Homeಅಂತರಾಷ್ಟ್ರೀಯಇಂದು ಟರ್ಕಿಯಲ್ಲಿ ಮತ್ತೆ 5.6 ಭೂಕಂಪನ: 3 ತಿಂಗಳ ತುರ್ತು ಪರಿಸ್ಥಿತಿ ಘೋಷಣೆ

ಇಂದು ಟರ್ಕಿಯಲ್ಲಿ ಮತ್ತೆ 5.6 ಭೂಕಂಪನ: 3 ತಿಂಗಳ ತುರ್ತು ಪರಿಸ್ಥಿತಿ ಘೋಷಣೆ

- Advertisement -
- Advertisement -

ಭೂಕಂಪ ಪೀಡಿತ ಟರ್ಕಿ ಮತ್ತು ಸಿರಿಯಾದಲ್ಲಿ ಅವಶೇಷಗಳಡಿಯಲ್ಲಿ ಬದುಕುಳಿದ ಸಂತ್ರಸ್ತರಿಗಾಗಿ ಶೋಧ ಮುಂದುವರಿದಿದೆ. ಭಯಾನಕ ಅವಘಡದಲ್ಲಿ ಇದುವರೆಗೆ 5,100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ದಕ್ಷಿಣ ಟರ್ಕಿಯಲ್ಲಿನ ವಿನಾಶಕಾರಿ ಭೂಕಂಪಗಳಿಂದ ಪ್ರಭಾವಿತವಾಗಿರುವ 10 ಪ್ರಾಂತ್ಯಗಳನ್ನು ವಿಪತ್ತು ವಲಯವೆಂದು ಘೋಷಿಸಿದ್ದಾರೆ. ಅಧ್ಯಕ್ಷ ತಯ್ಯಿಪ್ ಎರ್ಡೊಗನ್ ಅವರು 3 ತಿಂಗಳ ತುರ್ತು ಪರಿಸ್ಥಿತಿ  ಮತ್ತು 7 ದಿನಗಳ ಶೋಕಾಚರಣೆಯನ್ನು ಘೋಷಿಸಿದ್ದಾರೆ.

ರಕ್ಷಣೆ ಮತ್ತು ಪರಿಹಾರ ತಂಡಗಳು ಪ್ರಪಂಚಾದ್ಯಂತ ಟರ್ಕಿಗೆ ಆಗಮಿಸುತ್ತಿವೆ. ಸಾವು ನೋವಿನ ಹಿನ್ನೆಲೆಯಲ್ಲಿ 70 ದೇಶಗಳು ಹುಡುಕಾಟ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯವನ್ನು ನೀಡಿವೆ ಮತ್ತು ಭೂಕಂಪಗಳಿಂದ ಪ್ರಭಾವಿತರಾದ ಜನರಿಗೆ ತಾತ್ಕಾಲಿಕವಾಗಿ ವಸತಿ ಕಲ್ಪಿಸಲು ಪಶ್ಚಿಮಕ್ಕೆ ಪ್ರವಾಸೋದ್ಯಮ ಕೇಂದ್ರವಾದ ಅಂಟಲ್ಯದಲ್ಲಿ ಹೋಟೆಲ್‌ಗಳನ್ನು ತೆರೆಯಲು ಟರ್ಕಿ ಯೋಜಿಸಿದೆ ಎಂದು ಎರ್ಡೊಗನ್ ಹೇಳಿದ್ದಾರೆ.

20,000 ಜನರಿಗೆ ಗಾಯಗಳಾಗಿವೆ. ಕುಸಿದ ಕಟ್ಟಡದಿಂದ ರಕ್ಷಿಸಲ್ಪಟ್ಟವರಲ್ಲಿ ಘಾನಾದ ಫುಟ್ಬಾಲ್ ಆಟಗಾರ ಕ್ರಿಶ್ಚಿಯನ್ ಅಟ್ಸು ಕೂಡ ಸೇರಿದ್ದಾರೆ. ಭೂಕಂಪ ಪೀಡಿತ ಪ್ರದೇಶಕ್ಕೆ ಭಾರತ ಸರ್ಕಾರವು ಅಂಕಾರಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಸಮನ್ವಯದಲ್ಲಿ ಮೊದಲ ಬ್ಯಾಚ್ ಪರಿಹಾರ ಸಾಮಗ್ರಿಗಳನ್ನು ಕಳುಹಿಸಿದೆ.

ಟರ್ಕಿ ಮತ್ತು ಸಿರಿಯಾದಲ್ಲಿ ಸೋಮವಾರ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಅನೇಕ ಜನರು ಸಾವನ್ನಪ್ಪಿದ್ದಾರೆ, ಜನರು ನಿದ್ದೆಯಲ್ಲಿರುವಾಗಲೇ ಕಟ್ಟಡಗಳು ನೆಲಸಮಗೊಂಡಿವೆ. ಸೈಪ್ರಸ್ ದ್ವೀಪದಷ್ಟು ದೂರದವರೆಗೂ ಭೂಮಿ ಕಂಪಿಸಿದೆ. ಅದರೊಟ್ಟಿಗೆ ಇಂದು ಸಹ ಟರ್ಕಿಯಲ್ಲಿ 5.6 ಕಂಪನ ಸಂಭವಿಸಿದೆ. ಇದರಿಂದಾಗಿ ಜೀವಹಾನಿಗಳು ಹೆಚ್ಚಾಗಿವೆ.

”ಐತಿಹಾಸಿಕವಾಗಿ, ಕೇಂದ್ರದ ಇತಿಹಾಸದಲ್ಲಿ ದಾಖಲಾದ ಅತಿದೊಡ್ಡ ಭೂಕಂಪವಿದು” ಎಂದು ಸರ್ಕಾರದ ಪರ ರೇಡಿಯೊಗೆ ಸಿರಿಯಾದ ರಾಷ್ಟ್ರೀಯ ಭೂಕಂಪ ಕೇಂದ್ರದ ಮುಖ್ಯಸ್ಥರಾದ ರೇಡ್ ಅಹ್ಮದ್ ತಿಳಿಸಿದರು.

ಟರ್ಕಿಯ ಅಕಾಡೆಮಿ ಆಫ್ ಸೈನ್ಸಸ್‌ನ ಭೂಕಂಪ ತಜ್ಞ ನಾಸಿ ಗೊರೂರ್ ಅವರು, ಇದರಿಂದ ಮುಂದೆ ಯಾವುದೇ ಪ್ರವಾಹಗಳು ಆಗದಂತೆ ತಪ್ಪಿಸಲು ಆ ಪ್ರದೇಶದ ಅಣೆಕಟ್ಟುಗಳು ಬಿರುಕುಬಿಟ್ಟಿರುವ ಬಗ್ಗೆ ತಕ್ಷಣವೇ ಪರಿಶೀಲಿಸುವಂತೆ ಸ್ಥಳೀಯ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ; ವಿಶ್ವದ ಅತ್ಯಂತ ಹೆಚ್ಚು ಜನಸಂಖ್ಯೆ ಹೊಂದಿರುವ ಟಾಪ್ 10 ನಗರಗಳು | ಸಂಕ್ಷಿಪ್ತ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...