Homeಮುಖಪುಟಹಿಂಡೆನ್‌ಬರ್ಗ್ ವರದಿ ಬೆನ್ನಲ್ಲೇ ಅದಾನಿ ಒಪ್ಪಂದವನ್ನು ಪರಿಷ್ಕರಿಸಲು ಮುಂದಾದ ಬಾಂಗ್ಲಾ

ಹಿಂಡೆನ್‌ಬರ್ಗ್ ವರದಿ ಬೆನ್ನಲ್ಲೇ ಅದಾನಿ ಒಪ್ಪಂದವನ್ನು ಪರಿಷ್ಕರಿಸಲು ಮುಂದಾದ ಬಾಂಗ್ಲಾ

- Advertisement -
- Advertisement -

ಕಲ್ಲಿದ್ದಲು ಬೆಲೆಯಲ್ಲಿನ ಏರುಪೇರಿನಿಂದಾಗಿ ಬಾಂಗ್ಲಾದೇಶವು ಅದಾನಿ ಪವರ್‌ನೊಂದಿಗೆ ಮಾಡಿಕೊಂಡಿದ್ದ ವಿದ್ಯುತ್ ಒಪ್ಪಂದವನ್ನು ಪರಿಷ್ಕರಿಸಲು ಪ್ರಯತ್ನಿಸಿದೆ.

ನವೆಂಬರ್ 2017ರಲ್ಲಿ ಬಾಂಗ್ಲಾದೇಶ ಪವರ್ ಡೆವಲಪ್‌ಮೆಂಟ್ ಬೋರ್ಡ್(BPDB), ಅದಾನಿ ಕಂಪನಿಯೊಂದಿಗೆ ‘25 ವರ್ಷಗಳ ವಿದ್ಯುತ್ ಖರೀದಿ ಒಪ್ಪಂದ’ಕ್ಕೆ (PPA) ಸಹಿ ಹಾಕಿದೆ. ಬಾಂಗ್ಲಾ ದೇಶಕ್ಕೆ ವಾರ್ಷಿಕ 1,496 ಮೆಗಾವ್ಯಾಟ್ ವಿದ್ಯುತ್‌ನ್ನು ಭಾರತದ ಜಾರ್ಖಾಂಡ್‌‌ ರಾಜ್ಯದಲ್ಲಿರುವ ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರದಿಂದ ಸರಬರಾಜು ಮಾಡುವ ಒಪ್ಪಂದ ಒಳಗೊಂಡಿದೆ.

ಬಾಂಗ್ಲಾದೇಶ ಪವರ್ ಡೆವಲಪ್‌ಮೆಂಟ್ ಬೋರ್ಡ್ ಇತ್ತೀಚೆಗೆ ಅದಾನಿ ಪವರ್‌ಗೆ ಒಪ್ಪಂದದ ಪರಿಷ್ಕರಣೆ ಸಂಬಂಧ ಪತ್ರ ಬರೆದಿದೆ. ಈ ಒಪ್ಪಂದವು ಇತರ ಖಾಸಗಿ ವಿದ್ಯುತ್ ಪೂರೈಕೆದಾರರು ಪಾವತಿಸುವುದಕ್ಕಿಂತ ಹೆಚ್ಚಿನ ಸುಂಕವನ್ನು ದೇಶದ ಮೇಲೆ ವಿಧಿಸುತ್ತಿದೆ ಎಂದು ಪತ್ರದಲ್ಲಿ ಹೇಳಿರುವುದಾಗಿ ಯುನೈಟೆಡ್ ನ್ಯೂಸ್ ಆಫ್ ಬಾಂಗ್ಲಾದೇಶ (UNB) ವರದಿ ಮಾಡಿದೆ.

ಈ ಬಗ್ಗೆ ಬಿಪಿಡಿಬಿ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದು, “ಜಾರ್ಖಂಡ್‌ನ 1,600 ಮೆಗಾವ್ಯಾಟ್ ಸ್ಥಾವರಕ್ಕೆ ಇಂಧನವಾಗಿ ಬಳಸಲಾಗುವ ಕಲ್ಲಿದ್ದಲನ್ನು ಆಮದು ಮಾಡಿಕೊಳ್ಳಲು ಎಲ್‌ಸಿಗಳನ್ನು (ಭಾರತದಲ್ಲಿ) ತೆರೆಯಲು ಅದಾನಿ ಗ್ರೂಪ್‌ಗೆ ಪತ್ರವನ್ನು ಕಳುಹಿಸಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅದಾನಿ ಸಮೂಹದ ಬಗ್ಗೆ ಎದ್ದಿರುವ ಆರೋಪಗಳಿಗೆ ಉತ್ತರಿಸುವ ಉತ್ತರದಾಯಿತ್ವ ಯಾರದ್ದು?

“ಅವರು ಉಲ್ಲೇಖಿಸಿದ ಕಲ್ಲಿದ್ದಲು ಬೆಲೆ ($400/MT) ವಿಪರೀತವಾಗಿದೆ. ಇದು $250/MT ಗಿಂತ ಕಡಿಮೆಯಿರಬೇಕು. ಏಕೆಂದರೆ ನಮ್ಮ ಇತರ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಆಮದು ಮಾಡಿಕೊಂಡ ಕಲ್ಲಿದ್ದಲಿಗೆ ನಾವು ಈಗಾಗಲೇ ಕಡಿಮೆ ಪಾವತಿಸುತ್ತಿದ್ದೇವೆ” ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

“ಸರ್ಕಾರ ಮತ್ತು ಭಾರತೀಯ ಕಂಪನಿಯ ನಡುವಿನ ಒಪ್ಪಂದವನ್ನು ಉಲ್ಲೇಖಿಸುತ್ತಿದ್ದೀರಿ ಎಂದು ನಾನು ಅರ್ಥಮಾಡಿಕೊಂಡಿದ್ದೇನೆ. ನಾವು ಇದರಲ್ಲಿ ಭಾಗಿಯಾಗಿದ್ದೇವೆ ಎಂದು ನಾನು ಭಾವಿಸುವುದಿಲ್ಲ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಅದಾನಿ ವಿರುದ್ಧ ವಂಚನೆಯ ಆರೋಪ ಮಾಡಿರುವ ಹಿಂಡನ್‌ಬರ್ಗ್ ರಿಸರ್ಚ್‌ನಿಂದ ಬಿಕ್ಕಟ್ಟು ಉಂಟಾದ ಬಳಿಕ ಈ ಬೆಳವಣಿಗೆಯಾಗಿದೆ. ಬಾಂಗ್ಲಾದೇಶ ಇಂಧನ ಖರೀದಿ ಒಪ್ಪಂದದಲ್ಲಿ ಪರಿಷ್ಕರಣೆ ಬಯಸಿದೆ.

ಯುಎಸ್ ಮೂಲದ ಹಣಕಾಸು ವಿಶ್ಲೇಷಣಾ ಸಂಸ್ಥೆಯಾದ ಹಿಂಡನ್‌ಬರ್ಗ್ ಜನವರಿಯಲ್ಲಿ ಅದಾನಿ ಗುಂಪಿನ ಮೇಲೆ ವರದಿಯನ್ನು ಪ್ರಕಟಿಸಿದಾಗಿನಿಂದ, ಅದಾನಿ ಕಂಪನಿ ಪಾತಾಳ ಕುಸಿಯುತ್ತಿದೆ. ಷೇರು ಮಾರುಕಟ್ಟೆ ಮೌಲ್ಯದಲ್ಲಿ $100 ಶತಕೋಟಿಯವರೆಗೂ ಕಳೆದುಕೊಂಡಿದೆ.

ಅದಾನಿ ಗುಂಪಿನ ಷೇರುಗಳ ಕುಸಿತದ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ಮಾಧ್ಯಮದ ಒಂದು ವಿಭಾಗವು, ಈಗ ಅದಾನಿ ಜೊತೆಗಿನ BPDB ಒಪ್ಪಂದದ ಭವಿಷ್ಯದ ಬಗ್ಗೆ ಪ್ರಶ್ನೆಗಳನ್ನು ಎತ್ತಿದೆ. “ಅದಾನಿಗೆ ಇನ್ನೂ ತೊಂದರೆಗಳು ಎದುರಾಗುತ್ತವೆ‘. ಏಕೆಂದರೆ, ಹಿಂಡೆನ್‌ಬರ್ಗ್‌ನ ವರದಿಯ ಸರಣಿ ಇನ್ನೂ ಮುಂದುವರೆಯಲಿದೆ” ಎಂದು ಎಚ್ಚರಿಸಲಾಗುತ್ತಿದೆ.

ಫೆಬ್ರವರಿ 7 ರಿಂದ ಅದಾನಿ ಎಂಟರ್‌ಪ್ರೈಸಸ್ ಅನ್ನು ತನ್ನ ಸುಸ್ಥಿರತೆಯ ಸೂಚ್ಯಂಕಗಳಿಂದ ತೆಗೆದುಹಾಕುವುದಾಗಿ ಎಸ್&ಪಿ ಡೌ ಜೋನ್ಸ್ ಸೂಚ್ಯಂಕ ಹೇಳಿದೆ. ಇದರ ನಡುವೆ ಭಾರತದ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರವು ಅದಾನಿ ಎಂಟರ್‌ಪ್ರೈಸಸ್, ಅದಾನಿ ಪೋರ್ಟ್ಸ್ ಮತ್ತು ಅಂಬುಜಾ ಸಿಮೆಂಟ್ಸ್ (ಅದಾನಿ ಸಮೂಹದ ಮಾಲೀಕತ್ವದ) ಷೇರುಗಳ ಮೇಲೆ ಕಣ್ಗಾವಲಿರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...