Homeಮುಖಪುಟದ್ವೇಷ ಭಾಷಣ ಹಿನ್ನೆಲೆ ರಾಮದೇವ್ ವಿರುದ್ಧ ಎಫ್ಐಆರ್

ದ್ವೇಷ ಭಾಷಣ ಹಿನ್ನೆಲೆ ರಾಮದೇವ್ ವಿರುದ್ಧ ಎಫ್ಐಆರ್

- Advertisement -
- Advertisement -

ರಾಜಸ್ಥಾನದಲ್ಲಿ ಫೆಬ್ರವರಿ 2ರಂದು ಯೋಗೋದ್ಯಮಿ ಬಾಬಾ ರಾಮ್‌ದೇವ್, ಮುಸ್ಲಿಮರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಹೇಳಲಾಗಿದೆ. ಭಾನುವಾರ ಅವರ ವಿರುದ್ಧ ದ್ವೇಷ ಮತ್ತು ಅತಿರೇಕದ ಧಾರ್ಮಿಕ ಭಾವನೆಗಳನ್ನು ಉತ್ತೇಜಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಪಥಾಯಿ ಖಾನ್ ಎನ್ನುವವರು ನೀಡಿದ ದೂರಿನ ಮೇರೆಗೆ ಬಾರ್ಮರ್‌ನಲ್ಲಿ ರಾಮ್‌ದೇವ್‌ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೋಲೀಸರು ಹೇಳಿದ್ದಾರೆ.

ಫೆಬ್ರವರಿ 2 ರಂದು ರಾಮ್‌ದೇವ್ ಬಾರ್ಮರ್‌ನಲ್ಲಿ ದಾರ್ಶನಿಕರ ಸಭೆಗೆ ಹಾಜರಾಗಿದ್ದರು. ಈ ವೇಳೆ ಅವರು, ”ಮುಸ್ಲಿಮರು ಪ್ರಾರ್ಥನೆ ಸಲ್ಲಿಸುವುದರಿಂದ ಎಲ್ಲಾ ಪಾಪಗಳಿಂದ ವಿಮೋಚನೆಯಾಗುತ್ತದೆ ಎಂದು ನಂಬುತ್ತಾರೆ ಮತ್ತು ಇದು ಭಯೋತ್ಪಾದನೆ ಹಾಗೂ ಅಪರಾಧ ಕೃತ್ಯ ನಡೆಸಲು ಕಾರಣವಾಗುತ್ತದೆ. ಕೇವಲ ಪ್ರಾರ್ಥನೆ ಮಾಡಿ, ನೀವು ಏನು ಮಾಡಬೇಕೆಂದು ಬಯಸುತ್ತೀರೋ ಅದನ್ನು ಮಾಡಿ ಎಂದು ಅವರಿಗೆ ಕಲಿಸಲಾಗಿದೆ. ಹಾಗಾಗಿ ಅವರು ಭಯೋತ್ಪಾದಕರಾಗುತ್ತಿದ್ದಾರೆ, ಮತ್ತು ಅವರಲ್ಲಿ ಬಹಳಷ್ಟು ಜನರು ಅಪರಾಧಿಗಳಾಗುತ್ತಿದ್ದಾರೆ” ಎಂದು ಮುಸ್ಲಿಮರ ಬಗ್ಗೆ ರಾಮ್‌ದೇವ್ ದ್ವೇಷದ ಮಾತುಗಳನ್ನಾಡಿದ್ದಾರೆ.

”ನಿಮ್ಮ ಧರ್ಮ ಏನು ಹೇಳುತ್ತದೆ ಎಂದು ಮುಸಲ್ಮಾನರನ್ನು ಕೇಳಿ, ಅವರು ಐದು ಬಾರಿ [ದಿನಕ್ಕೆ] ನಮಾಜ್ ಮಾಡಿ, ನಂತರ ಮನಸ್ಸಿಗೆ ಬಂದದ್ದನ್ನು ಮಾಡಿ ಎಂದು ಹೇಳುತ್ತಾರೆ. ನೀವು ಹಿಂದೂ ಹುಡುಗಿಯರನ್ನು ಅಪಹರಿಸಲಿ, ನೀವು ಮಾಡಬೇಕಾದ ಪಾಪವನ್ನೆಲ್ಲಾ ಮಾಡಿ” ಎಂದು ರಾಮ್‌ದೇವ್ ಮುಸ್ಲಿಂ ಧರ್ಮದ ವಿರುದ್ಧ ಮಾತನಾಡಿದ್ದಾರೆ.

ಇದೇ ವೇಳೆ ಕ್ರಿಶ್ಚಿಯನ್ನರ ಬಗ್ಗೆಯೂ ಮಾತನಾಡಿದ ರಾಮದೇವ್, ”ಚರ್ಚ್‌ಗೆ ಹಾಜರಾಗುವ ಮೂಲಕ ಮತ್ತು ಮೇಣದಬತ್ತಿಗಳನ್ನು ಬೆಳಗಿಸುವ ಮೂಲಕ ಅವರು ತಮ್ಮ ಎಲ್ಲಾ ಪಾಪಗಳಿಗೆ ಕ್ಷಮೆಯನ್ನು ಪಡೆಯುತ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲಿಮರು, ಕ್ರಿಶ್ಚಿಯನ್ನರಿಗೆ ಮತಾಂತರದ ಗೀಳಿದೆ: ಯೋಗೋದ್ಯಮಿ ರಾಮ್‌ದೇವ್ ಹೇಳಿಕೆ

ಇಸ್ಲಾಂ ಧರ್ಮದ ವಿರುದ್ಧ ದ್ವೇಷ ಮತ್ತು ದ್ವೇಷದ ಭಾವನೆ ಮೂಡಿಸಲು ಉದ್ದೇಶಪೂರ್ವಕವಾಗಿ ರಾಮ್‌ದೇವ್ ಈ ಹೇಳಿಕೆ ನೀಡಿದ್ದಾರೆ ಎಂದು ಖಾನ್ ತಮ್ಮ ದೂರಿನಲ್ಲಿ ಹೇಳಿದ್ದಾರೆ. ಈ ಹೇಳಿಕೆಗಳು ಮುಸ್ಲಿಮರ ಭಾವನೆಗಳಿಗೆ ಧಕ್ಕೆ ತಂದಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಭಾನುವಾರ, ರಾಜಸ್ಥಾನ ಪೊಲೀಸರು ರಾಮ್‌ದೇವ್ ವಿರುದ್ಧ ಸೆಕ್ಷನ್ 153 (ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295 ಎ (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಪ್ರಕರಣ ದಾಖಲಿಸಲಾಗಿದೆ. ) ಮತ್ತು ಭಾರತೀಯ ದಂಡ ಸಂಹಿತೆಯ 298 (ಯಾವುದೇ ವ್ಯಕ್ತಿಯ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವ ಉದ್ದೇಶಪೂರ್ವಕ ಉದ್ದೇಶದಿಂದ ಹೇಳುವುದು, ಪದಗಳು, ಇತ್ಯಾದಿ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಹಿಂದೆಯೂ ರಾಮ್‌ದೇವ್ ಇಂತಹ ವಿವಾದಗಳನ್ನು ಹುಟ್ಟುಹಾಕಿದ್ದರು. ಮಹಾರಾಷ್ಟ್ರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ (ನವೆಂಬರ್‌) ರಾಮ್‌ದೇವ್ ಅವರು ಸೆಕ್ಸಿಸ್ಟ್ ಟೀಕೆಗಳನ್ನು ಮಾಡಿದ್ದರು.

”ಮಹಿಳೆಯರು ಯಾವುದೇ ಬಟ್ಟೆಯಲ್ಲಿಯೂ ಉತ್ತಮವಾಗಿ ಕಾಣುತ್ತಾರೆ ಮತ್ತು ಅವರು ಏನನ್ನೂ ಧರಿಸದಿದ್ದರೂ ಸಹ ಉತ್ತಮವಾಗಿ ಕಾಣುತ್ತಾರೆ” ಎಂದು ಬಹಳ ಕೀಳು ಮನಸ್ಥಿತಿಯಲ್ಲಿ ರಾಮ್‌ದೇವ್‌ ಮಾತನಾಡಿದ್ದರು.

ಅಲೋಪತಿ ಮತ್ತು ವೈದ್ಯಕೀಯ ಪದ್ಧತಿಯನ್ನು ಅಭ್ಯಾಸ ಮಾಡುವ ವೈದ್ಯರ ಬಗ್ಗೆ ಅವಹೇಳನಕಾರಿ ಹೇಳಿಕೆಗಳಿಗಾಗಿ ಯೋಗ ಗುರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣವನ್ನೂ ಎದುರಿಸುತ್ತಿದ್ದಾರೆ.

ಅಲೋಪತಿ ಒಂದು ”ಅವಿವೇಕಿ ವಿಜ್ಞಾನ ಮತ್ತು ಔಷಧಿಗಳು ನಿಷ್ಪ್ರಯೋಜಕ, ಅಲೋಪತಿ ಔಷಧಿಗಳನ್ನು ತೆಗೆದುಕೊಂಡ ನಂತರ ಲಕ್ಷಾಂತರ ರೋಗಿಗಳು ಸಾವನ್ನಪ್ಪಿದ್ದಾರೆ” ಎಂದು ರಾಮ್‌ದೇವ್‌ ಕೊರೊನಾ ನಿರ್ವಹಣೆಗೆ ಸೆಣಸುತ್ತಿರುವ ವೈದ್ಯ ಸಮೂಹವನ್ನು ಮೇ 2021 ರಲ್ಲಿ ಅವಮಾನಿಸಿದ್ದರು.

ಮತ್ತೊಂದು ವೀಡಿಯೊದಲ್ಲಿ, ”ಎರಡು ಡೋಸ್ ಕರೋನಾವೈರಸ್ ಲಸಿಕೆ ಪಡೆದ ನಂತರವೂ 1,000 ವೈದ್ಯರು ಸಾವನ್ನಪ್ಪಿದ್ದಾರೆ” ಎಂದು ಸುಳ್ಳು ಹೇಳಿದ್ದರು. ನಂತರ, ಮಾಜಿ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ತಮ್ಮ ಹೇಳಿಕೆಗಳನ್ನು ಹಿಂತೆಗೆದುಕೊಳ್ಳುವಂತೆ ಕೇಳಿಕೊಂಡರು ಆಗ ರಾಮ್‌ದೇವ್‌ ಕ್ಷಮೆಯಾಚಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...