Homeಅಂತರಾಷ್ಟ್ರೀಯಇಂದು ಟರ್ಕಿಯಲ್ಲಿ ಮತ್ತೆ 5.6 ಭೂಕಂಪನ: 3 ತಿಂಗಳ ತುರ್ತು ಪರಿಸ್ಥಿತಿ ಘೋಷಣೆ

ಇಂದು ಟರ್ಕಿಯಲ್ಲಿ ಮತ್ತೆ 5.6 ಭೂಕಂಪನ: 3 ತಿಂಗಳ ತುರ್ತು ಪರಿಸ್ಥಿತಿ ಘೋಷಣೆ

- Advertisement -
- Advertisement -

ಭೂಕಂಪ ಪೀಡಿತ ಟರ್ಕಿ ಮತ್ತು ಸಿರಿಯಾದಲ್ಲಿ ಅವಶೇಷಗಳಡಿಯಲ್ಲಿ ಬದುಕುಳಿದ ಸಂತ್ರಸ್ತರಿಗಾಗಿ ಶೋಧ ಮುಂದುವರಿದಿದೆ. ಭಯಾನಕ ಅವಘಡದಲ್ಲಿ ಇದುವರೆಗೆ 5,100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ದಕ್ಷಿಣ ಟರ್ಕಿಯಲ್ಲಿನ ವಿನಾಶಕಾರಿ ಭೂಕಂಪಗಳಿಂದ ಪ್ರಭಾವಿತವಾಗಿರುವ 10 ಪ್ರಾಂತ್ಯಗಳನ್ನು ವಿಪತ್ತು ವಲಯವೆಂದು ಘೋಷಿಸಿದ್ದಾರೆ. ಅಧ್ಯಕ್ಷ ತಯ್ಯಿಪ್ ಎರ್ಡೊಗನ್ ಅವರು 3 ತಿಂಗಳ ತುರ್ತು ಪರಿಸ್ಥಿತಿ  ಮತ್ತು 7 ದಿನಗಳ ಶೋಕಾಚರಣೆಯನ್ನು ಘೋಷಿಸಿದ್ದಾರೆ.

ರಕ್ಷಣೆ ಮತ್ತು ಪರಿಹಾರ ತಂಡಗಳು ಪ್ರಪಂಚಾದ್ಯಂತ ಟರ್ಕಿಗೆ ಆಗಮಿಸುತ್ತಿವೆ. ಸಾವು ನೋವಿನ ಹಿನ್ನೆಲೆಯಲ್ಲಿ 70 ದೇಶಗಳು ಹುಡುಕಾಟ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯವನ್ನು ನೀಡಿವೆ ಮತ್ತು ಭೂಕಂಪಗಳಿಂದ ಪ್ರಭಾವಿತರಾದ ಜನರಿಗೆ ತಾತ್ಕಾಲಿಕವಾಗಿ ವಸತಿ ಕಲ್ಪಿಸಲು ಪಶ್ಚಿಮಕ್ಕೆ ಪ್ರವಾಸೋದ್ಯಮ ಕೇಂದ್ರವಾದ ಅಂಟಲ್ಯದಲ್ಲಿ ಹೋಟೆಲ್‌ಗಳನ್ನು ತೆರೆಯಲು ಟರ್ಕಿ ಯೋಜಿಸಿದೆ ಎಂದು ಎರ್ಡೊಗನ್ ಹೇಳಿದ್ದಾರೆ.

20,000 ಜನರಿಗೆ ಗಾಯಗಳಾಗಿವೆ. ಕುಸಿದ ಕಟ್ಟಡದಿಂದ ರಕ್ಷಿಸಲ್ಪಟ್ಟವರಲ್ಲಿ ಘಾನಾದ ಫುಟ್ಬಾಲ್ ಆಟಗಾರ ಕ್ರಿಶ್ಚಿಯನ್ ಅಟ್ಸು ಕೂಡ ಸೇರಿದ್ದಾರೆ. ಭೂಕಂಪ ಪೀಡಿತ ಪ್ರದೇಶಕ್ಕೆ ಭಾರತ ಸರ್ಕಾರವು ಅಂಕಾರಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಸಮನ್ವಯದಲ್ಲಿ ಮೊದಲ ಬ್ಯಾಚ್ ಪರಿಹಾರ ಸಾಮಗ್ರಿಗಳನ್ನು ಕಳುಹಿಸಿದೆ.

ಟರ್ಕಿ ಮತ್ತು ಸಿರಿಯಾದಲ್ಲಿ ಸೋಮವಾರ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಅನೇಕ ಜನರು ಸಾವನ್ನಪ್ಪಿದ್ದಾರೆ, ಜನರು ನಿದ್ದೆಯಲ್ಲಿರುವಾಗಲೇ ಕಟ್ಟಡಗಳು ನೆಲಸಮಗೊಂಡಿವೆ. ಸೈಪ್ರಸ್ ದ್ವೀಪದಷ್ಟು ದೂರದವರೆಗೂ ಭೂಮಿ ಕಂಪಿಸಿದೆ. ಅದರೊಟ್ಟಿಗೆ ಇಂದು ಸಹ ಟರ್ಕಿಯಲ್ಲಿ 5.6 ಕಂಪನ ಸಂಭವಿಸಿದೆ. ಇದರಿಂದಾಗಿ ಜೀವಹಾನಿಗಳು ಹೆಚ್ಚಾಗಿವೆ.

”ಐತಿಹಾಸಿಕವಾಗಿ, ಕೇಂದ್ರದ ಇತಿಹಾಸದಲ್ಲಿ ದಾಖಲಾದ ಅತಿದೊಡ್ಡ ಭೂಕಂಪವಿದು” ಎಂದು ಸರ್ಕಾರದ ಪರ ರೇಡಿಯೊಗೆ ಸಿರಿಯಾದ ರಾಷ್ಟ್ರೀಯ ಭೂಕಂಪ ಕೇಂದ್ರದ ಮುಖ್ಯಸ್ಥರಾದ ರೇಡ್ ಅಹ್ಮದ್ ತಿಳಿಸಿದರು.

ಟರ್ಕಿಯ ಅಕಾಡೆಮಿ ಆಫ್ ಸೈನ್ಸಸ್‌ನ ಭೂಕಂಪ ತಜ್ಞ ನಾಸಿ ಗೊರೂರ್ ಅವರು, ಇದರಿಂದ ಮುಂದೆ ಯಾವುದೇ ಪ್ರವಾಹಗಳು ಆಗದಂತೆ ತಪ್ಪಿಸಲು ಆ ಪ್ರದೇಶದ ಅಣೆಕಟ್ಟುಗಳು ಬಿರುಕುಬಿಟ್ಟಿರುವ ಬಗ್ಗೆ ತಕ್ಷಣವೇ ಪರಿಶೀಲಿಸುವಂತೆ ಸ್ಥಳೀಯ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ; ವಿಶ್ವದ ಅತ್ಯಂತ ಹೆಚ್ಚು ಜನಸಂಖ್ಯೆ ಹೊಂದಿರುವ ಟಾಪ್ 10 ನಗರಗಳು | ಸಂಕ್ಷಿಪ್ತ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...