Homeಮುಖಪುಟಹಿಂಡೆನ್‌ಬರ್ಗ್ ವರದಿ ಬೆನ್ನಲ್ಲೇ ಅದಾನಿ ಒಪ್ಪಂದವನ್ನು ಪರಿಷ್ಕರಿಸಲು ಮುಂದಾದ ಬಾಂಗ್ಲಾ

ಹಿಂಡೆನ್‌ಬರ್ಗ್ ವರದಿ ಬೆನ್ನಲ್ಲೇ ಅದಾನಿ ಒಪ್ಪಂದವನ್ನು ಪರಿಷ್ಕರಿಸಲು ಮುಂದಾದ ಬಾಂಗ್ಲಾ

- Advertisement -
- Advertisement -

ಕಲ್ಲಿದ್ದಲು ಬೆಲೆಯಲ್ಲಿನ ಏರುಪೇರಿನಿಂದಾಗಿ ಬಾಂಗ್ಲಾದೇಶವು ಅದಾನಿ ಪವರ್‌ನೊಂದಿಗೆ ಮಾಡಿಕೊಂಡಿದ್ದ ವಿದ್ಯುತ್ ಒಪ್ಪಂದವನ್ನು ಪರಿಷ್ಕರಿಸಲು ಪ್ರಯತ್ನಿಸಿದೆ.

ನವೆಂಬರ್ 2017ರಲ್ಲಿ ಬಾಂಗ್ಲಾದೇಶ ಪವರ್ ಡೆವಲಪ್‌ಮೆಂಟ್ ಬೋರ್ಡ್(BPDB), ಅದಾನಿ ಕಂಪನಿಯೊಂದಿಗೆ ‘25 ವರ್ಷಗಳ ವಿದ್ಯುತ್ ಖರೀದಿ ಒಪ್ಪಂದ’ಕ್ಕೆ (PPA) ಸಹಿ ಹಾಕಿದೆ. ಬಾಂಗ್ಲಾ ದೇಶಕ್ಕೆ ವಾರ್ಷಿಕ 1,496 ಮೆಗಾವ್ಯಾಟ್ ವಿದ್ಯುತ್‌ನ್ನು ಭಾರತದ ಜಾರ್ಖಾಂಡ್‌‌ ರಾಜ್ಯದಲ್ಲಿರುವ ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರದಿಂದ ಸರಬರಾಜು ಮಾಡುವ ಒಪ್ಪಂದ ಒಳಗೊಂಡಿದೆ.

ಬಾಂಗ್ಲಾದೇಶ ಪವರ್ ಡೆವಲಪ್‌ಮೆಂಟ್ ಬೋರ್ಡ್ ಇತ್ತೀಚೆಗೆ ಅದಾನಿ ಪವರ್‌ಗೆ ಒಪ್ಪಂದದ ಪರಿಷ್ಕರಣೆ ಸಂಬಂಧ ಪತ್ರ ಬರೆದಿದೆ. ಈ ಒಪ್ಪಂದವು ಇತರ ಖಾಸಗಿ ವಿದ್ಯುತ್ ಪೂರೈಕೆದಾರರು ಪಾವತಿಸುವುದಕ್ಕಿಂತ ಹೆಚ್ಚಿನ ಸುಂಕವನ್ನು ದೇಶದ ಮೇಲೆ ವಿಧಿಸುತ್ತಿದೆ ಎಂದು ಪತ್ರದಲ್ಲಿ ಹೇಳಿರುವುದಾಗಿ ಯುನೈಟೆಡ್ ನ್ಯೂಸ್ ಆಫ್ ಬಾಂಗ್ಲಾದೇಶ (UNB) ವರದಿ ಮಾಡಿದೆ.

ಈ ಬಗ್ಗೆ ಬಿಪಿಡಿಬಿ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದು, “ಜಾರ್ಖಂಡ್‌ನ 1,600 ಮೆಗಾವ್ಯಾಟ್ ಸ್ಥಾವರಕ್ಕೆ ಇಂಧನವಾಗಿ ಬಳಸಲಾಗುವ ಕಲ್ಲಿದ್ದಲನ್ನು ಆಮದು ಮಾಡಿಕೊಳ್ಳಲು ಎಲ್‌ಸಿಗಳನ್ನು (ಭಾರತದಲ್ಲಿ) ತೆರೆಯಲು ಅದಾನಿ ಗ್ರೂಪ್‌ಗೆ ಪತ್ರವನ್ನು ಕಳುಹಿಸಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅದಾನಿ ಸಮೂಹದ ಬಗ್ಗೆ ಎದ್ದಿರುವ ಆರೋಪಗಳಿಗೆ ಉತ್ತರಿಸುವ ಉತ್ತರದಾಯಿತ್ವ ಯಾರದ್ದು?

“ಅವರು ಉಲ್ಲೇಖಿಸಿದ ಕಲ್ಲಿದ್ದಲು ಬೆಲೆ ($400/MT) ವಿಪರೀತವಾಗಿದೆ. ಇದು $250/MT ಗಿಂತ ಕಡಿಮೆಯಿರಬೇಕು. ಏಕೆಂದರೆ ನಮ್ಮ ಇತರ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಆಮದು ಮಾಡಿಕೊಂಡ ಕಲ್ಲಿದ್ದಲಿಗೆ ನಾವು ಈಗಾಗಲೇ ಕಡಿಮೆ ಪಾವತಿಸುತ್ತಿದ್ದೇವೆ” ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

“ಸರ್ಕಾರ ಮತ್ತು ಭಾರತೀಯ ಕಂಪನಿಯ ನಡುವಿನ ಒಪ್ಪಂದವನ್ನು ಉಲ್ಲೇಖಿಸುತ್ತಿದ್ದೀರಿ ಎಂದು ನಾನು ಅರ್ಥಮಾಡಿಕೊಂಡಿದ್ದೇನೆ. ನಾವು ಇದರಲ್ಲಿ ಭಾಗಿಯಾಗಿದ್ದೇವೆ ಎಂದು ನಾನು ಭಾವಿಸುವುದಿಲ್ಲ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಅದಾನಿ ವಿರುದ್ಧ ವಂಚನೆಯ ಆರೋಪ ಮಾಡಿರುವ ಹಿಂಡನ್‌ಬರ್ಗ್ ರಿಸರ್ಚ್‌ನಿಂದ ಬಿಕ್ಕಟ್ಟು ಉಂಟಾದ ಬಳಿಕ ಈ ಬೆಳವಣಿಗೆಯಾಗಿದೆ. ಬಾಂಗ್ಲಾದೇಶ ಇಂಧನ ಖರೀದಿ ಒಪ್ಪಂದದಲ್ಲಿ ಪರಿಷ್ಕರಣೆ ಬಯಸಿದೆ.

ಯುಎಸ್ ಮೂಲದ ಹಣಕಾಸು ವಿಶ್ಲೇಷಣಾ ಸಂಸ್ಥೆಯಾದ ಹಿಂಡನ್‌ಬರ್ಗ್ ಜನವರಿಯಲ್ಲಿ ಅದಾನಿ ಗುಂಪಿನ ಮೇಲೆ ವರದಿಯನ್ನು ಪ್ರಕಟಿಸಿದಾಗಿನಿಂದ, ಅದಾನಿ ಕಂಪನಿ ಪಾತಾಳ ಕುಸಿಯುತ್ತಿದೆ. ಷೇರು ಮಾರುಕಟ್ಟೆ ಮೌಲ್ಯದಲ್ಲಿ $100 ಶತಕೋಟಿಯವರೆಗೂ ಕಳೆದುಕೊಂಡಿದೆ.

ಅದಾನಿ ಗುಂಪಿನ ಷೇರುಗಳ ಕುಸಿತದ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ಮಾಧ್ಯಮದ ಒಂದು ವಿಭಾಗವು, ಈಗ ಅದಾನಿ ಜೊತೆಗಿನ BPDB ಒಪ್ಪಂದದ ಭವಿಷ್ಯದ ಬಗ್ಗೆ ಪ್ರಶ್ನೆಗಳನ್ನು ಎತ್ತಿದೆ. “ಅದಾನಿಗೆ ಇನ್ನೂ ತೊಂದರೆಗಳು ಎದುರಾಗುತ್ತವೆ‘. ಏಕೆಂದರೆ, ಹಿಂಡೆನ್‌ಬರ್ಗ್‌ನ ವರದಿಯ ಸರಣಿ ಇನ್ನೂ ಮುಂದುವರೆಯಲಿದೆ” ಎಂದು ಎಚ್ಚರಿಸಲಾಗುತ್ತಿದೆ.

ಫೆಬ್ರವರಿ 7 ರಿಂದ ಅದಾನಿ ಎಂಟರ್‌ಪ್ರೈಸಸ್ ಅನ್ನು ತನ್ನ ಸುಸ್ಥಿರತೆಯ ಸೂಚ್ಯಂಕಗಳಿಂದ ತೆಗೆದುಹಾಕುವುದಾಗಿ ಎಸ್&ಪಿ ಡೌ ಜೋನ್ಸ್ ಸೂಚ್ಯಂಕ ಹೇಳಿದೆ. ಇದರ ನಡುವೆ ಭಾರತದ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರವು ಅದಾನಿ ಎಂಟರ್‌ಪ್ರೈಸಸ್, ಅದಾನಿ ಪೋರ್ಟ್ಸ್ ಮತ್ತು ಅಂಬುಜಾ ಸಿಮೆಂಟ್ಸ್ (ಅದಾನಿ ಸಮೂಹದ ಮಾಲೀಕತ್ವದ) ಷೇರುಗಳ ಮೇಲೆ ಕಣ್ಗಾವಲಿರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...