Homeಮುಖಪುಟಇದು ‘ಅದಾನಿ ಸರ್ಕಾರ’: ಪ್ರತಿಭಟನೆಯಲ್ಲಿ ಪ್ರತಿಪಕ್ಷಗಳ ಘೋಷಣೆ

ಇದು ‘ಅದಾನಿ ಸರ್ಕಾರ’: ಪ್ರತಿಭಟನೆಯಲ್ಲಿ ಪ್ರತಿಪಕ್ಷಗಳ ಘೋಷಣೆ

- Advertisement -
- Advertisement -

ಅದಾನಿ ಗುಂಪಿನ ಹಗರದ ವಿರುದ್ಧ ವಿರೋಧ ಪಕ್ಷಗಳ ಸದಸ್ಯರು ಸೋಮವಾರ ಸಂಸತ್ತಿನ ಉಭಯ ಸದನಗಳಲ್ಲಿ ಘೋಷಣೆಗಳನ್ನು ಕೂಗಿದ್ದಾರೆ. ಯಾವುದೇ ಕ್ರಮ ಜರುಗಿಸದ ನರೇಂದ್ರ ಮೋದಿ ಸರ್ಕಾರವನ್ನು ‘ಅದಾನಿ ಸರ್ಕಾರ’ ಎಂದು ಟೀಕಿಸಿದ್ದಾರೆ. ಈ ಹಗರಣದ ವಿಚಾರವಾಗಿ ಸರ್ಕಾರ ಏನು ಮಾಡುತ್ತಿದೆ ಎಂಬುದನ್ನು ಪ್ರಧಾನಿಯವರು ದೇಶಕ್ಕೆ ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಹಿಂಡೆನ್‌ಬರ್ಗ್ ರಿಸರ್ಚ್ ಸಂಸ್ಥೆಯು ಅದಾನಿ ಗುಂಪಿನ ವಿರುದ್ಧ ಹೊರಿಸಿರುವ ವಂಚನೆಯ ಆರೋಪಗಳ ಬಗ್ಗೆ ಜಂಟಿ ಸಂಸದೀಯ ಸಮಿತಿಯಿಂದ ತನಿಖೆ ನಡೆಸಬೇಕು ಎಂದು 16 ವಿರೋಧ ಪಕ್ಷಗಳ ನಾಯಕರು ಒತ್ತಾಯಿಸಿದ್ದಾರೆ.

ಭಾರತೀಯ ಜೀವ ವಿಮಾ ನಿಗಮ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇತರ ಸಾರ್ವಜನಿಕ ವಲಯದ ಬ್ಯಾಂಕ್‌ಗಳು ಅದಾನಿ ಗ್ರೂಪ್‌ನೊಂದಿಗೆ ಹೂಡಿಕೆ ಮಾಡುವ ಮೂಲಕ ಸಾರ್ವಜನಿಕ ಹಣವನ್ನು ಅಪಾಯಕ್ಕೆ ಸಿಲುಕಿಸಲಾಗಿದೆ ಎಂದು ವಿರೋಧ ಪಕ್ಷದ ಸದಸ್ಯರು ಆರೋಪಿಸಿದ್ದಾರೆ.

ಲೋಕಸಭೆಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರು, “ಈ ರೀತಿಯ ಘೋಷಣೆ ಕೂಗುವುದು ಸರಿಯಲ್ಲ ಮತ್ತು ಸದನವು ಕ್ರಮಬದ್ಧವಾಗಿ ನಡೆಯುತ್ತಿಲ್ಲ” ಎಂದು ವಾದಿಸಿದರು. ಆದರೆ, ಪ್ರತಿಪಕ್ಷಗಳ ಸದಸ್ಯರು ಅದಾನಿ ವಿರುದ್ಧ ತನಿಖೆಗೆ ಒತ್ತಾಯಿಸಿ ಘೋಷಣೆಗಳನ್ನು ಕೂಗುತ್ತಿದ್ದಂತೆಯೇ ಸದನವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ಅದಾನಿ ಗ್ರೂಪ್ ವಿರುದ್ಧದ ಆರೋಪಗಳ ಕುರಿತು ತನಿಖೆ ನಡೆಸಬೇಕೆಂಬ ತಮ್ಮ ಬೇಡಿಕೆಗೆ ಸರ್ಕಾರ ಸಮ್ಮತಿಸದ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ನಂತರ ರಾಜ್ಯಸಭೆಯ ಕಲಾಪವನ್ನು ಸಭಾಪತಿ ಜಗದೀಪ್ ಧನಕರ್ ಅವರೂ ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು.

ಚರ್ಚೆಯನ್ನು ಕೈಗೆತ್ತಿಕೊಳ್ಳಲು ನಿಯಮ 267ರ ಅಡಿಯಲ್ಲಿ ಸಲ್ಲಿಸಲಾಗಿರುವ ನೋಟಿಸ್‌ಗಳನ್ನು ಧಂಕರ್ ಅವರು ತಿರಸ್ಕರಿಸಿದರು. ಇದನ್ನು ವಿರೋಧಿಸಿ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಪ್ರತಿಪಕ್ಷದ ಸದಸ್ಯರು ಧರಣಿ ನಡೆಸಿ ಘೋಷಣೆಗಳನ್ನು ಕೂಗಿದರು.

“ನೀವು ಬಾಹ್ಯ ಉದ್ದೇಶಗಳಿಗಾಗಿ ಚರ್ಚಿಸಲು ಈ ವೇದಿಕೆಯನ್ನು ಆರಿಸಿಕೊಳ್ಳುವುದು ಸೂಕ್ತವಲ್ಲ … ನಾನು ನಿಮಗೆ ಮನವಿ ಮಾಡುತ್ತೇನೆ, ಸಾಮಾನ್ಯ ಜನರು ಏನು ಯೋಚಿಸುತ್ತಿದ್ದಾರೆಂದು ನಾವು ಯೋಚಿಸುವ ಸಮಯ ಇದು” ಎಂದು ದಂಕರ್‌ ಹೇಳಿದರು.

ಅದಾನಿ ಮೇಲಿನ ಆರೋಪಗಳ ತನಿಖೆಗಾಗಿ ಮೋದಿ ಸರ್ಕಾರದ ಮೇಲೆ ಒತ್ತಡವನ್ನು ಮುಂದುವರಿಸಲು, ಹಿಂದಿನ ದಿನ 16 ರಾಜಕೀಯ ಪಕ್ಷಗಳ ನಾಯಕರು ಖರ್ಗೆ ಅವರ ಕಚೇರಿಯಲ್ಲಿ ಸಭೆ ನಡೆಸಿದ್ದರು.

ಇದನ್ನೂ ಓದಿರಿ: ಅದಾನಿ ವಿಚಾರವಾಗಿ ಪ್ರತಿದಿನ ಕಾಂಗ್ರೆಸ್‌ನಿಂದ ಮೋದಿಗೆ ಮೂರು ಪ್ರಶ್ನೆ

ಕಾಂಗ್ರೆಸ್, ದ್ರಾವಿಡ ಮುನ್ನೇತ್ರ ಕಳಗಂ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ, ಭಾರತ್ ರಾಷ್ಟ್ರ ಸಮಿತಿ, ಜನತಾ ದಳ ಯುನೈಟೆಡ್, ಸಮಾಜವಾದಿ ಪಕ್ಷ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ), ಸಿಪಿಐ, ಕೇರಳ ಕಾಂಗ್ರೆಸ್ (ಜೋಸ್ ಮಣಿ), ಜಾರ್ಖಂಡ್ ಮುಕ್ತಿ ಮೋರ್ಚಾ, ರಾಷ್ಟ್ರೀಯ ಲೋಕದ, ಕ್ರಾಂತಿಕಾರಿ ಸಮಾಜವಾದಿ ಪಕ್ಷ, ಆಮ್ ಆದ್ಮಿ ಪಕ್ಷ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್, ರಾಷ್ಟ್ರೀಯ ಜನತಾ ದಳ ಮತ್ತು ಶಿವಸೇನೆ ಈ ಸಭೆಯಲ್ಲಿ ಪಾಲ್ಗೊಂಡಿದ್ದವು.

ಸಭೆಯಲ್ಲಿ ಭಾಗವಹಿಸಿದ ಪಕ್ಷಗಳ ಸಂಸದರು, ಲೋಕಸಭೆ ಮತ್ತು ರಾಜ್ಯಸಭೆಯ ಒಳಗೆ, ಹೊರಗೆ ಈ ವಿಷಯದ ಬಗ್ಗೆ ಮತ್ತೊಮ್ಮೆ ಪ್ರತಿಭಟನೆ ನಡೆಸಲು ನಿರ್ಧರಿಸಿದರು. ನಂತರ ಸಂಸತ್ತಿನ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಪಕ್ಷಗಳ ಸಂಸದರು ಜಮಾಯಿಸಿದರು. ಕಾಂಗ್ರೆಸ್ ನಾಯಕರಾದ ಖರ್ಗೆ, ಅಧೀರ್ ರಂಜನ್ ಚೌಧರಿ, ಶಿವಸೇನೆಯ (ಯುಬಿಟಿ) ಸಂಜಯ್ ರಾವುತ್ ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

“ರಾಷ್ಟ್ರಪತಿಗಳ ಭಾಷಣದ ಬಗ್ಗೆ ಚರ್ಚಿಸಲು ಸಿದ್ಧವಾಗಿವೆ. ಆದರೆ ಮೊದಲು ಅದಾನಿ ಗ್ರೂಪಿನ ವಿಷಯದ ಬಗ್ಗೆ ಮೋದಿಯವರಿಂದ ಉತ್ತರವನ್ನು ಬಯಸುತ್ತೇವೆ” ಎಂದು ಖರ್ಗೆ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...