Homeಮುಖಪುಟಮತ್ತೆ ನಡೆಯದ ದೆಹಲಿ ಮೇಯರ್ ಚುನಾವಣೆ: ಬಿಜೆಪಿ ವಿರುದ್ದ ಸುಪ್ರೀಂ ಮೊರೆ ಹೊರಟ ಎಎಪಿ

ಮತ್ತೆ ನಡೆಯದ ದೆಹಲಿ ಮೇಯರ್ ಚುನಾವಣೆ: ಬಿಜೆಪಿ ವಿರುದ್ದ ಸುಪ್ರೀಂ ಮೊರೆ ಹೊರಟ ಎಎಪಿ

- Advertisement -
- Advertisement -

ದೆಹಲಿಯ ಮಹಾನಗರ ಪಾಲಿಕೆಯು ಮಂಗಳವಾರ ಮೇಯರ್ ಹುದ್ದೆಗೆ ಸೋಮವಾರ ಚುನಾವಣೆ ನಡೆಸಲು ನಿರ್ಧರಿಸಿತ್ತು. ಆದರೆ ಇಂದು ಕೂಡ ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಬಿಜೆಪಿ ನಡುವಿನ ಘರ್ಷಣೆಯಿಂದಾಗಿ ಮೂರನೇ ಬಾರಿಗೆ ಚುನಾವಣೆ ಮುಂದೂಡಲಾಗಿದೆ.

ಈ ಬಗ್ಗೆ ಮಾತನಾಡಿದ ಎಎಪಿ ನಾಯಕ ಅತಿಶಿ, ”ಆಲ್ಡರ್‌ಮೆನ್‌ಗಳಿಗೆ ಮತದಾನದ ಹಕ್ಕು ನೀಡುವ ಬಿಜೆಪಿಯ ನಿರ್ಧಾರವನ್ನು ಪ್ರಶ್ನಿಸಲು ಪಕ್ಷವು ಸುಪ್ರೀಂ ಕೋರ್ಟ್‌ಗೆ ಹೋಗಲಿದೆ. ಕಳೆದ ಬಾರಿ ನಾವು ಬಿಜೆಪಿ ವಿರುದ್ಧದ ಅರ್ಜಿಯನ್ನು ಹಿಂಪಡೆದಿದ್ದೇವೆ ಏಕೆಂದರೆ ಮೇಯರ್ ಚುನಾವಣೆಯ ದಿನಾಂಕಗಳನ್ನು ಅನುಮೋದಿಸಲಾಗಿತ್ತು ಮತ್ತು ನಾಮನಿರ್ದೇಶಿತ ಸದಸ್ಯರು ಮತ ಚಲಾಯಿಸುತ್ತಾರೆಯೇ ಅಥವಾ ಇಲ್ಲವೇ ಎಂಬುದು ಸ್ಪಷ್ಟವಾಗಿರಲಿಲ್ಲ. ಆದರೆ ಇಂದು ಅವರು ಅಕ್ರಮವಾಗಿ ಮತದಾನ ಮಾಡಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಕಾನೂನುಬಾಹಿರವಾಗಿ ಆಲ್ಡರ್‌ಮೆನ್‌ಗಳಿಗೆ ಮತದಾನದ ಹಕ್ಕನ್ನು ನೀಡಿದ್ದಾರೆ. ಈ ವಿಚಾರವಾಗಿ ನಾವು ಸುಪ್ರೀಂ ಕೋರ್ಟ್‌ಗೆ ತೆರಳಿ ಬಿಜೆಪಿಯ ನಿರ್ಧಾರವನ್ನು ಪ್ರಶ್ನಿಸುತ್ತೇವೆ ಎಂದು ಅವರು ಹೇಳಿದರು.

ದೆಹಲಿಯ ಮಹಾನಗರ ಪಾಲಿಕೆ ಒಂದು ತಿಂಗಳಲ್ಲಿ ಮೂರನೇ ಬಾರಿಗೆ ಮೇಯರ್ ಆಯ್ಕೆಯನ್ನು ಮಾಡದೆ ಮುಂದೂಡಲಾಯಿತು. ನಾಮನಿರ್ದೇಶಿತ ಸದಸ್ಯರಿಗೆ ಮೇಯರ್ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಮತ ಚಲಾಯಿಸಲು ಅವಕಾಶ ನೀಡುವ ಕುರಿತು ಗದ್ದಲ ಎದ್ದಿತು. ಹಾಗಾಗಿ ‘ಇಂತಹ ವಾತಾವರಣದಲ್ಲಿ ಚುನಾವಣೆ ನಡೆಸಲು ಸಾಧ್ಯವಿಲ್ಲ. ಸದನವನ್ನು ಮುಂದಿನ ದಿನಾಂಕಕ್ಕೆ ಮುಂದೂಡಲಾಗಿದೆ’ ಎಂದು ಸಭಾಧ್ಯಕ್ಷ ಸತ್ಯ ಶರ್ಮಾ ತಿಳಿಸಿದರು.

ಇದನ್ನೂ ಓದಿ: ಎಎಪಿ-ಬಿಜೆಪಿ ಮಧ್ಯೆ ಮತ್ತೊಮ್ಮೆ ಫೈಟ್; ದೆಹಲಿ ಮೇಯರ್ ಚುನಾವಣೆ ಸ್ಥಗಿತ

ಸೋಮವಾರ ದೆಹಲಿಯ ಮಹಾನಗರ ಪಾಲಿಕೆಯ ಮೇಯರ್ ಆಯ್ಕೆಗೆ ಮತದಾನದ ಮೊದಲು, ಸಭಾಧ್ಯಕ್ಷ ಸತ್ಯ ಶರ್ಮಾ ಅವರು, ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಕಾಯಿದೆ, 1957 ರ ಪ್ರಕಾರ, ಮೇಯರ್ ಮತ್ತು ಉಪಮೇಯರ್ ಚುನಾವಣೆಯಲ್ಲಿ ಮತ ಚಲಾಯಿಸಲು ಆಲ್ಡರ್‌ಮನ್ ಅರ್ಹರು ಎಂದು ಹೇಳಿದರು. ಇದೇ ವಿಚಾರಕ್ಕೆ ಎಎಪಿ ಕೌನ್ಸಿಲರ್‌ಗಳು ಪ್ರತಿಭಟನೆ ನಡೆಸಿದ್ದು, ಆಲ್ಡರ್‌ಮೆನ್‌ ಮತ ಚಲಾಯಿಸುವಂತಿಲ್ಲ ಎಂದು ಎಎಪಿ ನಾಯಕ ಮುಖೇಶ್ ಗೋಯೆಲ್ ಹೇಳಿದ್ದಾರೆ.

ಈ ವೇಳೆ ಗದ್ದಲ ಗಲಾಟೆ ಏರ್ಪಟ್ಟಿತು. ಆಗ ಸಭಾಧ್ಯಕ್ಷ ಶರ್ಮಾ ಅವರು, ”ಜನರು ನಿಮ್ಮನ್ನು ಇಲ್ಲಿಗೆ ಕಳುಹಿಸಿದ್ದು ಅವರ ಸೇವೆ ಮಾಡಲು, ಚುನಾವಣೆ ನಡೆಯಲಿ” ಎಂದು ಹೇಳಿದ್ದಾರೆ. ಇದಾದ ನಂತರ ಸದನವನ್ನು ಕೆಲಕಾಲ ಮುಂದೂಡಲಾಯಿತು. ಎಂಸಿಡಿಯನ್ನು ಯಾರು ನಿಯಂತ್ರಿಸುತ್ತಾರೆ ಎಂಬುದನ್ನು ನಿರ್ಧರಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುವ ನಿರೀಕ್ಷೆಯಿರುವ 10 ಬಿಜೆಪಿ ಸದಸ್ಯರನ್ನು ಆಲ್ಡರ್‌ಮೆನ್‌ಗಳಾಗಿ ಆಯ್ಕೆ ಮಾಡುವಲ್ಲಿ ಎಲ್‌ಜಿ ಕಾರ್ಯವಿಧಾನದ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಎಎಪಿ ಆರೋಪಿಸಿದೆ.

ಜನವರಿ 6 ಮತ್ತು ಜನವರಿ 24 ರಂದು ನಡೆದ ಮೊದಲ ಎರಡು ಅಧಿವೇಶನಗಳು ನಡೆದಿದ್ದವು. ಈ ಅಧಿವೇಶನಗಳಲ್ಲಿ ಬಿಜೆಪಿ ಮತ್ತು ಎಎಪಿ ಸದಸ್ಯರ ನಡುವಿನ ಗದ್ದಲ ಮತ್ತು ತೀವ್ರ ಮಾತಿನ ಚಕಮಕಿಯ ನಂತರ ಮೇಯರ್ ಆಯ್ಕೆ ಮಾಡದೆ ಸಭಾಧ್ಯಕ್ಷರು ಮುಂದೂಡಿದರು. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (DMC) ಕಾಯಿದೆ, 1957 ರ ಪ್ರಕಾರ, ನಾಗರಿಕ ಚುನಾವಣೆಯ ನಂತರ ಸದನದ ಮೊದಲ ಅಧಿವೇಶನದಲ್ಲಿ ಮೇಯರ್ ಮತ್ತು ಉಪ ಮೇಯರ್ ಆಯ್ಕೆಯಾಗಬೇಕು. ಆದರೆ, ಮುನ್ಸಿಪಲ್ ಚುನಾವಣೆ ನಡೆದು ಎರಡು ತಿಂಗಳಾದರೂ ದೆಹಲಿಗೆ ಮೇಯರ್ ಆಯ್ಕೆ ನಡೆದಿಲ್ಲ.

ಮೇಯರ್, ಉಪ ಮೇಯರ್ ಮತ್ತು ಸ್ಥಾಯಿ ಸಮಿತಿಯ ಚುನಾವಣೆಯಲ್ಲಿ ಮತ ಚಲಾಯಿಸದಂತೆ ಆಲ್ಡರ್‌ಮೆನ್‌ಗಳನ್ನು ಡಿಬಾರ್ ಮಾಡುವಂತೆ ಕೋರಿ ಭಾನುವಾರ ಎಎಪಿ ಕೌನ್ಸಿಲರ್‌ಗಳು ಶರ್ಮಾ ಅವರಿಗೆ ಪತ್ರ ಬರೆದಿದ್ದಾರೆ. ಇದು ದೆಹಲಿಯ ಜನರಿಗೆ ಅವಮಾನ ಮಾಡಿದಂತಾಗುತ್ತದೆ ಎಂದು ಎಎಪಿ ಹೇಳಿದೆ. ನಾಮನಿರ್ದೇಶಿತ ಸದಸ್ಯರು ಸಂವಿಧಾನ ಮತ್ತು ಡಿಎಂಸಿ ಕಾಯ್ದೆಗೆ ಅನುಗುಣವಾಗಿ ಮತ ಚಲಾಯಿಸುವಂತಿಲ್ಲ ಎಂದು ಎಎಪಿ ಕೌನ್ಸಿಲರ್‌ಗಳು ವಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...