Homeಮುಖಪುಟನೀವು ಯಾವಾಗ ಮುಸ್ಲಿಮರು, ಕ್ರಿಶ್ಚಿಯನ್ನರನ್ನು ಕೊಲ್ಲುತ್ತೀರಿ?: ಧಾರ್ಮಿಕ ಮುಖಂಡ ಪ್ರಚೋದನೆ

ನೀವು ಯಾವಾಗ ಮುಸ್ಲಿಮರು, ಕ್ರಿಶ್ಚಿಯನ್ನರನ್ನು ಕೊಲ್ಲುತ್ತೀರಿ?: ಧಾರ್ಮಿಕ ಮುಖಂಡ ಪ್ರಚೋದನೆ

- Advertisement -
- Advertisement -

ಹಲವಾರು ಹಿಂದುತ್ವ ಗುಂಪುಗಳು ಭಾನುವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ಕಾರ್ಯಕ್ರಮಗಳನ್ನು ನಡೆಸಿದ್ದು ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಕೊಲ್ಲುವಂತೆ ಕರೆ ನೀಡಲಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡಿರುವ ವೀಡಿಯೊವೊಂದರಲ್ಲಿ ಸ್ವಾಮೀಜಿಯೊಬ್ಬರು ಮಾತನಾಡುತ್ತಾ, “ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಕೊಲ್ಲಲು ಶಸ್ತ್ರಾಸ್ತ್ರಗಳನ್ನು ಹಿಂದೂಗಳು ಸಂಗ್ರಹಿಸಿ” ಎಂದು ಕರೆ ನೀಡಿರುವುದು ದಾಖಲಾಗಿದೆ.

ಮತ್ತೊಂದು ವೀಡಿಯೊದಲ್ಲಿ ಭಾರತೀಯ ಜನತಾ ಪಕ್ಷದ ನಾಯಕ ಸೂರಜ್ ಪಾಲ್ ಅಮು ಅವರು, ಸುದರ್ಶನ್ ಟಿವಿ ಸಂಪಾದಕ-ಪ್ರಧಾನ ಸುರೇಶ್ ಚವ್ಹಾಂಕೆ ಅವರ ವಿರುದ್ಧದ ಕ್ರಮಗಳನ್ನು ಖಂಡಿಸಿದ್ದಾರೆ.

ಬಾಗೇಶ್ವರ ಧಾಮದ ಧಾರ್ಮಿಕ ಮುಖಂಡರಾದ ಧೀರೇಂದ್ರ ಕೃಷ್ಣ ಶಾಸ್ತ್ರಿ ಅವರನ್ನು ಬೆಂಬಲಿಸಿ ನಡೆದ ಕಾರ್ಯಕ್ರಮವೊಂದರಲ್ಲಿ ಕೇಸರಿ ವಸ್ತ್ರಧಾರಿಯೊಬ್ಬರು ಹೀಗೆ ಹೇಳಿದ್ದಾರೆ: “ಬ್ರಿಟಿಷರು ಒಡೆದು ಆಳಿರಿ ಎಂದು ಹೇಳಿದರು, ಕಾಂಗ್ರೆಸ್‌ನವರು ಒಡೆದು ಆಳಿರಿ ಎಂದು ಹೇಳಿದರು, ಕ್ರಿಶ್ಚಿಯನ್ನರು ಅದನ್ನೇ ಹೇಳಿದರು. ಮುಸ್ಲಿಮರು ಕೊಲ್ಲಿ ಮತ್ತು ಆಳ್ವಿಕೆ ಮಾಡಿ ಎಂದರು. ನೀವು [ಹಿಂದೂಗಳು] ಯಾವಾಗ ಕೊಲ್ಲುತ್ತೀರಿ? ನೀವೆಲ್ಲರೂ ಸತ್ತ ನಂತರ? ನೀವು ಅವರನ್ನು ಯಾವಾಗ ಕೊಲ್ಲುತ್ತೀರಿ? ನೀವು ಯಾವಾಗ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಕೊಲ್ಲುತ್ತೀರಿ?” ಎಂದು ಪ್ರಶ್ನಿಸಿದ್ದಾರೆ.

ತಮ್ಮ ಮನೆಗಳಲ್ಲಿ ಕತ್ತಿಗಳು ಮತ್ತು ಬಂದೂಕುಗಳನ್ನು ಸಂಗ್ರಹಿಸಿರಿ ಎಂದು ಹಿಂದೂಗಳಿಗೆ ಸಲಹೆ ನೀಡಿದ್ದಾರೆ.

“ಒಂದು ಕೈಯಲ್ಲಿ ಶಸ್ತ್ರಗಳನ್ನು ಮತ್ತು ಇನ್ನೊಂದು ಕೈಯಲ್ಲಿ ಶಾಸ್ತ್ರವನ್ನು [ಧಾರ್ಮಿಕ ಗ್ರಂಥಗಳನ್ನು] ಇಟ್ಟುಕೊಳ್ಳಿ” ಎಂದಿದ್ದಾರೆ. “ನಮ್ಮ ಸಮುದಾಯ, ನಮ್ಮ ಧರ್ಮಗ್ರಂಥಗಳು, ನಮ್ಮ ತಾಯಂದಿರು ಮತ್ತು ಸಹೋದರಿಯರ ಮೇಲೆ ದಾಳಿ ಮಾಡುವವರನ್ನು ದೇಶದ್ರೋಹದ ಅಪರಾಧಿಗಳೆಂದು ನಿರ್ಣಯಿಸಿ ಮತ್ತು ಅವರಿಗೆ ಗಡಿಯಲ್ಲಿ ಗುಂಡು ಹಾರಿಸಿ… ಅವರನ್ನು ರಸ್ತೆಗಳಲ್ಲಿ ಕೊಲ್ಲಲಾಗುತ್ತದೆ” ಎಂದು ಪ್ರಚೋದಿಸಿದ್ದಾರೆ.

ಧೀರೇಂದ್ರ ಕೃಷ್ಣ ಶಾಸ್ತ್ರಿ ಅವರು ತಮ್ಮ ಜನಪ್ರಿಯ ಯೂಟ್ಯೂಬ್ ವೀಡಿಯೊಗಳ ಮೂಲಕ ಮೂಢನಂಬಿಕೆ ಮತ್ತು ದ್ವೇಷವನ್ನು ಬಿತ್ತುವ ಮೂಲಕ ಹೆಸರಾಗಿದ್ದಾರೆ.

ಬಿಜೆಪಿಯ ಹರಿಯಾಣ ಘಟಕದ ಮಾಧ್ಯಮ ಸಂಯೋಜಕ ಮತ್ತು ಜಾತಿವಾದಿ ಗುಂಪಿನ ಕರ್ಣಿ ಸೇನೆಯ ಮುಖ್ಯಸ್ಥ ಅಮು, ಚವ್ಹಾಂಕೆ ಬೆಂಬಲಿಗರು ಭಾಗವಹಿಸಿದ್ದ ಪ್ರತ್ಯೇಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುವಾಗ ದ್ವೇಷದ ಮಾತುಗಳು ಹೊರಬಿದ್ದಿವೆ.

ಡಿಸೆಂಬರ್ 19, 2021ರಂದು ದೆಹಲಿಯಲ್ಲಿ ಹಿಂದೂ ಯುವ ವಾಹಿನಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಸುದರ್ಶನ್ ಟಿವಿಯ ಮುಖ್ಯ ಸಂಪಾದಕ ಸುರೇಶ್ ಚವ್ಹಾಂಕೆ ಪ್ರಚೋದನಕಾರಿಯಾಗಿ ಮಾತನಾಡಿದ್ದರು. ಮುಸ್ಲಿಮರನ್ನು ಕೊಲ್ಲವಂತೆ ಪ್ರಚೋದಿಸಿದ್ದರು.

ದ್ವೇಷ ಭಾಷಣದ ಬಗ್ಗೆ ವರದಿ ಮಾಡಿದವರ ವಿರುದ್ಧವೇ ಪೊಲೀಸರ ಕ್ರಮ

ಈ ಕಾರ್ಯಕ್ರಮಗಳಲ್ಲಿ ಮಾಡಿದ ಯಾವುದೇ ಭಾಷಣಕಾರರ ವಿರುದ್ಧ ಪೊಲೀಸರು ಕ್ರಮ ಕೈಗೊಂಡ ಬಗ್ಗೆ ಸೋಮವಾರ ಮಧ್ಯಾಹ್ನದವರೆಗೂ ವರದಿಯಾಗಿಲ್ಲ. ಆದರೆ ಘಟನೆಗಳ ಬಗ್ಗೆ ವರದಿ ಮಾಡಿದ್ದ ಮೊಲಿಟಿಕ್ಸ್ ಎಂಬ ಆನ್‌ಲೈನ್ ಪೋರ್ಟಲ್‌ಗೆ ದೆಹಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ!

ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಆಕ್ಷೇಪಾರ್ಹ, ದುರುದ್ದೇಶಪೂರಿತ ಮತ್ತು ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡಲಾಗಿದೆ ಎಂದು ಕ್ರಿಮಿನಲ್ ಪ್ರೊಸೀಜರ್ ಕೋಡ್ನ ಸೆಕ್ಷನ್ 149 ರ ಅಡಿಯಲ್ಲಿ ನೋಟಿಸ್ ನೀಡಲಾಗಿದೆ.

ಆಕ್ಷೇಪಾರ್ಹ, ದುರುದ್ದೇಶಪೂರಿತ ಮತ್ತು ಪ್ರಚೋದನಕಾರಿ ವಿಷಯವನ್ನು ಪೋಸ್ಟ್ ಮಾಡುವುದನ್ನು ನಿಲ್ಲಿಸುವಂತೆ ಪೊಲೀಸರು ಮೊಲಿಟಿಕ್ಸ್‌ಗೆ ಸೂಚಿಸಿದ್ದಾರೆ. ತಪ್ಪಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ

ಇದಕ್ಕೆ ಪ್ರತಿಕ್ರಿಯೆಯಾಗಿ, ಮೊಲಿಟಿಕ್ಸ್ ಸಂಸ್ಥಾಪಕ ಮತ್ತು ನಿರ್ದೇಶಕ ಅನುದೀಪ್ ಜಗ್ಲಾನ್ ಟ್ವೀಟ್‌ ಮಾಡಿದ್ದು, “ನಾನು ಇನ್ನೂ ಗೊಂದಲಕ್ಕೊಳಗಾಗಿದ್ದೇನೆ. ನೀವು ಇದನ್ನು ನಮಗೆ ಏಕೆ ಕಳುಹಿಸುತ್ತೀರಿ? ಕೇಸರಿ ಧರಿಸಿದ ಈ ಕ್ರಿಮಿನಲ್‌ಗಳಿಗೂ ಇಂತಹ ಸೂಚನೆ ಹೋಗಿರಬೇಕು ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...