Homeಮುಖಪುಟಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನ

ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನ

- Advertisement -
- Advertisement -

ಪಾಕಿಸ್ತಾನದ ಮಾಜಿ ಅಧ್ಯಕ್ಷ ಮತ್ತು ಸೇನಾ ಮುಖ್ಯಸ್ಥ ಪರ್ವೇಜ್ ಮುಷರಫ್ ಅವರು ದುಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರನ್ನು ದುಬೈನ ಅಮೆರಿಕನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸ್ವಯಂಪ್ರೇರಿತ ದೇಶಭಷ್ಟರಾಗಿ ಹೊರಗುಳಿದಿದ್ದ ಅವರು ದೀರ್ಘ ಕಾಲದ ಅನಾರೋಗ್ಯದ ನಂತರ ನಿಧನರಾಗಿದ್ದಾರೆ.

1999ರಲ್ಲಿ ರಕ್ತರಹಿತ ದಂಗೆಯಲ್ಲಿ ಅಧಿಕಾರವನ್ನು ವಶಪಡಿಸಿಕೊಂಡ ಬಳಿಕ ಸುಮಾರು ಒಂದು ದಶಕದ ಕಾಲ ಪಾಕಿಸ್ತಾನದಲ್ಲಿ ಮುಷರಫ್ ಆಡಳಿತ ನಡೆಸಿದರು.

ಅನೇಕ ವರ್ಷಗಳು ಅಧಿಕಾರದಲ್ಲಿದ್ದರು. ಅಲ್ ಖೈದಾ ಮತ್ತು ಇತರ ಉಗ್ರಗಾಮಿ ಇಸ್ಲಾಮಿಸ್ಟ್‌ಗಳು ಅವರನ್ನು ಕನಿಷ್ಠ ಮೂರು ಬಾರಿ ಕೊಲ್ಲಲು ಪತ್ನಿಸಿದ್ದರು.

ಭಿನ್ನಾಭಿಪ್ರಾಯಗಳನ್ನು ಹತ್ತಿಕ್ಕಲು ತೀವ್ರ ಮಿಲಿಟರಿ ಪ್ರಯೋಗವನ್ನು ಮಾಡಿದರು. ಅಲ್ ಖೈದಾ ಮತ್ತು ಅಫ್ಘಾನ್ ತಾಲಿಬಾನ್ ವಿರುದ್ಧದ ಹೋರಾಟದಲ್ಲಿ ಅಮೆರಿಕ ಮಧ್ಯಪ್ರವೇಶಿಸಿದ್ದರಿಂದ ಮುಷರಫ್ ಆಡಳಿತ ಅವನತಿ ಹೊಂದಿತು.

1943ರಲ್ಲಿ ನವದೆಹಲಿಯಲ್ಲಿ ಜನಿಸಿದವರು ಮುಷರಫ್‌. ಅವರ ಕುಟುಂಬವು 1947ರಲ್ಲಿ ಪಾಕಿಸ್ತಾನಕ್ಕೆ ಸ್ಥಳಾಂತರಗೊಂಡಾಗ ಅವರಿಗೆ ಕೇವಲ 4 ವರ್ಷ ವಯಸ್ಸಾಗಿತ್ತು. ತಂದೆ ವಿದೇಶಾಂಗ ಸಚಿವಾಲಯದಲ್ಲಿ ಸೇವೆ ಸಲ್ಲಿಸಿದರು, ಅವರ ತಾಯಿ ಶಿಕ್ಷಕಿಯಾಗಿದ್ದರು.

18ನೇ ವಯಸ್ಸಿನಲ್ಲಿ ಮುಷರಫ್‌ ಸೈನ್ಯಕ್ಕೆ ಸೇರಿದರು. ಅದರ ಮುಖ್ಯಸ್ಥರಾಗುವ ಮೊದಲು ಕಮಾಂಡೋ ಘಟಕವನ್ನು ಮುನ್ನಡೆಸಿದರು. ಭಾರತದ ಹಿಡಿತದಲ್ಲಿರುವ ಕಾಶ್ಮೀರದ ಪ್ರದೇಶಗಳನ್ನು ಆಕ್ರಮಿಸುವ ಕಾರ್ಯಾಚರಣೆಗೆ ಹಸಿರು ನಿಶಾನೆ ತೋರಿದ್ದಕ್ಕಾಗಿ ಅವರನ್ನು ವಜಾಗೊಳಿಸಲು ಪ್ರಯತ್ನಿಸಿದ ಅಂದಿನ ಪ್ರಧಾನಿ ನವಾಜ್ ಷರೀಫ್ ಅವರನ್ನು ಪದಚ್ಯುತಗೊಳಿಸುವ ಮೂಲಕ ಮುಷರಫ್‌ ಅಧಿಕಾರವನ್ನು ಪಡೆದಿದ್ದರು.

ಮುಷರಫ್ ಅವರ ಅಧಿಕಾರವಧಿಯಲ್ಲಿ ವಿದೇಶಿ ಹೂಡಿಕೆಯು ಪ್ರವರ್ಧಮಾನಕ್ಕೆ ಬಂದಿತು. ಪಾಕಿಸ್ತಾನವು 7.5%ರಷ್ಟು ವಾರ್ಷಿಕ ಆರ್ಥಿಕ ಬೆಳವಣಿಗೆಯನ್ನು ಕಂಡಿತು. ಇದು ವಿಶ್ವ ಬ್ಯಾಂಕ್ ಮಾಹಿತಿಯ ಪ್ರಕಾರ ಸುಮಾರು ಮೂರು ದಶಕಗಳಲ್ಲಿ ಅತ್ಯಧಿಕ ಮಟ್ಟದ್ದಾಗಿ ಗುರುತಿಸಿಕೊಂಡಿದೆ.

ಅವರ ಅಧ್ಯಕ್ಷೀಯ ಅವಧಿಯ ಬಳಿಕ ನಿರಂಕುಶ ಆಡಳಿತ ಹೆಚ್ಚಿತು. 2006ರಲ್ಲಿ, ಬಲೂಚಿಸ್ತಾನ್ ಪ್ರಾಂತ್ಯದ ಬುಡಕಟ್ಟು ಮುಖ್ಯಸ್ಥನನ್ನು ಕೊಲ್ಲಲು ಮುಷರಫ್ ಮಿಲಿಟರಿ ಕ್ರಮಕ್ಕೆ ಆದೇಶಿಸಿದರು. ಇದು ಇಂದಿಗೂ ಶಸಸ್ತ್ರ ವಿಪ್ಲವಕ್ಕೆ ಕಾರಣವಾಗಿದೆ.

ನಂತರ 2007ರಲ್ಲಿ ಪ್ರತಿಪಕ್ಷದ ನಾಯಕಿ ಬೆನಜೀರ್ ಭುಟ್ಟೊ ಅವರನ್ನು ಹತ್ಯೆ ಮಾಡಿದ ಆತ್ಮಹತ್ಯಾ ದಾಳಿಯು ಹಿಂಸಾಚಾರವನ್ನು ಪ್ರಚೋದಿಸಿತು. ನ್ಯಾಯಾಂಗವನ್ನು ಬಲಪಡಿಸುವ ಪ್ರಯತ್ನಗಳು ಪ್ರತಿಭಟನೆಗಳಿಗೆ ಕಾರಣವಾಯಿತು. ಮುತ್ತಿಗೆ ಹಾಕಿದ ಮುಷರಫ್ ಚುನಾವಣೆಗಳನ್ನು ಮುಂದೂಡಿದರು. ತುರ್ತು ಪರಿಸ್ಥಿತಿಯನ್ನು ಘೋಷಿಸಿದರು.

2008ರಲ್ಲಿ 11 ವರ್ಷಗಳ ಬಳಿಕ ದೇಶದ ಮೊದಲ ಪ್ರಜಾಸತ್ತಾತ್ಮಕ ಚುನಾವಣೆಗಳು ನಡೆದವು. ಮುಷರಫ್ ಅವರ ಪಕ್ಷವು ಸೋತಿತು. ಸಂಸತ್ತಿನ ದೋಷಾರೋಪಣೆಯನ್ನು ಎದುರಿಸಿತು. ಮುಷರಫ್‌ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಲಂಡನ್‌ಗೆ ಪಲಾಯನ ಮಾಡಿದರು.

ಸಂಸತ್ತಿಗೆ ಸ್ಪರ್ಧಿಸಲು ಅವರು 2013 ರಲ್ಲಿ ಪಾಕಿಸ್ತಾನಕ್ಕೆ ಮರಳಿದರು. ಆದರೆ ತಕ್ಷಣವೇ ಅನರ್ಹಗೊಳಿಸಲಾಯಿತು. 2016ರಲ್ಲಿ ದುಬೈಗೆ ತೆರಳಲು ಅವಕಾಶ ನೀಡಲಾಗಿತ್ತು.

2007ರಲ್ಲಿ ತುರ್ತು ಪರಿಸ್ಥಿತಿ ಹೇರಿದ್ದಕ್ಕಾಗಿ ನ್ಯಾಯಾಲಯವು 2019ರಲ್ಲಿ ಮುಷರಫ್‌ಗೆ ಮರಣದಂಡನೆ ವಿಧಿಸಿತು. ಆದರೆ ತೀರ್ಪನ್ನು ನಂತರ ರದ್ದುಗೊಳಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...