Homeಮುಖಪುಟಸುಪ್ರೀಂ ಕೋರ್ಟ್ ಮುಸ್ಲಿಂ ಪಕ್ಷಪಾತಿಯಾಗಿದೆ: ದ್ವೇಷಭಾಷಣಕಾರ ಚವ್ಹಾಂಕೆ ಬೆಂಬಲಿಗರ ಆರೋಪ

ಸುಪ್ರೀಂ ಕೋರ್ಟ್ ಮುಸ್ಲಿಂ ಪಕ್ಷಪಾತಿಯಾಗಿದೆ: ದ್ವೇಷಭಾಷಣಕಾರ ಚವ್ಹಾಂಕೆ ಬೆಂಬಲಿಗರ ಆರೋಪ

- Advertisement -
- Advertisement -

ಮುಸ್ಲಿಂ ವಿರುದ್ಧ ದ್ವೇಷ ಭಾಷಣ ಮಾಡುತ್ತಾ ಕೋಮುಗಲಭೆ ಸೃಷ್ಟಿಸಲು ಯತ್ನಿಸುವ ಸುದರ್ಶನ್ ಟಿವಿ ಮುಖ್ಯಸ್ಥ ಮತ್ತು ಹಿಂದುತ್ವ ಮುಖಂಡ ಸುರೇಶ್ ಚವ್ಹಾಂಕೆ ಬೆಂಬಲಿಗರು ಸುಪ್ರೀಂಕೋರ್ಟ್ ಬಗ್ಗೆ ಹಗುರವಾಗಿ ಮಾತನಾಡಿದ್ದು, “ಸರ್ವೊಚ್ಚ ನ್ಯಾಯಾಲಯ ಮುಸ್ಲಿಮರ ಪಕ್ಷಪಾತಿಯಾಗಿದೆ” ಎಂದು ಆರೋಪಿಸಿದ್ದಾರೆ.

ಫೆಬ್ರವರಿ 5ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನೇಕ ಹಿಂದುತ್ವ ಮುಖಂಡರು ಹಾಗೂ ಚವ್ಹಾಂಕೆ ಬೆಂಬಲಿಗರು ಪಾಲ್ಗೊಂಡಿದ್ದರು. ಚವ್ಹಾಂಕೆ ವಿರುದ್ಧ ಸುಪ್ರೀಂ ಕೋರ್ಟ್ ಜರುಗಿಸಿರುವ ಕ್ರಮಗಳನ್ನು ಖಂಡಿಸಿದ್ದಾರೆ.

2021ರಲ್ಲಿ ಸಾರ್ವಜನಿಕವಾಗಿ ಮಾತನಾಡುತ್ತಾ, ಹಿಂದೂ ರಾಷ್ಟ್ರ ನಿರ್ಮಾಣ ಮತ್ತು ಮುಸ್ಲಿಮವರನ್ನು ಕೊಲ್ಲುವ ಕುರಿತು ಚವ್ಹಾಂಕೆ ಹೇಳಿದ್ದನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. “ಅನಗತ್ಯ ಕಾನೂನು ಕಿರುಕುಳ ನೀಡುತ್ತಿರುವ ಕೋರ್ಟ್‌ ಮುಸ್ಲಿಮರ ಪರವಾಗಿದೆ” ಎಂದು ಚವ್ಹಾಂಕೆ ಬೆಂಬಲಿಗರು ದೂರಿದ್ದಾರೆ.

2002ರಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಸ್ಥಾಪಿಸಿದ ‘ಹಿಂದೂ ಯುವ ವಾಹಿನಿ’ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚವ್ಹಾಂಕೆ ಮಾಡಿದ ದ್ವೇಷ ಭಾಷಣವನ್ನು ಕಳೆದ ವರ್ಷದ ಏಪ್ರಿಲ್‌ನಲ್ಲಿ ಸುಪ್ರೀಂ ಕೋರ್ಟ್ ಟೀಕಿಸಿತ್ತು.

“ಕಾರ್ಯಕ್ರಮದಲ್ಲಿ ಯಾವುದೇ ದ್ವೇಷ ಭಾಷಣವನ್ನು ಮಾಡಲಾಗಿಲ್ಲ” ಎಂದು ನ್ಯಾಯಾಲಯಕ್ಕೆ ದೆಹಲಿ ಪೊಲೀಸರು ಸಲ್ಲಿಸಿದ ಅಫಿಡವಿಟ್ ನೋಡಿ ಕೋರ್ಟ್ ಗರಂ ಆಗಿತ್ತು.

“ತಮ್ಮ ಸಮುದಾಯದ ನೈತಿಕತೆಯನ್ನು ಉಳಿಸಲು ಪ್ರೇರಣೆಗೊಂಡಿರುವ ಜನರಿಂದ ಸಭೆ ನಡೆಸಲಾಗಿದೆ” ಎಂದು ಪೊಲೀಸರು ಆರಂಭದಲ್ಲಿ ಹೇಳಿದ್ದರು.

ಸಮಾರಂಭದಲ್ಲಿ ‘ಪ್ರಮಾಣ ವಚನ’ ಬೋಧಿಸಿದ್ದ ಚವ್ಹಾಂಕೆ, “ಬೇಕಾದರೆ, ನಾವು ಅದಕ್ಕಾಗಿ ಕೊಲ್ಲುತ್ತೇವೆ. ಆದರೆ ನಾವು ಯಾವುದೇ ಬೆಲೆ ತೆತ್ತಾದರೂ ದೇಶವನ್ನು ಹಿಂದೂ ರಾಷ್ಟ್ರವೆಂದು ಘೋಷಿಸುತ್ತೇವೆ. ನಮ್ಮ ಪೂರ್ವಜರು ಮತ್ತು ದೇವತೆಗಳು ನಮ್ಮ ಗುರಿಯನ್ನು ಸಾಧಿಸುವ ಶಕ್ತಿಯನ್ನು ನಮಗೆ ನೀಡಲಿ” ಎಂದಿದ್ದರು.

ಭಾನುವಾರ (ಫೆಬ್ರವರಿ 5) ನಡೆದ ಕಾರ್ಯಕ್ರಮದಲ್ಲಿ ಚವ್ಹಾಂಕೆಯವರ ಬೆಂಬಲಿಗರು (ಅವರಲ್ಲಿ ಅನೇಕ ಹಿಂದುತ್ವ ನಾಯಕರು) ಮಾತನಾಡುತ್ತಾ, “ಚವ್ಹಾಂಕೆ ಮಾಡಿರುವ ಭಾಷಣದಲ್ಲಿ ಯಾವುದೇ ತಪ್ಪಿಲ್ಲ. ಸುಪ್ರೀಂ ಕೋರ್ಟ್ ಮುಸ್ಲಿಂ ತುಷ್ಟೀಕರಣ ಮಾಡುತ್ತಿದೆ. ಹಿಂದೂಗಳ ಮೇಲೆ ಕಠಿಣವಾಗಿ ವರ್ತಿಸಿದರೆ, ಇತರ ಧರ್ಮಗಳೊಂದಿಗೆ ಕೋರ್ಟ್ ಉದಾರವಾಗಿದೆ” ಎಂದು ಆರೋಪಿಸಿದ್ದಾರೆ.

ಭಾಷಣಕಾರರಲ್ಲಿ ಒಬ್ಬರಾದ ರಾಷ್ಟ್ರ ನಿರ್ಮಾಣ ಪಕ್ಷದ ಅಧ್ಯಕ್ಷ, ನಿವೃತ್ತ ಐಪಿಎಸ್ ಅಧಿಕಾರಿ ಆನಂದ್ ಕುಮಾರ್, “ತನಿಖೆಯನ್ನು ನಡೆ‌ಸಲಾಗಿದ್ದು ಚವ್ಹಾಂಕೆ ಅವರ ವಿರುದ್ಧ ಯಾವುದೇ ಅಪರಾಧಗಳು ಕಂಡು ಬಂದಿಲ್ಲ ಎಂದು ಪೊಲೀಸರು ಹೇಳಿದರೂ ಕೋರ್ಟ್ ಸುಮ್ಮನೆ ಬಿಟ್ಟಿಲ್ಲ. ನೀವು ಏಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ ಅಥವಾ ಯಾರನ್ನಾದರೂ ಬಂಧಿಸುತ್ತಿಲ್ಲ ಎಂದು ಸುಪ್ರೀಂ ಕೋರ್ಟ್ ಪೊಲೀಸರನ್ನು ಕೇಳುತ್ತಿರುವುದು ವಿಚಿತ್ರವಾಗಿದೆ” ಎಂದಿದ್ದಾರೆ.

ಸುಪ್ರೀಂ ಕೋರ್ಟ್ ಇಸ್ಲಾಂ ಪರವಾಗಿ ಪಕ್ಷಪಾತಿಯಾಗಿದೆ ಎಂದು ಅಭಿಪ್ರಾಯ ತಾಳಿದ ಅವರು, “ಮುಸ್ಲಿಂ ತುಷ್ಟೀಕರಣದಲ್ಲಿ ಸುಪ್ರೀಂ ಕೋರ್ಟ್ ತೊಡಗಿದೆ” ಎಂದು ಹೇಳಿದ್ದಾರೆ.

ರಾಗಿಣಿ ತಿವಾರಿ, ಸೂರಜ್ ಪಾಲ್ ಅಮ್ಮು, ಆಸ್ತಾ ಮಾ ಮತ್ತು ಅನ್ನಪೂರ್ಣ ಭಾರತಿ ಅವರಂತಹ ಹಿಂದುತ್ವ ಮುಖಂಡರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಚವ್ಹಾಂಕೆ ಇಲ್ಲಿ ಇರಲಿಲ್ಲ. ಸರಿಸುಮಾರು 300-400 ಜನ ಸೇರಿದ್ದರು, ಅದರಲ್ಲಿ ಮೂರನೇ ಒಂದು ಭಾಗದಷ್ಟು ಶಾಲಾ ವಿದ್ಯಾರ್ಥಿಗಳಿದ್ದರು ಎಂದು ‘ದಿ ವೈರ್‌’ ವರದಿ ಮಾಡಿದೆ.

“ನಮ್ಮ ಗುರುಗಳು (ಶಿಕ್ಷಕರು) ನಮ್ಮನ್ನು ಇಲ್ಲಿಗೆ ಕರೆತಂದಿದ್ದಾರೆ. ನಾವು ಏಕೆ ಬಂದಿದ್ದೇವೆ ಎಂಬ ಕಾರಣ ನನಗೆ ತಿಳಿದಿಲ್ಲ” ಎಂದು ಹರಿಯಾಣದ ಪಲ್ವಾಲ್‌ನಿಂದ ಬಂದಿದ್ದ 8ನೇ ತರಗತಿಯ ವಿದ್ಯಾರ್ಥಿಯೊಬ್ಬ ಹೇಳಿದ್ದಾನೆ.

ಸುಪ್ರೀಂ ಕೋರ್ಟ್‌ನ ವಾಗ್ದಂಡನೆಯ ನಂತರ, ದೆಹಲಿ ಪೊಲೀಸರು ಸುರೇಶ್ ಚವ್ಹಾಂಕೆ ವಿರುದ್ಧ ಮೇ 4, 2022 ರಂದು ಐಪಿಸಿ ಸೆಕ್ಷನ್ 153A (ಧರ್ಮ, ಜನಾಂಗ, ಜನ್ಮ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295A (ಉದ್ದೇಶಪೂರ್ವಕವಾಗಿ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದ ಕೃತ್ಯಗಳು)  298 (ಯಾವುದೇ ವ್ಯಕ್ತಿಯ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಲು ಪದಗಳನ್ನು ಉಚ್ಚರಿಸುವುದು) ಮತ್ತು 34 (ಸಾಮಾನ್ಯ ಉದ್ದೇಶಕ್ಕಾಗಿ ಹಲವಾರು ವ್ಯಕ್ತಿಗಳು ಮಾಡಿದ ಕೃತ್ಯಗಳು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಜನವರಿ 10, 2023ರಂದು ಸುಪ್ರೀಂ ಕೋರ್ಟ್ ಮತ್ತೊಮ್ಮೆ ದೆಹಲಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿತ್ತು. “ಕಳೆದ ವರ್ಷ ಎಫ್‌ಐಆರ್ ದಾಖಲಿಸಿದ ಎಂಟು ತಿಂಗಳ ನಂತರವೂ ಯಾವುದೇ ಬಂಧನವಿಲ್ಲ ಮಾಡಲಾಗಿಲ್ಲ, ಯಾವುದೇ ಆರೋಪಪಟ್ಟಿ ಸಲ್ಲಿಸಿಲ್ಲ, ಪ್ರಕರಣದಲ್ಲಿ ಪ್ರಗತಿ ಸಾಧಿಸಿಲ್ಲ” ಎಂದು ಉಲ್ಲೇಖಿಸಿತ್ತು.

ಜಂತರ್ ಮಂತರ್ ಕಾರ್ಯಕ್ರಮಕ್ಕೂ ಮುನ್ನ ಚವ್ಹಾಂಕೆ ಅವರು ಟ್ವಿಟರ್‌ನಲ್ಲಿ “ಹಿಂದೂ ರಾಷ್ಟ್ರದ ಪ್ರಮಾಣ ವಚನ ಸ್ವೀಕಾರ ಮಾಡುವುದು ಹೇಗೆ ಅಪರಾಧ?” ಎಂಬ ಪೋಸ್ಟರ್ ಅನ್ನು ಟ್ವೀಟ್ ಮಾಡಿದ್ದರು.

ಕಾರ್ಯಕ್ರಮದ ನಂತರ ಅವರು ಮತ್ತಷ್ಟು ಟ್ವೀಟ್‌ಗಳನ್ನು ಮಾಡಿದ್ದು, ಕಾರ್ಯಕ್ರಮದಲ್ಲಿ ಮಕ್ಕಳು ಪಾಲ್ಗೊಂಡಿರುವುದು ಸೇರಿದಂತೆ ಕೆಲವು ದೃಶ್ಯಗಳನ್ನು ಹಂಚಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...