Homeಮುಖಪುಟಅದಾನಿ ಗುಂಪಿನ ವಿರುದ್ಧ ತನಿಖೆಗೆ ಆಗ್ರಹಿಸಿ ರಾಷ್ಟ್ರವ್ಯಾಪಿ LIC, SBI ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ

ಅದಾನಿ ಗುಂಪಿನ ವಿರುದ್ಧ ತನಿಖೆಗೆ ಆಗ್ರಹಿಸಿ ರಾಷ್ಟ್ರವ್ಯಾಪಿ LIC, SBI ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ

- Advertisement -
- Advertisement -

ಹಿಂಡೆನ್‌ಬರ್ಗ್ ಸಂಶೋಧನಾ ವರದಿಯಲ್ಲಿ ಅದಾನಿ ಗುಂಪಿನ ವಿರುದ್ಧ ಮಾಡಲಾದ ಆರೋಪಗಳ ಬಗ್ಗೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಅಥವಾ ಜಂಟಿ ಸಂಸದೀಯ ಸಮಿತಿ (JPC) ಅವರ ಮೇಲ್ವಿಚಾರಣೆಯಲ್ಲಿ ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿ ರಾಷ್ಟ್ರವ್ಯಾಪಿ ಎಲ್‌ಐಸಿ, ಎಸ್‌ಬಿಐ ಕಚೇರಿ ಎದುರು ಪ್ರತಿಭಟನೆ ನಡೆಸಲು ಕಾರ್ಯಕರ್ತರಿಗೆ ಕಾಂಗ್ರೆಸ್ ಕರೆ ನೀಡಿತ್ತು. ಅದರಂತೆ ಸೋಮವಾರ ಕಾಂಗ್ರೆಸ್ ಕಾರ್ಯಕರ್ತರು ರಾಷ್ಟ್ರವ್ಯಾಪಿ ಎಲ್‌ಐಸಿ, ಎಸ್‌ಬಿಐ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಹೈದರಾಬಾದ್‌ನಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಚೇರಿಯ ಹೊರಗೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಜಮ್ಮುನಲ್ಲಿ ಪಕ್ಷದ ಹಿರಿಯ ನಾಯಕ ವಿಕಾರ್ ರಸೂಲ್ ಮತ್ತು ಕಾರ್ಯಾಧ್ಯಕ್ಷ ರಾಮನ್ ಭಲ್ಲಾ ನೇತೃತ್ವದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ರ್ಯಾಲಿ ನಡೆಸಿದರು. ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದು, ಅವರಲ್ಲಿ ಕೆಲವರು ಬ್ಯಾರಿಕೇಡ್‌ಗಳನ್ನು ಮುರಿಯಲು ಪ್ರಯತ್ನಿಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಮನ್ ಭಲ್ಲಾ ”ಇಂದು, ನಾವು ಅದಾನಿ ವಿಷಯದ ಕುರಿತು ಸಂಸತ್ತಿನ ಒಳಗೆ ಮತ್ತು ಅದರ ಹೊರಗೆ ಪ್ರತಿಭಟಿಸಿದ್ದೇವೆ. ಭಾರತದ ಮುಖ್ಯ ನ್ಯಾಯಮೂರ್ತಿ (CJI) ಅಥವಾ ಜಂಟಿ ಸಂಸದೀಯ ಸಮಿತಿ (JPC)ಯಲ್ಲಿ ಅದಾನಿ ಕಂಪನಿ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆಸಬೇಕು” ಎಂದು ಹೇಳಿದರು.

ಎಲ್‌ಐಸಿ ಮತ್ತು ಎಸ್‌ಬಿಐ ಹಣವನ್ನು ಅದಾನಿ ಗ್ರೂಪ್‌ಗೆ “ಹೂಡಿಕೆ” ಮಾಡಿದ್ದಕ್ಕಾಗಿ ಕೇಂದ್ರದ ವಿರುದ್ಧ ಭಲ್ಲಾ ಮತ್ತಷ್ಟು ಕಿಡಿಕಾರಿದರು.

ಇದನ್ನೂ ಓದಿ: ಇದು ‘ಅದಾನಿ ಸರ್ಕಾರ’: ಪ್ರತಿಭಟನೆಯಲ್ಲಿ ಪ್ರತಿಪಕ್ಷಗಳ ಘೋಷಣೆ

ಶ್ರೀನಗರದಲ್ಲಿ ಪಕ್ಷದ ಹಿರಿಯ ಮುಖಂಡ ಮೊಹಮ್ಮದ್ ಅನ್ವರ್ ಭಟ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಅದಾನಿ ಗ್ರೂಪ್ ವಿರುದ್ಧ ಬಂದಿರುವ ವಂಚನೆ ಆರೋಪಗಳ ಮೇಲೆ ಭಾರತದ ಮುಖ್ಯ ನ್ಯಾಯಮೂರ್ತಿಯವರಿಂದ ತನಿಖೆ ನಡೆಸಬೇಕು ಎಂದು ಘೋಷಣೆಗಳನ್ನು ಕೂಗಿದರು. ಅದಾನಿ ಸಮೂಹದಲ್ಲಿ ಎಲ್‌ಐಸಿ ಸಾವಿರಾರು ಕೋಟಿ ಹೂಡಿಕೆ ಮಾಡಿದ್ದು, ಜಮ್ಮು ಮತ್ತು ಕಾಶ್ಮೀರ ಬ್ಯಾಂಕ್ ಕೂಡ 250 ಕೋಟಿ ರೂಪಾಯಿ ಕಳೆದುಕೊಂಡಿದೆ ಎಂದು ಭಟ್ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.

ಎಲ್‌ಐಸಿ ಮತ್ತು ಎಸ್‌ಬಿಐ ನ ಸಾರ್ವಜನಿಕ ಹಣವನ್ನು ಅದಾನಿ ಗ್ರೂಪ್‌ಗೆ “ಹೂಡಿಕೆ” ಮಾಡುವ ವಿಷಯವು ಗಂಭೀರವಾದದ್ದು ಮತ್ತೆ ಕಳವಳಕಾರಿಯಾದ ವಿಷಯವಾಗಿದೆ. ಮೋದಿ ಸರ್ಕಾರವು ಸಂಸತ್ತಿನಲ್ಲಿ ಪ್ರಶ್ನೆಗಳಿಂದ “ನುಣುಚಿಕೊಳ್ಳುತ್ತಿದೆ” ಎಂದು ಕಾಂಗ್ರೆಸ್ ಮುಖ್ಯ ವಕ್ತಾರ ರವೀಂದರ್ ಶರ್ಮಾ ವಾಗ್ಧಾಳಿ ನಡೆಸಿದರು.

ಅದಾನಿ ಸಮೂಹವು ಮಾಡಿರುವ ಅಕ್ರಮದ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದು ಆಗ್ರಹಿಸಿ ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್‌ ನೇತೃತ್ವದಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ದೆಹಲಿಯಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಅದಾನಿ ಹಗರಣವನ್ನು ಮುಚ್ಚಿ ಹಾಕಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಜಂತರ್‌ ಮಂತರ್‌ನಿಂದ ಎಸ್‌ಬಿಐವರೆಗೆ ಸಾಗಿದರು. ಎಲ್‌ಐಸಿ, ಎಸ್‌ಬಿಐ ಉಳಿಸಿ ಎಂದು ಘೋಷಣೆ ಕೂಗಿದರು. ಈ ವೇಳೆ ಕಾರ್ಯಕರ್ತರನ್ನು ಪೊಲೀಸರು ತಡೆದರು. ಕಾರ್ಯಕರ್ತರು ಬ್ಯಾರಿಕೇಡ್‌ಗಳನ್ನು ಹತ್ತಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಪೊಲೀಸರು ಅವರನ್ನು ಬಂಧಿಸಿ ಕರೆದೊಯ್ದರು.

”ಆಪ್ತ ಮಿತ್ರ ಗೌತಮ್‌ ಅದಾನಿ ಅವರನ್ನು ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಅದಕ್ಕಾಗಿ ಸಂಸತ್‌ನಲ್ಲಿ ಚರ್ಚೆಗೆ ಅವಕಾಶ ನೀಡುತ್ತಿಲ್ಲ. ಲಕ್ಷ ಕೋಟಿಗಳ ಮೊತ್ತದ ಬಹು ದೊಡ್ಡ ಹಗರಣ ನಡೆದಿದೆ. ನಮ್ಮ ಹೋರಾಟ ನಿರಂತರವಾಗಿ ಮುಂದುವರಿಯಲಿದೆ” ಎಂದು ಬಿ.ವಿ.ಶ್ರೀನಿವಾಸ್‌ ಹೇಳಿದರು.

”ಅದಾನಿ ಸಮೂಹದ ಆಸ್ತಿ ₹ 8,000 ಕೋಟಿಯಿಂದ ₹9.90 ಲಕ್ಷ ಕೋಟಿ ಆಗಲು ಕಾರಣ ಏನು ಎಂಬುದು ಬಹಿರಂಗವಾಗಬೇಕಿದೆ. ಅದಾನಿಯಂತಹ ಉದ್ಯಮ ಸಮೂಹ ರಕ್ಷಿಸಲು ಪ್ರಧಾನಿ ಅವರು ಮುಂದಾಗಿರುವುದು ದೇಶದ ಇತಿಹಾಸದಲ್ಲೇ ಮೊದಲು” ಎಂದು ಕಿಡಿಕಾರಿದರು.

ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕ ಎನ್‌ಎಸ್‌ಯುಐ ಪ್ರತಿಭಟನೆ ನಡೆಸಿತು. ಪ್ರತಿಭಟನಾಕಾರರು ಫಲಕಗಳನ್ನು ಹಿಡಿದುಕೊಂಡು ಪೊಲೀಸರ ಬ್ಯಾರಿಕೇಡ್‌ಗಳ ಮೇಲೆ ನಿಂತು ಆಕ್ರೋಶ ವ್ಯಕ್ತಪಡಿಸಿದರು. ಕೆಲವು ಪ್ರತಿಭಟನಾಕಾರರು ಎಸ್‌ಬಿಐ ಲಾಂಛನವಿರುವ ಸೂಟ್‌ಕೇಸ್‌ನ್ನು ಸುಟ್ಟು ಹಾಕಿದರು.

ಅದಾನಿ ಮೇಲಿನ ಆರೋಪಗಳ ತನಿಖೆಗಾಗಿ ಮೋದಿ ಸರ್ಕಾರದ ಮೇಲೆ ಒತ್ತಡ ತರುವುದನ್ನು ಮುಂದುವರೆಸಲು 16 ರಾಜಕೀಯ ಪಕ್ಷಗಳ ನಾಯಕರು ಖರ್ಗೆ ಅವರ ಕಚೇರಿಯಲ್ಲಿ ಸಭೆ ನಡೆಸಿದ್ದರು. ಕಾಂಗ್ರೆಸ್, ದ್ರಾವಿಡ ಮುನ್ನೇತ್ರ ಕಳಗಂ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ, ಭಾರತ್ ರಾಷ್ಟ್ರ ಸಮಿತಿ, ಜನತಾ ದಳ ಯುನೈಟೆಡ್, ಸಮಾಜವಾದಿ ಪಕ್ಷ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ), ಸಿಪಿಐ, ಕೇರಳ ಕಾಂಗ್ರೆಸ್ (ಜೋಸ್ ಮಣಿ), ಜಾರ್ಖಂಡ್ ಮುಕ್ತಿ ಮೋರ್ಚಾ, ರಾಷ್ಟ್ರೀಯ ಲೋಕದ, ಕ್ರಾಂತಿಕಾರಿ ಸಮಾಜವಾದಿ ಪಕ್ಷ, ಆಮ್ ಆದ್ಮಿ ಪಕ್ಷ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್, ರಾಷ್ಟ್ರೀಯ ಜನತಾ ದಳ ಮತ್ತು ಶಿವಸೇನೆ ಈ ಸಭೆಯಲ್ಲಿ ಪಾಲ್ಗೊಂಡಿದ್ದವು.

ಸಭೆಯಲ್ಲಿ ಭಾಗವಹಿಸಿದ ಪಕ್ಷಗಳ ಸಂಸದರು, ಲೋಕಸಭೆ ಮತ್ತು ರಾಜ್ಯಸಭೆಯ ಒಳಗೆ, ಹೊರಗೆ ಈ ವಿಷಯದ ಬಗ್ಗೆ ಮತ್ತೊಮ್ಮೆ ಪ್ರತಿಭಟನೆ ನಡೆಸಲು ನಿರ್ಧರಿಸಿದರು. ನಂತರ ಸಂಸತ್ತಿನ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಪಕ್ಷಗಳ ಸಂಸದರು ಜಮಾಯಿಸಿದರು. ಕಾಂಗ್ರೆಸ್ ನಾಯಕರಾದ ಖರ್ಗೆ, ಅಧೀರ್ ರಂಜನ್ ಚೌಧರಿ, ಶಿವಸೇನೆಯ (ಯುಬಿಟಿ) ಸಂಜಯ್ ರಾವುತ್ ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

”ರಾಷ್ಟ್ರಪತಿಗಳ ಭಾಷಣದ ಬಗ್ಗೆ ಚರ್ಚಿಸಲು ಸಿದ್ಧವಾಗಿವೆ. ಆದರೆ ಮೊದಲು ಅದಾನಿ ಗ್ರೂಪಿನ ವಿಷಯದ ಬಗ್ಗೆ ಮೋದಿಯವರಿಂದ ಉತ್ತರವನ್ನು ಬಯಸುತ್ತೇವೆ” ಎಂದು ಖರ್ಗೆ ಹೇಳಿದರು.

”ರಾಷ್ಟ್ರಪತಿಗಳ ಭಾಷಣದ ಬಗ್ಗೆ ಚರ್ಚಿಸಲು ಸಿದ್ಧವಾಗಿವೆ. ಆದರೆ ಮೊದಲು ಅದಾನಿ ಗ್ರೂಪಿನ ವಿಷಯದ ಬಗ್ಗೆ ಮೋದಿಯವರಿಂದ ಉತ್ತರವನ್ನು ಬಯಸುತ್ತೇವೆ” ಎಂದು ಖರ್ಗೆ ಹೇಳಿದರು.

ದೇಶದ ನಾನಾ ಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ:-

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...