Homeಮುಖಪುಟಪ್ರಹ್ಲಾದ್ ಜೋಶಿ ಪೇಶ್ವೆ ಬ್ರಾಹ್ಮಣ ಎಂಬ HDK ಆರೋಪ: ಆಪ್, ಕಾಂಗ್ರೆಸ್ ಪ್ರತಿಕ್ರಿಯೆ

ಪ್ರಹ್ಲಾದ್ ಜೋಶಿ ಪೇಶ್ವೆ ಬ್ರಾಹ್ಮಣ ಎಂಬ HDK ಆರೋಪ: ಆಪ್, ಕಾಂಗ್ರೆಸ್ ಪ್ರತಿಕ್ರಿಯೆ

- Advertisement -
- Advertisement -

ಪ್ರಹ್ಲಾದ್ ಜೋಶಿಯವರು ನಮ್ಮ ದಕ್ಷಿಣ ಕರ್ನಾಟಕದ ಸಂಸ್ಕೃತಿಯ ಬ್ರಾಹ್ಮಣರಲ್ಲ. ಬ್ರಾಹ್ಮಣರ ಸಂಸ್ಕಾರದಲ್ಲಿಯೂ ಎರಡು ಮೂರು ಥರ ಇವೆ. ಇವರು ಶೃಂಗೇರಿಯ ಮಠ ಒಡೆದ, ಅಲ್ಲಿನ ವಿಗ್ರಹ ಕೆಡವಿದ ದೇಶಸ್ಥ ಬ್ರಾಹ್ಮಣರ ಗುಂಪಿಗೆ ಸೇರಿದವರು. ಮಹಾತ್ಮ ಗಾಂಧಿಯನ್ನು ಕೊಂದಂತಹ ವರ್ಗಕ್ಕೆ ಸೇರಿದವರು ಎಂಬ  ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿಯವರ ಹೇಳಿಕೆಗೆ ಆಪ್, ಕಾಂಗ್ರೆಸ್ ಮತ್ತು ನಟ ಚೇತನ್ ಪ್ರತಿಕ್ರಿಯಿಸಿದ್ದಾರೆ.

ಮಾನ್ಯ ಹೆಚ್.ಡಿ ದೇವೆಗೌಡರು ಎಲ್ಲಾ ಸಮುದಾಯದ ಬಗ್ಗೆ ಅಪಾರ ಗೌರವ ಕಾಳಜಿಯನ್ನು ಹೊಂದಿದ್ದಾರೆ. ಆದರೆ ಹೆಚ್.ಡಿ ಕುಮಾರಸ್ವಾಮಿರವರು ಬ್ರಾಹ್ಮಣ ಸಮುದಾಯದ ಕುರಿತು ನೀಡಿರುವ ಅವಹೇಳನಕಾರಿ ಹೇಳಿಕೆ ಖಂಡನೀಯ. ಅವರಿಗೆ ಶೋಭೆ ತರುವಂತಹದ್ದಲ್ಲ ಎಂದು ಆಪ್ ಮುಖಂಡರಾದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಟ್ವೀಟ್ ಮಾಡಿದ್ದಾರೆ.

ಯಾವುದೇ ಜಾತಿಯ ಹೆಸರು ಹಿಡಿದು ಆರೋಪ ಮಾಡುವುದು ಶೋಭೆಯಲ್ಲ. ಎಲ್ಲ ಜಾತಿ ಸಮುದಾಯದಲ್ಲಿಯೂ ಅನೇಕ ಉಪಜಾತಿಗಳಿವೆ. ಜಾತಿ ವಿಷಯದಲ್ಲಿ ರಾಜಕಾರಣ ಸಲ್ಲದು. ಬ್ರಾಹ್ಮಣ ಸಮುದಾಯ ಬಗ್ಗೆ ಮಾತನಾಡಿರುವ ಶಾಪ ಅವರನ್ನು ತಟ್ಟದೆ ಬಿಡದು ಎಂದು ಕಾಂಗ್ರೆಸ್ ಮುಖಂಡರಾದ ದಿನೇಶ್ ಗುಂಡೂರಾವ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಜೆಡಿಎಸ್ ಒಂದು ಬ್ರಾಹ್ಮಣ್ಯದ ಪಕ್ಷ: ನಟ ಚೇತನ್ ಆರೋಪ

“ಹೆಚ್ ಡಿ ಕುಮಾರಸ್ವಾಮಿ ಹೇಳುತ್ತಾರೆ, ಪ್ರಲ್ಹಾದ್ ಜೋಶಿಯು ಗಾಂಧಿಯನ್ನು ಕೊಂದ ಪೇಶ್ವೆ ಬ್ರಾಹ್ಮಣ ಸಂಪ್ರದಾಯದಿಂದ ಬಂದವರು; ಜೋಶಿ ‘ಹಳೆಯ ಕರ್ನಾಟಕದ ಸಂಪ್ರದಾಯದ’ ಬ್ರಾಹ್ಮಣರಲ್ಲ- ನಾವು ‘ಹಳೆಯ ಕರ್ನಾಟಕ ಸಂಪ್ರದಾಯದ’ ಬ್ರಾಹ್ಮಣರನ್ನು ಪೂಜಿಸುತ್ತೇವೆ ಮತ್ತು ಅವರ ಕಾಲಿಗೆ ಬೀಳುತ್ತೇವೆ ಎಂದು.
ಇದು ಎಂತಹ ಪಂಥೀಯ ಮತ್ತು ಮೂಢನಂಬಿಕೆಯ ಅಸಂಬದ್ಧತೆ! ನಮಗೆ ಬ್ರಾಹ್ಮಣರು ಸಮಸ್ಯೆಯಲ್ಲ, ಬ್ರಾಹ್ಮಣ್ಯವು ದೊಡ್ಡ ಸಮಸ್ಯೆ. ಜೆಡಿಎಸ್ ಒಂದು ಬ್ರಾಹ್ಮಣ್ಯದ ಪಕ್ಷ” ಎಂದು ನಟ ಚೇತನ್ ಆರೋಪಿಸಿದ್ದಾರೆ.

ಇನ್ನು ಪ್ರಹ್ಲಾದ್ ಜೋಶಿ ಮತ್ತು ಬ್ರಾಹ್ಮಣರ ಕುರಿತ ತಮ್ಮ ಹೇಳಿಕೆಯನ್ನು ಹೆಚ್.ಡಿ ಕುಮಾರಸ್ವಾಮಿಯವರು ಸಮರ್ಥಿಸಿಕೊಂಡಿದ್ದಾರೆ. “ಇತಿಹಾಸ ತೆಗೆದುನೋಡಿ. ಶೃಂಗೇರಿಯ ವಿದ್ಯಾರಣ್ಯರು ಕಟ್ಟಿದಂತಹ ಚಂದ್ರಮೌಳೇಶ್ವರ ದೇವಾಲಯದ ಮೇಲೆ ದಾಳಿ ಮಾಡಿ ಒಡೆದು ಹಾಕಿದವರು ಯಾರು? ಅದನ್ನು ಇಲ್ಲಿಯವರೆಗೂ ಅದನ್ನು ಪುನರ್‌ ನಿರ್ಮಿಸದಿರಲು ಕಾರಣವೇನು?  ಶೃಂಗೇರಿಯ ಗುರುಗಳು ಕಟ್ಟಬಹುದಾಗಿತ್ತು. ಅದನ್ನು ಕಟ್ಟದಿರಲು ಕಾರಣವೆಂದರೆ ಇತಿಹಾಸದಲ್ಲಿ ಈ ರೀತಿಯ ದಾಳಿ ನಡೆಸಿರುವುದು ಸಾರ್ವಜನಿಕರಿಗೆ ಗೊತ್ತಾಗಲೆಂದು” ಎಂದು ಹೇಳಿದ್ದಾರೆ.

ಇದು ಪಂಚರತ್ನ ಯಾತ್ರೆಯಲ್ಲ, ಅದಕ್ಕೆ ನವಗ್ರಹ ಹಿಡಿದಿದೆ ಎಂದು ಟೀಕಿಸಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಹೆಚ್‌ಡಿಕೆ ತರಾಟೆಗೆ ತೆಗೆದುಕೊಂಡಿದ್ದರು. ಭಾನುವಾರ ಬೆಂಗಳೂರಿನ ದಾಸರಹಳ್ಳಿಯಲ್ಲಿ ನಡೆದ ಪಂಚರತ್ನ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಮ್ಮ ಭಾಗದ ಬ್ರಾಹ್ಮಣ ಸಮಾಜ ಸರ್ವಜನೋ ಸುಖಿನೋ ಭವಂತು ಎನ್ನುವವರು. ಇವರು ನಮ್ಮ ಭಾಗದ ಬ್ರಾಹ್ಮಣರಲ್ಲ. ಮಹಾರಾಷ್ಟ್ರದ ಮರಾಠ ಪೇಶ್ವೆ ವಂಶಕ್ಕೆ ಸೇರಿದವರು. ಅವರಿಗೆ ಸಂಸ್ಕತಿ ಬೇಕಿಲ್ಲ, ದೇಶ ಒಡೆಯುವ ಕುತಂತ್ರ ರಾಜಕಾರಣ ಮಾಡುತ್ತಾರೆ. ದೇಶಭಕ್ತಿಯ ಹೆಸರಿನಲ್ಲಿ ದೇಶಕ್ಕೆ ಕೊಡುಗೆ ಕೊಟ್ಟವರನ್ನು ಕೊಂದ ಪ್ರವರ್ಗದಿಂದ ಬಂದಂತವರು” ಎಂದಿದ್ದಾರೆ.

ವೀರಶೈವ ಸಮಾಜ, ಒಕ್ಕಲಿಗ ಸಮಾಜ, ಹಿಂದುಳಿದ ಮತ್ತು ದಲಿತ ಜನರು ಈ ಬಿಜೆಪಿಯ, ಆರ್‌ಎಸ್‌ಎಸ್‌ನ ಹುನ್ನಾರ, ಕುತಂತ್ರಕ್ಕೆ ಬಲಿಯಾಗಬಾರದು ಎಂದು ಹೇಳುತ್ತೇನೆ. ಇವರು ಈ ರಾಜ್ಯ ಒಡೆಯುತ್ತಾರೆ. ಪ್ರಹ್ಲಾದ್ ಜೋಶಿಯನ್ನು ಮುಖ್ಯಮಂತ್ರಿ ಮಾಡಿ 8 ಜನರನ್ನು ಉಪ ಮುಖ್ಯಮಂತ್ರಿಗಳಾಗಿ ಮಾಡಲು ದೆಹಲಿಯ ಆರ್‌ಎಸ್‌ಎಸ್‌ ಕಚೇರಿಯಲ್ಲಿ ಸಭೆ ನಡೆಸಿರುವುದರ ಕುರಿತು ನನಗೆ ಮಾಹಿತಿ ಬಂದಿದೆ ಎಂದಿದ್ದಾರೆ.

ನಮ್ಮ ಹಳೇ ಕರ್ನಾಟಕದ ಬ್ರಾಹ್ಮಣರಲ್ಲಿ ಸಂಸ್ಕೃತಿಯಿದೆ. ನಾವು ಅವರ ಕಾಲಿಗೆ ಬೀಳುತ್ತೇವೆ, ಅವರನ್ನು ಪೂಜಿಸುತ್ತೇವೆ ಮತ್ತು ಗುರುಗಳ ರೀತಿ ಕಾಣುತ್ತೇವೆ. ಆದರೆ ಮೇಲಿನ ವರ್ಗದ ಬ್ರಾಹ್ಮಣರು ಸಮಾಜ ಒಡೆಯುವವರು. ಶೃಂಗೇರಿ ಮಠವನ್ನು ಒಡೆದು, ಶಂಕರಾಚಾರ್ಯರ ವಂಶಸ್ಥರನ್ನು ಓಡಿಸಿದಂತವರು. ಆ ವರ್ಗದ ಬ್ರಾಹ್ಮಣರು ಕುರಿತು ಕರ್ನಾಟಕದ ಕನ್ನಡಿಗರು ಎಚ್ಚರಿಕೆಯಿಂದ ಇರಬೇಕೆಂದು ಕರೆ ನೀಡಿದರು.

ಇದನ್ನೂ ಓದಿ: ಗಾಂಧಿ ಕೊಂದ, ಶೃಂಗೇರಿ ಮಠ ಒಡೆದ ಬ್ರಾಹ್ಮಣರ ಬಗ್ಗೆ ಎಚ್ಚರಿಕೆಯಿಂದಿರಿ: ಪ್ರಹ್ಲಾದ್ ಜೋಶಿ ವಿರುದ್ಧ ಹೆಚ್‌ಡಿಕೆ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...