Homeಮುಖಪುಟದ್ವೇಷ ಭಾಷಣ ಹಿನ್ನೆಲೆ ರಾಮದೇವ್ ವಿರುದ್ಧ ಎಫ್ಐಆರ್

ದ್ವೇಷ ಭಾಷಣ ಹಿನ್ನೆಲೆ ರಾಮದೇವ್ ವಿರುದ್ಧ ಎಫ್ಐಆರ್

- Advertisement -
- Advertisement -

ರಾಜಸ್ಥಾನದಲ್ಲಿ ಫೆಬ್ರವರಿ 2ರಂದು ಯೋಗೋದ್ಯಮಿ ಬಾಬಾ ರಾಮ್‌ದೇವ್, ಮುಸ್ಲಿಮರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಹೇಳಲಾಗಿದೆ. ಭಾನುವಾರ ಅವರ ವಿರುದ್ಧ ದ್ವೇಷ ಮತ್ತು ಅತಿರೇಕದ ಧಾರ್ಮಿಕ ಭಾವನೆಗಳನ್ನು ಉತ್ತೇಜಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಪಥಾಯಿ ಖಾನ್ ಎನ್ನುವವರು ನೀಡಿದ ದೂರಿನ ಮೇರೆಗೆ ಬಾರ್ಮರ್‌ನಲ್ಲಿ ರಾಮ್‌ದೇವ್‌ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೋಲೀಸರು ಹೇಳಿದ್ದಾರೆ.

ಫೆಬ್ರವರಿ 2 ರಂದು ರಾಮ್‌ದೇವ್ ಬಾರ್ಮರ್‌ನಲ್ಲಿ ದಾರ್ಶನಿಕರ ಸಭೆಗೆ ಹಾಜರಾಗಿದ್ದರು. ಈ ವೇಳೆ ಅವರು, ”ಮುಸ್ಲಿಮರು ಪ್ರಾರ್ಥನೆ ಸಲ್ಲಿಸುವುದರಿಂದ ಎಲ್ಲಾ ಪಾಪಗಳಿಂದ ವಿಮೋಚನೆಯಾಗುತ್ತದೆ ಎಂದು ನಂಬುತ್ತಾರೆ ಮತ್ತು ಇದು ಭಯೋತ್ಪಾದನೆ ಹಾಗೂ ಅಪರಾಧ ಕೃತ್ಯ ನಡೆಸಲು ಕಾರಣವಾಗುತ್ತದೆ. ಕೇವಲ ಪ್ರಾರ್ಥನೆ ಮಾಡಿ, ನೀವು ಏನು ಮಾಡಬೇಕೆಂದು ಬಯಸುತ್ತೀರೋ ಅದನ್ನು ಮಾಡಿ ಎಂದು ಅವರಿಗೆ ಕಲಿಸಲಾಗಿದೆ. ಹಾಗಾಗಿ ಅವರು ಭಯೋತ್ಪಾದಕರಾಗುತ್ತಿದ್ದಾರೆ, ಮತ್ತು ಅವರಲ್ಲಿ ಬಹಳಷ್ಟು ಜನರು ಅಪರಾಧಿಗಳಾಗುತ್ತಿದ್ದಾರೆ” ಎಂದು ಮುಸ್ಲಿಮರ ಬಗ್ಗೆ ರಾಮ್‌ದೇವ್ ದ್ವೇಷದ ಮಾತುಗಳನ್ನಾಡಿದ್ದಾರೆ.

”ನಿಮ್ಮ ಧರ್ಮ ಏನು ಹೇಳುತ್ತದೆ ಎಂದು ಮುಸಲ್ಮಾನರನ್ನು ಕೇಳಿ, ಅವರು ಐದು ಬಾರಿ [ದಿನಕ್ಕೆ] ನಮಾಜ್ ಮಾಡಿ, ನಂತರ ಮನಸ್ಸಿಗೆ ಬಂದದ್ದನ್ನು ಮಾಡಿ ಎಂದು ಹೇಳುತ್ತಾರೆ. ನೀವು ಹಿಂದೂ ಹುಡುಗಿಯರನ್ನು ಅಪಹರಿಸಲಿ, ನೀವು ಮಾಡಬೇಕಾದ ಪಾಪವನ್ನೆಲ್ಲಾ ಮಾಡಿ” ಎಂದು ರಾಮ್‌ದೇವ್ ಮುಸ್ಲಿಂ ಧರ್ಮದ ವಿರುದ್ಧ ಮಾತನಾಡಿದ್ದಾರೆ.

ಇದೇ ವೇಳೆ ಕ್ರಿಶ್ಚಿಯನ್ನರ ಬಗ್ಗೆಯೂ ಮಾತನಾಡಿದ ರಾಮದೇವ್, ”ಚರ್ಚ್‌ಗೆ ಹಾಜರಾಗುವ ಮೂಲಕ ಮತ್ತು ಮೇಣದಬತ್ತಿಗಳನ್ನು ಬೆಳಗಿಸುವ ಮೂಲಕ ಅವರು ತಮ್ಮ ಎಲ್ಲಾ ಪಾಪಗಳಿಗೆ ಕ್ಷಮೆಯನ್ನು ಪಡೆಯುತ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲಿಮರು, ಕ್ರಿಶ್ಚಿಯನ್ನರಿಗೆ ಮತಾಂತರದ ಗೀಳಿದೆ: ಯೋಗೋದ್ಯಮಿ ರಾಮ್‌ದೇವ್ ಹೇಳಿಕೆ

ಇಸ್ಲಾಂ ಧರ್ಮದ ವಿರುದ್ಧ ದ್ವೇಷ ಮತ್ತು ದ್ವೇಷದ ಭಾವನೆ ಮೂಡಿಸಲು ಉದ್ದೇಶಪೂರ್ವಕವಾಗಿ ರಾಮ್‌ದೇವ್ ಈ ಹೇಳಿಕೆ ನೀಡಿದ್ದಾರೆ ಎಂದು ಖಾನ್ ತಮ್ಮ ದೂರಿನಲ್ಲಿ ಹೇಳಿದ್ದಾರೆ. ಈ ಹೇಳಿಕೆಗಳು ಮುಸ್ಲಿಮರ ಭಾವನೆಗಳಿಗೆ ಧಕ್ಕೆ ತಂದಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಭಾನುವಾರ, ರಾಜಸ್ಥಾನ ಪೊಲೀಸರು ರಾಮ್‌ದೇವ್ ವಿರುದ್ಧ ಸೆಕ್ಷನ್ 153 (ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295 ಎ (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಪ್ರಕರಣ ದಾಖಲಿಸಲಾಗಿದೆ. ) ಮತ್ತು ಭಾರತೀಯ ದಂಡ ಸಂಹಿತೆಯ 298 (ಯಾವುದೇ ವ್ಯಕ್ತಿಯ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವ ಉದ್ದೇಶಪೂರ್ವಕ ಉದ್ದೇಶದಿಂದ ಹೇಳುವುದು, ಪದಗಳು, ಇತ್ಯಾದಿ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಹಿಂದೆಯೂ ರಾಮ್‌ದೇವ್ ಇಂತಹ ವಿವಾದಗಳನ್ನು ಹುಟ್ಟುಹಾಕಿದ್ದರು. ಮಹಾರಾಷ್ಟ್ರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ (ನವೆಂಬರ್‌) ರಾಮ್‌ದೇವ್ ಅವರು ಸೆಕ್ಸಿಸ್ಟ್ ಟೀಕೆಗಳನ್ನು ಮಾಡಿದ್ದರು.

”ಮಹಿಳೆಯರು ಯಾವುದೇ ಬಟ್ಟೆಯಲ್ಲಿಯೂ ಉತ್ತಮವಾಗಿ ಕಾಣುತ್ತಾರೆ ಮತ್ತು ಅವರು ಏನನ್ನೂ ಧರಿಸದಿದ್ದರೂ ಸಹ ಉತ್ತಮವಾಗಿ ಕಾಣುತ್ತಾರೆ” ಎಂದು ಬಹಳ ಕೀಳು ಮನಸ್ಥಿತಿಯಲ್ಲಿ ರಾಮ್‌ದೇವ್‌ ಮಾತನಾಡಿದ್ದರು.

ಅಲೋಪತಿ ಮತ್ತು ವೈದ್ಯಕೀಯ ಪದ್ಧತಿಯನ್ನು ಅಭ್ಯಾಸ ಮಾಡುವ ವೈದ್ಯರ ಬಗ್ಗೆ ಅವಹೇಳನಕಾರಿ ಹೇಳಿಕೆಗಳಿಗಾಗಿ ಯೋಗ ಗುರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣವನ್ನೂ ಎದುರಿಸುತ್ತಿದ್ದಾರೆ.

ಅಲೋಪತಿ ಒಂದು ”ಅವಿವೇಕಿ ವಿಜ್ಞಾನ ಮತ್ತು ಔಷಧಿಗಳು ನಿಷ್ಪ್ರಯೋಜಕ, ಅಲೋಪತಿ ಔಷಧಿಗಳನ್ನು ತೆಗೆದುಕೊಂಡ ನಂತರ ಲಕ್ಷಾಂತರ ರೋಗಿಗಳು ಸಾವನ್ನಪ್ಪಿದ್ದಾರೆ” ಎಂದು ರಾಮ್‌ದೇವ್‌ ಕೊರೊನಾ ನಿರ್ವಹಣೆಗೆ ಸೆಣಸುತ್ತಿರುವ ವೈದ್ಯ ಸಮೂಹವನ್ನು ಮೇ 2021 ರಲ್ಲಿ ಅವಮಾನಿಸಿದ್ದರು.

ಮತ್ತೊಂದು ವೀಡಿಯೊದಲ್ಲಿ, ”ಎರಡು ಡೋಸ್ ಕರೋನಾವೈರಸ್ ಲಸಿಕೆ ಪಡೆದ ನಂತರವೂ 1,000 ವೈದ್ಯರು ಸಾವನ್ನಪ್ಪಿದ್ದಾರೆ” ಎಂದು ಸುಳ್ಳು ಹೇಳಿದ್ದರು. ನಂತರ, ಮಾಜಿ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ತಮ್ಮ ಹೇಳಿಕೆಗಳನ್ನು ಹಿಂತೆಗೆದುಕೊಳ್ಳುವಂತೆ ಕೇಳಿಕೊಂಡರು ಆಗ ರಾಮ್‌ದೇವ್‌ ಕ್ಷಮೆಯಾಚಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...