Homeಮುಖಪುಟಸುಪ್ರೀಂ ಕೋರ್ಟ್ ಮುಸ್ಲಿಂ ಪಕ್ಷಪಾತಿಯಾಗಿದೆ: ದ್ವೇಷಭಾಷಣಕಾರ ಚವ್ಹಾಂಕೆ ಬೆಂಬಲಿಗರ ಆರೋಪ

ಸುಪ್ರೀಂ ಕೋರ್ಟ್ ಮುಸ್ಲಿಂ ಪಕ್ಷಪಾತಿಯಾಗಿದೆ: ದ್ವೇಷಭಾಷಣಕಾರ ಚವ್ಹಾಂಕೆ ಬೆಂಬಲಿಗರ ಆರೋಪ

- Advertisement -
- Advertisement -

ಮುಸ್ಲಿಂ ವಿರುದ್ಧ ದ್ವೇಷ ಭಾಷಣ ಮಾಡುತ್ತಾ ಕೋಮುಗಲಭೆ ಸೃಷ್ಟಿಸಲು ಯತ್ನಿಸುವ ಸುದರ್ಶನ್ ಟಿವಿ ಮುಖ್ಯಸ್ಥ ಮತ್ತು ಹಿಂದುತ್ವ ಮುಖಂಡ ಸುರೇಶ್ ಚವ್ಹಾಂಕೆ ಬೆಂಬಲಿಗರು ಸುಪ್ರೀಂಕೋರ್ಟ್ ಬಗ್ಗೆ ಹಗುರವಾಗಿ ಮಾತನಾಡಿದ್ದು, “ಸರ್ವೊಚ್ಚ ನ್ಯಾಯಾಲಯ ಮುಸ್ಲಿಮರ ಪಕ್ಷಪಾತಿಯಾಗಿದೆ” ಎಂದು ಆರೋಪಿಸಿದ್ದಾರೆ.

ಫೆಬ್ರವರಿ 5ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನೇಕ ಹಿಂದುತ್ವ ಮುಖಂಡರು ಹಾಗೂ ಚವ್ಹಾಂಕೆ ಬೆಂಬಲಿಗರು ಪಾಲ್ಗೊಂಡಿದ್ದರು. ಚವ್ಹಾಂಕೆ ವಿರುದ್ಧ ಸುಪ್ರೀಂ ಕೋರ್ಟ್ ಜರುಗಿಸಿರುವ ಕ್ರಮಗಳನ್ನು ಖಂಡಿಸಿದ್ದಾರೆ.

2021ರಲ್ಲಿ ಸಾರ್ವಜನಿಕವಾಗಿ ಮಾತನಾಡುತ್ತಾ, ಹಿಂದೂ ರಾಷ್ಟ್ರ ನಿರ್ಮಾಣ ಮತ್ತು ಮುಸ್ಲಿಮವರನ್ನು ಕೊಲ್ಲುವ ಕುರಿತು ಚವ್ಹಾಂಕೆ ಹೇಳಿದ್ದನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. “ಅನಗತ್ಯ ಕಾನೂನು ಕಿರುಕುಳ ನೀಡುತ್ತಿರುವ ಕೋರ್ಟ್‌ ಮುಸ್ಲಿಮರ ಪರವಾಗಿದೆ” ಎಂದು ಚವ್ಹಾಂಕೆ ಬೆಂಬಲಿಗರು ದೂರಿದ್ದಾರೆ.

2002ರಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಸ್ಥಾಪಿಸಿದ ‘ಹಿಂದೂ ಯುವ ವಾಹಿನಿ’ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚವ್ಹಾಂಕೆ ಮಾಡಿದ ದ್ವೇಷ ಭಾಷಣವನ್ನು ಕಳೆದ ವರ್ಷದ ಏಪ್ರಿಲ್‌ನಲ್ಲಿ ಸುಪ್ರೀಂ ಕೋರ್ಟ್ ಟೀಕಿಸಿತ್ತು.

“ಕಾರ್ಯಕ್ರಮದಲ್ಲಿ ಯಾವುದೇ ದ್ವೇಷ ಭಾಷಣವನ್ನು ಮಾಡಲಾಗಿಲ್ಲ” ಎಂದು ನ್ಯಾಯಾಲಯಕ್ಕೆ ದೆಹಲಿ ಪೊಲೀಸರು ಸಲ್ಲಿಸಿದ ಅಫಿಡವಿಟ್ ನೋಡಿ ಕೋರ್ಟ್ ಗರಂ ಆಗಿತ್ತು.

“ತಮ್ಮ ಸಮುದಾಯದ ನೈತಿಕತೆಯನ್ನು ಉಳಿಸಲು ಪ್ರೇರಣೆಗೊಂಡಿರುವ ಜನರಿಂದ ಸಭೆ ನಡೆಸಲಾಗಿದೆ” ಎಂದು ಪೊಲೀಸರು ಆರಂಭದಲ್ಲಿ ಹೇಳಿದ್ದರು.

ಸಮಾರಂಭದಲ್ಲಿ ‘ಪ್ರಮಾಣ ವಚನ’ ಬೋಧಿಸಿದ್ದ ಚವ್ಹಾಂಕೆ, “ಬೇಕಾದರೆ, ನಾವು ಅದಕ್ಕಾಗಿ ಕೊಲ್ಲುತ್ತೇವೆ. ಆದರೆ ನಾವು ಯಾವುದೇ ಬೆಲೆ ತೆತ್ತಾದರೂ ದೇಶವನ್ನು ಹಿಂದೂ ರಾಷ್ಟ್ರವೆಂದು ಘೋಷಿಸುತ್ತೇವೆ. ನಮ್ಮ ಪೂರ್ವಜರು ಮತ್ತು ದೇವತೆಗಳು ನಮ್ಮ ಗುರಿಯನ್ನು ಸಾಧಿಸುವ ಶಕ್ತಿಯನ್ನು ನಮಗೆ ನೀಡಲಿ” ಎಂದಿದ್ದರು.

ಭಾನುವಾರ (ಫೆಬ್ರವರಿ 5) ನಡೆದ ಕಾರ್ಯಕ್ರಮದಲ್ಲಿ ಚವ್ಹಾಂಕೆಯವರ ಬೆಂಬಲಿಗರು (ಅವರಲ್ಲಿ ಅನೇಕ ಹಿಂದುತ್ವ ನಾಯಕರು) ಮಾತನಾಡುತ್ತಾ, “ಚವ್ಹಾಂಕೆ ಮಾಡಿರುವ ಭಾಷಣದಲ್ಲಿ ಯಾವುದೇ ತಪ್ಪಿಲ್ಲ. ಸುಪ್ರೀಂ ಕೋರ್ಟ್ ಮುಸ್ಲಿಂ ತುಷ್ಟೀಕರಣ ಮಾಡುತ್ತಿದೆ. ಹಿಂದೂಗಳ ಮೇಲೆ ಕಠಿಣವಾಗಿ ವರ್ತಿಸಿದರೆ, ಇತರ ಧರ್ಮಗಳೊಂದಿಗೆ ಕೋರ್ಟ್ ಉದಾರವಾಗಿದೆ” ಎಂದು ಆರೋಪಿಸಿದ್ದಾರೆ.

ಭಾಷಣಕಾರರಲ್ಲಿ ಒಬ್ಬರಾದ ರಾಷ್ಟ್ರ ನಿರ್ಮಾಣ ಪಕ್ಷದ ಅಧ್ಯಕ್ಷ, ನಿವೃತ್ತ ಐಪಿಎಸ್ ಅಧಿಕಾರಿ ಆನಂದ್ ಕುಮಾರ್, “ತನಿಖೆಯನ್ನು ನಡೆ‌ಸಲಾಗಿದ್ದು ಚವ್ಹಾಂಕೆ ಅವರ ವಿರುದ್ಧ ಯಾವುದೇ ಅಪರಾಧಗಳು ಕಂಡು ಬಂದಿಲ್ಲ ಎಂದು ಪೊಲೀಸರು ಹೇಳಿದರೂ ಕೋರ್ಟ್ ಸುಮ್ಮನೆ ಬಿಟ್ಟಿಲ್ಲ. ನೀವು ಏಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ ಅಥವಾ ಯಾರನ್ನಾದರೂ ಬಂಧಿಸುತ್ತಿಲ್ಲ ಎಂದು ಸುಪ್ರೀಂ ಕೋರ್ಟ್ ಪೊಲೀಸರನ್ನು ಕೇಳುತ್ತಿರುವುದು ವಿಚಿತ್ರವಾಗಿದೆ” ಎಂದಿದ್ದಾರೆ.

ಸುಪ್ರೀಂ ಕೋರ್ಟ್ ಇಸ್ಲಾಂ ಪರವಾಗಿ ಪಕ್ಷಪಾತಿಯಾಗಿದೆ ಎಂದು ಅಭಿಪ್ರಾಯ ತಾಳಿದ ಅವರು, “ಮುಸ್ಲಿಂ ತುಷ್ಟೀಕರಣದಲ್ಲಿ ಸುಪ್ರೀಂ ಕೋರ್ಟ್ ತೊಡಗಿದೆ” ಎಂದು ಹೇಳಿದ್ದಾರೆ.

ರಾಗಿಣಿ ತಿವಾರಿ, ಸೂರಜ್ ಪಾಲ್ ಅಮ್ಮು, ಆಸ್ತಾ ಮಾ ಮತ್ತು ಅನ್ನಪೂರ್ಣ ಭಾರತಿ ಅವರಂತಹ ಹಿಂದುತ್ವ ಮುಖಂಡರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಚವ್ಹಾಂಕೆ ಇಲ್ಲಿ ಇರಲಿಲ್ಲ. ಸರಿಸುಮಾರು 300-400 ಜನ ಸೇರಿದ್ದರು, ಅದರಲ್ಲಿ ಮೂರನೇ ಒಂದು ಭಾಗದಷ್ಟು ಶಾಲಾ ವಿದ್ಯಾರ್ಥಿಗಳಿದ್ದರು ಎಂದು ‘ದಿ ವೈರ್‌’ ವರದಿ ಮಾಡಿದೆ.

“ನಮ್ಮ ಗುರುಗಳು (ಶಿಕ್ಷಕರು) ನಮ್ಮನ್ನು ಇಲ್ಲಿಗೆ ಕರೆತಂದಿದ್ದಾರೆ. ನಾವು ಏಕೆ ಬಂದಿದ್ದೇವೆ ಎಂಬ ಕಾರಣ ನನಗೆ ತಿಳಿದಿಲ್ಲ” ಎಂದು ಹರಿಯಾಣದ ಪಲ್ವಾಲ್‌ನಿಂದ ಬಂದಿದ್ದ 8ನೇ ತರಗತಿಯ ವಿದ್ಯಾರ್ಥಿಯೊಬ್ಬ ಹೇಳಿದ್ದಾನೆ.

ಸುಪ್ರೀಂ ಕೋರ್ಟ್‌ನ ವಾಗ್ದಂಡನೆಯ ನಂತರ, ದೆಹಲಿ ಪೊಲೀಸರು ಸುರೇಶ್ ಚವ್ಹಾಂಕೆ ವಿರುದ್ಧ ಮೇ 4, 2022 ರಂದು ಐಪಿಸಿ ಸೆಕ್ಷನ್ 153A (ಧರ್ಮ, ಜನಾಂಗ, ಜನ್ಮ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295A (ಉದ್ದೇಶಪೂರ್ವಕವಾಗಿ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದ ಕೃತ್ಯಗಳು)  298 (ಯಾವುದೇ ವ್ಯಕ್ತಿಯ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಲು ಪದಗಳನ್ನು ಉಚ್ಚರಿಸುವುದು) ಮತ್ತು 34 (ಸಾಮಾನ್ಯ ಉದ್ದೇಶಕ್ಕಾಗಿ ಹಲವಾರು ವ್ಯಕ್ತಿಗಳು ಮಾಡಿದ ಕೃತ್ಯಗಳು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಜನವರಿ 10, 2023ರಂದು ಸುಪ್ರೀಂ ಕೋರ್ಟ್ ಮತ್ತೊಮ್ಮೆ ದೆಹಲಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿತ್ತು. “ಕಳೆದ ವರ್ಷ ಎಫ್‌ಐಆರ್ ದಾಖಲಿಸಿದ ಎಂಟು ತಿಂಗಳ ನಂತರವೂ ಯಾವುದೇ ಬಂಧನವಿಲ್ಲ ಮಾಡಲಾಗಿಲ್ಲ, ಯಾವುದೇ ಆರೋಪಪಟ್ಟಿ ಸಲ್ಲಿಸಿಲ್ಲ, ಪ್ರಕರಣದಲ್ಲಿ ಪ್ರಗತಿ ಸಾಧಿಸಿಲ್ಲ” ಎಂದು ಉಲ್ಲೇಖಿಸಿತ್ತು.

ಜಂತರ್ ಮಂತರ್ ಕಾರ್ಯಕ್ರಮಕ್ಕೂ ಮುನ್ನ ಚವ್ಹಾಂಕೆ ಅವರು ಟ್ವಿಟರ್‌ನಲ್ಲಿ “ಹಿಂದೂ ರಾಷ್ಟ್ರದ ಪ್ರಮಾಣ ವಚನ ಸ್ವೀಕಾರ ಮಾಡುವುದು ಹೇಗೆ ಅಪರಾಧ?” ಎಂಬ ಪೋಸ್ಟರ್ ಅನ್ನು ಟ್ವೀಟ್ ಮಾಡಿದ್ದರು.

ಕಾರ್ಯಕ್ರಮದ ನಂತರ ಅವರು ಮತ್ತಷ್ಟು ಟ್ವೀಟ್‌ಗಳನ್ನು ಮಾಡಿದ್ದು, ಕಾರ್ಯಕ್ರಮದಲ್ಲಿ ಮಕ್ಕಳು ಪಾಲ್ಗೊಂಡಿರುವುದು ಸೇರಿದಂತೆ ಕೆಲವು ದೃಶ್ಯಗಳನ್ನು ಹಂಚಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...