Homeಮುಖಪುಟನಿರ್ದಿಷ್ಟ ಸಮುದಾಯವಷ್ಟೇ ಭಯೋತ್ಪಾದಕರೆಂದು ಅಣಕು ಪ್ರದರ್ಶನ ಮಾಡುವಂತಿಲ್ಲ; ಮುಂಬೈ ಹೈಕೋರ್ಟ್ ಆದೇಶ

ನಿರ್ದಿಷ್ಟ ಸಮುದಾಯವಷ್ಟೇ ಭಯೋತ್ಪಾದಕರೆಂದು ಅಣಕು ಪ್ರದರ್ಶನ ಮಾಡುವಂತಿಲ್ಲ; ಮುಂಬೈ ಹೈಕೋರ್ಟ್ ಆದೇಶ

- Advertisement -
- Advertisement -

ಪೊಲೀಸ್ ಸಿಬ್ಬಂದಿ ಅಣಕು ಡ್ರಿಲ್‌ ಪ್ರದರ್ಶಿಸುವಾಗ ಭಯೋತ್ಪಾದಕರ ಪಾತ್ರವನ್ನು ನಿರ್ವಹಿಸುವವರನ್ನು ನಿರ್ದಿಷ್ಟ ಸಮುದಾಯಕ್ಕೆ ಸೇರಿದವರಂತೆ ತೋರಿಸುವುದಕ್ಕೆ ನಿರ್ಬಂಧಸಿ ಮುಂಬೈ ಹೈಕೋರ್ಟ್‌ನ ಔರಂಗಾಬಾದ್ ಪೀಠವು ಮಧ್ಯಂತರ ಆದೇಶ ಹೊರಡಿಸಿದೆ.

ಭದ್ರತಾ ಪಡೆಯ ದಕ್ಷತೆಯನ್ನು ಹೆಚ್ಚಿಸಲು ಮತ್ತು ಭಯೋತ್ಪಾದನಾ ದಾಳಿ ಸೇರಿದಂತೆ ತುರ್ತು ಪರಿಸ್ಥಿತಿಗಳಿಗೆ ಉತ್ತಮವಾಗಿ ಸಿದ್ಧರಾಗಲು ಜಿಲ್ಲಾ ಮಟ್ಟದಲ್ಲಿ ಪೊಲೀಸರು ಅಣಕು ಡ್ರಿಲ್‌ಗಳನ್ನು ನಡೆಸುತ್ತಾರೆ.

ಇಂತಹ ಅಣಕು ಕಸರತ್ತುಗಳು ಮುಸ್ಲಿಂ ಸಮುದಾಯದ ವಿರುದ್ಧ ಪಕ್ಷಪಾತ ಮತ್ತು ಪೂರ್ವಾಗ್ರಹವನ್ನು ತೋರಿಸುತ್ತವೆ ಮತ್ತು ಭಯೋತ್ಪಾದಕರು ನಿರ್ದಿಷ್ಟ ಧರ್ಮಕ್ಕೆ ಮಾತ್ರ ಸೇರಿದವರು ಎಂಬ ಸಂದೇಶವನ್ನು ಹೇಳುತ್ತದೆ ಎಂದು ಸಾಮಾಜಿಕ ಕಾರ್ಯಕರ್ತ ಸಯದ್ ಉಸಾಮಾ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆಯನ್ನು ಹೈಕೋರ್ಟ್ ನಡೆಸುತ್ತಿದೆ.

ಇದನ್ನೂ ಓದಿ: ಸುಪ್ರೀಂ ಕೋರ್ಟ್ ಮುಸ್ಲಿಂ ಪಕ್ಷಪಾತಿಯಾಗಿದೆ: ದ್ವೇಷಭಾಷಣಕಾರ ಚವ್ಹಾಂಕೆ ಬೆಂಬಲಿಗರ ಆರೋಪ

ನ್ಯಾಯಮೂರ್ತಿಗಳಾದ ಮಂಗೇಶ್ ಪಾಟೀಲ್ ಮತ್ತು ಎ ಎಸ್ ಚಾಪಲ್ಗಾಂವ್ಕರ್ ಅವರ ವಿಭಾಗೀಯ ಪೀಠವು ಫೆಬ್ರುವರಿ 3 ರಂದು ಅಣಕು ಡ್ರಿಲ್‌ಗಳನ್ನು ನಡೆಸುವ ಮಾರ್ಗಸೂಚಿಗಳ ಬಗ್ಗೆ ನ್ಯಾಯಾಲಯಕ್ಕೆ ತಿಳಿಸುವಂತೆ ಪಬ್ಲಿಕ್ ಪ್ರಾಸಿಕ್ಯೂಟರ್‌ಗೆ ಸೂಚಿಸಿದೆ.

”ಇಂತಹ ಅಣಕು ಕಸರತ್ತುಗಳು ಮುಸ್ಲಿಂ ಸಮುದಾಯದ ವಿರುದ್ಧ ಪಕ್ಷಪಾತ ಮತ್ತು ಪೂರ್ವಾಗ್ರಹವನ್ನು ತೋರಿಸುತ್ತವೆ. ಭಯೋತ್ಪಾದಕರು ನಿರ್ದಿಷ್ಟ ಧರ್ಮಕ್ಕೆ ಮಾತ್ರ ಸೇರಿದವರು ಎಂಬ ಸಂದೇಶವನ್ನು ಹೇಳುತ್ತದೆ” ಎಂದು ಅರ್ಜಿದಾರರು ಹೇಳಿದ್ದಾರೆ.

ಅಹಮದ್‌ನಗರ, ಚಂದ್ರಾಪುರ್ ಮತ್ತು ಔರಂಗಾಬಾದ್ ಜಿಲ್ಲೆಗಳಲ್ಲಿ ನಡೆದ ಮೂರು ಅಣಕು ಡ್ರಿಲ್‌ಗಳಲ್ಲಿ ಅಣಕು ಡ್ರಿಲ್‌ನಲ್ಲಿ ಭಯೋತ್ಪಾದಕರ ಪಾತ್ರವನ್ನು ವಹಿಸಿದ ಪೊಲೀಸರು ಮುಸ್ಲಿಂ ಸಮುದಾಯದ ಪುರುಷರಂತೆ ಬಟ್ಟೆ ಧರಿಸಿರುವುದನ್ನು ಪಿಐಎಲ್ ಅರ್ಜಿಯಲ್ಲಿ ಉಲ್ಲೇಖಿಸಿದೆ.

“ಅರ್ಜಿದಾರರು ಮೇಲ್ನೋಟಕ್ಕೆ ಮುಸ್ಲಿಂ ಆಗಿದ್ದು, ಸಾರ್ವಜನಿಕ ಹಿತಾಸಕ್ತಿಯಿಂದ ಈ ಸಮಸ್ಯೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಭಯೋತ್ಪಾದಕನು ಮುಸ್ಲಿಂ ಎಂದು ಸೂಚಿಸುವ ರೀತಿಯಲ್ಲಿ ಪೋಲೀಸ್ ಇಲಾಖೆಯು ಅಣಕು ಡ್ರಿಲ್‌ಗಳನ್ನು ನಡೆಸುವುದು ಮತ್ತು ಘೋಷಣೆಗಳನ್ನು ಕೂಗುವುದನ್ನು ತಪ್ಪು” ಎಂದು ನ್ಯಾಯಾಲಯ ಹೇಳಿದೆ.

ಈ ಬಗ್ಗೆ ಹೆಚ್ಚಿನ ವಿಚಾರಣೆಯನ್ನು ಫೆಬ್ರುವರಿ 10 ರಂದು ನಡೆಸುವುದಾಗಿ ಪೀಠ ಮುಂದೂಡಿದೆ. ”ಮುಂದಿನ ದಿನಾಂಕದವರೆಗೆ, ನಿರ್ದಿಷ್ಟ ಸಮುದಾಯದ ವ್ಯಕ್ತಿಗಳನ್ನು ಭಯೋತ್ಪಾದಕರು ಎಂದು ಬಿಂಬಿಸುವ ಯಾವುದೇ ಅಣಕು ಡ್ರಿಲ್ ಅನ್ನು ನಡೆಸಬಾರದು” ಎಂದು ಮಧ್ಯಂತರ ಆದೇಶವಾಗಿ ಹೇಳಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...