Homeಮುಖಪುಟತೆಲಂಗಾಣ: ಶಿವ ಮಾಲೆ ಧರಿಸಿದ ಗುಂಪಿನಿಂದ ದಲಿತ ಯುವಕನ ಮೇಲೆ ಅಮಾನುಷ ಹಲ್ಲೆ

ತೆಲಂಗಾಣ: ಶಿವ ಮಾಲೆ ಧರಿಸಿದ ಗುಂಪಿನಿಂದ ದಲಿತ ಯುವಕನ ಮೇಲೆ ಅಮಾನುಷ ಹಲ್ಲೆ

- Advertisement -
- Advertisement -

ಕಳೆದ ಜನವರಿ 31ರಂದು ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ ಯಲಾಲ್‌ನಲ್ಲಿ 26 ವರ್ಷದ ದಲಿತ ವ್ಯಕ್ತಿಯ ಮೇಲೆ ಶಿವ ಮಾಲೆ ಧರಿಸಿದ ಗುಂಪೊಂದು ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.

ಸಂತ್ರಸ್ತರಾಗಿರುವ ಯಲಾಲ್ ಮಂಡಲದ ದೇವನೂರು ಗ್ರಾಮದ ನಿವಾಸಿ ಮೆಟ್ಲಿ ನರೇಶ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಇದುವರೆಗೆ ದಾಳಿಗೆ ಸಂಬಂಧಿಸಿದಂತೆ ಯಾರನ್ನೂ ಬಂಧಿಸಿಲ್ಲ ಎಂದು ‘ನ್ಯೂಸ್‌ ಮಿನಿಟ್‌’ ವರದಿ ಮಾಡಿದೆ.

ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವುದು ವಿಡಿಯೊದಲ್ಲಿ ದಾಖಲಾಗಿದೆ. ದೊಡ್ಡ ಗುಂಪಿನ ಹೆಚ್ಚಿನವರು ಶಿವ ಮಾಲೆ ಧರಿಸಿದ್ದರು. ನರೇಶ್ ಮತ್ತು ಇನ್ನೊಬ್ಬ ವ್ಯಕ್ತಿಯ ಮೇಲೆ ಕಲ್ಲುಗಳು, ಪೊರಕೆಗಳು, ಚಪ್ಪಲಿಗಳು ಮತ್ತು ಮಡಕೆಗಳಿಂದ ಹಲ್ಲೆ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿದ್ದ ಮೂವರು ಪೊಲೀಸ್ ಅಧಿಕಾರಿಗಳು ಇಬ್ಬರನ್ನು ತಡೆದು ರಕ್ಷಿಸಲು ಪ್ರಯತ್ನಿಸುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು. ಆದರೆ ಕೋಪಗೊಂಡ ಗುಂಪು ಪೊಲೀಸರನ್ನು ನಿರ್ಲಕ್ಷಿಸಿ ದಾಳಿ ನಡೆಸಿವೆ.

ದೇವನೂರು ಗ್ರಾಮದಲ್ಲಿ ದಲಿತರು ಗ್ರಾಮ ಮಧ್ಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಲು ನಿರ್ಧರಿಸಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಬಲಪಂಥೀಯ ಗುಂಪು ಹಿಂದೂ ವಾಹಿನಿ ಈ ನಿರ್ಧಾರದಿಂದ ಅಸಮಾಧಾನಗೊಂಡಿದ್ದು, ಛತ್ರಪತಿ ಶಿವಾಜಿಯ ಪ್ರತಿಮೆಯನ್ನು ಸ್ಥಾಪಿಸಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ.

ವೈಯಕ್ತಿಕ ದ್ವೇಷದಿಂದ ಈ ದಾಳಿ ನಡೆದಿದೆ ಎಂದು ಪೊಲೀಸರು ಹೇಳಿದರೆ, ಜಾತಿ ವಿರೋಧಿ ಸಂಘಟನೆ ಕುಲ ನಿರ್ಮೂಲನಾ ಹೋರಾಟ ಸಮಿತಿಯ ಮುಖಂಡ ಅಭಿನವ್ ಬುರಾಮ್, “ಇದು ಉದ್ದೇಶಪೂರ್ವಕ ದಾಳಿಯಾಗಿದ್ದು, ಗ್ರಾಮದಲ್ಲಿ ದಲಿತರು ಹಿಂಸೆ ಮತ್ತು ತಾರತಮ್ಯಕ್ಕೆ ಒಳಗಾಗಿದ್ದಾರೆ” ಎಂದು ಆರೋಪಿಸಿದ್ದಾರೆ.

“ಗ್ರಾಮದಲ್ಲಿ ಸಾಕಷ್ಟು ಸಲ ದೌರ್ಜನ್ಯಗಳು ನಡೆದಿವೆ. ಹತ್ತು ವರ್ಷಗಳ ಹಿಂದೆ, ದಲಿತರು ಗೋರಕ್ಷಕರಿಂದ ದಾಳಿಗೊಳಗಾಗಿದ್ದರು. ಹಾಗಾಗಿ ಸ್ಥಳೀಯ ದೇವರಿಗೆ ಹಸುಗಳನ್ನು ಬಲಿ ನೀಡುವ ಸಾಂಪ್ರದಾಯಿಕ ಪದ್ಧತಿಯನ್ನು ಮುಂದುವರಿಸಲು ನಿರಾಕರಿಸಿದರು. ಅವರು ಹಳ್ಳಿ ಸಂಪ್ರದಾಯವನ್ನು ಮುಂದುವರಿಸಲು ನಿರಾಕರಿಸಿದ್ದರಿಂದ, ಯಾವುದೇ ಗ್ರಾಮದ ಸಮಾರಂಭಗಳಲ್ಲಿ ಡ್ರಮ್ ಬಾರಿಸುವುದನ್ನು ನಿಲ್ಲಿಸಲಾಯಿತು. ಇದು ಅವರ ಆದಾಯದ ಮೂಲವನ್ನು ಕಸಿದುಕೊಂಡಿದೆ ಎಂದು ಅವರು ಹೇಳಿದರು.

ಯಲಾಲ್ ಸಬ್ ಇನ್ಸ್ ಪೆಕ್ಟರ್ ಎ ಅರವಿಂದ್ ಪ್ರಕಾರ, ಸಂತ್ರಸ್ತ ನರೇಶ್ ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು, ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು. ಈ ದಾಳಿಯು ಜನವರಿ 30 ರ ಸಂಜೆ ಸಂಭವಿಸಿದೆ ಎಂದು ತಿಳಿಸಿದ್ದಾರೆ.

ದಲಿತ ಯುವಕರ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ಜಾತಿ ವಿರೋಧಿ ಸಂಘಟನೆಗಳು ಗುರುವಾರ ಮಂಡಲ ಕಂದಾಯ ಅಧಿಕಾರಿ (ಎಂಆರ್‌ಒ) ಅವರಿಗೆ ಮನವಿ ಪತ್ರ ಸಲ್ಲಿಸಿ ಧರಣಿ ಸತ್ಯಾಗ್ರಹ ನಡೆಸಿದರು. ಕ್ರಮ ಕೈಗೊಳ್ಳದಿದ್ದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ಬೃಹತ್ ಧರಣಿ ನಡೆಸುವುದಾಗಿ ಆಡಳಿತ ಮಂಡಳಿಗೆ ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಗೌರಿ’ ಸಾಕ್ಷ್ಯಚಿತ್ರ: “ದಡ ದಡ, ಒಂದಲ್ಲ ಎರಡಲ್ಲ… ಸಾಲಾಗಿ ಏಳು, ತೂರಿದ್ದು ಗೌರಿಗೆ, ತಾಕಿದ್ದು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....