Homeಮುಖಪುಟಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನ

ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನ

- Advertisement -
- Advertisement -

ಪಾಕಿಸ್ತಾನದ ಮಾಜಿ ಅಧ್ಯಕ್ಷ ಮತ್ತು ಸೇನಾ ಮುಖ್ಯಸ್ಥ ಪರ್ವೇಜ್ ಮುಷರಫ್ ಅವರು ದುಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರನ್ನು ದುಬೈನ ಅಮೆರಿಕನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸ್ವಯಂಪ್ರೇರಿತ ದೇಶಭಷ್ಟರಾಗಿ ಹೊರಗುಳಿದಿದ್ದ ಅವರು ದೀರ್ಘ ಕಾಲದ ಅನಾರೋಗ್ಯದ ನಂತರ ನಿಧನರಾಗಿದ್ದಾರೆ.

1999ರಲ್ಲಿ ರಕ್ತರಹಿತ ದಂಗೆಯಲ್ಲಿ ಅಧಿಕಾರವನ್ನು ವಶಪಡಿಸಿಕೊಂಡ ಬಳಿಕ ಸುಮಾರು ಒಂದು ದಶಕದ ಕಾಲ ಪಾಕಿಸ್ತಾನದಲ್ಲಿ ಮುಷರಫ್ ಆಡಳಿತ ನಡೆಸಿದರು.

ಅನೇಕ ವರ್ಷಗಳು ಅಧಿಕಾರದಲ್ಲಿದ್ದರು. ಅಲ್ ಖೈದಾ ಮತ್ತು ಇತರ ಉಗ್ರಗಾಮಿ ಇಸ್ಲಾಮಿಸ್ಟ್‌ಗಳು ಅವರನ್ನು ಕನಿಷ್ಠ ಮೂರು ಬಾರಿ ಕೊಲ್ಲಲು ಪತ್ನಿಸಿದ್ದರು.

ಭಿನ್ನಾಭಿಪ್ರಾಯಗಳನ್ನು ಹತ್ತಿಕ್ಕಲು ತೀವ್ರ ಮಿಲಿಟರಿ ಪ್ರಯೋಗವನ್ನು ಮಾಡಿದರು. ಅಲ್ ಖೈದಾ ಮತ್ತು ಅಫ್ಘಾನ್ ತಾಲಿಬಾನ್ ವಿರುದ್ಧದ ಹೋರಾಟದಲ್ಲಿ ಅಮೆರಿಕ ಮಧ್ಯಪ್ರವೇಶಿಸಿದ್ದರಿಂದ ಮುಷರಫ್ ಆಡಳಿತ ಅವನತಿ ಹೊಂದಿತು.

1943ರಲ್ಲಿ ನವದೆಹಲಿಯಲ್ಲಿ ಜನಿಸಿದವರು ಮುಷರಫ್‌. ಅವರ ಕುಟುಂಬವು 1947ರಲ್ಲಿ ಪಾಕಿಸ್ತಾನಕ್ಕೆ ಸ್ಥಳಾಂತರಗೊಂಡಾಗ ಅವರಿಗೆ ಕೇವಲ 4 ವರ್ಷ ವಯಸ್ಸಾಗಿತ್ತು. ತಂದೆ ವಿದೇಶಾಂಗ ಸಚಿವಾಲಯದಲ್ಲಿ ಸೇವೆ ಸಲ್ಲಿಸಿದರು, ಅವರ ತಾಯಿ ಶಿಕ್ಷಕಿಯಾಗಿದ್ದರು.

18ನೇ ವಯಸ್ಸಿನಲ್ಲಿ ಮುಷರಫ್‌ ಸೈನ್ಯಕ್ಕೆ ಸೇರಿದರು. ಅದರ ಮುಖ್ಯಸ್ಥರಾಗುವ ಮೊದಲು ಕಮಾಂಡೋ ಘಟಕವನ್ನು ಮುನ್ನಡೆಸಿದರು. ಭಾರತದ ಹಿಡಿತದಲ್ಲಿರುವ ಕಾಶ್ಮೀರದ ಪ್ರದೇಶಗಳನ್ನು ಆಕ್ರಮಿಸುವ ಕಾರ್ಯಾಚರಣೆಗೆ ಹಸಿರು ನಿಶಾನೆ ತೋರಿದ್ದಕ್ಕಾಗಿ ಅವರನ್ನು ವಜಾಗೊಳಿಸಲು ಪ್ರಯತ್ನಿಸಿದ ಅಂದಿನ ಪ್ರಧಾನಿ ನವಾಜ್ ಷರೀಫ್ ಅವರನ್ನು ಪದಚ್ಯುತಗೊಳಿಸುವ ಮೂಲಕ ಮುಷರಫ್‌ ಅಧಿಕಾರವನ್ನು ಪಡೆದಿದ್ದರು.

ಮುಷರಫ್ ಅವರ ಅಧಿಕಾರವಧಿಯಲ್ಲಿ ವಿದೇಶಿ ಹೂಡಿಕೆಯು ಪ್ರವರ್ಧಮಾನಕ್ಕೆ ಬಂದಿತು. ಪಾಕಿಸ್ತಾನವು 7.5%ರಷ್ಟು ವಾರ್ಷಿಕ ಆರ್ಥಿಕ ಬೆಳವಣಿಗೆಯನ್ನು ಕಂಡಿತು. ಇದು ವಿಶ್ವ ಬ್ಯಾಂಕ್ ಮಾಹಿತಿಯ ಪ್ರಕಾರ ಸುಮಾರು ಮೂರು ದಶಕಗಳಲ್ಲಿ ಅತ್ಯಧಿಕ ಮಟ್ಟದ್ದಾಗಿ ಗುರುತಿಸಿಕೊಂಡಿದೆ.

ಅವರ ಅಧ್ಯಕ್ಷೀಯ ಅವಧಿಯ ಬಳಿಕ ನಿರಂಕುಶ ಆಡಳಿತ ಹೆಚ್ಚಿತು. 2006ರಲ್ಲಿ, ಬಲೂಚಿಸ್ತಾನ್ ಪ್ರಾಂತ್ಯದ ಬುಡಕಟ್ಟು ಮುಖ್ಯಸ್ಥನನ್ನು ಕೊಲ್ಲಲು ಮುಷರಫ್ ಮಿಲಿಟರಿ ಕ್ರಮಕ್ಕೆ ಆದೇಶಿಸಿದರು. ಇದು ಇಂದಿಗೂ ಶಸಸ್ತ್ರ ವಿಪ್ಲವಕ್ಕೆ ಕಾರಣವಾಗಿದೆ.

ನಂತರ 2007ರಲ್ಲಿ ಪ್ರತಿಪಕ್ಷದ ನಾಯಕಿ ಬೆನಜೀರ್ ಭುಟ್ಟೊ ಅವರನ್ನು ಹತ್ಯೆ ಮಾಡಿದ ಆತ್ಮಹತ್ಯಾ ದಾಳಿಯು ಹಿಂಸಾಚಾರವನ್ನು ಪ್ರಚೋದಿಸಿತು. ನ್ಯಾಯಾಂಗವನ್ನು ಬಲಪಡಿಸುವ ಪ್ರಯತ್ನಗಳು ಪ್ರತಿಭಟನೆಗಳಿಗೆ ಕಾರಣವಾಯಿತು. ಮುತ್ತಿಗೆ ಹಾಕಿದ ಮುಷರಫ್ ಚುನಾವಣೆಗಳನ್ನು ಮುಂದೂಡಿದರು. ತುರ್ತು ಪರಿಸ್ಥಿತಿಯನ್ನು ಘೋಷಿಸಿದರು.

2008ರಲ್ಲಿ 11 ವರ್ಷಗಳ ಬಳಿಕ ದೇಶದ ಮೊದಲ ಪ್ರಜಾಸತ್ತಾತ್ಮಕ ಚುನಾವಣೆಗಳು ನಡೆದವು. ಮುಷರಫ್ ಅವರ ಪಕ್ಷವು ಸೋತಿತು. ಸಂಸತ್ತಿನ ದೋಷಾರೋಪಣೆಯನ್ನು ಎದುರಿಸಿತು. ಮುಷರಫ್‌ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಲಂಡನ್‌ಗೆ ಪಲಾಯನ ಮಾಡಿದರು.

ಸಂಸತ್ತಿಗೆ ಸ್ಪರ್ಧಿಸಲು ಅವರು 2013 ರಲ್ಲಿ ಪಾಕಿಸ್ತಾನಕ್ಕೆ ಮರಳಿದರು. ಆದರೆ ತಕ್ಷಣವೇ ಅನರ್ಹಗೊಳಿಸಲಾಯಿತು. 2016ರಲ್ಲಿ ದುಬೈಗೆ ತೆರಳಲು ಅವಕಾಶ ನೀಡಲಾಗಿತ್ತು.

2007ರಲ್ಲಿ ತುರ್ತು ಪರಿಸ್ಥಿತಿ ಹೇರಿದ್ದಕ್ಕಾಗಿ ನ್ಯಾಯಾಲಯವು 2019ರಲ್ಲಿ ಮುಷರಫ್‌ಗೆ ಮರಣದಂಡನೆ ವಿಧಿಸಿತು. ಆದರೆ ತೀರ್ಪನ್ನು ನಂತರ ರದ್ದುಗೊಳಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...