Homeಮುಖಪುಟಪ್ರಹ್ಲಾದ್ ಜೋಶಿ ಪೇಶ್ವೆ ಬ್ರಾಹ್ಮಣ ಎಂಬ HDK ಆರೋಪ: ಆಪ್, ಕಾಂಗ್ರೆಸ್ ಪ್ರತಿಕ್ರಿಯೆ

ಪ್ರಹ್ಲಾದ್ ಜೋಶಿ ಪೇಶ್ವೆ ಬ್ರಾಹ್ಮಣ ಎಂಬ HDK ಆರೋಪ: ಆಪ್, ಕಾಂಗ್ರೆಸ್ ಪ್ರತಿಕ್ರಿಯೆ

- Advertisement -
- Advertisement -

ಪ್ರಹ್ಲಾದ್ ಜೋಶಿಯವರು ನಮ್ಮ ದಕ್ಷಿಣ ಕರ್ನಾಟಕದ ಸಂಸ್ಕೃತಿಯ ಬ್ರಾಹ್ಮಣರಲ್ಲ. ಬ್ರಾಹ್ಮಣರ ಸಂಸ್ಕಾರದಲ್ಲಿಯೂ ಎರಡು ಮೂರು ಥರ ಇವೆ. ಇವರು ಶೃಂಗೇರಿಯ ಮಠ ಒಡೆದ, ಅಲ್ಲಿನ ವಿಗ್ರಹ ಕೆಡವಿದ ದೇಶಸ್ಥ ಬ್ರಾಹ್ಮಣರ ಗುಂಪಿಗೆ ಸೇರಿದವರು. ಮಹಾತ್ಮ ಗಾಂಧಿಯನ್ನು ಕೊಂದಂತಹ ವರ್ಗಕ್ಕೆ ಸೇರಿದವರು ಎಂಬ  ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿಯವರ ಹೇಳಿಕೆಗೆ ಆಪ್, ಕಾಂಗ್ರೆಸ್ ಮತ್ತು ನಟ ಚೇತನ್ ಪ್ರತಿಕ್ರಿಯಿಸಿದ್ದಾರೆ.

ಮಾನ್ಯ ಹೆಚ್.ಡಿ ದೇವೆಗೌಡರು ಎಲ್ಲಾ ಸಮುದಾಯದ ಬಗ್ಗೆ ಅಪಾರ ಗೌರವ ಕಾಳಜಿಯನ್ನು ಹೊಂದಿದ್ದಾರೆ. ಆದರೆ ಹೆಚ್.ಡಿ ಕುಮಾರಸ್ವಾಮಿರವರು ಬ್ರಾಹ್ಮಣ ಸಮುದಾಯದ ಕುರಿತು ನೀಡಿರುವ ಅವಹೇಳನಕಾರಿ ಹೇಳಿಕೆ ಖಂಡನೀಯ. ಅವರಿಗೆ ಶೋಭೆ ತರುವಂತಹದ್ದಲ್ಲ ಎಂದು ಆಪ್ ಮುಖಂಡರಾದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಟ್ವೀಟ್ ಮಾಡಿದ್ದಾರೆ.

ಯಾವುದೇ ಜಾತಿಯ ಹೆಸರು ಹಿಡಿದು ಆರೋಪ ಮಾಡುವುದು ಶೋಭೆಯಲ್ಲ. ಎಲ್ಲ ಜಾತಿ ಸಮುದಾಯದಲ್ಲಿಯೂ ಅನೇಕ ಉಪಜಾತಿಗಳಿವೆ. ಜಾತಿ ವಿಷಯದಲ್ಲಿ ರಾಜಕಾರಣ ಸಲ್ಲದು. ಬ್ರಾಹ್ಮಣ ಸಮುದಾಯ ಬಗ್ಗೆ ಮಾತನಾಡಿರುವ ಶಾಪ ಅವರನ್ನು ತಟ್ಟದೆ ಬಿಡದು ಎಂದು ಕಾಂಗ್ರೆಸ್ ಮುಖಂಡರಾದ ದಿನೇಶ್ ಗುಂಡೂರಾವ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಜೆಡಿಎಸ್ ಒಂದು ಬ್ರಾಹ್ಮಣ್ಯದ ಪಕ್ಷ: ನಟ ಚೇತನ್ ಆರೋಪ

“ಹೆಚ್ ಡಿ ಕುಮಾರಸ್ವಾಮಿ ಹೇಳುತ್ತಾರೆ, ಪ್ರಲ್ಹಾದ್ ಜೋಶಿಯು ಗಾಂಧಿಯನ್ನು ಕೊಂದ ಪೇಶ್ವೆ ಬ್ರಾಹ್ಮಣ ಸಂಪ್ರದಾಯದಿಂದ ಬಂದವರು; ಜೋಶಿ ‘ಹಳೆಯ ಕರ್ನಾಟಕದ ಸಂಪ್ರದಾಯದ’ ಬ್ರಾಹ್ಮಣರಲ್ಲ- ನಾವು ‘ಹಳೆಯ ಕರ್ನಾಟಕ ಸಂಪ್ರದಾಯದ’ ಬ್ರಾಹ್ಮಣರನ್ನು ಪೂಜಿಸುತ್ತೇವೆ ಮತ್ತು ಅವರ ಕಾಲಿಗೆ ಬೀಳುತ್ತೇವೆ ಎಂದು.
ಇದು ಎಂತಹ ಪಂಥೀಯ ಮತ್ತು ಮೂಢನಂಬಿಕೆಯ ಅಸಂಬದ್ಧತೆ! ನಮಗೆ ಬ್ರಾಹ್ಮಣರು ಸಮಸ್ಯೆಯಲ್ಲ, ಬ್ರಾಹ್ಮಣ್ಯವು ದೊಡ್ಡ ಸಮಸ್ಯೆ. ಜೆಡಿಎಸ್ ಒಂದು ಬ್ರಾಹ್ಮಣ್ಯದ ಪಕ್ಷ” ಎಂದು ನಟ ಚೇತನ್ ಆರೋಪಿಸಿದ್ದಾರೆ.

ಇನ್ನು ಪ್ರಹ್ಲಾದ್ ಜೋಶಿ ಮತ್ತು ಬ್ರಾಹ್ಮಣರ ಕುರಿತ ತಮ್ಮ ಹೇಳಿಕೆಯನ್ನು ಹೆಚ್.ಡಿ ಕುಮಾರಸ್ವಾಮಿಯವರು ಸಮರ್ಥಿಸಿಕೊಂಡಿದ್ದಾರೆ. “ಇತಿಹಾಸ ತೆಗೆದುನೋಡಿ. ಶೃಂಗೇರಿಯ ವಿದ್ಯಾರಣ್ಯರು ಕಟ್ಟಿದಂತಹ ಚಂದ್ರಮೌಳೇಶ್ವರ ದೇವಾಲಯದ ಮೇಲೆ ದಾಳಿ ಮಾಡಿ ಒಡೆದು ಹಾಕಿದವರು ಯಾರು? ಅದನ್ನು ಇಲ್ಲಿಯವರೆಗೂ ಅದನ್ನು ಪುನರ್‌ ನಿರ್ಮಿಸದಿರಲು ಕಾರಣವೇನು?  ಶೃಂಗೇರಿಯ ಗುರುಗಳು ಕಟ್ಟಬಹುದಾಗಿತ್ತು. ಅದನ್ನು ಕಟ್ಟದಿರಲು ಕಾರಣವೆಂದರೆ ಇತಿಹಾಸದಲ್ಲಿ ಈ ರೀತಿಯ ದಾಳಿ ನಡೆಸಿರುವುದು ಸಾರ್ವಜನಿಕರಿಗೆ ಗೊತ್ತಾಗಲೆಂದು” ಎಂದು ಹೇಳಿದ್ದಾರೆ.

ಇದು ಪಂಚರತ್ನ ಯಾತ್ರೆಯಲ್ಲ, ಅದಕ್ಕೆ ನವಗ್ರಹ ಹಿಡಿದಿದೆ ಎಂದು ಟೀಕಿಸಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಹೆಚ್‌ಡಿಕೆ ತರಾಟೆಗೆ ತೆಗೆದುಕೊಂಡಿದ್ದರು. ಭಾನುವಾರ ಬೆಂಗಳೂರಿನ ದಾಸರಹಳ್ಳಿಯಲ್ಲಿ ನಡೆದ ಪಂಚರತ್ನ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಮ್ಮ ಭಾಗದ ಬ್ರಾಹ್ಮಣ ಸಮಾಜ ಸರ್ವಜನೋ ಸುಖಿನೋ ಭವಂತು ಎನ್ನುವವರು. ಇವರು ನಮ್ಮ ಭಾಗದ ಬ್ರಾಹ್ಮಣರಲ್ಲ. ಮಹಾರಾಷ್ಟ್ರದ ಮರಾಠ ಪೇಶ್ವೆ ವಂಶಕ್ಕೆ ಸೇರಿದವರು. ಅವರಿಗೆ ಸಂಸ್ಕತಿ ಬೇಕಿಲ್ಲ, ದೇಶ ಒಡೆಯುವ ಕುತಂತ್ರ ರಾಜಕಾರಣ ಮಾಡುತ್ತಾರೆ. ದೇಶಭಕ್ತಿಯ ಹೆಸರಿನಲ್ಲಿ ದೇಶಕ್ಕೆ ಕೊಡುಗೆ ಕೊಟ್ಟವರನ್ನು ಕೊಂದ ಪ್ರವರ್ಗದಿಂದ ಬಂದಂತವರು” ಎಂದಿದ್ದಾರೆ.

ವೀರಶೈವ ಸಮಾಜ, ಒಕ್ಕಲಿಗ ಸಮಾಜ, ಹಿಂದುಳಿದ ಮತ್ತು ದಲಿತ ಜನರು ಈ ಬಿಜೆಪಿಯ, ಆರ್‌ಎಸ್‌ಎಸ್‌ನ ಹುನ್ನಾರ, ಕುತಂತ್ರಕ್ಕೆ ಬಲಿಯಾಗಬಾರದು ಎಂದು ಹೇಳುತ್ತೇನೆ. ಇವರು ಈ ರಾಜ್ಯ ಒಡೆಯುತ್ತಾರೆ. ಪ್ರಹ್ಲಾದ್ ಜೋಶಿಯನ್ನು ಮುಖ್ಯಮಂತ್ರಿ ಮಾಡಿ 8 ಜನರನ್ನು ಉಪ ಮುಖ್ಯಮಂತ್ರಿಗಳಾಗಿ ಮಾಡಲು ದೆಹಲಿಯ ಆರ್‌ಎಸ್‌ಎಸ್‌ ಕಚೇರಿಯಲ್ಲಿ ಸಭೆ ನಡೆಸಿರುವುದರ ಕುರಿತು ನನಗೆ ಮಾಹಿತಿ ಬಂದಿದೆ ಎಂದಿದ್ದಾರೆ.

ನಮ್ಮ ಹಳೇ ಕರ್ನಾಟಕದ ಬ್ರಾಹ್ಮಣರಲ್ಲಿ ಸಂಸ್ಕೃತಿಯಿದೆ. ನಾವು ಅವರ ಕಾಲಿಗೆ ಬೀಳುತ್ತೇವೆ, ಅವರನ್ನು ಪೂಜಿಸುತ್ತೇವೆ ಮತ್ತು ಗುರುಗಳ ರೀತಿ ಕಾಣುತ್ತೇವೆ. ಆದರೆ ಮೇಲಿನ ವರ್ಗದ ಬ್ರಾಹ್ಮಣರು ಸಮಾಜ ಒಡೆಯುವವರು. ಶೃಂಗೇರಿ ಮಠವನ್ನು ಒಡೆದು, ಶಂಕರಾಚಾರ್ಯರ ವಂಶಸ್ಥರನ್ನು ಓಡಿಸಿದಂತವರು. ಆ ವರ್ಗದ ಬ್ರಾಹ್ಮಣರು ಕುರಿತು ಕರ್ನಾಟಕದ ಕನ್ನಡಿಗರು ಎಚ್ಚರಿಕೆಯಿಂದ ಇರಬೇಕೆಂದು ಕರೆ ನೀಡಿದರು.

ಇದನ್ನೂ ಓದಿ: ಗಾಂಧಿ ಕೊಂದ, ಶೃಂಗೇರಿ ಮಠ ಒಡೆದ ಬ್ರಾಹ್ಮಣರ ಬಗ್ಗೆ ಎಚ್ಚರಿಕೆಯಿಂದಿರಿ: ಪ್ರಹ್ಲಾದ್ ಜೋಶಿ ವಿರುದ್ಧ ಹೆಚ್‌ಡಿಕೆ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...