Homeಮುಖಪುಟಪ್ರಹ್ಲಾದ್ ಜೋಶಿ ಪೇಶ್ವೆ ಬ್ರಾಹ್ಮಣ ಎಂಬ HDK ಆರೋಪ: ಆಪ್, ಕಾಂಗ್ರೆಸ್ ಪ್ರತಿಕ್ರಿಯೆ

ಪ್ರಹ್ಲಾದ್ ಜೋಶಿ ಪೇಶ್ವೆ ಬ್ರಾಹ್ಮಣ ಎಂಬ HDK ಆರೋಪ: ಆಪ್, ಕಾಂಗ್ರೆಸ್ ಪ್ರತಿಕ್ರಿಯೆ

- Advertisement -
- Advertisement -

ಪ್ರಹ್ಲಾದ್ ಜೋಶಿಯವರು ನಮ್ಮ ದಕ್ಷಿಣ ಕರ್ನಾಟಕದ ಸಂಸ್ಕೃತಿಯ ಬ್ರಾಹ್ಮಣರಲ್ಲ. ಬ್ರಾಹ್ಮಣರ ಸಂಸ್ಕಾರದಲ್ಲಿಯೂ ಎರಡು ಮೂರು ಥರ ಇವೆ. ಇವರು ಶೃಂಗೇರಿಯ ಮಠ ಒಡೆದ, ಅಲ್ಲಿನ ವಿಗ್ರಹ ಕೆಡವಿದ ದೇಶಸ್ಥ ಬ್ರಾಹ್ಮಣರ ಗುಂಪಿಗೆ ಸೇರಿದವರು. ಮಹಾತ್ಮ ಗಾಂಧಿಯನ್ನು ಕೊಂದಂತಹ ವರ್ಗಕ್ಕೆ ಸೇರಿದವರು ಎಂಬ  ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿಯವರ ಹೇಳಿಕೆಗೆ ಆಪ್, ಕಾಂಗ್ರೆಸ್ ಮತ್ತು ನಟ ಚೇತನ್ ಪ್ರತಿಕ್ರಿಯಿಸಿದ್ದಾರೆ.

ಮಾನ್ಯ ಹೆಚ್.ಡಿ ದೇವೆಗೌಡರು ಎಲ್ಲಾ ಸಮುದಾಯದ ಬಗ್ಗೆ ಅಪಾರ ಗೌರವ ಕಾಳಜಿಯನ್ನು ಹೊಂದಿದ್ದಾರೆ. ಆದರೆ ಹೆಚ್.ಡಿ ಕುಮಾರಸ್ವಾಮಿರವರು ಬ್ರಾಹ್ಮಣ ಸಮುದಾಯದ ಕುರಿತು ನೀಡಿರುವ ಅವಹೇಳನಕಾರಿ ಹೇಳಿಕೆ ಖಂಡನೀಯ. ಅವರಿಗೆ ಶೋಭೆ ತರುವಂತಹದ್ದಲ್ಲ ಎಂದು ಆಪ್ ಮುಖಂಡರಾದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಟ್ವೀಟ್ ಮಾಡಿದ್ದಾರೆ.

ಯಾವುದೇ ಜಾತಿಯ ಹೆಸರು ಹಿಡಿದು ಆರೋಪ ಮಾಡುವುದು ಶೋಭೆಯಲ್ಲ. ಎಲ್ಲ ಜಾತಿ ಸಮುದಾಯದಲ್ಲಿಯೂ ಅನೇಕ ಉಪಜಾತಿಗಳಿವೆ. ಜಾತಿ ವಿಷಯದಲ್ಲಿ ರಾಜಕಾರಣ ಸಲ್ಲದು. ಬ್ರಾಹ್ಮಣ ಸಮುದಾಯ ಬಗ್ಗೆ ಮಾತನಾಡಿರುವ ಶಾಪ ಅವರನ್ನು ತಟ್ಟದೆ ಬಿಡದು ಎಂದು ಕಾಂಗ್ರೆಸ್ ಮುಖಂಡರಾದ ದಿನೇಶ್ ಗುಂಡೂರಾವ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಜೆಡಿಎಸ್ ಒಂದು ಬ್ರಾಹ್ಮಣ್ಯದ ಪಕ್ಷ: ನಟ ಚೇತನ್ ಆರೋಪ

“ಹೆಚ್ ಡಿ ಕುಮಾರಸ್ವಾಮಿ ಹೇಳುತ್ತಾರೆ, ಪ್ರಲ್ಹಾದ್ ಜೋಶಿಯು ಗಾಂಧಿಯನ್ನು ಕೊಂದ ಪೇಶ್ವೆ ಬ್ರಾಹ್ಮಣ ಸಂಪ್ರದಾಯದಿಂದ ಬಂದವರು; ಜೋಶಿ ‘ಹಳೆಯ ಕರ್ನಾಟಕದ ಸಂಪ್ರದಾಯದ’ ಬ್ರಾಹ್ಮಣರಲ್ಲ- ನಾವು ‘ಹಳೆಯ ಕರ್ನಾಟಕ ಸಂಪ್ರದಾಯದ’ ಬ್ರಾಹ್ಮಣರನ್ನು ಪೂಜಿಸುತ್ತೇವೆ ಮತ್ತು ಅವರ ಕಾಲಿಗೆ ಬೀಳುತ್ತೇವೆ ಎಂದು.
ಇದು ಎಂತಹ ಪಂಥೀಯ ಮತ್ತು ಮೂಢನಂಬಿಕೆಯ ಅಸಂಬದ್ಧತೆ! ನಮಗೆ ಬ್ರಾಹ್ಮಣರು ಸಮಸ್ಯೆಯಲ್ಲ, ಬ್ರಾಹ್ಮಣ್ಯವು ದೊಡ್ಡ ಸಮಸ್ಯೆ. ಜೆಡಿಎಸ್ ಒಂದು ಬ್ರಾಹ್ಮಣ್ಯದ ಪಕ್ಷ” ಎಂದು ನಟ ಚೇತನ್ ಆರೋಪಿಸಿದ್ದಾರೆ.

ಇನ್ನು ಪ್ರಹ್ಲಾದ್ ಜೋಶಿ ಮತ್ತು ಬ್ರಾಹ್ಮಣರ ಕುರಿತ ತಮ್ಮ ಹೇಳಿಕೆಯನ್ನು ಹೆಚ್.ಡಿ ಕುಮಾರಸ್ವಾಮಿಯವರು ಸಮರ್ಥಿಸಿಕೊಂಡಿದ್ದಾರೆ. “ಇತಿಹಾಸ ತೆಗೆದುನೋಡಿ. ಶೃಂಗೇರಿಯ ವಿದ್ಯಾರಣ್ಯರು ಕಟ್ಟಿದಂತಹ ಚಂದ್ರಮೌಳೇಶ್ವರ ದೇವಾಲಯದ ಮೇಲೆ ದಾಳಿ ಮಾಡಿ ಒಡೆದು ಹಾಕಿದವರು ಯಾರು? ಅದನ್ನು ಇಲ್ಲಿಯವರೆಗೂ ಅದನ್ನು ಪುನರ್‌ ನಿರ್ಮಿಸದಿರಲು ಕಾರಣವೇನು?  ಶೃಂಗೇರಿಯ ಗುರುಗಳು ಕಟ್ಟಬಹುದಾಗಿತ್ತು. ಅದನ್ನು ಕಟ್ಟದಿರಲು ಕಾರಣವೆಂದರೆ ಇತಿಹಾಸದಲ್ಲಿ ಈ ರೀತಿಯ ದಾಳಿ ನಡೆಸಿರುವುದು ಸಾರ್ವಜನಿಕರಿಗೆ ಗೊತ್ತಾಗಲೆಂದು” ಎಂದು ಹೇಳಿದ್ದಾರೆ.

ಇದು ಪಂಚರತ್ನ ಯಾತ್ರೆಯಲ್ಲ, ಅದಕ್ಕೆ ನವಗ್ರಹ ಹಿಡಿದಿದೆ ಎಂದು ಟೀಕಿಸಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಹೆಚ್‌ಡಿಕೆ ತರಾಟೆಗೆ ತೆಗೆದುಕೊಂಡಿದ್ದರು. ಭಾನುವಾರ ಬೆಂಗಳೂರಿನ ದಾಸರಹಳ್ಳಿಯಲ್ಲಿ ನಡೆದ ಪಂಚರತ್ನ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಮ್ಮ ಭಾಗದ ಬ್ರಾಹ್ಮಣ ಸಮಾಜ ಸರ್ವಜನೋ ಸುಖಿನೋ ಭವಂತು ಎನ್ನುವವರು. ಇವರು ನಮ್ಮ ಭಾಗದ ಬ್ರಾಹ್ಮಣರಲ್ಲ. ಮಹಾರಾಷ್ಟ್ರದ ಮರಾಠ ಪೇಶ್ವೆ ವಂಶಕ್ಕೆ ಸೇರಿದವರು. ಅವರಿಗೆ ಸಂಸ್ಕತಿ ಬೇಕಿಲ್ಲ, ದೇಶ ಒಡೆಯುವ ಕುತಂತ್ರ ರಾಜಕಾರಣ ಮಾಡುತ್ತಾರೆ. ದೇಶಭಕ್ತಿಯ ಹೆಸರಿನಲ್ಲಿ ದೇಶಕ್ಕೆ ಕೊಡುಗೆ ಕೊಟ್ಟವರನ್ನು ಕೊಂದ ಪ್ರವರ್ಗದಿಂದ ಬಂದಂತವರು” ಎಂದಿದ್ದಾರೆ.

ವೀರಶೈವ ಸಮಾಜ, ಒಕ್ಕಲಿಗ ಸಮಾಜ, ಹಿಂದುಳಿದ ಮತ್ತು ದಲಿತ ಜನರು ಈ ಬಿಜೆಪಿಯ, ಆರ್‌ಎಸ್‌ಎಸ್‌ನ ಹುನ್ನಾರ, ಕುತಂತ್ರಕ್ಕೆ ಬಲಿಯಾಗಬಾರದು ಎಂದು ಹೇಳುತ್ತೇನೆ. ಇವರು ಈ ರಾಜ್ಯ ಒಡೆಯುತ್ತಾರೆ. ಪ್ರಹ್ಲಾದ್ ಜೋಶಿಯನ್ನು ಮುಖ್ಯಮಂತ್ರಿ ಮಾಡಿ 8 ಜನರನ್ನು ಉಪ ಮುಖ್ಯಮಂತ್ರಿಗಳಾಗಿ ಮಾಡಲು ದೆಹಲಿಯ ಆರ್‌ಎಸ್‌ಎಸ್‌ ಕಚೇರಿಯಲ್ಲಿ ಸಭೆ ನಡೆಸಿರುವುದರ ಕುರಿತು ನನಗೆ ಮಾಹಿತಿ ಬಂದಿದೆ ಎಂದಿದ್ದಾರೆ.

ನಮ್ಮ ಹಳೇ ಕರ್ನಾಟಕದ ಬ್ರಾಹ್ಮಣರಲ್ಲಿ ಸಂಸ್ಕೃತಿಯಿದೆ. ನಾವು ಅವರ ಕಾಲಿಗೆ ಬೀಳುತ್ತೇವೆ, ಅವರನ್ನು ಪೂಜಿಸುತ್ತೇವೆ ಮತ್ತು ಗುರುಗಳ ರೀತಿ ಕಾಣುತ್ತೇವೆ. ಆದರೆ ಮೇಲಿನ ವರ್ಗದ ಬ್ರಾಹ್ಮಣರು ಸಮಾಜ ಒಡೆಯುವವರು. ಶೃಂಗೇರಿ ಮಠವನ್ನು ಒಡೆದು, ಶಂಕರಾಚಾರ್ಯರ ವಂಶಸ್ಥರನ್ನು ಓಡಿಸಿದಂತವರು. ಆ ವರ್ಗದ ಬ್ರಾಹ್ಮಣರು ಕುರಿತು ಕರ್ನಾಟಕದ ಕನ್ನಡಿಗರು ಎಚ್ಚರಿಕೆಯಿಂದ ಇರಬೇಕೆಂದು ಕರೆ ನೀಡಿದರು.

ಇದನ್ನೂ ಓದಿ: ಗಾಂಧಿ ಕೊಂದ, ಶೃಂಗೇರಿ ಮಠ ಒಡೆದ ಬ್ರಾಹ್ಮಣರ ಬಗ್ಗೆ ಎಚ್ಚರಿಕೆಯಿಂದಿರಿ: ಪ್ರಹ್ಲಾದ್ ಜೋಶಿ ವಿರುದ್ಧ ಹೆಚ್‌ಡಿಕೆ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...