮಿ ಬಾಬಾ ರಾಮ್‌ದೇವ್ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ, ಈ ಬಾರಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ಬಗ್ಗೆ ಅವರು ಅವಹೇಳನಕಾರಿಯಾಗಿ ಮಾತನಾಡಿರುವ ವಿಡಿಯೊ ವೈರಲ್ ಆಗಿದೆ.

ರಾಜಸ್ಥಾನದ ಬಾರ್ಮರ್‌ನಲ್ಲಿ ನಡೆದ ಸಭೆಯೊಂದರಲ್ಲಿ ರಾಮ್‌ದೇವ್ ಅವರು ಮಾತನಾಡುತ್ತಾ, “ಮುಸ್ಲಿಮ್ ಮತ್ತು ಕ್ರಿಶ್ಚಿಯನ್‌ ಸಮುದಾಯಗಳು ಮತಾಂತರದ ಗೀಳನ್ನು ಹೊಂದಿವೆ” ಎಂದು ಹೇಳಿದ್ದಾರೆ.

ಫೆಬ್ರವರಿ 2ರಂದು ಬಾರ್ಮರ್‌ನಲ್ಲಿ ನಡೆದ ಹಿಂದೂ ಮುಖಂಡರ ಸಭೆಯಲ್ಲಿ ರಾಮ್‌ದೇವ್ ಪಾಲ್ಗೊಂಡಿದ್ದರು. “ಹಿಂದೂ ಹುಡುಗಿಯರನ್ನು ಅಪಹರಿಸುತ್ತಾರೆ, ಭಯೋತ್ಪಾದನೆ ಮಾಡುತ್ತಾರೆ. ಈ ಎಲ್ಲಾ ಪಾಪಗಳನ್ನು ನಮಾಜ್ ತೊಳೆಯುತ್ತದೆ ಎಂದು ಮುಸ್ಲಿಮರು ನಂಬುತ್ತಾರೆ” ಎಂದು ಅವರು ಹೇಳಿಕೆ ನೀಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ ರಾಮದೇವ್‌, “ನಿಮ್ಮ ಧರ್ಮ ಏನು ಹೇಳುತ್ತದೆ ಎಂದು ಮುಸ್ಲಿಂನನ್ನು ಕೇಳಿ- ಐದು ಬಾರಿ ನಮಾಜ್ ಓದಿ ನಂತರ ಮನಸ್ಸಿಗೆ ಬಂದದ್ದನ್ನು ಮಾಡಿ- ಎನ್ನುತ್ತಾರೆ. ನೀವು ಹಿಂದೂ ಹುಡುಗಿಯರನ್ನು ಅಪಹರಿಸುತ್ತೀರಾ, ನಿಮಗೆ ಅನಿಸಿದ ಪಾಪವನ್ನು ಮಾಡಿರಿ. ಇಸ್ಲಾಮಿನ ಅರ್ಥ ಕೇವಲ ನಮಾಜ್ ಎಂದು ಅವರು ಭಾವಿಸುತ್ತಾರೆ” ಎಂದು ತಿಳಿಸಿದ್ದಾರೆ.

ಮುಂದುವರಿದು, “ನಮ್ಮ ಮುಸ್ಲಿಂ ಸಹೋದರರು ಬಹಳಷ್ಟು ಪಾಪಗಳನ್ನು ಮಾಡುತ್ತಾರೆ, ಆದರೆ ಅವರು ಖಂಡಿತವಾಗಿಯೂ ಪ್ರಾರ್ಥನೆ ಮಾಡುತ್ತಾರೆಂಬುದನ್ನು ನೋಡಿದ್ದೇನೆ. ಏಕೆಂದರೆ ಅವರಿಗೆ ಕಲಿಸಿರುವುದು ಅದನ್ನೇ, ಕೇವಲ ಪ್ರಾರ್ಥನೆ ಮಾಡಿ ಎಂಬುದಾಗಿದೆ. ಅವರು ಭಯೋತ್ಪಾದಕರಾಗುತ್ತಾರೆ, ಹೆಚ್ಚಿನವರು ಅಪರಾಧಿಗಳಾಗುತ್ತಾರೆ” ಎಂದು ಆರೋಪಿಸಿದ್ದಾರೆ.

“ಇದನ್ನು ಇಸ್ಲಾಂ ಅಥವಾ ಕುರಾನ್ ಬೋಧಿಸುತ್ತದೆ ಎಂದು ನಾನು ಹೇಳುತ್ತಿಲ್ಲ. ಆದರೆ ಹೀಗೆಯೇ ಅನುಸರಿಸಲಾಗುತ್ತಿದೆ” ಎಂದು ಅವರು ಹೇಳಿರುವುದು ವಿಡಿಯೊದಲ್ಲಿ ದಾಖಲಾಗಿದೆ.

ಕ್ರಿಶ್ಚಿಯನ್ ಧರ್ಮದ ಬಗ್ಗೆ ಮಾತನಾಡುತ್ತಾ, “ಕ್ರಿಶ್ಚಿಯಾನಿಟಿ ಏನು ಹೇಳುತ್ತದೆ? ಚರ್ಚ್‌ಗೆ ಹೋಗಿ, ಮೇಣದಬತ್ತಿಯನ್ನು ಬೆಳಗಿಸಿ, ತದನಂತರ ಕರ್ತನಾದ ಯೇಸುವಿನ ಮುಂದೆ ನಿಂತುಕೊಳ್ಳಿ. ನಿಮ್ಮ ಎಲ್ಲಾ ಪಾಪಗಳು ತೊಳೆಯಲ್ಪಡುತ್ತವೆ. ಕ್ರಿಶ್ಚಿಯನ್ನರು ತಮ್ಮ ಎದೆಯ ಮೇಲೆ ಶಿಲುಬೆಯನ್ನು ಧರಿಸುತ್ತಾರೆ ಮತ್ತು ಧರ್ಮವನ್ನು ಪ್ರಚಾರ ಮಾಡುತ್ತಾರೆ” ಎಂದು ಆರೋಪಿಸಿದ್ದಾರೆ.

“ನಾನು ಯಾರನ್ನೂ ಟೀಕಿಸುವುದಿಲ್ಲ. ಈ ಜನರು ಕೇವಲ ಗೀಳನ್ನು ಹೊಂದಿದ್ದಾರೆ. ಕೆಲವರು ಇಡೀ ಜಗತ್ತನ್ನು ಇಸ್ಲಾಂ ಆಗಿ ಪರಿವರ್ತಿಸಿ ಎಂದು ಹೇಳುತ್ತಾರೆ, ಇನ್ನು ಕೆಲವರು ಇಡೀ ಪ್ರಪಂಚವನ್ನು ಕ್ರಿಶ್ಚಿಯನ್ ಧರ್ಮಕ್ಕೆ ಪರಿವರ್ತಿಸಬೇಕು ಎಂದು ಹೇಳುತ್ತಾರೆ. ಆದರೆ ಮತಾಂತರದ ಮೂಲಕ ನೀವು ಏನು ಮಾಡುತ್ತೀರಿ ಎಂದರೆ, ಯಾವುದೇ ಅಜೆಂಡಾ ಇರುವುದಿಲ್ಲ” ಎಂದು ವಾಗ್ದಾಳಿ ನಡೆಸಿದ್ದಾರೆ.

ಹಿಂದೂ ಧರ್ಮಕ್ಕೆ ಹೋಲಿಸುತ್ತಾ, ಎರಡು ಧರ್ಮಗಳನ್ನು (ಇಸ್ಲಾಂ, ಕ್ರಿಶ್ಚಿಯನ್‌) ಅವಹೇಳನ ಮಾಡಿರುವ ಅವರು, “ಅಹಿಂಸೆ ಮತ್ತು ಪ್ರಾಮಾಣಿಕತೆಯನ್ನು ಕಲಿಸುತ್ತದೆ” ಎಂದು ಹಿಂದೂ ಧರ್ಮವನ್ನು ಹೊಗಳಿದ್ದಾರೆ. ವಿಪರ್ಯಾಸವೆಂದರೆ, ಕೇವಲ ಒಂದು ವಾರದ ಹಿಂದೆ, ಮುಂಬೈನಲ್ಲಿ ಮತ್ತೊಬ್ಬ ಹಿಂದುತ್ವ ಮುಖಂಡ ಮಾತನಾಡುತ್ತಾ, “ಹಿಂದೂಗಳು ಶಸ್ತ್ರಾಸ್ತ್ರಗಳನ್ನು ಎತ್ತಿಕೊಳ್ಳಬೇಕು, ಮುಸ್ಲಿಮರಿಗೆ ಪಾಠ ಕಲಿಸಬೇಕು” ಎಂದು ಪ್ರಚೋದಿಸಿದ್ದರು.

ರಾಜಸ್ಥಾನ ಪೊಲೀಸರು ರಾಮದೇವ್‌ ಹೇಳಿಕೆಗಳ ಬಗ್ಗೆ ಸ್ವಯಂಪ್ರೇರಿತ ವಿಚಾರಣೆಯನ್ನು ಪ್ರಾರಂಭಿಸಿದ್ದಾರೆ ಎಂದು ವರದಿಗಳಾಗಿವೆ.

ರಾಮದೇವ್‌ ಹೇಳಿಕೆಯನ್ನು ಟೀಕಿಸಿರುವ ಎನ್‌ಜಿಒ ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್, “ಈ ಭಾಷಣದ ಮೂಲಕ ರಾಮ್‌ದೇವ್ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯಗಳ ಮೇಲೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಹಿಂದೂ ಧರ್ಮವನ್ನು ಎಲ್ಲಕ್ಕಿಂತ ಉತ್ತಮ ಧರ್ಮವೆಂದು ಬಿಂಬಿಸುವ ಸಲುವಾಗಿ, ರಾಮ್‌ದೇವ್ ಪೂರ್ವಾಗ್ರಹ ಪೀಡಿತರಾಗಿದ್ದಾರೆ” ಎಂದಿದೆ.

ರಾಮದೇವ್ ಸಮಸ್ಯಾತ್ಮಕ ಹೇಳಿಕೆ ನೀಡುತ್ತಿರುವುದು ಇದೇ ಮೊದಲಲ್ಲ. ಕಳೆದ ವರ್ಷ ನವೆಂಬರ್‌ನಲ್ಲಿ, ಈ ಯೋಗೋದ್ಯಮಿಯು ಮಹಿಳೆಯರ ಸೀರೆಯ ಬಗ್ಗೆ ಮಾತನಾಡುತ್ತಾ, “ಏನನ್ನೂ ಧರಿಸದಿದ್ದರೂ ಮಹಿಳೆಯರು ಚೆನ್ನಾಗಿ ಕಾಣುತ್ತಾರೆ” ಎಂದಿದ್ದರು. ಈ ಹೇಳಿಕೆಯ ಬಳಿಕ ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗ (ಎಂಎಸ್‌ಸಿಡಬ್ಲ್ಯು) ಅವರಿಗೆ ನೋಟಿಸ್ ಜಾರಿ ಮಾಡಿತ್ತು. ನಂತರ ಅವರು ಕ್ಷಮೆಯಾಚಿಸಿದ್ದರು.

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವೀಸ್ ಮತ್ತು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪುತ್ರ ಶ್ರೀಕಾಂತ್ ಶಿಂಧೆ ಆ ಕಾರ್ಯಕ್ರಮದಲ್ಲಿ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...